Homeಮುಖಪುಟನರೇಂದ್ರ ಮೋದಿ ಎದುರಲ್ಲೇ ಪಾಕ್ ಹೊಗಳಿದ ಡೊನಾಲ್ಡ್‌ ಟ್ರಂಪ್ : ವ್ಯಾಪಕ ಟ್ರೋಲ್‌

ನರೇಂದ್ರ ಮೋದಿ ಎದುರಲ್ಲೇ ಪಾಕ್ ಹೊಗಳಿದ ಡೊನಾಲ್ಡ್‌ ಟ್ರಂಪ್ : ವ್ಯಾಪಕ ಟ್ರೋಲ್‌

- Advertisement -
- Advertisement -

ಸುಮಾರು ನೂರು ಕೋಟಿಗೂ ಹೆಚ್ಚು ಹಣ ಖರ್ಚು ಮಾಡಿ ಗುಜರಾತ್‌ನ ಮೊಟೇರಾ ಕ್ರೀಡಾಂಗಣದಲ್ಲಿ ‘ನಮಸ್ತೆ ಟ್ರಂಪ್’ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಭಾರತ ನೆಲದಲ್ಲಿ ಪಾಕಿಸ್ತಾನವನ್ನು ಹೊಗಳುವುದು ದೇಶದ್ರೋಹಕ್ಕೆ ಸಮಾನವಾಗಿದೆ ಎಂಬ ಚರ್ಚೆ ನಡೆಯುತ್ತಿರುವ ಬೆನ್ನಲ್ಲೆ ‘ನಮಸ್ತೆ ಟ್ರಂಪ್’ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅಮೇರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪಾಕ್‌ ಹೊಗಳಿರುವುದು ವೈರಲ್‌ ಆಗಿದೆ.

ವೇದಿಕೆಯಲ್ಲಿ ಟ್ರಂಪ್‌ ಮಾತನಾಡುತ್ತಾ.. “ಪಾಕಿಸ್ತಾನದ ಜೊತೆಗಿನ ನಮ್ಮ ಸಂಬಂಧ ಉತ್ತಮವಾಗಿದೆ, ನಾವು ಪಾಕಿಸ್ತಾನದ ಜೊತೆಗೆ ಪ್ರಗತಿಯನ್ನು ಪ್ರಾರಂಭಿಸಿದ್ದೇವೆ” ಎಂದು ಪಾಕಿಸ್ತಾನವನ್ನು ಹೊಗಳಿದರು. ಇದೇ ಸಂದರ್ಭದಲ್ಲಿ ವೇದಿಕೆಯ ಮೇಲಿದ್ದ ಮೋದಿ ಮೂಕವಿಸ್ಮಿತರಾಗಿದ್ದರು. ಮಾತು ಮುಂದುವರೆಸುತ್ತಾ ‘ಭವಿಷ್ಯದಲ್ಲಿ ದಕ್ಷಿಣ ಏಷ್ಯ ದೇಶಗಳ ಸ್ಥಿರತೆ ಮತ್ತು ಸೌರ್ಹಾದತೆಯನ್ನು ನಾವು ಸಾಧಿಸಬೇಕಿದೆ’ ಎಂದರು.

ವಿಡಿಯೋ ನೋಡಿ;

ಟ್ರಂಪ್‌

ನರೇಂದ್ರ ಮೋದಿ ಎದುರಲ್ಲೇ ಪಾಕ್ ಹೊಗಳಿದ ಡೊನಾಲ್ಡ್‌ ಟ್ರಂಪ್

Posted by Naanu Gauri on Monday, February 24, 2020

ಟ್ರಂಪ್‌ರ ಈ ಭಾಷಣದ ಕುರಿತು ಸಾಮಜಿಕ ಜಾಲತಾಣದಲ್ಲಿ ನೆಟ್ಟಿಗರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಮತ್ತು ಹಲವರು ಇದು ದೇಶದ್ರೋಹ ವ್ಯಾಪ್ತಿಗೆ ಬರುವುದಿಲ್ಲವೇ ಎಂದು ಬಿಜೆಪಿ ಅಭಿಮಾನಿಗಳಿಗೆ ಕುಟುಕಿದ್ದಾರೆ. ಇದೇ ಭಾಷಣದಲ್ಲಿ ಮುಂದುವರೆದು ‘ಅಮೇರಿಕಾ ಮತ್ತು ಭಾರತ ಇಸ್ಲಾಮಿಕ್ ಭಯೋತ್ಪಾದನೆಯನ್ನು ಕೊನೆಗಾಣಿಸಲು ಕೆಲಸ ಮಾಡುತ್ತಿದ್ದೇವೆ ಎಂದೂ ಹೇಳಿದರು’ ಇದಲ್ಲದೆ ಭಾರತದ ಜನಪ್ರಿಯ ಧಾರ್ಮಿಕ ಗುರು ಸ್ವಾಮಿ ವಿವೇಕಾನಂದರ ಹೆಸರನ್ನು ‘ಸ್ವಾಮಿ ವಿವೇಕಾಮೊನೊಂಡಾ…’ ಎಂಬಂತೆ ಉಚ್ಛರಿಸಿದ್ದೂ ವ್ಯಾಪಕ ಟೀಕೆಗೆ ಒಳಗಾಗಿದೆ.

ಹಲವು ದಿನಗಳಿಂದ ಕೆಲವು ಬಿಜೆಪಿ ಅಭಿಮಾನಿಗಳು ಡೊನಾಲ್ಡ್ ಟ್ರಂಪ್ ನ ಪ್ರತಿಮೆ ಹಾಗೂ ಫೋಟೋಗಳಿಗೆ ಪೂಜೆ ಸಲ್ಲಿಸಿದ್ದು ವರದಿಗಳಾಗಿದ್ದವು. ಭಾಷಣದ ಹಿನ್ನಲೆಯಲ್ಲಿ ಇದನ್ನು ಪ್ರಶ್ನೆಸುತ್ತಾ ಬಿಜೆಪಿ ಬೆಂಬಲಿಗರನ್ನು ಸಾಮಾಜಿಕ ಜಾಲತಾಣದಲ್ಲಿ ಟ್ರಾಲ್ ಗಳು ಶುರುವಾಗಿದೆ.

ಅಮೇರಿಕಾದಲ್ಲೂ ಟೀಕೆ

ಅಮೇರಿಕಾದ ಪ್ರಜಾತಂತ್ರವಾದಿಗಳು ಟ್ರಂಪ್ ಹಾಗೂ ಆತನ ನೀತಿಗಳ ವಿರುದ್ಧ ಮೊದಲಿನಿಂದಲೂ ವಿರೋಧಿಸಿಕೊಂಡು ಬಂದಿದ್ದಾರೆ. ತಾನು ಭಾರತ ಪ್ರವಾಸಕ್ಕೆ ಹೋಗುತ್ತಿದ್ದೇನೆ ಎಂದು ಟ್ರಂಪ್ ಟ್ವಿಟ್ಟರ್ ನಲ್ಲಿ ಹಂಚಿಕೊಂಡಾಗ “ಭಾರತದಿಂದ ವಾಪಾಸ್ ಬರಬೇಡ” ಎಂದು ಹಲವರು ಟ್ವೀಟ್ ಮಾಡಿದ್ದಾರೆ.

ಇನ್ನೂ ಕೆಲವರು “ಅಮೇರಿಕನಾಗಿ ಭಾರತೀಯರಲ್ಲಿ ಮೊದಲೇ ಕ್ಷಮೆ ಕೇಳುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ. ಇವರಲ್ಲಿ ಹಲವರು ಸೆಲೆಬ್ರಿಟಿಗಳಾಗಿದ್ದು ಟ್ವಿಟ್ಟರ್‌ನ ವೆರಿಫೈಡ್ ಅಕೌಂಟ್ ಹೊಂದಿರುವವರೇ ಟ್ವೀಟಿಸಿದ್ದಾರೆ ಎನ್ನುವುದು ಗಮನಾರ್ಹ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...