Homeಅಂತರಾಷ್ಟ್ರೀಯವ್ಯಾಪಾರ ಒತ್ತಡ ಹಾಕಿ ಭಾರತ-ಪಾಕಿಸ್ತಾನ ಯುದ್ಧ ನಿಲ್ಲಿಸಿದೆ : ಪುನರುಚ್ಚರಿಸಿದ ಟ್ರಂಪ್

ವ್ಯಾಪಾರ ಒತ್ತಡ ಹಾಕಿ ಭಾರತ-ಪಾಕಿಸ್ತಾನ ಯುದ್ಧ ನಿಲ್ಲಿಸಿದೆ : ಪುನರುಚ್ಚರಿಸಿದ ಟ್ರಂಪ್

- Advertisement -
- Advertisement -

ಭಾರತ- ಪಾಕಿಸ್ತಾನದ ಮೇಲೆ ವ್ಯಾಪಾರ ಒತ್ತಡವನ್ನು ಹೆಚ್ಚಿಸುವ ಮೂಲಕ ಉಭಯ ರಾಷ್ಟ್ರಗಳ ನಡುವಿನ ಯುದ್ಧವನ್ನು ತಪ್ಪಿಸಿದೆ ಎಂಬ ತಮ್ಮ ಹೇಳಿಕೆಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ (ಅ.29) ಪುನರುಚ್ಚರಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರನ್ನು ‘ಅತ್ಯಂತ ಸುಂದರ’ ಮತ್ತು ‘ಕಠಿಣ ವ್ಯಕ್ತಿ’ ಎಂದು ಹೊಗಳಿದ ಟ್ರಂಪ್, ಅಮೆರಿಕ ಅಧ್ಯಕ್ಷರು ಪ್ರಧಾನಿಗೆ ಕರೆ ಮಾಡಿ ಮಾತನಾಡಿದ ಎರಡು ದಿನಗಳಲ್ಲಿ ಭಾರತ ಒತ್ತಡಕ್ಕೆ ಮಣಿದು ಯುದ್ಧವನ್ನು ನಿಲ್ಲಿಸಿತು ಎಂದು ಹೇಳಿದ್ದಾರೆ.

“ಪ್ರಧಾನಿ ಮೋದಿ ಅತ್ಯಂತ ಸುಂದರ ವ್ಯಕ್ತಿ. ಅವರೊಬ್ಬ ಕಿಲ್ಲರ್ ಮತ್ತು ಕಠಿಣ ವ್ಯಕ್ತಿ. ಅವರು ಹೋರಾಡುತ್ತೇವೆ ಎಂದರು, ಆಗ ನಾನು ವಾವ್, ಇದು ನನಗೆ ಗೊತ್ತಿರುವ ಅದೇ ವ್ಯಕ್ತಿನಾ? ಅಂದೆ” ಎಂದು ದಕ್ಷಿಣ ಕೊರಿಯಾದ ಜಿಯೊಂಗ್ಜುನಲ್ಲಿ ನಡೆದ ಎಪಿಇಸಿ (ಏಷ್ಯಾ-ಪೆಸಿಫಿಕ್ ಆರ್ಥಿಕ ಸಹಕಾರ) ಸಿಇಒ ಶೃಂಗಸಭೆಯಲ್ಲಿ ಟ್ರಂಪ್ ಹೇಳಿದ್ದಾರೆ.

ಪಾಕಿಸ್ತಾನದ ಫೀಲ್ಡ್ ಮಾರ್ಷಲ್ ಆಸಿಮ್ ಮುನೀರ್ ಅವರನ್ನೂ ಹೊಗಳಿದ ಟ್ರಂಪ್, ಅವರನ್ನು ‘ಶ್ರೇಷ್ಠ ಹೋರಾಟಗಾರ’ ಎಂದು ಕರೆದಿದ್ದಾರೆ.

“ಪಾಕಿಸ್ತಾನದ ಪ್ರಧಾನಿ ಒಬ್ಬ ಮಹಾನ್ ವ್ಯಕ್ತಿ. ಅವರ ಬಳಿ ಫೀಲ್ಡ್ ಮಾರ್ಷಲ್ ಇದ್ದಾರೆ. ಅವರು ಫೀಲ್ಡ್ ಮಾರ್ಷಲ್ ಯಾಕೆ ಅಂತ ನಿಮಗೆ ಗೊತ್ತಾ? ಅವರು ಒಬ್ಬ ಮಹಾನ್ ಹೋರಾಟಗಾರ. ಹಾಗಾಗಿ, ನನಗೆ ಅವರೆಲ್ಲರ ಪರಿಚಯವಿದೆ” ಎಂದು ಟ್ರಂಪ್ ಹೇಳಿದ್ದಾರೆ.

“ಇಬ್ಬರು ಪರಮ ಶತ್ರುಗಳ ನಡುವಿನ ಯುದ್ಧವನ್ನು ನಿಲ್ಲಿಸಿದ್ದೇನೆ ಎಂಬ ತನ್ನ ಹೇಳಿಕೆಯನ್ನು ಪುನರಾವರ್ತಿಸಿದ ಟ್ರಂಪ್, “ಇವು ಎರಡು ಪರಮಾಣು ರಾಷ್ಟ್ರಗಳು. ಅವರು ನಿಜವಾಗಿಯೂ ಅದನ್ನು ಬಳಸಲು ಹೊರಟಿದ್ದರು. ನಾನು ಪ್ರಧಾನಿ ಮೋದಿಯವರಿಗೆ ಕರೆ ಮಾಡಿ, ನಾವು ನಿಮ್ಮೊಂದಿಗೆ ವ್ಯಾಪಾರ ಒಪ್ಪಂದ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದೆ. ಅದಕ್ಕವರು, ಇಲ್ಲ, ಇಲ್ಲ, ನಾವು ವ್ಯಾಪಾರ ಒಪ್ಪಂದ ಮಾಡಿಕೊಳ್ಳಬೇಕು ಎಂದರು. ನಾನು, ಇಲ್ಲ ನಮಗೆ ಸಾಧ್ಯವಿಲ್ಲ ಎಂದು ಮತ್ತೆ ಹೇಳಿದೆ. ನೀವು ಪಾಕಿಸ್ತಾನದೊಂದಿಗೆ ಯುದ್ಧವನ್ನು ಪ್ರಾರಂಭಿಸುತ್ತಿದ್ದೀರಿ ಎಂದೆ. ತದನಂತರ ನಾನು ಪಾಕಿಸ್ತಾನಕ್ಕೆ ಕರೆ ಮಾಡಿ, ನೀವು ಭಾರತದೊಂದಿಗೆ ಹೋರಾಡುತ್ತಿರುವುದರಿಂದ ನಾವು ನಿಮ್ಮೊಂದಿಗೆ ವ್ಯಾಪಾರ ಮಾಡುವುದಿಲ್ಲ ಎಂದು ಹೇಳಿದೆ. ಅವರು, ‘ಇಲ್ಲ, ಇಲ್ಲ ನೀವು ನಮಗೆ ಹೋರಾಡಲು ಬಿಡಬೇಕು’ ಎಂದರು. ಅವರಿಬ್ಬರೂ ಹಾಗೆ ಹೇಳಿದರು, ಅವರು ಬಲಿಷ್ಠ ಜನರು” ಎಂದಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ಎರಡೂ ನಾಯಕರು ಎರಡು ದಿನಗಳ ನಂತರ ತನಗೆ ಕರೆ ಮಾಡಿ ಹೋರಾಟ ನಿಲ್ಲಿಸಿದರು ಎಂದು ಟ್ರಂಪ್ ಹೇಳಿಕೊಂಡಿದ್ದಾರೆ.

“ಎರಡು ದಿನದ ಬಳಿಕ ಅವರು ನನಗೆ ಕರೆ ಮಾಡಿ ಯುದ್ದ ನಿಲ್ಲಿಸಿದ್ದೇವೆ, ನಮಗೆ ಅರ್ಥವಾಯಿತು ಎಂದು ಹೇಳಿದರು. ಇದು ಹೇಗೆ ಸಾಧ್ಯ? ಎಷ್ಟು ಅದ್ಬುತವಲ್ಲವೇ? ಬೈಡೆನ್ ಹೀಗೆ ಮಾಡುತ್ತಿದ್ದರು ಎಂದು ನೀವು ಭಾವಿಸುತ್ತೀರಾ?” ಎಂದು ಟ್ರಂಪ್ ಪ್ರಶ್ನಿಸಿದ್ದಾರೆ.

ಇದಕ್ಕೂ ಕೆಲವು ಗಂಟೆಗಳ ಮೊದಲು ಟೋಕಿಯೊದಲ್ಲಿ ಮಾತನಾಡಿದ್ದ ಟ್ರಂಪ್, “24 ಗಂಟೆಗಳಲ್ಲಿ ಯುದ್ಧ ನಿಲ್ಲಿಸುವಲ್ಲಿ ಯಶಸ್ವಿಯಾದೆ” ಎಂದು ಹೇಳಿದ್ದರು.

ಮಂಗಳವಾರ ಟೋಕಿಯೊದಲ್ಲಿ ವ್ಯಾಪಾರ ನಾಯಕರೊಂದಿಗೆ ನಡೆದ ಭೋಜನಕೂಟದಲ್ಲಿ ಮಾತನಾಡಿದ್ದ ಟ್ರಂಪ್, “ಭಾರತ-ಪಾಕಿಸ್ತಾನ ಸಂಘರ್ಷದ ಸಮಯದಲ್ಲಿ ‘ಏಳು ಹೊಚ್ಚ ಹೊಸ’ ವಿಮಾನಗಳನ್ನು ಹೊಡೆದುರುಳಿಸಲಾಯಿತು ಎಂದಿದ್ದರು. ಅವು ಯಾವ ದೇಶಕ್ಕೆ ಸೇರಿದವು ಎಂಬುದನ್ನು ಸ್ಪಷ್ಟಪಡಿಸಿಲ್ಲ.

ಸುಡಾನ್‌ನ ಅಲ್‌-ಪಾಶೆರ್ ನಿಯಂತ್ರಣಕ್ಕೆ ಪಡೆದ ಅರೆಸೈನಿಕ ಪಡೆ ಆರ್‌ಎಸ್‌ಎಫ್‌ : ವ್ಯಾಪಕ ಹಿಂಸಾಚಾರದ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...