Homeಮುಖಪುಟಮೆಹುಲ್ ಚೋಕ್ಸಿಗೆ ಡೊಮಿನಿಕನ್‌ ಕೋರ್ಟ್ ಜಾಮೀನು: ಭಾರತಕ್ಕೆ ಹಿನ್ನಡೆ

ಮೆಹುಲ್ ಚೋಕ್ಸಿಗೆ ಡೊಮಿನಿಕನ್‌ ಕೋರ್ಟ್ ಜಾಮೀನು: ಭಾರತಕ್ಕೆ ಹಿನ್ನಡೆ

- Advertisement -
- Advertisement -

ಭಾರತದಲ್ಲಿ ಬಹುಕೋಟಿ ಬ್ಯಾಂಕಿಂಗ್ ಹಗರಣದಲ್ಲಿ ಭಾಗಿಯಾಗಿ ಆಂಟಿಗುವಾ ದೇಶಕ್ಕೆ ಪರಾರಿಯಾಗಿದ್ದ ಮೆಹುಲ್‌ ಚೋಕ್ಸಿಯವರಿಗೆ ಸೋಮವಾರ ಡೊಮಿನಿಕನ್ ನ್ಯಾಯಾಲಯ ಜಾಮೀನು ನೀಡಿದೆ. ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ ವಂಚನೆ ಎಸಗಿ ಪರಾರಿಯಾಗಿರುವ ಉದ್ಯಮಿ ಮೆಹುಲ್ ಚೋಕ್ಸಿಗೆ ಸೋಮವಾರ ವೈದ್ಯಕೀಯ ಜಾಮೀನು ಮಂಜೂರು ಮಾಡಿದ್ದು ಚಿಕಿತ್ಸೆ ಕಾರಣಕ್ಕೆ ಆಂಟಿಗುವಾಗೆ ತೆರಳಲು ನ್ಯಾಯಾಲಯ ಅವಕಾಶ ನೀಡಿದೆ.

ಮೆಹುಲ್‌ ಚೋಕ್ಸಿ ಜಾಮೀನು ಪ್ರಕರಣದ ಬೆಳವಣಿಯಗೆಯನ್ನು ಖಚಿತಪಡಿಸಿರುವ ವಕೀಲ ವಿಜಯ್ ಅಗರ್ವಾಲ್, “ಡೊಮಿನಿಕಾ ನ್ಯಾಯಾಲಯಗಳು ಅಂತಿಮವಾಗಿ ಕಾನೂನು ಮತ್ತು ಆರೋಗ್ಯದ ಚಿಕಿತ್ಸೆಯ ಅಗತ್ಯತೆಗಳನ್ನು ಎತ್ತಿಹಿಡಿದಿವೆ” ಎಂದು ಹೇಳಿದ್ದಾರೆ.

ಆಂಟಿಗುವದ ಮಾಧ್ಯಮಗಳ ವರದಿ ಪ್ರಕಾರ, ಚೋಕ್ಸಿಯ ಜಾಮೀನು ಅರ್ಜಿಯ ವಿಚಾರಣೆ ಜುಲೈ 23 ರಂದು ನಡೆಯಬೇಕಿತ್ತು. ಆದರೆ ಜುಲೈ 12 ರಂದು ವೈದ್ಯಕೀಯ ಆಧಾರದ ಮೇಲೆ ವಿಚಾರಣೆ ನಡೆಸಲಾಯಿತು. ಚೋಕ್ಸಿ  ನರ ವಿಜ್ಞಾನ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದಾರೆ, ಅವರಿಗೆ ಆಂಟಿಗುವಾದಲ್ಲಿ ನರವಿಜ್ಞಾನ ತಜ್ಞರಿಂದ ಚಿಕಿತ್ಸೆ ಅಗತ್ಯವಿದೆ ಎಂದು ಅವರ ವಕೀಲರು ನ್ಯಾಯಾಲಯವನ್ನು ಕೋರಿದ್ದರು. ಸೋಮವಾರ ಚೋಕ್ಸಿ ಜಾಮೀನು ನೀಡಿದ ಡೊಮಿನಿಕಾದ ಈಸ್ಟರ್ನ್ ಕೆರಿಬಿಯನ್ ಹೈಕೋರ್ಟ್ 10,000  ಕೆರಿಬಿಯನ್ ಡಾಲರ್ ಬಾಂಡ್ ನೀಡುವಂತೆ ಆದೇಶಿಸಿದೆ ಮತ್ತು ಚಿಕಿತ್ಸೆಯ ನಂತರ ಡೊಮಿನಿಕಾಗೆ ಮರಳಲು ಹೇಳಿದೆ.  

2018ರಲ್ಲಿ ಚೋಕ್ಸಿ ಭಾರತ ತೊರೆದು ಆಂಟಿಗುವಾಗೆ ಪರಾರಿಯಾಗಿದ್ದರು. ಆಂಟಿಗುವ ದೇಶದಿಂದ ಚೋಕ್ಸಿ ಕಳೆದ ಮೇ ತಿಂಗಳಿನಲ್ಲಿ ನಿಗೂಢವಾಗಿ ಡೊಮಿನಿಕಾ ದೇಶದಲ್ಲಿ ಪತ್ತೆಯಾಗಿದ್ದರು. ಚೋಕ್ಸಿ ಅಪಹರಣವಾಗಿದೆ. ಬಾರ್ಬಾರಾ ಎಂಬ ಮಹೀಳೆ ಭಾರತದ ತನಿಖಾ ಸಂಸ್ಥೆಗಳ ಸಹಾಯದಿಂದ ಚೋಕ್ಸಿ ಅವರನ್ನು ಡೊಮಿನಿಕನ್‌ ರಿಪಬ್ಲಿಕ್‌ಗೆ ಅಪಹರಿಸಿ ಕರೆತಂದಿದ್ದಾರೆ ಎಂಬ ಸುದ್ದಿ ಅಂತರಾಷ್ಟ್ರೀಯ ಮಾಧ್ಯಮಗಳಲ್ಲಿ ಹರಿದಾಡಿತ್ತು.

ಇದನ್ನೂ ಓದಿ: 14 ಸಾವಿರ ಕೋಟಿ ವಂಚಿಸಿ ಪರಾರಿಯಾದ ಮೆಹುಲ್ ಚೋಕ್ಸಿ ಆಂಟಿಗುವಾದಲ್ಲಿ ‘ನಾಪತ್ತೆ’ !

ಭಾರತ ಮತ್ತು ಡೊಮಿನಿಕಾ ದೇಶದ ಸಂಬಂಧ ಉತ್ತಮವಾಗಿರುವುದರಿಂದ ಮೆಹುಲ್‌ ಚೋಕ್ಸಿ ಬಂಧಿಸಿ ಭಾರತಕ್ಕೆ ಕರೆತರುವ ಪ್ರಯತ್ನಕ್ಕೆ ದೇಶದ ತನಿಖಾ ಏಜನ್ಸಿಗಳು ಮುಂದಾಗಿದ್ದವು. ಇದಕ್ಕೆ ಪೂರಕವಾಗಿ ಈಚೆಗಷ್ಟೆ ಉದ್ಯಮಿ ಮೆಹುಲ್ ಚೋಕ್ಸಿ ಅಕ್ರಮ ವಲಸಿಗ ಎಂದು ಡೊಮಿನಿಕಾ ಘೋಷಿಸಿತ್ತು.

ಡೊಮಿನಿಕನ್ ಸರ್ಕಾರ ತನ್ನನ್ನು ಭಾರತಕ್ಕೆ ಹಸ್ತಾಂತರಿಸುವ ಭಯದಿಂದ ಚೋಕ್ಸಿ ಅವರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಕಾನೂನು ಹೋರಾಟದಲ್ಲಿ ಅವರಿಗೆ ಜಾಮೀನು ದೊರೆತಿದೆ.

ಇಂದರಿಂದ ಚೋಕ್ಸಿ ಬಂಧಿಸಿ ದೇಶಕ್ಕೆ ಕರೆತರುವ ತನಿಖಾ ಸಂಸ್ಥೆಗಳ ಪ್ರಯತ್ನಕ್ಕೆ ಹಿನ್ನಡೆಯಾಗಿದ್ದು ಭಾರತ ಸರ್ಕಾರ ಮುಂದೆ ಯಾವ ಕ್ರಮ ಕೈಗೊಳ್ಳಲ್ಲಿದೆ ಎಂಬುದನ್ನು ಇನ್ನೂ ಸ್ಪಷ್ಟ ಪಡಿಸಿಲ್ಲ.

ಪಂಜಾಬ್ ನ್ಯಾಷನಲ್ ಬ್ಯಾಂಕ್‌ ಹಗರಣಕ್ಕೆ ಸಂಬಂಧಿಸಿದಂತೆ ಜೂನ್ 10 ರಂದು ಕೇಂದ್ರೀಯ ತನಿಖಾ ದಳ ಮೆಹುಲ್ ಚೋಕ್ಸಿ ಮತ್ತು ಇತರೆ 21 ಜನರ ವಿರುದ್ಧ ಹೊಸ ಚಾರ್ಜ್ ಶೀಟ್ ಸಲ್ಲಿಸಿದೆ. ಭಾರತದಿಂದ ಪರಾರಿಯಾಗಿರುವ ಮೆಹುಲ್ ಚೋಕ್ಸಿ, ಸಾಕ್ಷ್ಯ ನಾಶಪಡಿಸಿರುವ ಆರೋಪವನ್ನು ಎದುರಿಸುತ್ತಿದ್ದಾರೆ.

ಇದನ್ನೂ ಓದಿ: ಹಣ ವಂಚನೆ ಆರೋಪಿ ಚೋಕ್ಸಿಯನ್ನು ಭಾರತಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಗೆ ತಡೆ

2017ರಲ್ಲಿ ಪಂಜಾಬ್ ನ್ಯಾಷನಲ್ ಬ್ಯಾಂಕ್ ಅಧಿಕಾರಿಗಳ ಸಹಾಯದಿಂದ ಚೋಕ್ಸಿ ಎಲ್‌ಒಯು, 58 ಎಫ್‌ಎಲ್‌ಸಿಗಳನ್ನು ಮೋಸದಿಂದ ಪಡೆದು, ಬ್ಯಾಂಕಿಗೆ 13,500 ಕೋಟಿ ರೂ ವಂಚನೆ ಎಸಗಿದ ನಂತರ ಅದನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡಿದ್ದಾಗಿ ಸಿಬಿಐ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದೆ. ಚೋಕ್ಸಿ ವಿರುದ್ಧ ಸಾಕ್ಷ್ಯನಾಶ, ವಂಚನೆ, ಪಿತೂರಿ ಹಾಗೂ ಭ್ರಷ್ಟಾಚಾರ ತಡೆ ಕಾಯ್ದೆ ಅಡಿ ಭಾರತದಲ್ಲಿ ಗಂಭೀರ ಪ್ರಕರಣಗಳು ದಾಖಲಾಗಿವೆ.

ಭಾರತದ ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ 13,500 ಕೋಟಿ ರೂಪಾಯಿ ವಂಚನೆ ಆರೋಪ ಎದುರಿಸುತ್ತಿರುವ ಮೆಹುಲ್ ಚೋಕ್ಸಿ ಹಾಗೂ ಆತನ ಸೋದರಳಿಯ ನೀರವ್ ಮೋದಿ 2018ರ ಜನವರಿ ಮೊದಲ ವಾರದಲ್ಲಿ ದೇಶ ಬಿಟ್ಟು ಪರಾರಿಯಾಗಿದ್ದರು.

ಇದನ್ನೂ ಓದಿ:  ಡೊಮಿನಿಕಾದಿಂದ ಬರಿಗೈನಲ್ಲಿ ವಾಪಸ್; ಮೆಹುಲ್‌ ಚೋಕ್ಸಿ ಬಂಧಿಸಿ ಕರೆತರುವ ಭಾರತದ ಪ್ರಯತ್ನಕ್ಕೆ ನಿರಾಸೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...