Homeಮುಖಪುಟ'ಹಷ್ ಮನಿ' ಪ್ರಕರಣ: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೋಷಿ ಎಂದ ಕೋರ್ಟ್

‘ಹಷ್ ಮನಿ’ ಪ್ರಕರಣ: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೋಷಿ ಎಂದ ಕೋರ್ಟ್

- Advertisement -
- Advertisement -

ನೀಲಿ ಚಿತ್ರ ತಾರೆ ಸ್ಟಾರ್ಮಿ ಡೇನಿಯಲ್ಸ್‌ ಜೊತೆಗಿನ ಸಂಬಂಧ ಮುಚ್ಚಿಡಲು ಹಣ ನೀಡಿದ ಪ್ರಕರಣ (ಹಷ್ ಮನಿ ಪ್ರಕರಣ)ದ ಎಲ್ಲಾ ಆರೋಪಗಳಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ದೋಷಿ ಎಂದು ಸಾಬೀತಾಗಿದೆ. ಜುಲೈ 11ರಂದು ನ್ಯಾಯಾಲಯ ಶಿಕ್ಷೆ ಪ್ರಕಟಿಸುವ ಸಾಧ್ಯತೆಯಿದೆ.

ಈ ಮೂಲಕ ಅಪರಾಧ ಪ್ರಕರಣಗಳಲ್ಲಿ ಶಿಕ್ಷೆಗೊಳಗಾಗುತ್ತಿರುವ ಅಮೆರಿಕದ ಮೊದಲ ಮಾಜಿ ಅಧ್ಯಕ್ಷ ಎಂಬ ಕುಖ್ಯಾತಿ ಡೊನಾಲ್ಡ್‌ ಟ್ರಂಪ್ ಅವರಿಗೆ ಸಂದಿದೆ. ಟ್ರಂಪ್ ಅವರನ್ನು ಅಧ್ಯಕ್ಷೀಯ ಅಭ್ಯರ್ಥಿ ಎಂದು ಘೋಷಿಸಲಿರುವ ರಿಪಬ್ಲಿಕನ್ ಪಕ್ಷದ ಸಮಾವೇಶಕ್ಕೂ ಮುನ್ನ ಈ ಬೆಳವಣಿಗೆ ನಡೆದಿದೆ.

ವಿಚಾರಣೆಯ ಸಮಯದಲ್ಲಿ ತಮ್ಮ ಮೇಲಿನ ಎಲ್ಲಾ ಆರೋಪಗಳನ್ನು ಅಲ್ಲಗಳೆದಿರುವ ಟ್ರಂಪ್, ತಾನು ನಿರ್ದೋಷಿ ಎಂದು ವಾದಿಸಿದ್ದು, ನ್ಯಾಯಾಲಯದ ತೀರ್ಪಿನ ವಿರುದ್ದ ಮೇಲ್ಮನವಿ ಸಲ್ಲಿಸುವ ಸಾಧ್ಯತೆಯಿದೆ.

ಟ್ರಂಪ್, 2006ರ ಲೈಂಗಿಕ ಸಂಬಂಧ ಬಾಯ್ಬಿಡದಂತೆ ಸ್ಟಾರ್ಮಿ ಡೇನಿಯಲ್ಸ್‌ಗೆ 1,30,000 ಡಾಲರ್ ಪಾವತಿಸಿದ್ದಾರೆ ಎಂದು ಆರೋಪಿಸಲಾಗಿದೆ. ಆದರೆ, ಟ್ರಂಪ್ ಈ ಆರೋಪವನ್ನು ಅಲ್ಲಗಳೆದಿದ್ದು, ಡೇನಿಯಲ್ಸ್ ಸುಳ್ಳು ಹೇಳಿ ತನ್ನನ್ನು ಸುಲಿಗೆ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಅಮೆರಿಕದ ಹಾಲಿ ಅಧ್ಯಕ್ಷ ಜೋ ಬೈಡೆನ್ ಅವರು 2020ರಲ್ಲಿ ಗೆಲುವು ಸಾಧಿಸಿದ ನಂತರ ಚುನಾವಣೆಯ ಫಲಿತಾಂಶಗಳನ್ನು ರದ್ದುಗೊಳಿಸಲು ಸಂಚು ರೂಪಿಸಿದ್ದು ಮತ್ತು ಶ್ವೇತ ಭವನವನ್ನು ತೊರೆದ ನಂತರ ರಹಸ್ಯ ದಾಖಲೆಗಳನ್ನು ಸಂಗ್ರಹಿಸಿದ್ದು ಸೇರಿದಂತೆ ಇನ್ನೂ ಹಲವು ಪ್ರಕರಣಗಳು ಟ್ರಂಪ್ ಮೇಲಿವೆ.

ಆರೋಪ ಸಾಬೀತಾದರೂ, ನವೆಂಬರ್‌ನಲ್ಲಿ ನಡೆಯಲಿರುವ ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಲು ಟ್ರಂಪ್‌ಗೆ ಯಾವುದೇ ರೀತಿಯ ನಿರ್ಬಂಧವಿಲ್ಲ. ಅಲ್ಲದೆ ಟ್ರಂಪ್‌ ಸದ್ಯಕ್ಕೆ ಜೈಲಿಗೆ ಹೋಗುವ ಸಾಧ್ಯತೆಯಿಲ್ಲ ಎಂದು ವರದಿಗಳು ಹೇಳಿವೆ.

ಸ್ಟಾರ್ಮಿ ಡೇನಿಯಲ್ಸ್‌ ಮತ್ತು ಟ್ರಂಪ್ 2006ರಲ್ಲಿ ಲೈಂಗಿಕ ಸಂಬಂಧ ಹೊಂದಿದ್ದರು. ಈ ವಿಚಾರವನ್ನು ಡೇನಿಯಲ್ಸ್ 2011ರಲ್ಲಿ ಬಹಿರಂಗಗೊಳಿಸಿದ್ದರು. ಇದು 2016ರಲ್ಲಿ ಅಧ್ಯಕ್ಷೀಯ ಚುನಾವಣೆಯ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇತ್ತು. ಹಾಗಾಗಿ, ಸ್ಟಾರ್ಮಿ ಡೇನಿಯಲ್ಸ್‌ ಬಾಯಿ ಮುಚ್ಚಿಸಲು ಟ್ರಂಪ್ ಹಣ ಪಾವತಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಪ್ರಕರಣವನ್ನು ‘ಹಷ್ ಮನಿ’ ಕೇಸ್ ಎನ್ನಲಾಗುತ್ತದೆ. ಗೌಪ್ಯತೆ ಕಾಪಾಡಲು ನೀಡುವ ಹಣಕ್ಕೆ ‘ಹಷ್ ಮನಿ’ ಎಂದು ಹೇಳಲಾಗುತ್ತದೆ.

ನ್ಯಾಯಾಲಯದ ತೀರ್ಪಿನ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಟ್ರಂಪ್, “ನಾನು ಈ ಪ್ರಕರಣದಲ್ಲಿ ಅಮಾಯಕನಾಗಿದ್ದೇನೆ. ನಿಜವಾದ ತೀರ್ಪು ಮತದಾರರಿಂದ ಬರಲಿದೆ. ಈ ಪ್ರಕರಣದಲ್ಲಿ ನನ್ನನ್ನು ಸಿಲುಕಿಸಲಾಗಿದ್ದು, ನಾನು ಈ ತೀರ್ಪನ್ನು ಒಪ್ಪುವುದಿಲ್ಲ” ಎಂದಿದ್ದಾರೆ.

ಟ್ರಂಪ್‌ ಪ್ರಕರಣದ ಬಗ್ಗೆ ಮಾತನಾಡಿರುವ ಅಧ್ಯಕ್ಷ ಜೋ ಬೈಡೆನ್, “ಯಾರೂ ಕಾನೂನಿಗಿಂತ ಮೇಲಲ್ಲ ಎಂಬುವುದನ್ನು ತೀರ್ಪು ತೋರಿಸಿದೆ. ನಮ್ಮ ಪ್ರಜಾಪ್ರಭುತ್ವಕ್ಕೆ ಟ್ರಂಪ್ ಒಡ್ಡುವ ಬೆದರಿಕೆ ಯಾವುದೇ ರೀತಿಯಲ್ಲಿ ಪರಿಣಾಮ ಬೀರುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ : ಪ್ರಜ್ವಲ್ ರೇವಣ್ಣ ಬಂಧನ: ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಿರುವ ಎಸ್‌ಐಟಿ ಅಧಿಕಾರಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...