Homeಮುಖಪುಟನರೇಂದ್ರ ಮೋದಿ ಎದುರಲ್ಲೇ ಪಾಕ್ ಹೊಗಳಿದ ಡೊನಾಲ್ಡ್‌ ಟ್ರಂಪ್ : ವ್ಯಾಪಕ ಟ್ರೋಲ್‌

ನರೇಂದ್ರ ಮೋದಿ ಎದುರಲ್ಲೇ ಪಾಕ್ ಹೊಗಳಿದ ಡೊನಾಲ್ಡ್‌ ಟ್ರಂಪ್ : ವ್ಯಾಪಕ ಟ್ರೋಲ್‌

- Advertisement -
- Advertisement -

ಸುಮಾರು ನೂರು ಕೋಟಿಗೂ ಹೆಚ್ಚು ಹಣ ಖರ್ಚು ಮಾಡಿ ಗುಜರಾತ್‌ನ ಮೊಟೇರಾ ಕ್ರೀಡಾಂಗಣದಲ್ಲಿ ‘ನಮಸ್ತೆ ಟ್ರಂಪ್’ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಭಾರತ ನೆಲದಲ್ಲಿ ಪಾಕಿಸ್ತಾನವನ್ನು ಹೊಗಳುವುದು ದೇಶದ್ರೋಹಕ್ಕೆ ಸಮಾನವಾಗಿದೆ ಎಂಬ ಚರ್ಚೆ ನಡೆಯುತ್ತಿರುವ ಬೆನ್ನಲ್ಲೆ ‘ನಮಸ್ತೆ ಟ್ರಂಪ್’ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅಮೇರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪಾಕ್‌ ಹೊಗಳಿರುವುದು ವೈರಲ್‌ ಆಗಿದೆ.

ವೇದಿಕೆಯಲ್ಲಿ ಟ್ರಂಪ್‌ ಮಾತನಾಡುತ್ತಾ.. “ಪಾಕಿಸ್ತಾನದ ಜೊತೆಗಿನ ನಮ್ಮ ಸಂಬಂಧ ಉತ್ತಮವಾಗಿದೆ, ನಾವು ಪಾಕಿಸ್ತಾನದ ಜೊತೆಗೆ ಪ್ರಗತಿಯನ್ನು ಪ್ರಾರಂಭಿಸಿದ್ದೇವೆ” ಎಂದು ಪಾಕಿಸ್ತಾನವನ್ನು ಹೊಗಳಿದರು. ಇದೇ ಸಂದರ್ಭದಲ್ಲಿ ವೇದಿಕೆಯ ಮೇಲಿದ್ದ ಮೋದಿ ಮೂಕವಿಸ್ಮಿತರಾಗಿದ್ದರು. ಮಾತು ಮುಂದುವರೆಸುತ್ತಾ ‘ಭವಿಷ್ಯದಲ್ಲಿ ದಕ್ಷಿಣ ಏಷ್ಯ ದೇಶಗಳ ಸ್ಥಿರತೆ ಮತ್ತು ಸೌರ್ಹಾದತೆಯನ್ನು ನಾವು ಸಾಧಿಸಬೇಕಿದೆ’ ಎಂದರು.

ವಿಡಿಯೋ ನೋಡಿ;

ಟ್ರಂಪ್‌

ನರೇಂದ್ರ ಮೋದಿ ಎದುರಲ್ಲೇ ಪಾಕ್ ಹೊಗಳಿದ ಡೊನಾಲ್ಡ್‌ ಟ್ರಂಪ್

Posted by Naanu Gauri on Monday, February 24, 2020

ಟ್ರಂಪ್‌ರ ಈ ಭಾಷಣದ ಕುರಿತು ಸಾಮಜಿಕ ಜಾಲತಾಣದಲ್ಲಿ ನೆಟ್ಟಿಗರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಮತ್ತು ಹಲವರು ಇದು ದೇಶದ್ರೋಹ ವ್ಯಾಪ್ತಿಗೆ ಬರುವುದಿಲ್ಲವೇ ಎಂದು ಬಿಜೆಪಿ ಅಭಿಮಾನಿಗಳಿಗೆ ಕುಟುಕಿದ್ದಾರೆ. ಇದೇ ಭಾಷಣದಲ್ಲಿ ಮುಂದುವರೆದು ‘ಅಮೇರಿಕಾ ಮತ್ತು ಭಾರತ ಇಸ್ಲಾಮಿಕ್ ಭಯೋತ್ಪಾದನೆಯನ್ನು ಕೊನೆಗಾಣಿಸಲು ಕೆಲಸ ಮಾಡುತ್ತಿದ್ದೇವೆ ಎಂದೂ ಹೇಳಿದರು’ ಇದಲ್ಲದೆ ಭಾರತದ ಜನಪ್ರಿಯ ಧಾರ್ಮಿಕ ಗುರು ಸ್ವಾಮಿ ವಿವೇಕಾನಂದರ ಹೆಸರನ್ನು ‘ಸ್ವಾಮಿ ವಿವೇಕಾಮೊನೊಂಡಾ…’ ಎಂಬಂತೆ ಉಚ್ಛರಿಸಿದ್ದೂ ವ್ಯಾಪಕ ಟೀಕೆಗೆ ಒಳಗಾಗಿದೆ.

ಹಲವು ದಿನಗಳಿಂದ ಕೆಲವು ಬಿಜೆಪಿ ಅಭಿಮಾನಿಗಳು ಡೊನಾಲ್ಡ್ ಟ್ರಂಪ್ ನ ಪ್ರತಿಮೆ ಹಾಗೂ ಫೋಟೋಗಳಿಗೆ ಪೂಜೆ ಸಲ್ಲಿಸಿದ್ದು ವರದಿಗಳಾಗಿದ್ದವು. ಭಾಷಣದ ಹಿನ್ನಲೆಯಲ್ಲಿ ಇದನ್ನು ಪ್ರಶ್ನೆಸುತ್ತಾ ಬಿಜೆಪಿ ಬೆಂಬಲಿಗರನ್ನು ಸಾಮಾಜಿಕ ಜಾಲತಾಣದಲ್ಲಿ ಟ್ರಾಲ್ ಗಳು ಶುರುವಾಗಿದೆ.

ಅಮೇರಿಕಾದಲ್ಲೂ ಟೀಕೆ

ಅಮೇರಿಕಾದ ಪ್ರಜಾತಂತ್ರವಾದಿಗಳು ಟ್ರಂಪ್ ಹಾಗೂ ಆತನ ನೀತಿಗಳ ವಿರುದ್ಧ ಮೊದಲಿನಿಂದಲೂ ವಿರೋಧಿಸಿಕೊಂಡು ಬಂದಿದ್ದಾರೆ. ತಾನು ಭಾರತ ಪ್ರವಾಸಕ್ಕೆ ಹೋಗುತ್ತಿದ್ದೇನೆ ಎಂದು ಟ್ರಂಪ್ ಟ್ವಿಟ್ಟರ್ ನಲ್ಲಿ ಹಂಚಿಕೊಂಡಾಗ “ಭಾರತದಿಂದ ವಾಪಾಸ್ ಬರಬೇಡ” ಎಂದು ಹಲವರು ಟ್ವೀಟ್ ಮಾಡಿದ್ದಾರೆ.

ಇನ್ನೂ ಕೆಲವರು “ಅಮೇರಿಕನಾಗಿ ಭಾರತೀಯರಲ್ಲಿ ಮೊದಲೇ ಕ್ಷಮೆ ಕೇಳುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ. ಇವರಲ್ಲಿ ಹಲವರು ಸೆಲೆಬ್ರಿಟಿಗಳಾಗಿದ್ದು ಟ್ವಿಟ್ಟರ್‌ನ ವೆರಿಫೈಡ್ ಅಕೌಂಟ್ ಹೊಂದಿರುವವರೇ ಟ್ವೀಟಿಸಿದ್ದಾರೆ ಎನ್ನುವುದು ಗಮನಾರ್ಹ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...