Homeಅಂತರಾಷ್ಟ್ರೀಯಭಾರತದ ಉತ್ಪನ್ನಗಳ ಮೇಲೆ ಶೇ. 26ರಷ್ಟು ಪ್ರತಿ ಸುಂಕ ವಿಧಿಸಿದ ಟ್ರಂಪ್

ಭಾರತದ ಉತ್ಪನ್ನಗಳ ಮೇಲೆ ಶೇ. 26ರಷ್ಟು ಪ್ರತಿ ಸುಂಕ ವಿಧಿಸಿದ ಟ್ರಂಪ್

- Advertisement -
- Advertisement -

ಈ ಹಿಂದೆ ಹೇಳಿದಂತೆ ಭಾರತ ಸೇರಿದಂತೆ ವಿವಿಧ ದೇಶಗಳಿಂದ ಅಮೆರಿಕಕ್ಕೆ ಆಮದಾಗುವ ಉತ್ಪನ್ನಗಳ ಮೇಲೆ ಡೊನಾಲ್ಡ್ ಟ್ರಂಪ್ ಸರ್ಕಾರ ಏಪ್ರಿಲ್ 2 ಬುಧವಾರ (ಭಾರತೀಯ ಕಾಲಮಾನ ಏಪ್ರಿಲ್ 3 ರಾತ್ರಿ 2 ಗಂಟೆ ಸುಮಾರಿಗೆ) ಪ್ರತಿ ಸುಂಕ (Reciprocal tariffs)ಘೋಷಣೆ ಮಾಡಿದೆ.

ಭಾರತದ ಉತ್ಪನ್ನಗಳ ಮೇಲೆ ಶೇಕಡ 26ರಷ್ಟು ಪ್ರತಿ ಸುಂಕ ಹೇರಲಾಗಿದೆ. “ಭಾರತ ಅಮೆರಿಕದ ಉತ್ಪನ್ನಗಳ ಮೇಲೆ ಶೇಕಡ 52ರಷ್ಟು ಸುಂಕ ವಿಧಿಸುತ್ತಿದೆ. ನಾವು ಶೇಕಡ 26ರಷ್ಟು ವಿನಾಯಿತಿಯೊಂದಿಗೆ ಶೇಕಡ 26ರಷ್ಟು ಮಾತ್ರ ಪ್ರತಿ ಸುಂಕ ವಿಧಿಸುತ್ತಿದ್ದೇವೆ ಎಂದು ಟ್ರಂಪ್ ಹೇಳಿದ್ದಾರೆ.

ಶ್ವೇತ ಭವನದ ರೋಸ್ ಗಾರ್ಡನ್‌ನಲ್ಲಿ ನಡೆದ ‘ಮೇಕ್ ಅಮೆರಿಕ ವೆಲ್ದಿ ಅಗೈನ್’ ಎಂಬ ಕಾರ್ಯಕ್ರಮದಲ್ಲಿ ಮಾತನಾಡಿದ ಟ್ರಂಪ್, ವಿವಿಧ ದೇಶಗಳು ಅಮೆರಿಕದ ಉತ್ಪನ್ನಗಳ ಮೇಲೆ ವಿಧಿಸುತ್ತಿರುವ ಸುಂಕ ಮತ್ತು ಅದಕ್ಕೆ ಪ್ರತಿಯಾಗಿ ಅಮೆರಿಕ ಘೋಷಣೆ ಮಾಡಿದ ಸುಂಕದ ಚಾರ್ಟ್‌ ಪ್ರದರ್ಶಿಸಿದ್ದಾರೆ.

ಪ್ರತಿಸುಂಕ ವಿಧಿಸಿದ ನಿನ್ನೆಯ ದಿನವನ್ನು (ಏ.2) ‘ಅಮೆರಿಕದ ವಿಮೋಚನಾ ದಿನ’ (US Libaration Day)ಎಂದು ಕರೆದ ಟ್ರಂಪ್, “2025ರ ಏಪ್ರಿಲ್ 2ನ್ನು ಅಮೆರಿಕದ ಕೈಗಾರಿಕೆಗಳು ಮರುಹುಟ್ಟು ಪಡೆದ ದಿನವನ್ನಾಗಿ ಸದಾ ನೆನಪಿಸಿಕೊಳ್ಳಬೇಕು. ಅಮೆರಿಕದ ಭವಿಷ್ಯದ ಪುನರುತ್ಥಾನದ ದಿನ, ಅಮೆರಿಕವನ್ನು ಮತ್ತೆ ಸಮೃದ್ಧ ರಾಷ್ಟ್ರವನ್ನಾಗಿಸುವುದನ್ನು ಪ್ರಾರಂಭ ಮಾಡಿದ ದಿನ. ನಾವು ದೇಶವನ್ನು ಸಮೃದ್ಧ, ಉತ್ತಮ ಹಾಗೂ ಸಂಪದ್ಭರಿತ ರಾಷ್ಟ್ರವನ್ನಾಗಿ ಮಾಡುತ್ತೇವೆ” ಎಂದು ಹೇಳಿದ್ದಾರೆ.

“ದಶಕಗಳಿಂದ ಹತ್ತಿರದ-ದೂರದ, ಶತ್ರು-ಮಿತ್ರ ಎಲ್ಲಾ ರಾಷ್ಟ್ರಗಳು ಅಮೆರಿಕವನ್ನು ಲೂಟಿಗೈದಿವೆ. ನಮಗೆ ಅನ್ಯಾಯ ಮಾಡಿವೆ ಎಂದ ಟ್ರಂಪ್, ಇಂತಹ ವ್ಯಾಪಾರ ಅಸಮಾನತೆ ಮುಂದುವರಿಯಲು ಈ ಹಿಂದಿನ ಅಮೆರಿಕನ್ ನಾಯಕರನ್ನು ಕಾರಣರಾಗಿದ್ದಾರೆ” ಎಂದು ದೂಷಿಸಿದ್ದಾರೆ.

ಜಾಗತಿಕ ಸುಂಕ ವ್ಯವಸ್ಥೆಯಲ್ಲಿ ತುಂಬಾ ವ್ಯತ್ಯಾಸವಿದೆ ಎಂದು ಆರೋಪಿಸಿದ ಟ್ರಂಪ್, “ಮೋಟಾರ್‌ ಸೈಕಲ್‌ಗಳ ಆಮದಿನ ಮೇಲೆ ಅಮೆರಿಕ ಶೇಕಡ 2.4ರಷ್ಟು ಸುಂಕ ವಿಧಿಸಿದರೆ, ಥೈಲ್ಯಾಂಡ್, ಶೇ.60, ಭಾರತ ಶೇ.70, ವಿಯೆಟ್ನಾಂ ಶೇ.75ರಷ್ಟು ಹಾಗೂ ಇತರ ದೇಶಗಳು ಇದಕ್ಕಿಂತಲೂ ಹೆಚ್ಚು ಸುಂಕ ವಿಧಿಸುತ್ತಿವೆ ಎಂದು ವಿವರಿಸಿದ್ದಾರೆ.

ಆಟೋ ಮೊಬೈಲ್ ಉದ್ಯಮದಲ್ಲಿನ ಸುಂಕ ವ್ಯತ್ಯಾಸದ ಬಗ್ಗೆ ಉಲ್ಲೇಖಿಸಿದ ಟ್ರಂಪ್, “ಅಮೆರಿಕ ವಿದೇಶಿ ನಿರ್ಮಿತ ವಾಹನಗಳ ಆಮದಿನ ಮೇಲೆ ಶೇ.2.5ರಷ್ಟು ಮಾತ್ರ ಸುಂಕ ವಿಧಿಸುತ್ತಿದೆ. ಆದರೆ, ಯುರೋಪಿಯನ್ ದೇಶಗಳು ಶೇ. 10ರಷ್ಟು ಸುಂಕ ವಿಧಿಸುತ್ತಿವೆ. ಅವರು ಶೇ. 20ರಷ್ಟು ವ್ಯಾಟ್‌ ಕೂಡ ವಿಧಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಯಾವ ದೇಶದ ಮೇಲೆ ಎಷ್ಟು ಪ್ರತಿ ಸುಂಕ?..ಇಲ್ಲಿದೆ ಪಟ್ಟಿ 
 

ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರ: ಬೆಳಗಿನ ಜಾವ 1.15ಕ್ಕೆ ನಡೆದ ಮತದಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...