Homeಅಂತರಾಷ್ಟ್ರೀಯಆಮದು ಕಾರುಗಳ ಮೇಲೆ ಶೇ. 25 ಸುಂಕ ವಿಧಿಸಿದ ಟ್ರಂಪ್ ಆಡಳಿತ

ಆಮದು ಕಾರುಗಳ ಮೇಲೆ ಶೇ. 25 ಸುಂಕ ವಿಧಿಸಿದ ಟ್ರಂಪ್ ಆಡಳಿತ

- Advertisement -
- Advertisement -

ಅಮೆರಿಕಕ್ಕೆ ಆಮದಾಗುವ ಕಾರುಗಳು ಮತ್ತು ಅದರ ಬಿಡಭಾಗಗಳ ಮೇಲೆ ಶೇಕಡ 25ರಷ್ಟು ಸುಂಕ ವಿಧಿಸುವ ನಿರ್ಧಾರವನ್ನು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ (ಮಾ.26) ಪ್ರಕಟಿಸಿದ್ದಾರೆ.

ಈ ಕ್ರಮವು ದೇಶೀಯ ಉತ್ಪಾದನೆಯನ್ನು ಉತ್ತೇಜಿಸುತ್ತದೆ. ಆದರೆ, ಜಾಗತಿಕ ಪೂರೈಕೆ ಸರಪಳಿಗಳನ್ನು ಅವಲಂಬಿಸಿರುವ ವಾಹನ ತಯಾರಕರ ಮೇಲೆ ಆರ್ಥಿಕ ಒತ್ತಡವನ್ನುಂಟು ಮಾಡುತ್ತದೆ ಎಂದು ಶ್ವೇತಭವನ ಹೇಳಿಕೊಂಡಿದೆ.

ಶ್ವೇತಭವನವು ವಾರ್ಷಿಕವಾಗಿ 100 ಶತಕೋಟಿ ಡಾಲರ್ ಆದಾಯ ಸಂಗ್ರಹಿಸುವ ನಿರೀಕ್ಷೆ ಹೊಂದಿರುವ ಈ ಸುಂಕ ವಿಧಿಸುವ ನಿರ್ಧಾರವು, ವಿದೇಶಗಳಲ್ಲಿ ಘಟಕಗಳನ್ನು ಹೊಂದಿರುವ ಅಮೆರಿಕದ ಕಾರು ತಯಾರಕರಿಗೂ ಹೊರೆಯಾಗಲಿದೆ.

ಸುಂಕ ವಿಧಿಸುವ ಆದೇಶ ಏಪ್ರಿಲ್‌ 3ರಿಂದ ಜಾರಿಯಾಗಲಿದೆ. ಇದರಿಂದ ಕಾರು ತಯಾರಕರು ಹೆಚ್ಚಿನ ವೆಚ್ಚ ಮತ್ತು ಕಡಿಮೆ ಮಾರಾಟದ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಆದರೆ, ಈ ನಿರ್ಧಾರವು ಅಮೆರಿಕದಲ್ಲಿ ಹೆಚ್ಚಿನ ಕಾರ್ಖಾನೆಗಳು ತೆರೆಯಲು ಕಾರಣವಾಗಲಿದೆ ಮತ್ತು ಕಾರುಗಳ ಬಿಡಿಭಾಗಗಳು ಮತ್ತು ಸಿದ್ದಪಡಿಸಿದ ಕಾರುಗಳಿಗಾಗಿ ಅಮೆರಿಕ, ಕೆನಡಾ, ಮೆಕ್ಸಿಕೊದಾದ್ಯಂತ ಹರಡಿರುವ ‘ಹಾಸ್ಯಾಸ್ಪದ’ ಪೂರೈಕೆ ಸರಪಳಿ ಅಂತ್ಯವಾಗಲಿದೆ. ತಾನು ಸಹಿ ಮಾಡಿರುವ ಆದೇಶ ಶಾಶ್ವತ ಎಂದು ಟ್ರಂಪ್ ಹೇಳಿದ್ದಾರೆ.

ಕಾರುಗಳ ಆಮದುಗಳ ಮೇಲೆ ಸುಂಕ ವಿಧಿಸುವುದು ತನ್ನ ಅಧಿಕಾರವಧಿಯ ನಿರ್ಣಾಯಕ ನೀತಿಯಾಗಿರುತ್ತವೆ ಎಂದು ಟ್ರಂಪ್ ಬಹಳ ಹಿಂದಿನಿಂದಲೂ ಹೇಳುತ್ತಿದ್ದರು. ತೆರಿಗೆಗಳಿಂದ ಉಂಟಾಗುವ ವೆಚ್ಚಗಳು ಹೆಚ್ಚಿನ ಉತ್ಪಾದನೆಯನ್ನು ಅಮೆರಿಕಕ್ಕೆ ಸ್ಥಳಾಂತರಿಸಲು ಕಾರಣವಾಗುತ್ತವೆ ಮತ್ತು ಬಜೆಟ್ ಕೊರತೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎನ್ನುತ್ತಿದ್ದರು.

ಅಮೆರಿಕ ಮತ್ತು ವಿದೇಶಿ ಕಾರು ತಯಾರಕರು ಸ್ಪರ್ಧಾತ್ಮಕ ಬೆಲೆಗಳನ್ನು ಕಾಯ್ದುಕೊಳ್ಳುವಾಗ ಜಾಗತಿಕ ಮಾರಾಟವನ್ನು ಸರಿಹೊಂದಿಸಲು ಪ್ರಪಂಚದಾದ್ಯಂತ ಘಟಕಗಳನ್ನು ಹೊಂದಿದ್ದಾರೆ. ಆದ್ದರಿಂದ, ಟ್ರಂಪ್ ಹೇಳಿದಂತೆ ಅಮೆರಿಕದಲ್ಲಿ ಹೊಸ ಕಾರ್ಖಾನೆಗಳನ್ನು ವಿನ್ಯಾಸಗೊಳಿಸಲು, ನಿರ್ಮಿಸಲು ಮತ್ತು ತೆರೆಯಲು ಕಂಪನಿಗಳಿಗೆ ವರ್ಷಗಳೇ ತೆಗೆದುಕೊಳ್ಳಬಹುದು ಎಂದು ವರದಿಗಳು ಹೇಳಿವೆ.

ಕಾರು ಆಮದಿನ ಮೇಲೆ ಸುಂಕ ವಿಧಿಸುವುದರಿಂದ ಅವುಗಳ ಬೆಲೆ ಹೆಚ್ಚಾಗಬಹುದು, ಆಯ್ಕೆಗಳು ಕಡಿಮೆಯಾಗಬಹುದು. ಈ ರೀತಿಯ ತೆರಿಗೆಗಳು ಮಧ್ಯಮ ಮತ್ತು ಕಾರ್ಮಿಕ ವರ್ಗದ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ ಎಂದು ಇನ್ಸ್ಟಿಟ್ಯೂಟ್ ಫಾರ್ ಇಂಟರ್ನ್ಯಾಷನಲ್ ಎಕನಾಮಿಕ್ಸ್‌ನ ಹಿರಿಯ ಅರ್ಥಶಾಸ್ತ್ರಜ್ಞೆ ಮೇರಿ ಲವ್ಲಿ ಹೇಳಿದ್ದಾರೆ.

ಈಗಾಗಲೇ ಸರಾಸರಿ ಕಾರು ಬೆಲೆ 49 ಸಾವಿರ ಡಾಲರ್‌ಗಳಷ್ಟಿರುವುದರಿಂದ ಹಲವು ಕುಟುಂಬಗಳು ಹೊಸ ಕಾರು ಮಾರುಕಟ್ಟೆಯಿಂದ ವಿಮುಖವಾಗಲಿವೆ ಮತ್ತು ಹಳೆಯ ವಾಹನಗಳನ್ನು ಇಟ್ಟುಕೊಳ್ಳುವುದು ಅನಿವಾರ್ಯವಾಗಲಿದೆ ಎಂದಿದ್ದಾರೆ.

ಸ್ಥಳೀಯ ಬುಡಕಟ್ಟು ಸಮುದಾಯದ ಭೂಮಿ ವಶಕ್ಕೆ ಯತ್ನ | ನಿತ್ಯಾನಂದನ ಕೈಲಾಸದ ಸದಸ್ಯರನ್ನು ಗಡೀಪಾರು ಮಾಡಿದ ಬೊಲಿವಿಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮತ ಉಳಿಸಿ ಎಂದು ಜನ ಬೇಡಿಕೊಳ್ಳುವಂತೆ ಮಾಡಬೇಡಿ’: ಇದು ನನ್ನ ವೈಯಕ್ತಿಕ ಸಮಸ್ಯೆ ಅಲ್ಲ, ಇಡೀ ದೇಶದ ಸಮಸ್ಯೆ: ಬಹುಭಾಷಾ ನಟ ಪ್ರಕಾಶ್ ರಾಜ್

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವಿಧಾನದ ಬಗ್ಗೆ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಕರೆದಿದ್ದ ಮಹತ್ವದ ಪತ್ರಿಕಾಗೋಷ್ಠಿ ಆಗಸ್ಟ್ 14, 2026ರಂದು ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ...

‘ನಲ್ಸಾರ್’ ವಿದ್ಯಾರ್ಥಿಗಳ ವೃತ್ತಿಜೀವನಕ್ಕೆ ಅಡ್ಡಬಂದ BCI ನಡೆಗೆ CJI ಗರಂ

ಹೈದರಾಬಾದ್‌ನ 'ನಲ್ಸಾರ್' (NALSAR) ಕಾನೂನು ವಿಶ್ವವಿದ್ಯಾಲಯದ ಪದವೀಧರರ ಸನ್ನದು (ಎನ್‌ರೋಲ್‌ಮೆಂಟ್) ನೋಂದಣಿಯನ್ನು ಅಮಾನತಿನಲ್ಲಿಡುವಂತೆ ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ನೀಡಿದ್ದ ವಿವಾದಾತ್ಮಕ ನಿರ್ದೇಶನದ ವಿರುದ್ಧ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್,...

ಉತ್ತರ ಪ್ರದೇಶದಲ್ಲಿ ಮುಸ್ಲಿಮರ ಮೇಲಿನ ದೌರ್ಜನ್ಯ: ಯೋಗಿ ಆದಿತ್ಯನಾಥ್ ಸೇರಿ 8 ಅಧಿಕಾರಿಗಳ ನಿರ್ಬಂಧಕ್ಕೆ ಕೆನಡಾ ಮಾನವ ಹಕ್ಕುಗಳ ಸಂಸ್ಥೆ ಆಗ್ರಹ

ಉತ್ತರ ಪ್ರದೇಶದಲ್ಲಿ ಮುಸ್ಲಿಂ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ನಿರಂತರವಾಗಿ ನಡೆಸಲಾಗುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆ ಹಾಗೂ ರಾಜ್ಯ ಬೆಂಬಲಿತ ದೌರ್ಜನ್ಯಗಳನ್ನು ಖಂಡಿಸಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಎಂಟು ಪ್ರಮುಖ...

SIR: ಬೆಂಗಳೂರಿನ ಸರ್ವಜ್ಞನಗರದ ಒಂದೇ ಬೂತ್‌ನಲ್ಲಿ ಶೇ.93.71ರಷ್ಟು ಮತದಾರರ ಹೆಸರು ನಾಪತ್ತೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಹೆಸರಿನಲ್ಲಿ ರಾಜಧಾನಿ ಬೆಂಗಳೂರಿನ ಸರ್ವಜ್ಞನಗರ ಕ್ಷೇತ್ರದ ಒಂದೇ ಮತಗಟ್ಟೆಯಲ್ಲಿ ಬರೋಬ್ಬರಿ ಶೇ. 93.71ರಷ್ಟು ಮತದಾರರ ಹೆಸರುಗಳನ್ನು ಮತಪಟ್ಟಿಯಿಂದ ತೆಗೆಯಲಾಗಿದೆ ಎಂಬ ಆಘಾತಕಾರಿ ಸಂಗತಿಯೊಂದು...

ASDDO ಪಟ್ಟಿ ಸಾರ್ವಜನಿಕ ಪ್ರಕಟಣೆ ಬಗ್ಗೆ ಚುನಾವಣಾ ಆಯೋಗ ನಿರ್ಲಕ್ಷ್ಯ! ಆರೋಪ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬರೋಬ್ಬರಿ 1.08 ಕೋಟಿ ಮತದಾರರ ಹೆಸರನ್ನು ಎಎಸ್‌ಡಿಡಿಒ (ASDDO) ಪಟ್ಟಿಗೆ ಸೇರಿಸಿ ಆತಂಕ ಸೃಷ್ಟಿಸಿದ್ದ ಚುನಾವಣಾ ಆಯೋಗ, ಈಗ ಆ ಪಟ್ಟಿಯ ಸಾರ್ವಜನಿಕ ಪ್ರಕಟಣೆಯ...

SIR: 62 ವರ್ಷದ ಜೀವಂತ ವ್ಯಕ್ತಿಯನ್ನು ‘ಮೃತ’ ಎಂದು ಪಟ್ಟಿ ಮಾಡಿದ ಆಯೋಗದ ಕುತಂತ್ರ ಬಯಲು

ರಾಜ್ಯಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮೂಲ ಆಶಯಕ್ಕೇ ಮಾರಕವಾಗಿ ಪರಿಣಮಿಸುತ್ತಿದೆ. ದೋಷಮುಕ್ತ ಪಟ್ಟಿ ಸಿದ್ಧಪಡಿಸುವ ನೆಪದಲ್ಲಿ ಚುನಾವಣಾ ಆಯೋಗವು ಬರೋಬ್ಬರಿ 1.08 ಕೋಟಿ ಮತದಾರರನ್ನು...

‘ಸಿದ್ದಾರ್ಥ ವಿಹಾರ ಟ್ರಸ್ಟ್’ ನ ದಾಖಲೆ ನೀಡುತ್ತೇನೆ: ಆರ್‌ಎಸ್‌ಎಸ್, ರಾಮಮಂದಿರದ ಲೆಕ್ಕ ನೀಡಲು ಸಿದ್ಧವಿದ್ದೀರಾ?: ಬಿಜೆಪಿ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಸವಾಲು

ಬೆಂಗಳೂರು: ‘ಸಿದ್ದಾರ್ಥ ವಿಹಾರ ಟ್ರಸ್ಟ್‌’ ವಿರುದ್ಧ ಭೂ ಅಕ್ರಮದ ಆರೋಪ ಮಾಡಿ ತಮ್ಮ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನೇರ...

ಕ್ಯೂಬಾ ಎಂದರೆ ಫಿಡೆಲ್, ಅಮೆರಿಕದ ಕುತಂತ್ರದ ವಿರುದ್ಧ ಪುಟ್ಟ ರಾಷ್ಟ್ರ ಕ್ಯೂಬಾದ ಸುದೀರ್ಘ ಕ್ರಾಂತಿ

ಆಗಸ್ಟ್ 13, 2026 ರಂದು ಕ್ಯೂಬಾ ತನ್ನ ಕ್ರಾಂತಿಕಾರಿ ನಾಯಕ, ಕಮಾಂಡರ್-ಇನ್-ಚೀಫ್ ಫಿಡೆಲ್ ಕ್ಯಾಸ್ಟ್ರೋ ರೂಜ್ ಅವರ ಜನ್ಮ ಶತಮಾನೋತ್ಸವವನ್ನು ಆಚರಿಸುತ್ತಿದೆ. ಐದು ದಶಕಗಳ ಕಾಲ ದೇಶವನ್ನು ಮುನ್ನಡೆಸಿದ ನಾಯಕನ ಶಾಶ್ವತ ಸಿದ್ಧಾಂತಗಳು...

‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ: ಚಾಲ್ತಿಯಲ್ಲಿರುವ ಅಧಿವೇಶನದಲ್ಲೇ ವಿಧೇಯಕ ಮಂಡಿಸಲು ಸರ್ಕಾರಕ್ಕೆ ‘ರೋಹಿತ್ ಕಾಯ್ದೆಗಾಗಿ ಜನಾಂದೋಲನ’ ಸಂಘಟನೆ ಒತ್ತಾಯ

ಬೆಂಗಳೂರು: ದೇಶದ ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾಂಸ್ಥಿಕ ಜಾತಿ ತಾರತಮ್ಯ, ಕಿರುಕುಳ ಹಾಗೂ ವಂಚನೆಯನ್ನು ತಡೆಗಟ್ಟಲು ಅತ್ಯಂತ ನಿರ್ಣಾಯಕವಾಗಿರುವ 'ಕರ್ನಾಟಕ ರೋಹಿತ್ ವೇಮುಲಾ...

SIR: ತೆಲಂಗಾಣ ಸರ್ಕಾರ ಮತದಾರರಿಗೆ ನೀಡಿದ್ದ FRC ಯನ್ನು , ನಿರಾಕರಿಸಿದ ಕೇಂದ್ರ ಚುನಾವಣಾ ಆಯೋಗ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ತೆಲಂಗಾಣ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿದ್ದ ‘ಫ್ಯಾಮಿಲಿ ರಿಜಿಸ್ಟರ್ ಸರ್ಟಿಫಿಕೇಟ್’ (FRC) ಅನ್ನು ಮತದಾರರ ದಾಖಲೆಯನ್ನಾಗಿ ಸ್ವೀಕರಿಸಲು ಕೇಂದ್ರ ಚುನಾವಣಾ ಆಯೋಗ ನಿರಾಕರಿಸಿದೆ. FRC...