Homeಅಂತರಾಷ್ಟ್ರೀಯಭಾರತದ ಉತ್ಪನ್ನಗಳ ಮೇಲೆ ಶೇ. 26ರಷ್ಟು ಪ್ರತಿ ಸುಂಕ ವಿಧಿಸಿದ ಟ್ರಂಪ್

ಭಾರತದ ಉತ್ಪನ್ನಗಳ ಮೇಲೆ ಶೇ. 26ರಷ್ಟು ಪ್ರತಿ ಸುಂಕ ವಿಧಿಸಿದ ಟ್ರಂಪ್

- Advertisement -
- Advertisement -

ಈ ಹಿಂದೆ ಹೇಳಿದಂತೆ ಭಾರತ ಸೇರಿದಂತೆ ವಿವಿಧ ದೇಶಗಳಿಂದ ಅಮೆರಿಕಕ್ಕೆ ಆಮದಾಗುವ ಉತ್ಪನ್ನಗಳ ಮೇಲೆ ಡೊನಾಲ್ಡ್ ಟ್ರಂಪ್ ಸರ್ಕಾರ ಏಪ್ರಿಲ್ 2 ಬುಧವಾರ (ಭಾರತೀಯ ಕಾಲಮಾನ ಏಪ್ರಿಲ್ 3 ರಾತ್ರಿ 2 ಗಂಟೆ ಸುಮಾರಿಗೆ) ಪ್ರತಿ ಸುಂಕ (Reciprocal tariffs)ಘೋಷಣೆ ಮಾಡಿದೆ.

ಭಾರತದ ಉತ್ಪನ್ನಗಳ ಮೇಲೆ ಶೇಕಡ 26ರಷ್ಟು ಪ್ರತಿ ಸುಂಕ ಹೇರಲಾಗಿದೆ. “ಭಾರತ ಅಮೆರಿಕದ ಉತ್ಪನ್ನಗಳ ಮೇಲೆ ಶೇಕಡ 52ರಷ್ಟು ಸುಂಕ ವಿಧಿಸುತ್ತಿದೆ. ನಾವು ಶೇಕಡ 26ರಷ್ಟು ವಿನಾಯಿತಿಯೊಂದಿಗೆ ಶೇಕಡ 26ರಷ್ಟು ಮಾತ್ರ ಪ್ರತಿ ಸುಂಕ ವಿಧಿಸುತ್ತಿದ್ದೇವೆ ಎಂದು ಟ್ರಂಪ್ ಹೇಳಿದ್ದಾರೆ.

ಶ್ವೇತ ಭವನದ ರೋಸ್ ಗಾರ್ಡನ್‌ನಲ್ಲಿ ನಡೆದ ‘ಮೇಕ್ ಅಮೆರಿಕ ವೆಲ್ದಿ ಅಗೈನ್’ ಎಂಬ ಕಾರ್ಯಕ್ರಮದಲ್ಲಿ ಮಾತನಾಡಿದ ಟ್ರಂಪ್, ವಿವಿಧ ದೇಶಗಳು ಅಮೆರಿಕದ ಉತ್ಪನ್ನಗಳ ಮೇಲೆ ವಿಧಿಸುತ್ತಿರುವ ಸುಂಕ ಮತ್ತು ಅದಕ್ಕೆ ಪ್ರತಿಯಾಗಿ ಅಮೆರಿಕ ಘೋಷಣೆ ಮಾಡಿದ ಸುಂಕದ ಚಾರ್ಟ್‌ ಪ್ರದರ್ಶಿಸಿದ್ದಾರೆ.

ಪ್ರತಿಸುಂಕ ವಿಧಿಸಿದ ನಿನ್ನೆಯ ದಿನವನ್ನು (ಏ.2) ‘ಅಮೆರಿಕದ ವಿಮೋಚನಾ ದಿನ’ (US Libaration Day)ಎಂದು ಕರೆದ ಟ್ರಂಪ್, “2025ರ ಏಪ್ರಿಲ್ 2ನ್ನು ಅಮೆರಿಕದ ಕೈಗಾರಿಕೆಗಳು ಮರುಹುಟ್ಟು ಪಡೆದ ದಿನವನ್ನಾಗಿ ಸದಾ ನೆನಪಿಸಿಕೊಳ್ಳಬೇಕು. ಅಮೆರಿಕದ ಭವಿಷ್ಯದ ಪುನರುತ್ಥಾನದ ದಿನ, ಅಮೆರಿಕವನ್ನು ಮತ್ತೆ ಸಮೃದ್ಧ ರಾಷ್ಟ್ರವನ್ನಾಗಿಸುವುದನ್ನು ಪ್ರಾರಂಭ ಮಾಡಿದ ದಿನ. ನಾವು ದೇಶವನ್ನು ಸಮೃದ್ಧ, ಉತ್ತಮ ಹಾಗೂ ಸಂಪದ್ಭರಿತ ರಾಷ್ಟ್ರವನ್ನಾಗಿ ಮಾಡುತ್ತೇವೆ” ಎಂದು ಹೇಳಿದ್ದಾರೆ.

“ದಶಕಗಳಿಂದ ಹತ್ತಿರದ-ದೂರದ, ಶತ್ರು-ಮಿತ್ರ ಎಲ್ಲಾ ರಾಷ್ಟ್ರಗಳು ಅಮೆರಿಕವನ್ನು ಲೂಟಿಗೈದಿವೆ. ನಮಗೆ ಅನ್ಯಾಯ ಮಾಡಿವೆ ಎಂದ ಟ್ರಂಪ್, ಇಂತಹ ವ್ಯಾಪಾರ ಅಸಮಾನತೆ ಮುಂದುವರಿಯಲು ಈ ಹಿಂದಿನ ಅಮೆರಿಕನ್ ನಾಯಕರನ್ನು ಕಾರಣರಾಗಿದ್ದಾರೆ” ಎಂದು ದೂಷಿಸಿದ್ದಾರೆ.

ಜಾಗತಿಕ ಸುಂಕ ವ್ಯವಸ್ಥೆಯಲ್ಲಿ ತುಂಬಾ ವ್ಯತ್ಯಾಸವಿದೆ ಎಂದು ಆರೋಪಿಸಿದ ಟ್ರಂಪ್, “ಮೋಟಾರ್‌ ಸೈಕಲ್‌ಗಳ ಆಮದಿನ ಮೇಲೆ ಅಮೆರಿಕ ಶೇಕಡ 2.4ರಷ್ಟು ಸುಂಕ ವಿಧಿಸಿದರೆ, ಥೈಲ್ಯಾಂಡ್, ಶೇ.60, ಭಾರತ ಶೇ.70, ವಿಯೆಟ್ನಾಂ ಶೇ.75ರಷ್ಟು ಹಾಗೂ ಇತರ ದೇಶಗಳು ಇದಕ್ಕಿಂತಲೂ ಹೆಚ್ಚು ಸುಂಕ ವಿಧಿಸುತ್ತಿವೆ ಎಂದು ವಿವರಿಸಿದ್ದಾರೆ.

ಆಟೋ ಮೊಬೈಲ್ ಉದ್ಯಮದಲ್ಲಿನ ಸುಂಕ ವ್ಯತ್ಯಾಸದ ಬಗ್ಗೆ ಉಲ್ಲೇಖಿಸಿದ ಟ್ರಂಪ್, “ಅಮೆರಿಕ ವಿದೇಶಿ ನಿರ್ಮಿತ ವಾಹನಗಳ ಆಮದಿನ ಮೇಲೆ ಶೇ.2.5ರಷ್ಟು ಮಾತ್ರ ಸುಂಕ ವಿಧಿಸುತ್ತಿದೆ. ಆದರೆ, ಯುರೋಪಿಯನ್ ದೇಶಗಳು ಶೇ. 10ರಷ್ಟು ಸುಂಕ ವಿಧಿಸುತ್ತಿವೆ. ಅವರು ಶೇ. 20ರಷ್ಟು ವ್ಯಾಟ್‌ ಕೂಡ ವಿಧಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಯಾವ ದೇಶದ ಮೇಲೆ ಎಷ್ಟು ಪ್ರತಿ ಸುಂಕ?..ಇಲ್ಲಿದೆ ಪಟ್ಟಿ 
 

ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರ: ಬೆಳಗಿನ ಜಾವ 1.15ಕ್ಕೆ ನಡೆದ ಮತದಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...