Homeಅಂತರಾಷ್ಟ್ರೀಯಭಾರತದ ಉತ್ಪನ್ನಗಳ ಮೇಲೆ ಶೇ. 26ರಷ್ಟು ಪ್ರತಿ ಸುಂಕ ವಿಧಿಸಿದ ಟ್ರಂಪ್

ಭಾರತದ ಉತ್ಪನ್ನಗಳ ಮೇಲೆ ಶೇ. 26ರಷ್ಟು ಪ್ರತಿ ಸುಂಕ ವಿಧಿಸಿದ ಟ್ರಂಪ್

- Advertisement -
- Advertisement -

ಈ ಹಿಂದೆ ಹೇಳಿದಂತೆ ಭಾರತ ಸೇರಿದಂತೆ ವಿವಿಧ ದೇಶಗಳಿಂದ ಅಮೆರಿಕಕ್ಕೆ ಆಮದಾಗುವ ಉತ್ಪನ್ನಗಳ ಮೇಲೆ ಡೊನಾಲ್ಡ್ ಟ್ರಂಪ್ ಸರ್ಕಾರ ಏಪ್ರಿಲ್ 2 ಬುಧವಾರ (ಭಾರತೀಯ ಕಾಲಮಾನ ಏಪ್ರಿಲ್ 3 ರಾತ್ರಿ 2 ಗಂಟೆ ಸುಮಾರಿಗೆ) ಪ್ರತಿ ಸುಂಕ (Reciprocal tariffs)ಘೋಷಣೆ ಮಾಡಿದೆ.

ಭಾರತದ ಉತ್ಪನ್ನಗಳ ಮೇಲೆ ಶೇಕಡ 26ರಷ್ಟು ಪ್ರತಿ ಸುಂಕ ಹೇರಲಾಗಿದೆ. “ಭಾರತ ಅಮೆರಿಕದ ಉತ್ಪನ್ನಗಳ ಮೇಲೆ ಶೇಕಡ 52ರಷ್ಟು ಸುಂಕ ವಿಧಿಸುತ್ತಿದೆ. ನಾವು ಶೇಕಡ 26ರಷ್ಟು ವಿನಾಯಿತಿಯೊಂದಿಗೆ ಶೇಕಡ 26ರಷ್ಟು ಮಾತ್ರ ಪ್ರತಿ ಸುಂಕ ವಿಧಿಸುತ್ತಿದ್ದೇವೆ ಎಂದು ಟ್ರಂಪ್ ಹೇಳಿದ್ದಾರೆ.

ಶ್ವೇತ ಭವನದ ರೋಸ್ ಗಾರ್ಡನ್‌ನಲ್ಲಿ ನಡೆದ ‘ಮೇಕ್ ಅಮೆರಿಕ ವೆಲ್ದಿ ಅಗೈನ್’ ಎಂಬ ಕಾರ್ಯಕ್ರಮದಲ್ಲಿ ಮಾತನಾಡಿದ ಟ್ರಂಪ್, ವಿವಿಧ ದೇಶಗಳು ಅಮೆರಿಕದ ಉತ್ಪನ್ನಗಳ ಮೇಲೆ ವಿಧಿಸುತ್ತಿರುವ ಸುಂಕ ಮತ್ತು ಅದಕ್ಕೆ ಪ್ರತಿಯಾಗಿ ಅಮೆರಿಕ ಘೋಷಣೆ ಮಾಡಿದ ಸುಂಕದ ಚಾರ್ಟ್‌ ಪ್ರದರ್ಶಿಸಿದ್ದಾರೆ.

ಪ್ರತಿಸುಂಕ ವಿಧಿಸಿದ ನಿನ್ನೆಯ ದಿನವನ್ನು (ಏ.2) ‘ಅಮೆರಿಕದ ವಿಮೋಚನಾ ದಿನ’ (US Libaration Day)ಎಂದು ಕರೆದ ಟ್ರಂಪ್, “2025ರ ಏಪ್ರಿಲ್ 2ನ್ನು ಅಮೆರಿಕದ ಕೈಗಾರಿಕೆಗಳು ಮರುಹುಟ್ಟು ಪಡೆದ ದಿನವನ್ನಾಗಿ ಸದಾ ನೆನಪಿಸಿಕೊಳ್ಳಬೇಕು. ಅಮೆರಿಕದ ಭವಿಷ್ಯದ ಪುನರುತ್ಥಾನದ ದಿನ, ಅಮೆರಿಕವನ್ನು ಮತ್ತೆ ಸಮೃದ್ಧ ರಾಷ್ಟ್ರವನ್ನಾಗಿಸುವುದನ್ನು ಪ್ರಾರಂಭ ಮಾಡಿದ ದಿನ. ನಾವು ದೇಶವನ್ನು ಸಮೃದ್ಧ, ಉತ್ತಮ ಹಾಗೂ ಸಂಪದ್ಭರಿತ ರಾಷ್ಟ್ರವನ್ನಾಗಿ ಮಾಡುತ್ತೇವೆ” ಎಂದು ಹೇಳಿದ್ದಾರೆ.

“ದಶಕಗಳಿಂದ ಹತ್ತಿರದ-ದೂರದ, ಶತ್ರು-ಮಿತ್ರ ಎಲ್ಲಾ ರಾಷ್ಟ್ರಗಳು ಅಮೆರಿಕವನ್ನು ಲೂಟಿಗೈದಿವೆ. ನಮಗೆ ಅನ್ಯಾಯ ಮಾಡಿವೆ ಎಂದ ಟ್ರಂಪ್, ಇಂತಹ ವ್ಯಾಪಾರ ಅಸಮಾನತೆ ಮುಂದುವರಿಯಲು ಈ ಹಿಂದಿನ ಅಮೆರಿಕನ್ ನಾಯಕರನ್ನು ಕಾರಣರಾಗಿದ್ದಾರೆ” ಎಂದು ದೂಷಿಸಿದ್ದಾರೆ.

ಜಾಗತಿಕ ಸುಂಕ ವ್ಯವಸ್ಥೆಯಲ್ಲಿ ತುಂಬಾ ವ್ಯತ್ಯಾಸವಿದೆ ಎಂದು ಆರೋಪಿಸಿದ ಟ್ರಂಪ್, “ಮೋಟಾರ್‌ ಸೈಕಲ್‌ಗಳ ಆಮದಿನ ಮೇಲೆ ಅಮೆರಿಕ ಶೇಕಡ 2.4ರಷ್ಟು ಸುಂಕ ವಿಧಿಸಿದರೆ, ಥೈಲ್ಯಾಂಡ್, ಶೇ.60, ಭಾರತ ಶೇ.70, ವಿಯೆಟ್ನಾಂ ಶೇ.75ರಷ್ಟು ಹಾಗೂ ಇತರ ದೇಶಗಳು ಇದಕ್ಕಿಂತಲೂ ಹೆಚ್ಚು ಸುಂಕ ವಿಧಿಸುತ್ತಿವೆ ಎಂದು ವಿವರಿಸಿದ್ದಾರೆ.

ಆಟೋ ಮೊಬೈಲ್ ಉದ್ಯಮದಲ್ಲಿನ ಸುಂಕ ವ್ಯತ್ಯಾಸದ ಬಗ್ಗೆ ಉಲ್ಲೇಖಿಸಿದ ಟ್ರಂಪ್, “ಅಮೆರಿಕ ವಿದೇಶಿ ನಿರ್ಮಿತ ವಾಹನಗಳ ಆಮದಿನ ಮೇಲೆ ಶೇ.2.5ರಷ್ಟು ಮಾತ್ರ ಸುಂಕ ವಿಧಿಸುತ್ತಿದೆ. ಆದರೆ, ಯುರೋಪಿಯನ್ ದೇಶಗಳು ಶೇ. 10ರಷ್ಟು ಸುಂಕ ವಿಧಿಸುತ್ತಿವೆ. ಅವರು ಶೇ. 20ರಷ್ಟು ವ್ಯಾಟ್‌ ಕೂಡ ವಿಧಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಯಾವ ದೇಶದ ಮೇಲೆ ಎಷ್ಟು ಪ್ರತಿ ಸುಂಕ?..ಇಲ್ಲಿದೆ ಪಟ್ಟಿ 
 

ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರ: ಬೆಳಗಿನ ಜಾವ 1.15ಕ್ಕೆ ನಡೆದ ಮತದಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...