Homeಅಂತರಾಷ್ಟ್ರೀಯವ್ಯಾಪಾರ ಒತ್ತಡ ಹಾಕಿ ಭಾರತ-ಪಾಕಿಸ್ತಾನ ಯುದ್ಧ ನಿಲ್ಲಿಸಿದೆ : ಪುನರುಚ್ಚರಿಸಿದ ಟ್ರಂಪ್

ವ್ಯಾಪಾರ ಒತ್ತಡ ಹಾಕಿ ಭಾರತ-ಪಾಕಿಸ್ತಾನ ಯುದ್ಧ ನಿಲ್ಲಿಸಿದೆ : ಪುನರುಚ್ಚರಿಸಿದ ಟ್ರಂಪ್

- Advertisement -
- Advertisement -

ಭಾರತ- ಪಾಕಿಸ್ತಾನದ ಮೇಲೆ ವ್ಯಾಪಾರ ಒತ್ತಡವನ್ನು ಹೆಚ್ಚಿಸುವ ಮೂಲಕ ಉಭಯ ರಾಷ್ಟ್ರಗಳ ನಡುವಿನ ಯುದ್ಧವನ್ನು ತಪ್ಪಿಸಿದೆ ಎಂಬ ತಮ್ಮ ಹೇಳಿಕೆಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ (ಅ.29) ಪುನರುಚ್ಚರಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರನ್ನು ‘ಅತ್ಯಂತ ಸುಂದರ’ ಮತ್ತು ‘ಕಠಿಣ ವ್ಯಕ್ತಿ’ ಎಂದು ಹೊಗಳಿದ ಟ್ರಂಪ್, ಅಮೆರಿಕ ಅಧ್ಯಕ್ಷರು ಪ್ರಧಾನಿಗೆ ಕರೆ ಮಾಡಿ ಮಾತನಾಡಿದ ಎರಡು ದಿನಗಳಲ್ಲಿ ಭಾರತ ಒತ್ತಡಕ್ಕೆ ಮಣಿದು ಯುದ್ಧವನ್ನು ನಿಲ್ಲಿಸಿತು ಎಂದು ಹೇಳಿದ್ದಾರೆ.

“ಪ್ರಧಾನಿ ಮೋದಿ ಅತ್ಯಂತ ಸುಂದರ ವ್ಯಕ್ತಿ. ಅವರೊಬ್ಬ ಕಿಲ್ಲರ್ ಮತ್ತು ಕಠಿಣ ವ್ಯಕ್ತಿ. ಅವರು ಹೋರಾಡುತ್ತೇವೆ ಎಂದರು, ಆಗ ನಾನು ವಾವ್, ಇದು ನನಗೆ ಗೊತ್ತಿರುವ ಅದೇ ವ್ಯಕ್ತಿನಾ? ಅಂದೆ” ಎಂದು ದಕ್ಷಿಣ ಕೊರಿಯಾದ ಜಿಯೊಂಗ್ಜುನಲ್ಲಿ ನಡೆದ ಎಪಿಇಸಿ (ಏಷ್ಯಾ-ಪೆಸಿಫಿಕ್ ಆರ್ಥಿಕ ಸಹಕಾರ) ಸಿಇಒ ಶೃಂಗಸಭೆಯಲ್ಲಿ ಟ್ರಂಪ್ ಹೇಳಿದ್ದಾರೆ.

ಪಾಕಿಸ್ತಾನದ ಫೀಲ್ಡ್ ಮಾರ್ಷಲ್ ಆಸಿಮ್ ಮುನೀರ್ ಅವರನ್ನೂ ಹೊಗಳಿದ ಟ್ರಂಪ್, ಅವರನ್ನು ‘ಶ್ರೇಷ್ಠ ಹೋರಾಟಗಾರ’ ಎಂದು ಕರೆದಿದ್ದಾರೆ.

“ಪಾಕಿಸ್ತಾನದ ಪ್ರಧಾನಿ ಒಬ್ಬ ಮಹಾನ್ ವ್ಯಕ್ತಿ. ಅವರ ಬಳಿ ಫೀಲ್ಡ್ ಮಾರ್ಷಲ್ ಇದ್ದಾರೆ. ಅವರು ಫೀಲ್ಡ್ ಮಾರ್ಷಲ್ ಯಾಕೆ ಅಂತ ನಿಮಗೆ ಗೊತ್ತಾ? ಅವರು ಒಬ್ಬ ಮಹಾನ್ ಹೋರಾಟಗಾರ. ಹಾಗಾಗಿ, ನನಗೆ ಅವರೆಲ್ಲರ ಪರಿಚಯವಿದೆ” ಎಂದು ಟ್ರಂಪ್ ಹೇಳಿದ್ದಾರೆ.

“ಇಬ್ಬರು ಪರಮ ಶತ್ರುಗಳ ನಡುವಿನ ಯುದ್ಧವನ್ನು ನಿಲ್ಲಿಸಿದ್ದೇನೆ ಎಂಬ ತನ್ನ ಹೇಳಿಕೆಯನ್ನು ಪುನರಾವರ್ತಿಸಿದ ಟ್ರಂಪ್, “ಇವು ಎರಡು ಪರಮಾಣು ರಾಷ್ಟ್ರಗಳು. ಅವರು ನಿಜವಾಗಿಯೂ ಅದನ್ನು ಬಳಸಲು ಹೊರಟಿದ್ದರು. ನಾನು ಪ್ರಧಾನಿ ಮೋದಿಯವರಿಗೆ ಕರೆ ಮಾಡಿ, ನಾವು ನಿಮ್ಮೊಂದಿಗೆ ವ್ಯಾಪಾರ ಒಪ್ಪಂದ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದೆ. ಅದಕ್ಕವರು, ಇಲ್ಲ, ಇಲ್ಲ, ನಾವು ವ್ಯಾಪಾರ ಒಪ್ಪಂದ ಮಾಡಿಕೊಳ್ಳಬೇಕು ಎಂದರು. ನಾನು, ಇಲ್ಲ ನಮಗೆ ಸಾಧ್ಯವಿಲ್ಲ ಎಂದು ಮತ್ತೆ ಹೇಳಿದೆ. ನೀವು ಪಾಕಿಸ್ತಾನದೊಂದಿಗೆ ಯುದ್ಧವನ್ನು ಪ್ರಾರಂಭಿಸುತ್ತಿದ್ದೀರಿ ಎಂದೆ. ತದನಂತರ ನಾನು ಪಾಕಿಸ್ತಾನಕ್ಕೆ ಕರೆ ಮಾಡಿ, ನೀವು ಭಾರತದೊಂದಿಗೆ ಹೋರಾಡುತ್ತಿರುವುದರಿಂದ ನಾವು ನಿಮ್ಮೊಂದಿಗೆ ವ್ಯಾಪಾರ ಮಾಡುವುದಿಲ್ಲ ಎಂದು ಹೇಳಿದೆ. ಅವರು, ‘ಇಲ್ಲ, ಇಲ್ಲ ನೀವು ನಮಗೆ ಹೋರಾಡಲು ಬಿಡಬೇಕು’ ಎಂದರು. ಅವರಿಬ್ಬರೂ ಹಾಗೆ ಹೇಳಿದರು, ಅವರು ಬಲಿಷ್ಠ ಜನರು” ಎಂದಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ಎರಡೂ ನಾಯಕರು ಎರಡು ದಿನಗಳ ನಂತರ ತನಗೆ ಕರೆ ಮಾಡಿ ಹೋರಾಟ ನಿಲ್ಲಿಸಿದರು ಎಂದು ಟ್ರಂಪ್ ಹೇಳಿಕೊಂಡಿದ್ದಾರೆ.

“ಎರಡು ದಿನದ ಬಳಿಕ ಅವರು ನನಗೆ ಕರೆ ಮಾಡಿ ಯುದ್ದ ನಿಲ್ಲಿಸಿದ್ದೇವೆ, ನಮಗೆ ಅರ್ಥವಾಯಿತು ಎಂದು ಹೇಳಿದರು. ಇದು ಹೇಗೆ ಸಾಧ್ಯ? ಎಷ್ಟು ಅದ್ಬುತವಲ್ಲವೇ? ಬೈಡೆನ್ ಹೀಗೆ ಮಾಡುತ್ತಿದ್ದರು ಎಂದು ನೀವು ಭಾವಿಸುತ್ತೀರಾ?” ಎಂದು ಟ್ರಂಪ್ ಪ್ರಶ್ನಿಸಿದ್ದಾರೆ.

ಇದಕ್ಕೂ ಕೆಲವು ಗಂಟೆಗಳ ಮೊದಲು ಟೋಕಿಯೊದಲ್ಲಿ ಮಾತನಾಡಿದ್ದ ಟ್ರಂಪ್, “24 ಗಂಟೆಗಳಲ್ಲಿ ಯುದ್ಧ ನಿಲ್ಲಿಸುವಲ್ಲಿ ಯಶಸ್ವಿಯಾದೆ” ಎಂದು ಹೇಳಿದ್ದರು.

ಮಂಗಳವಾರ ಟೋಕಿಯೊದಲ್ಲಿ ವ್ಯಾಪಾರ ನಾಯಕರೊಂದಿಗೆ ನಡೆದ ಭೋಜನಕೂಟದಲ್ಲಿ ಮಾತನಾಡಿದ್ದ ಟ್ರಂಪ್, “ಭಾರತ-ಪಾಕಿಸ್ತಾನ ಸಂಘರ್ಷದ ಸಮಯದಲ್ಲಿ ‘ಏಳು ಹೊಚ್ಚ ಹೊಸ’ ವಿಮಾನಗಳನ್ನು ಹೊಡೆದುರುಳಿಸಲಾಯಿತು ಎಂದಿದ್ದರು. ಅವು ಯಾವ ದೇಶಕ್ಕೆ ಸೇರಿದವು ಎಂಬುದನ್ನು ಸ್ಪಷ್ಟಪಡಿಸಿಲ್ಲ.

ಸುಡಾನ್‌ನ ಅಲ್‌-ಪಾಶೆರ್ ನಿಯಂತ್ರಣಕ್ಕೆ ಪಡೆದ ಅರೆಸೈನಿಕ ಪಡೆ ಆರ್‌ಎಸ್‌ಎಫ್‌ : ವ್ಯಾಪಕ ಹಿಂಸಾಚಾರದ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...

ಬೆಂಗಳೂರು ಚಲೋ: ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸಚಿವ ಮಹದೇವಪ್ಪ: ಸಿಎಂ ಜೊತೆ ಚರ್ಚಿಸುವ ಭರವಸೆ 

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ‘ಬೆಂಗಳೂರು ಚಲೋ’...

ಛತ್ತೀಸ್‌ಗಢ : ಬಿಜಾಪುರದಲ್ಲಿ 41 ಮಾವೋವಾದಿಗಳು ಶರಣಾಗತಿ

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 26) 41 ಮಂದಿ ನಕ್ಸಲರು ಶರಣಾಗಿದ್ದು, ಈ ಪೈಕಿ 32 ಮಂದಿಯ ತಲೆಗೆ ಒಟ್ಟು 1.19 ಕೋಟಿ ರೂಪಾಯಿ ಬಹುಮಾನ ಘೋಷಣೆಯಾಗಿತ್ತು ಎಂದು ವರದಿಯಾಗಿದೆ. ಸರ್ಕಾರದ ಹೊಸ...