Homeಅಂತರಾಷ್ಟ್ರೀಯಭಾರತದ ಉತ್ಪನ್ನಗಳ ಮೇಲೆ ಶೇ. 26ರಷ್ಟು ಪ್ರತಿ ಸುಂಕ ವಿಧಿಸಿದ ಟ್ರಂಪ್

ಭಾರತದ ಉತ್ಪನ್ನಗಳ ಮೇಲೆ ಶೇ. 26ರಷ್ಟು ಪ್ರತಿ ಸುಂಕ ವಿಧಿಸಿದ ಟ್ರಂಪ್

- Advertisement -
- Advertisement -

ಈ ಹಿಂದೆ ಹೇಳಿದಂತೆ ಭಾರತ ಸೇರಿದಂತೆ ವಿವಿಧ ದೇಶಗಳಿಂದ ಅಮೆರಿಕಕ್ಕೆ ಆಮದಾಗುವ ಉತ್ಪನ್ನಗಳ ಮೇಲೆ ಡೊನಾಲ್ಡ್ ಟ್ರಂಪ್ ಸರ್ಕಾರ ಏಪ್ರಿಲ್ 2 ಬುಧವಾರ (ಭಾರತೀಯ ಕಾಲಮಾನ ಏಪ್ರಿಲ್ 3 ರಾತ್ರಿ 2 ಗಂಟೆ ಸುಮಾರಿಗೆ) ಪ್ರತಿ ಸುಂಕ (Reciprocal tariffs)ಘೋಷಣೆ ಮಾಡಿದೆ.

ಭಾರತದ ಉತ್ಪನ್ನಗಳ ಮೇಲೆ ಶೇಕಡ 26ರಷ್ಟು ಪ್ರತಿ ಸುಂಕ ಹೇರಲಾಗಿದೆ. “ಭಾರತ ಅಮೆರಿಕದ ಉತ್ಪನ್ನಗಳ ಮೇಲೆ ಶೇಕಡ 52ರಷ್ಟು ಸುಂಕ ವಿಧಿಸುತ್ತಿದೆ. ನಾವು ಶೇಕಡ 26ರಷ್ಟು ವಿನಾಯಿತಿಯೊಂದಿಗೆ ಶೇಕಡ 26ರಷ್ಟು ಮಾತ್ರ ಪ್ರತಿ ಸುಂಕ ವಿಧಿಸುತ್ತಿದ್ದೇವೆ ಎಂದು ಟ್ರಂಪ್ ಹೇಳಿದ್ದಾರೆ.

ಶ್ವೇತ ಭವನದ ರೋಸ್ ಗಾರ್ಡನ್‌ನಲ್ಲಿ ನಡೆದ ‘ಮೇಕ್ ಅಮೆರಿಕ ವೆಲ್ದಿ ಅಗೈನ್’ ಎಂಬ ಕಾರ್ಯಕ್ರಮದಲ್ಲಿ ಮಾತನಾಡಿದ ಟ್ರಂಪ್, ವಿವಿಧ ದೇಶಗಳು ಅಮೆರಿಕದ ಉತ್ಪನ್ನಗಳ ಮೇಲೆ ವಿಧಿಸುತ್ತಿರುವ ಸುಂಕ ಮತ್ತು ಅದಕ್ಕೆ ಪ್ರತಿಯಾಗಿ ಅಮೆರಿಕ ಘೋಷಣೆ ಮಾಡಿದ ಸುಂಕದ ಚಾರ್ಟ್‌ ಪ್ರದರ್ಶಿಸಿದ್ದಾರೆ.

ಪ್ರತಿಸುಂಕ ವಿಧಿಸಿದ ನಿನ್ನೆಯ ದಿನವನ್ನು (ಏ.2) ‘ಅಮೆರಿಕದ ವಿಮೋಚನಾ ದಿನ’ (US Libaration Day)ಎಂದು ಕರೆದ ಟ್ರಂಪ್, “2025ರ ಏಪ್ರಿಲ್ 2ನ್ನು ಅಮೆರಿಕದ ಕೈಗಾರಿಕೆಗಳು ಮರುಹುಟ್ಟು ಪಡೆದ ದಿನವನ್ನಾಗಿ ಸದಾ ನೆನಪಿಸಿಕೊಳ್ಳಬೇಕು. ಅಮೆರಿಕದ ಭವಿಷ್ಯದ ಪುನರುತ್ಥಾನದ ದಿನ, ಅಮೆರಿಕವನ್ನು ಮತ್ತೆ ಸಮೃದ್ಧ ರಾಷ್ಟ್ರವನ್ನಾಗಿಸುವುದನ್ನು ಪ್ರಾರಂಭ ಮಾಡಿದ ದಿನ. ನಾವು ದೇಶವನ್ನು ಸಮೃದ್ಧ, ಉತ್ತಮ ಹಾಗೂ ಸಂಪದ್ಭರಿತ ರಾಷ್ಟ್ರವನ್ನಾಗಿ ಮಾಡುತ್ತೇವೆ” ಎಂದು ಹೇಳಿದ್ದಾರೆ.

“ದಶಕಗಳಿಂದ ಹತ್ತಿರದ-ದೂರದ, ಶತ್ರು-ಮಿತ್ರ ಎಲ್ಲಾ ರಾಷ್ಟ್ರಗಳು ಅಮೆರಿಕವನ್ನು ಲೂಟಿಗೈದಿವೆ. ನಮಗೆ ಅನ್ಯಾಯ ಮಾಡಿವೆ ಎಂದ ಟ್ರಂಪ್, ಇಂತಹ ವ್ಯಾಪಾರ ಅಸಮಾನತೆ ಮುಂದುವರಿಯಲು ಈ ಹಿಂದಿನ ಅಮೆರಿಕನ್ ನಾಯಕರನ್ನು ಕಾರಣರಾಗಿದ್ದಾರೆ” ಎಂದು ದೂಷಿಸಿದ್ದಾರೆ.

ಜಾಗತಿಕ ಸುಂಕ ವ್ಯವಸ್ಥೆಯಲ್ಲಿ ತುಂಬಾ ವ್ಯತ್ಯಾಸವಿದೆ ಎಂದು ಆರೋಪಿಸಿದ ಟ್ರಂಪ್, “ಮೋಟಾರ್‌ ಸೈಕಲ್‌ಗಳ ಆಮದಿನ ಮೇಲೆ ಅಮೆರಿಕ ಶೇಕಡ 2.4ರಷ್ಟು ಸುಂಕ ವಿಧಿಸಿದರೆ, ಥೈಲ್ಯಾಂಡ್, ಶೇ.60, ಭಾರತ ಶೇ.70, ವಿಯೆಟ್ನಾಂ ಶೇ.75ರಷ್ಟು ಹಾಗೂ ಇತರ ದೇಶಗಳು ಇದಕ್ಕಿಂತಲೂ ಹೆಚ್ಚು ಸುಂಕ ವಿಧಿಸುತ್ತಿವೆ ಎಂದು ವಿವರಿಸಿದ್ದಾರೆ.

ಆಟೋ ಮೊಬೈಲ್ ಉದ್ಯಮದಲ್ಲಿನ ಸುಂಕ ವ್ಯತ್ಯಾಸದ ಬಗ್ಗೆ ಉಲ್ಲೇಖಿಸಿದ ಟ್ರಂಪ್, “ಅಮೆರಿಕ ವಿದೇಶಿ ನಿರ್ಮಿತ ವಾಹನಗಳ ಆಮದಿನ ಮೇಲೆ ಶೇ.2.5ರಷ್ಟು ಮಾತ್ರ ಸುಂಕ ವಿಧಿಸುತ್ತಿದೆ. ಆದರೆ, ಯುರೋಪಿಯನ್ ದೇಶಗಳು ಶೇ. 10ರಷ್ಟು ಸುಂಕ ವಿಧಿಸುತ್ತಿವೆ. ಅವರು ಶೇ. 20ರಷ್ಟು ವ್ಯಾಟ್‌ ಕೂಡ ವಿಧಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಯಾವ ದೇಶದ ಮೇಲೆ ಎಷ್ಟು ಪ್ರತಿ ಸುಂಕ?..ಇಲ್ಲಿದೆ ಪಟ್ಟಿ 
 

ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರ: ಬೆಳಗಿನ ಜಾವ 1.15ಕ್ಕೆ ನಡೆದ ಮತದಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....