Homeಅಂತರಾಷ್ಟ್ರೀಯಆಮದು ಕಾರುಗಳ ಮೇಲೆ ಶೇ. 25 ಸುಂಕ ವಿಧಿಸಿದ ಟ್ರಂಪ್ ಆಡಳಿತ

ಆಮದು ಕಾರುಗಳ ಮೇಲೆ ಶೇ. 25 ಸುಂಕ ವಿಧಿಸಿದ ಟ್ರಂಪ್ ಆಡಳಿತ

- Advertisement -
- Advertisement -

ಅಮೆರಿಕಕ್ಕೆ ಆಮದಾಗುವ ಕಾರುಗಳು ಮತ್ತು ಅದರ ಬಿಡಭಾಗಗಳ ಮೇಲೆ ಶೇಕಡ 25ರಷ್ಟು ಸುಂಕ ವಿಧಿಸುವ ನಿರ್ಧಾರವನ್ನು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ (ಮಾ.26) ಪ್ರಕಟಿಸಿದ್ದಾರೆ.

ಈ ಕ್ರಮವು ದೇಶೀಯ ಉತ್ಪಾದನೆಯನ್ನು ಉತ್ತೇಜಿಸುತ್ತದೆ. ಆದರೆ, ಜಾಗತಿಕ ಪೂರೈಕೆ ಸರಪಳಿಗಳನ್ನು ಅವಲಂಬಿಸಿರುವ ವಾಹನ ತಯಾರಕರ ಮೇಲೆ ಆರ್ಥಿಕ ಒತ್ತಡವನ್ನುಂಟು ಮಾಡುತ್ತದೆ ಎಂದು ಶ್ವೇತಭವನ ಹೇಳಿಕೊಂಡಿದೆ.

ಶ್ವೇತಭವನವು ವಾರ್ಷಿಕವಾಗಿ 100 ಶತಕೋಟಿ ಡಾಲರ್ ಆದಾಯ ಸಂಗ್ರಹಿಸುವ ನಿರೀಕ್ಷೆ ಹೊಂದಿರುವ ಈ ಸುಂಕ ವಿಧಿಸುವ ನಿರ್ಧಾರವು, ವಿದೇಶಗಳಲ್ಲಿ ಘಟಕಗಳನ್ನು ಹೊಂದಿರುವ ಅಮೆರಿಕದ ಕಾರು ತಯಾರಕರಿಗೂ ಹೊರೆಯಾಗಲಿದೆ.

ಸುಂಕ ವಿಧಿಸುವ ಆದೇಶ ಏಪ್ರಿಲ್‌ 3ರಿಂದ ಜಾರಿಯಾಗಲಿದೆ. ಇದರಿಂದ ಕಾರು ತಯಾರಕರು ಹೆಚ್ಚಿನ ವೆಚ್ಚ ಮತ್ತು ಕಡಿಮೆ ಮಾರಾಟದ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಆದರೆ, ಈ ನಿರ್ಧಾರವು ಅಮೆರಿಕದಲ್ಲಿ ಹೆಚ್ಚಿನ ಕಾರ್ಖಾನೆಗಳು ತೆರೆಯಲು ಕಾರಣವಾಗಲಿದೆ ಮತ್ತು ಕಾರುಗಳ ಬಿಡಿಭಾಗಗಳು ಮತ್ತು ಸಿದ್ದಪಡಿಸಿದ ಕಾರುಗಳಿಗಾಗಿ ಅಮೆರಿಕ, ಕೆನಡಾ, ಮೆಕ್ಸಿಕೊದಾದ್ಯಂತ ಹರಡಿರುವ ‘ಹಾಸ್ಯಾಸ್ಪದ’ ಪೂರೈಕೆ ಸರಪಳಿ ಅಂತ್ಯವಾಗಲಿದೆ. ತಾನು ಸಹಿ ಮಾಡಿರುವ ಆದೇಶ ಶಾಶ್ವತ ಎಂದು ಟ್ರಂಪ್ ಹೇಳಿದ್ದಾರೆ.

ಕಾರುಗಳ ಆಮದುಗಳ ಮೇಲೆ ಸುಂಕ ವಿಧಿಸುವುದು ತನ್ನ ಅಧಿಕಾರವಧಿಯ ನಿರ್ಣಾಯಕ ನೀತಿಯಾಗಿರುತ್ತವೆ ಎಂದು ಟ್ರಂಪ್ ಬಹಳ ಹಿಂದಿನಿಂದಲೂ ಹೇಳುತ್ತಿದ್ದರು. ತೆರಿಗೆಗಳಿಂದ ಉಂಟಾಗುವ ವೆಚ್ಚಗಳು ಹೆಚ್ಚಿನ ಉತ್ಪಾದನೆಯನ್ನು ಅಮೆರಿಕಕ್ಕೆ ಸ್ಥಳಾಂತರಿಸಲು ಕಾರಣವಾಗುತ್ತವೆ ಮತ್ತು ಬಜೆಟ್ ಕೊರತೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎನ್ನುತ್ತಿದ್ದರು.

ಅಮೆರಿಕ ಮತ್ತು ವಿದೇಶಿ ಕಾರು ತಯಾರಕರು ಸ್ಪರ್ಧಾತ್ಮಕ ಬೆಲೆಗಳನ್ನು ಕಾಯ್ದುಕೊಳ್ಳುವಾಗ ಜಾಗತಿಕ ಮಾರಾಟವನ್ನು ಸರಿಹೊಂದಿಸಲು ಪ್ರಪಂಚದಾದ್ಯಂತ ಘಟಕಗಳನ್ನು ಹೊಂದಿದ್ದಾರೆ. ಆದ್ದರಿಂದ, ಟ್ರಂಪ್ ಹೇಳಿದಂತೆ ಅಮೆರಿಕದಲ್ಲಿ ಹೊಸ ಕಾರ್ಖಾನೆಗಳನ್ನು ವಿನ್ಯಾಸಗೊಳಿಸಲು, ನಿರ್ಮಿಸಲು ಮತ್ತು ತೆರೆಯಲು ಕಂಪನಿಗಳಿಗೆ ವರ್ಷಗಳೇ ತೆಗೆದುಕೊಳ್ಳಬಹುದು ಎಂದು ವರದಿಗಳು ಹೇಳಿವೆ.

ಕಾರು ಆಮದಿನ ಮೇಲೆ ಸುಂಕ ವಿಧಿಸುವುದರಿಂದ ಅವುಗಳ ಬೆಲೆ ಹೆಚ್ಚಾಗಬಹುದು, ಆಯ್ಕೆಗಳು ಕಡಿಮೆಯಾಗಬಹುದು. ಈ ರೀತಿಯ ತೆರಿಗೆಗಳು ಮಧ್ಯಮ ಮತ್ತು ಕಾರ್ಮಿಕ ವರ್ಗದ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ ಎಂದು ಇನ್ಸ್ಟಿಟ್ಯೂಟ್ ಫಾರ್ ಇಂಟರ್ನ್ಯಾಷನಲ್ ಎಕನಾಮಿಕ್ಸ್‌ನ ಹಿರಿಯ ಅರ್ಥಶಾಸ್ತ್ರಜ್ಞೆ ಮೇರಿ ಲವ್ಲಿ ಹೇಳಿದ್ದಾರೆ.

ಈಗಾಗಲೇ ಸರಾಸರಿ ಕಾರು ಬೆಲೆ 49 ಸಾವಿರ ಡಾಲರ್‌ಗಳಷ್ಟಿರುವುದರಿಂದ ಹಲವು ಕುಟುಂಬಗಳು ಹೊಸ ಕಾರು ಮಾರುಕಟ್ಟೆಯಿಂದ ವಿಮುಖವಾಗಲಿವೆ ಮತ್ತು ಹಳೆಯ ವಾಹನಗಳನ್ನು ಇಟ್ಟುಕೊಳ್ಳುವುದು ಅನಿವಾರ್ಯವಾಗಲಿದೆ ಎಂದಿದ್ದಾರೆ.

ಸ್ಥಳೀಯ ಬುಡಕಟ್ಟು ಸಮುದಾಯದ ಭೂಮಿ ವಶಕ್ಕೆ ಯತ್ನ | ನಿತ್ಯಾನಂದನ ಕೈಲಾಸದ ಸದಸ್ಯರನ್ನು ಗಡೀಪಾರು ಮಾಡಿದ ಬೊಲಿವಿಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...