Homeಅಂತರಾಷ್ಟ್ರೀಯವ್ಯಾಪಾರ ಒತ್ತಡ ಹಾಕಿ ಭಾರತ-ಪಾಕಿಸ್ತಾನ ಯುದ್ಧ ನಿಲ್ಲಿಸಿದೆ : ಪುನರುಚ್ಚರಿಸಿದ ಟ್ರಂಪ್

ವ್ಯಾಪಾರ ಒತ್ತಡ ಹಾಕಿ ಭಾರತ-ಪಾಕಿಸ್ತಾನ ಯುದ್ಧ ನಿಲ್ಲಿಸಿದೆ : ಪುನರುಚ್ಚರಿಸಿದ ಟ್ರಂಪ್

- Advertisement -
- Advertisement -

ಭಾರತ- ಪಾಕಿಸ್ತಾನದ ಮೇಲೆ ವ್ಯಾಪಾರ ಒತ್ತಡವನ್ನು ಹೆಚ್ಚಿಸುವ ಮೂಲಕ ಉಭಯ ರಾಷ್ಟ್ರಗಳ ನಡುವಿನ ಯುದ್ಧವನ್ನು ತಪ್ಪಿಸಿದೆ ಎಂಬ ತಮ್ಮ ಹೇಳಿಕೆಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ (ಅ.29) ಪುನರುಚ್ಚರಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರನ್ನು ‘ಅತ್ಯಂತ ಸುಂದರ’ ಮತ್ತು ‘ಕಠಿಣ ವ್ಯಕ್ತಿ’ ಎಂದು ಹೊಗಳಿದ ಟ್ರಂಪ್, ಅಮೆರಿಕ ಅಧ್ಯಕ್ಷರು ಪ್ರಧಾನಿಗೆ ಕರೆ ಮಾಡಿ ಮಾತನಾಡಿದ ಎರಡು ದಿನಗಳಲ್ಲಿ ಭಾರತ ಒತ್ತಡಕ್ಕೆ ಮಣಿದು ಯುದ್ಧವನ್ನು ನಿಲ್ಲಿಸಿತು ಎಂದು ಹೇಳಿದ್ದಾರೆ.

“ಪ್ರಧಾನಿ ಮೋದಿ ಅತ್ಯಂತ ಸುಂದರ ವ್ಯಕ್ತಿ. ಅವರೊಬ್ಬ ಕಿಲ್ಲರ್ ಮತ್ತು ಕಠಿಣ ವ್ಯಕ್ತಿ. ಅವರು ಹೋರಾಡುತ್ತೇವೆ ಎಂದರು, ಆಗ ನಾನು ವಾವ್, ಇದು ನನಗೆ ಗೊತ್ತಿರುವ ಅದೇ ವ್ಯಕ್ತಿನಾ? ಅಂದೆ” ಎಂದು ದಕ್ಷಿಣ ಕೊರಿಯಾದ ಜಿಯೊಂಗ್ಜುನಲ್ಲಿ ನಡೆದ ಎಪಿಇಸಿ (ಏಷ್ಯಾ-ಪೆಸಿಫಿಕ್ ಆರ್ಥಿಕ ಸಹಕಾರ) ಸಿಇಒ ಶೃಂಗಸಭೆಯಲ್ಲಿ ಟ್ರಂಪ್ ಹೇಳಿದ್ದಾರೆ.

ಪಾಕಿಸ್ತಾನದ ಫೀಲ್ಡ್ ಮಾರ್ಷಲ್ ಆಸಿಮ್ ಮುನೀರ್ ಅವರನ್ನೂ ಹೊಗಳಿದ ಟ್ರಂಪ್, ಅವರನ್ನು ‘ಶ್ರೇಷ್ಠ ಹೋರಾಟಗಾರ’ ಎಂದು ಕರೆದಿದ್ದಾರೆ.

“ಪಾಕಿಸ್ತಾನದ ಪ್ರಧಾನಿ ಒಬ್ಬ ಮಹಾನ್ ವ್ಯಕ್ತಿ. ಅವರ ಬಳಿ ಫೀಲ್ಡ್ ಮಾರ್ಷಲ್ ಇದ್ದಾರೆ. ಅವರು ಫೀಲ್ಡ್ ಮಾರ್ಷಲ್ ಯಾಕೆ ಅಂತ ನಿಮಗೆ ಗೊತ್ತಾ? ಅವರು ಒಬ್ಬ ಮಹಾನ್ ಹೋರಾಟಗಾರ. ಹಾಗಾಗಿ, ನನಗೆ ಅವರೆಲ್ಲರ ಪರಿಚಯವಿದೆ” ಎಂದು ಟ್ರಂಪ್ ಹೇಳಿದ್ದಾರೆ.

“ಇಬ್ಬರು ಪರಮ ಶತ್ರುಗಳ ನಡುವಿನ ಯುದ್ಧವನ್ನು ನಿಲ್ಲಿಸಿದ್ದೇನೆ ಎಂಬ ತನ್ನ ಹೇಳಿಕೆಯನ್ನು ಪುನರಾವರ್ತಿಸಿದ ಟ್ರಂಪ್, “ಇವು ಎರಡು ಪರಮಾಣು ರಾಷ್ಟ್ರಗಳು. ಅವರು ನಿಜವಾಗಿಯೂ ಅದನ್ನು ಬಳಸಲು ಹೊರಟಿದ್ದರು. ನಾನು ಪ್ರಧಾನಿ ಮೋದಿಯವರಿಗೆ ಕರೆ ಮಾಡಿ, ನಾವು ನಿಮ್ಮೊಂದಿಗೆ ವ್ಯಾಪಾರ ಒಪ್ಪಂದ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದೆ. ಅದಕ್ಕವರು, ಇಲ್ಲ, ಇಲ್ಲ, ನಾವು ವ್ಯಾಪಾರ ಒಪ್ಪಂದ ಮಾಡಿಕೊಳ್ಳಬೇಕು ಎಂದರು. ನಾನು, ಇಲ್ಲ ನಮಗೆ ಸಾಧ್ಯವಿಲ್ಲ ಎಂದು ಮತ್ತೆ ಹೇಳಿದೆ. ನೀವು ಪಾಕಿಸ್ತಾನದೊಂದಿಗೆ ಯುದ್ಧವನ್ನು ಪ್ರಾರಂಭಿಸುತ್ತಿದ್ದೀರಿ ಎಂದೆ. ತದನಂತರ ನಾನು ಪಾಕಿಸ್ತಾನಕ್ಕೆ ಕರೆ ಮಾಡಿ, ನೀವು ಭಾರತದೊಂದಿಗೆ ಹೋರಾಡುತ್ತಿರುವುದರಿಂದ ನಾವು ನಿಮ್ಮೊಂದಿಗೆ ವ್ಯಾಪಾರ ಮಾಡುವುದಿಲ್ಲ ಎಂದು ಹೇಳಿದೆ. ಅವರು, ‘ಇಲ್ಲ, ಇಲ್ಲ ನೀವು ನಮಗೆ ಹೋರಾಡಲು ಬಿಡಬೇಕು’ ಎಂದರು. ಅವರಿಬ್ಬರೂ ಹಾಗೆ ಹೇಳಿದರು, ಅವರು ಬಲಿಷ್ಠ ಜನರು” ಎಂದಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ಎರಡೂ ನಾಯಕರು ಎರಡು ದಿನಗಳ ನಂತರ ತನಗೆ ಕರೆ ಮಾಡಿ ಹೋರಾಟ ನಿಲ್ಲಿಸಿದರು ಎಂದು ಟ್ರಂಪ್ ಹೇಳಿಕೊಂಡಿದ್ದಾರೆ.

“ಎರಡು ದಿನದ ಬಳಿಕ ಅವರು ನನಗೆ ಕರೆ ಮಾಡಿ ಯುದ್ದ ನಿಲ್ಲಿಸಿದ್ದೇವೆ, ನಮಗೆ ಅರ್ಥವಾಯಿತು ಎಂದು ಹೇಳಿದರು. ಇದು ಹೇಗೆ ಸಾಧ್ಯ? ಎಷ್ಟು ಅದ್ಬುತವಲ್ಲವೇ? ಬೈಡೆನ್ ಹೀಗೆ ಮಾಡುತ್ತಿದ್ದರು ಎಂದು ನೀವು ಭಾವಿಸುತ್ತೀರಾ?” ಎಂದು ಟ್ರಂಪ್ ಪ್ರಶ್ನಿಸಿದ್ದಾರೆ.

ಇದಕ್ಕೂ ಕೆಲವು ಗಂಟೆಗಳ ಮೊದಲು ಟೋಕಿಯೊದಲ್ಲಿ ಮಾತನಾಡಿದ್ದ ಟ್ರಂಪ್, “24 ಗಂಟೆಗಳಲ್ಲಿ ಯುದ್ಧ ನಿಲ್ಲಿಸುವಲ್ಲಿ ಯಶಸ್ವಿಯಾದೆ” ಎಂದು ಹೇಳಿದ್ದರು.

ಮಂಗಳವಾರ ಟೋಕಿಯೊದಲ್ಲಿ ವ್ಯಾಪಾರ ನಾಯಕರೊಂದಿಗೆ ನಡೆದ ಭೋಜನಕೂಟದಲ್ಲಿ ಮಾತನಾಡಿದ್ದ ಟ್ರಂಪ್, “ಭಾರತ-ಪಾಕಿಸ್ತಾನ ಸಂಘರ್ಷದ ಸಮಯದಲ್ಲಿ ‘ಏಳು ಹೊಚ್ಚ ಹೊಸ’ ವಿಮಾನಗಳನ್ನು ಹೊಡೆದುರುಳಿಸಲಾಯಿತು ಎಂದಿದ್ದರು. ಅವು ಯಾವ ದೇಶಕ್ಕೆ ಸೇರಿದವು ಎಂಬುದನ್ನು ಸ್ಪಷ್ಟಪಡಿಸಿಲ್ಲ.

ಸುಡಾನ್‌ನ ಅಲ್‌-ಪಾಶೆರ್ ನಿಯಂತ್ರಣಕ್ಕೆ ಪಡೆದ ಅರೆಸೈನಿಕ ಪಡೆ ಆರ್‌ಎಸ್‌ಎಫ್‌ : ವ್ಯಾಪಕ ಹಿಂಸಾಚಾರದ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...