Homeಅಂತರಾಷ್ಟ್ರೀಯನೊಬೆಲ್​ ಶಾಂತಿ ಪ್ರಶಸ್ತಿಗೆ ಡೊನಾಲ್ಡ್ ಟ್ರಂಪ್ ಹೆಸರು ಶಿಫಾರಸ್ಸು: ನಾರ್ವೇಯ ಸಂಸತ್ ಸದಸ್ಯ

ನೊಬೆಲ್​ ಶಾಂತಿ ಪ್ರಶಸ್ತಿಗೆ ಡೊನಾಲ್ಡ್ ಟ್ರಂಪ್ ಹೆಸರು ಶಿಫಾರಸ್ಸು: ನಾರ್ವೇಯ ಸಂಸತ್ ಸದಸ್ಯ

ನಾರ್ವೇಯ ಸಂಸತ್ ಸದಸ್ಯ ಮತ್ತು ಟೋ ಸಂಸದೀಯ ಸಭೆಯ ಅಧ್ಯಕ್ಷ ಕ್ರಿಸ್ಟಿಯನ್ ಟೈಬ್ರಿಂಗ್​​ ಜೆಡ್ಡೆ. ಟ್ರಂಪ್​ ಹೆಸರನ್ನು ನೊಬೆಲ್​ ಶಾಂತಿ ಪುರಸ್ಕಾರಕ್ಕೆ ಶಿಫಾರಸು ಮಾಡಿದ್ದಾರೆ

- Advertisement -
- Advertisement -

ಇಸ್ರೇಲ್ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ನಡುವಿನ ಶಾಂತಿ ಒಪ್ಪಂದ ಕ್ಕೆ ಸಹಾಯ ಮಾಡಿದ್ದಕ್ಕಾಗಿ  ಟ್ರಂಪ್ ಹೆಸರನ್ನು ಶಿಫಾರಸ್ಸು 2021ರ ನೊಬೆಲ್ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನ ಮಾಡಲಾಗಿದೆ. ನಾರ್ವೇಯ ಸಂಸತ್ ಸದಸ್ಯ ಮತ್ತು ನ್ಯಾಟೋ ಸಂಸದೀಯ ಸಭೆಯ ಅಧ್ಯಕ್ಷ ಕ್ರಿಸ್ಟಿಯನ್ ಟೈಬ್ರಿಂಗ್​​ ಜೆಡ್ಡೆ, ಟ್ರಂಪ್​ ಹೆಸರನ್ನು ನೊಬೆಲ್​ ಶಾಂತಿ ಪುರಸ್ಕಾರಕ್ಕೆ ಶಿಫಾರಸು ಮಾಡಿದ್ದಾರೆ ಎಂದು ಫಾಕ್ಸ್ ನ್ಯೂಸ್ ವರದಿ ಮಾಡಿದೆ.

ಡೊನಾಲ್ಡ್ ಟ್ರಂಪ್ ಅವರು ಇಸ್ರೇಲ್​ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್​ ಶಾಂತಿ ಒಪ್ಪಂದ ಏರ್ಪಡುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದನ್ನು ಗಮನದಲ್ಲಿರಿಸಿಕೊಂಡು ಜೆಡ್ಡೆ ಈ ನಾಮನಿರ್ದೇಶನ ಮಾಡಿದ್ದಾರೆ ಎಂದು ಡಿ.ಡಬ್ಲ್ಯು ನ್ಯೂಸ್ ವರದಿ ಮಾಡಿದೆ.

ಉಭಯ ರಾಷ್ಟ್ರಗಳ ನಡುವೆ ಹದಗೆಟ್ಟಿದ್ದ ಸಂಬಂಧವನ್ನು ಸರಿಪಡಿಸುವಲ್ಲಿ ಟ್ರಂಪ್ ಆಡಳಿತವು ಪ್ರಮುಖ ಪಾತ್ರ ವಹಿಸಿದೆ ಎಂದು ನೊಬೆಲ್ ಸಮಿತಿಗೆ ಬರೆದ ಪತ್ರದಲ್ಲಿ ಟೈಬ್ರಿಂಗ್ ಜೆಡ್ಡೆ ಬರೆದಿದ್ದಾರೆ.

ಈ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೂಡ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ 4 ಜಿ ಸೇವೆ ವಿಸ್ತರಣೆ ಇಲ್ಲ: ಗೃಹ ಸಚಿವಾಲಯ

ಜೆಡ್ಡೆ ನಾರ್ವೇ ಸಂಸತ್ತಿನ ನಾಲ್ಕು ಅವಧಿಯ ಸದಸ್ಯರಾಗಿದ್ದು, ನ್ಯಾಟೋ ಪಾರ್ಲಿಮೆಂಟರಿ ಅಸೆಂಬ್ಲಿಯಲ್ಲಿ ನಾರ್ವೇಯನ್ ಡೆಲಿಗೇಶನ್​ನ ಮುಖ್ಯಸ್ಥರಾಗಿದ್ದಾರೆ. ಫಾಕ್ಸ್ ನ್ಯೂಸ್ ಜತೆಗೆ ಮಾತನಾಡುತ್ತ ಅವರು ಇಸ್ರೇಲ್​-ಯುಎಇ ಶಾಂತಿ ಒಪ್ಪಂದ ಪ್ರಕ್ರಿಯೆಯಲ್ಲಿ ಟ್ರಂಪ್ ಪಾತ್ರ ಪ್ರಮುಖವಾದುದು. ಅವರ ಅರ್ಹತೆಗಾಗಿ, ಅವರು ಶಾಂತಿ ಪ್ರಶಸ್ತಿ ನಾಮನಿರ್ದೇಶಿತರಿಗಿಂತ ರಾಷ್ಟ್ರಗಳ ನಡುವೆ ಶಾಂತಿಯನ್ನು ಸೃಷ್ಟಿಸಲು ಹೆಚ್ಚು ಪ್ರಯತ್ನಿಸಿದ್ದಾರೆಂದು ನಾನು ಭಾವಿಸುತ್ತೇನೆ” ಎಂದು ಫಾಕ್ಸ್ ನ್ಯೂಸ್‌ಗೆ ತಿಳಿಸಿದ್ದಾರೆ. ಈ ಹಿಂದೆ 2018ರಲ್ಲಿಯೂ ಟ್ರಂಪ್‌ಗೆ ನೊಬೆಲ್​ ಶಾಂತಿ ಪುರಸ್ಕಾರ ನೀಡುವಂತೆ ಶಿಫಾರಸ್ಸು ಮಾಡಿದ್ದರು.

ಅಧಿಕೃತ ನೊಬೆಲ್ ವೆಬ್‌ಸೈಟ್ ಪ್ರಕಾರ, 2020ರ ಶಾಂತಿ ಪ್ರಶಸ್ತಿಗೆ 318 ಅಭ್ಯರ್ಥಿಗಳು ಇದ್ದರು. 2021 ರ ಬಹುಮಾನವನ್ನು ಮುಂದಿನ ವರ್ಷದ ಅಕ್ಟೋಬರ್‌ ನಂತರ ಘೋಷಿಸಲಾಗುವುದು.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...