Homeಮುಖಪುಟನರೇಂದ್ರ ಮೋದಿ ಎದುರಲ್ಲೇ ಪಾಕ್ ಹೊಗಳಿದ ಡೊನಾಲ್ಡ್‌ ಟ್ರಂಪ್ : ವ್ಯಾಪಕ ಟ್ರೋಲ್‌

ನರೇಂದ್ರ ಮೋದಿ ಎದುರಲ್ಲೇ ಪಾಕ್ ಹೊಗಳಿದ ಡೊನಾಲ್ಡ್‌ ಟ್ರಂಪ್ : ವ್ಯಾಪಕ ಟ್ರೋಲ್‌

- Advertisement -
- Advertisement -

ಸುಮಾರು ನೂರು ಕೋಟಿಗೂ ಹೆಚ್ಚು ಹಣ ಖರ್ಚು ಮಾಡಿ ಗುಜರಾತ್‌ನ ಮೊಟೇರಾ ಕ್ರೀಡಾಂಗಣದಲ್ಲಿ ‘ನಮಸ್ತೆ ಟ್ರಂಪ್’ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಭಾರತ ನೆಲದಲ್ಲಿ ಪಾಕಿಸ್ತಾನವನ್ನು ಹೊಗಳುವುದು ದೇಶದ್ರೋಹಕ್ಕೆ ಸಮಾನವಾಗಿದೆ ಎಂಬ ಚರ್ಚೆ ನಡೆಯುತ್ತಿರುವ ಬೆನ್ನಲ್ಲೆ ‘ನಮಸ್ತೆ ಟ್ರಂಪ್’ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅಮೇರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪಾಕ್‌ ಹೊಗಳಿರುವುದು ವೈರಲ್‌ ಆಗಿದೆ.

ವೇದಿಕೆಯಲ್ಲಿ ಟ್ರಂಪ್‌ ಮಾತನಾಡುತ್ತಾ.. “ಪಾಕಿಸ್ತಾನದ ಜೊತೆಗಿನ ನಮ್ಮ ಸಂಬಂಧ ಉತ್ತಮವಾಗಿದೆ, ನಾವು ಪಾಕಿಸ್ತಾನದ ಜೊತೆಗೆ ಪ್ರಗತಿಯನ್ನು ಪ್ರಾರಂಭಿಸಿದ್ದೇವೆ” ಎಂದು ಪಾಕಿಸ್ತಾನವನ್ನು ಹೊಗಳಿದರು. ಇದೇ ಸಂದರ್ಭದಲ್ಲಿ ವೇದಿಕೆಯ ಮೇಲಿದ್ದ ಮೋದಿ ಮೂಕವಿಸ್ಮಿತರಾಗಿದ್ದರು. ಮಾತು ಮುಂದುವರೆಸುತ್ತಾ ‘ಭವಿಷ್ಯದಲ್ಲಿ ದಕ್ಷಿಣ ಏಷ್ಯ ದೇಶಗಳ ಸ್ಥಿರತೆ ಮತ್ತು ಸೌರ್ಹಾದತೆಯನ್ನು ನಾವು ಸಾಧಿಸಬೇಕಿದೆ’ ಎಂದರು.

ವಿಡಿಯೋ ನೋಡಿ;

ಟ್ರಂಪ್‌

ನರೇಂದ್ರ ಮೋದಿ ಎದುರಲ್ಲೇ ಪಾಕ್ ಹೊಗಳಿದ ಡೊನಾಲ್ಡ್‌ ಟ್ರಂಪ್

Posted by Naanu Gauri on Monday, February 24, 2020

ಟ್ರಂಪ್‌ರ ಈ ಭಾಷಣದ ಕುರಿತು ಸಾಮಜಿಕ ಜಾಲತಾಣದಲ್ಲಿ ನೆಟ್ಟಿಗರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಮತ್ತು ಹಲವರು ಇದು ದೇಶದ್ರೋಹ ವ್ಯಾಪ್ತಿಗೆ ಬರುವುದಿಲ್ಲವೇ ಎಂದು ಬಿಜೆಪಿ ಅಭಿಮಾನಿಗಳಿಗೆ ಕುಟುಕಿದ್ದಾರೆ. ಇದೇ ಭಾಷಣದಲ್ಲಿ ಮುಂದುವರೆದು ‘ಅಮೇರಿಕಾ ಮತ್ತು ಭಾರತ ಇಸ್ಲಾಮಿಕ್ ಭಯೋತ್ಪಾದನೆಯನ್ನು ಕೊನೆಗಾಣಿಸಲು ಕೆಲಸ ಮಾಡುತ್ತಿದ್ದೇವೆ ಎಂದೂ ಹೇಳಿದರು’ ಇದಲ್ಲದೆ ಭಾರತದ ಜನಪ್ರಿಯ ಧಾರ್ಮಿಕ ಗುರು ಸ್ವಾಮಿ ವಿವೇಕಾನಂದರ ಹೆಸರನ್ನು ‘ಸ್ವಾಮಿ ವಿವೇಕಾಮೊನೊಂಡಾ…’ ಎಂಬಂತೆ ಉಚ್ಛರಿಸಿದ್ದೂ ವ್ಯಾಪಕ ಟೀಕೆಗೆ ಒಳಗಾಗಿದೆ.

ಹಲವು ದಿನಗಳಿಂದ ಕೆಲವು ಬಿಜೆಪಿ ಅಭಿಮಾನಿಗಳು ಡೊನಾಲ್ಡ್ ಟ್ರಂಪ್ ನ ಪ್ರತಿಮೆ ಹಾಗೂ ಫೋಟೋಗಳಿಗೆ ಪೂಜೆ ಸಲ್ಲಿಸಿದ್ದು ವರದಿಗಳಾಗಿದ್ದವು. ಭಾಷಣದ ಹಿನ್ನಲೆಯಲ್ಲಿ ಇದನ್ನು ಪ್ರಶ್ನೆಸುತ್ತಾ ಬಿಜೆಪಿ ಬೆಂಬಲಿಗರನ್ನು ಸಾಮಾಜಿಕ ಜಾಲತಾಣದಲ್ಲಿ ಟ್ರಾಲ್ ಗಳು ಶುರುವಾಗಿದೆ.

ಅಮೇರಿಕಾದಲ್ಲೂ ಟೀಕೆ

ಅಮೇರಿಕಾದ ಪ್ರಜಾತಂತ್ರವಾದಿಗಳು ಟ್ರಂಪ್ ಹಾಗೂ ಆತನ ನೀತಿಗಳ ವಿರುದ್ಧ ಮೊದಲಿನಿಂದಲೂ ವಿರೋಧಿಸಿಕೊಂಡು ಬಂದಿದ್ದಾರೆ. ತಾನು ಭಾರತ ಪ್ರವಾಸಕ್ಕೆ ಹೋಗುತ್ತಿದ್ದೇನೆ ಎಂದು ಟ್ರಂಪ್ ಟ್ವಿಟ್ಟರ್ ನಲ್ಲಿ ಹಂಚಿಕೊಂಡಾಗ “ಭಾರತದಿಂದ ವಾಪಾಸ್ ಬರಬೇಡ” ಎಂದು ಹಲವರು ಟ್ವೀಟ್ ಮಾಡಿದ್ದಾರೆ.

ಇನ್ನೂ ಕೆಲವರು “ಅಮೇರಿಕನಾಗಿ ಭಾರತೀಯರಲ್ಲಿ ಮೊದಲೇ ಕ್ಷಮೆ ಕೇಳುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ. ಇವರಲ್ಲಿ ಹಲವರು ಸೆಲೆಬ್ರಿಟಿಗಳಾಗಿದ್ದು ಟ್ವಿಟ್ಟರ್‌ನ ವೆರಿಫೈಡ್ ಅಕೌಂಟ್ ಹೊಂದಿರುವವರೇ ಟ್ವೀಟಿಸಿದ್ದಾರೆ ಎನ್ನುವುದು ಗಮನಾರ್ಹ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...