Homeಮುಖಪುಟನರೇಂದ್ರ ಮೋದಿ ಎದುರಲ್ಲೇ ಪಾಕ್ ಹೊಗಳಿದ ಡೊನಾಲ್ಡ್‌ ಟ್ರಂಪ್ : ವ್ಯಾಪಕ ಟ್ರೋಲ್‌

ನರೇಂದ್ರ ಮೋದಿ ಎದುರಲ್ಲೇ ಪಾಕ್ ಹೊಗಳಿದ ಡೊನಾಲ್ಡ್‌ ಟ್ರಂಪ್ : ವ್ಯಾಪಕ ಟ್ರೋಲ್‌

- Advertisement -
- Advertisement -

ಸುಮಾರು ನೂರು ಕೋಟಿಗೂ ಹೆಚ್ಚು ಹಣ ಖರ್ಚು ಮಾಡಿ ಗುಜರಾತ್‌ನ ಮೊಟೇರಾ ಕ್ರೀಡಾಂಗಣದಲ್ಲಿ ‘ನಮಸ್ತೆ ಟ್ರಂಪ್’ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಭಾರತ ನೆಲದಲ್ಲಿ ಪಾಕಿಸ್ತಾನವನ್ನು ಹೊಗಳುವುದು ದೇಶದ್ರೋಹಕ್ಕೆ ಸಮಾನವಾಗಿದೆ ಎಂಬ ಚರ್ಚೆ ನಡೆಯುತ್ತಿರುವ ಬೆನ್ನಲ್ಲೆ ‘ನಮಸ್ತೆ ಟ್ರಂಪ್’ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅಮೇರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪಾಕ್‌ ಹೊಗಳಿರುವುದು ವೈರಲ್‌ ಆಗಿದೆ.

ವೇದಿಕೆಯಲ್ಲಿ ಟ್ರಂಪ್‌ ಮಾತನಾಡುತ್ತಾ.. “ಪಾಕಿಸ್ತಾನದ ಜೊತೆಗಿನ ನಮ್ಮ ಸಂಬಂಧ ಉತ್ತಮವಾಗಿದೆ, ನಾವು ಪಾಕಿಸ್ತಾನದ ಜೊತೆಗೆ ಪ್ರಗತಿಯನ್ನು ಪ್ರಾರಂಭಿಸಿದ್ದೇವೆ” ಎಂದು ಪಾಕಿಸ್ತಾನವನ್ನು ಹೊಗಳಿದರು. ಇದೇ ಸಂದರ್ಭದಲ್ಲಿ ವೇದಿಕೆಯ ಮೇಲಿದ್ದ ಮೋದಿ ಮೂಕವಿಸ್ಮಿತರಾಗಿದ್ದರು. ಮಾತು ಮುಂದುವರೆಸುತ್ತಾ ‘ಭವಿಷ್ಯದಲ್ಲಿ ದಕ್ಷಿಣ ಏಷ್ಯ ದೇಶಗಳ ಸ್ಥಿರತೆ ಮತ್ತು ಸೌರ್ಹಾದತೆಯನ್ನು ನಾವು ಸಾಧಿಸಬೇಕಿದೆ’ ಎಂದರು.

ವಿಡಿಯೋ ನೋಡಿ;

ಟ್ರಂಪ್‌

ನರೇಂದ್ರ ಮೋದಿ ಎದುರಲ್ಲೇ ಪಾಕ್ ಹೊಗಳಿದ ಡೊನಾಲ್ಡ್‌ ಟ್ರಂಪ್

Posted by Naanu Gauri on Monday, February 24, 2020

ಟ್ರಂಪ್‌ರ ಈ ಭಾಷಣದ ಕುರಿತು ಸಾಮಜಿಕ ಜಾಲತಾಣದಲ್ಲಿ ನೆಟ್ಟಿಗರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಮತ್ತು ಹಲವರು ಇದು ದೇಶದ್ರೋಹ ವ್ಯಾಪ್ತಿಗೆ ಬರುವುದಿಲ್ಲವೇ ಎಂದು ಬಿಜೆಪಿ ಅಭಿಮಾನಿಗಳಿಗೆ ಕುಟುಕಿದ್ದಾರೆ. ಇದೇ ಭಾಷಣದಲ್ಲಿ ಮುಂದುವರೆದು ‘ಅಮೇರಿಕಾ ಮತ್ತು ಭಾರತ ಇಸ್ಲಾಮಿಕ್ ಭಯೋತ್ಪಾದನೆಯನ್ನು ಕೊನೆಗಾಣಿಸಲು ಕೆಲಸ ಮಾಡುತ್ತಿದ್ದೇವೆ ಎಂದೂ ಹೇಳಿದರು’ ಇದಲ್ಲದೆ ಭಾರತದ ಜನಪ್ರಿಯ ಧಾರ್ಮಿಕ ಗುರು ಸ್ವಾಮಿ ವಿವೇಕಾನಂದರ ಹೆಸರನ್ನು ‘ಸ್ವಾಮಿ ವಿವೇಕಾಮೊನೊಂಡಾ…’ ಎಂಬಂತೆ ಉಚ್ಛರಿಸಿದ್ದೂ ವ್ಯಾಪಕ ಟೀಕೆಗೆ ಒಳಗಾಗಿದೆ.

ಹಲವು ದಿನಗಳಿಂದ ಕೆಲವು ಬಿಜೆಪಿ ಅಭಿಮಾನಿಗಳು ಡೊನಾಲ್ಡ್ ಟ್ರಂಪ್ ನ ಪ್ರತಿಮೆ ಹಾಗೂ ಫೋಟೋಗಳಿಗೆ ಪೂಜೆ ಸಲ್ಲಿಸಿದ್ದು ವರದಿಗಳಾಗಿದ್ದವು. ಭಾಷಣದ ಹಿನ್ನಲೆಯಲ್ಲಿ ಇದನ್ನು ಪ್ರಶ್ನೆಸುತ್ತಾ ಬಿಜೆಪಿ ಬೆಂಬಲಿಗರನ್ನು ಸಾಮಾಜಿಕ ಜಾಲತಾಣದಲ್ಲಿ ಟ್ರಾಲ್ ಗಳು ಶುರುವಾಗಿದೆ.

ಅಮೇರಿಕಾದಲ್ಲೂ ಟೀಕೆ

ಅಮೇರಿಕಾದ ಪ್ರಜಾತಂತ್ರವಾದಿಗಳು ಟ್ರಂಪ್ ಹಾಗೂ ಆತನ ನೀತಿಗಳ ವಿರುದ್ಧ ಮೊದಲಿನಿಂದಲೂ ವಿರೋಧಿಸಿಕೊಂಡು ಬಂದಿದ್ದಾರೆ. ತಾನು ಭಾರತ ಪ್ರವಾಸಕ್ಕೆ ಹೋಗುತ್ತಿದ್ದೇನೆ ಎಂದು ಟ್ರಂಪ್ ಟ್ವಿಟ್ಟರ್ ನಲ್ಲಿ ಹಂಚಿಕೊಂಡಾಗ “ಭಾರತದಿಂದ ವಾಪಾಸ್ ಬರಬೇಡ” ಎಂದು ಹಲವರು ಟ್ವೀಟ್ ಮಾಡಿದ್ದಾರೆ.

ಇನ್ನೂ ಕೆಲವರು “ಅಮೇರಿಕನಾಗಿ ಭಾರತೀಯರಲ್ಲಿ ಮೊದಲೇ ಕ್ಷಮೆ ಕೇಳುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ. ಇವರಲ್ಲಿ ಹಲವರು ಸೆಲೆಬ್ರಿಟಿಗಳಾಗಿದ್ದು ಟ್ವಿಟ್ಟರ್‌ನ ವೆರಿಫೈಡ್ ಅಕೌಂಟ್ ಹೊಂದಿರುವವರೇ ಟ್ವೀಟಿಸಿದ್ದಾರೆ ಎನ್ನುವುದು ಗಮನಾರ್ಹ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...