Homeಅಂತರಾಷ್ಟ್ರೀಯವ್ಯಾಪಾರ ಒತ್ತಡ ಹಾಕಿ ಭಾರತ-ಪಾಕಿಸ್ತಾನ ಯುದ್ಧ ನಿಲ್ಲಿಸಿದೆ : ಪುನರುಚ್ಚರಿಸಿದ ಟ್ರಂಪ್

ವ್ಯಾಪಾರ ಒತ್ತಡ ಹಾಕಿ ಭಾರತ-ಪಾಕಿಸ್ತಾನ ಯುದ್ಧ ನಿಲ್ಲಿಸಿದೆ : ಪುನರುಚ್ಚರಿಸಿದ ಟ್ರಂಪ್

- Advertisement -
- Advertisement -

ಭಾರತ- ಪಾಕಿಸ್ತಾನದ ಮೇಲೆ ವ್ಯಾಪಾರ ಒತ್ತಡವನ್ನು ಹೆಚ್ಚಿಸುವ ಮೂಲಕ ಉಭಯ ರಾಷ್ಟ್ರಗಳ ನಡುವಿನ ಯುದ್ಧವನ್ನು ತಪ್ಪಿಸಿದೆ ಎಂಬ ತಮ್ಮ ಹೇಳಿಕೆಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ (ಅ.29) ಪುನರುಚ್ಚರಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರನ್ನು ‘ಅತ್ಯಂತ ಸುಂದರ’ ಮತ್ತು ‘ಕಠಿಣ ವ್ಯಕ್ತಿ’ ಎಂದು ಹೊಗಳಿದ ಟ್ರಂಪ್, ಅಮೆರಿಕ ಅಧ್ಯಕ್ಷರು ಪ್ರಧಾನಿಗೆ ಕರೆ ಮಾಡಿ ಮಾತನಾಡಿದ ಎರಡು ದಿನಗಳಲ್ಲಿ ಭಾರತ ಒತ್ತಡಕ್ಕೆ ಮಣಿದು ಯುದ್ಧವನ್ನು ನಿಲ್ಲಿಸಿತು ಎಂದು ಹೇಳಿದ್ದಾರೆ.

“ಪ್ರಧಾನಿ ಮೋದಿ ಅತ್ಯಂತ ಸುಂದರ ವ್ಯಕ್ತಿ. ಅವರೊಬ್ಬ ಕಿಲ್ಲರ್ ಮತ್ತು ಕಠಿಣ ವ್ಯಕ್ತಿ. ಅವರು ಹೋರಾಡುತ್ತೇವೆ ಎಂದರು, ಆಗ ನಾನು ವಾವ್, ಇದು ನನಗೆ ಗೊತ್ತಿರುವ ಅದೇ ವ್ಯಕ್ತಿನಾ? ಅಂದೆ” ಎಂದು ದಕ್ಷಿಣ ಕೊರಿಯಾದ ಜಿಯೊಂಗ್ಜುನಲ್ಲಿ ನಡೆದ ಎಪಿಇಸಿ (ಏಷ್ಯಾ-ಪೆಸಿಫಿಕ್ ಆರ್ಥಿಕ ಸಹಕಾರ) ಸಿಇಒ ಶೃಂಗಸಭೆಯಲ್ಲಿ ಟ್ರಂಪ್ ಹೇಳಿದ್ದಾರೆ.

ಪಾಕಿಸ್ತಾನದ ಫೀಲ್ಡ್ ಮಾರ್ಷಲ್ ಆಸಿಮ್ ಮುನೀರ್ ಅವರನ್ನೂ ಹೊಗಳಿದ ಟ್ರಂಪ್, ಅವರನ್ನು ‘ಶ್ರೇಷ್ಠ ಹೋರಾಟಗಾರ’ ಎಂದು ಕರೆದಿದ್ದಾರೆ.

“ಪಾಕಿಸ್ತಾನದ ಪ್ರಧಾನಿ ಒಬ್ಬ ಮಹಾನ್ ವ್ಯಕ್ತಿ. ಅವರ ಬಳಿ ಫೀಲ್ಡ್ ಮಾರ್ಷಲ್ ಇದ್ದಾರೆ. ಅವರು ಫೀಲ್ಡ್ ಮಾರ್ಷಲ್ ಯಾಕೆ ಅಂತ ನಿಮಗೆ ಗೊತ್ತಾ? ಅವರು ಒಬ್ಬ ಮಹಾನ್ ಹೋರಾಟಗಾರ. ಹಾಗಾಗಿ, ನನಗೆ ಅವರೆಲ್ಲರ ಪರಿಚಯವಿದೆ” ಎಂದು ಟ್ರಂಪ್ ಹೇಳಿದ್ದಾರೆ.

“ಇಬ್ಬರು ಪರಮ ಶತ್ರುಗಳ ನಡುವಿನ ಯುದ್ಧವನ್ನು ನಿಲ್ಲಿಸಿದ್ದೇನೆ ಎಂಬ ತನ್ನ ಹೇಳಿಕೆಯನ್ನು ಪುನರಾವರ್ತಿಸಿದ ಟ್ರಂಪ್, “ಇವು ಎರಡು ಪರಮಾಣು ರಾಷ್ಟ್ರಗಳು. ಅವರು ನಿಜವಾಗಿಯೂ ಅದನ್ನು ಬಳಸಲು ಹೊರಟಿದ್ದರು. ನಾನು ಪ್ರಧಾನಿ ಮೋದಿಯವರಿಗೆ ಕರೆ ಮಾಡಿ, ನಾವು ನಿಮ್ಮೊಂದಿಗೆ ವ್ಯಾಪಾರ ಒಪ್ಪಂದ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದೆ. ಅದಕ್ಕವರು, ಇಲ್ಲ, ಇಲ್ಲ, ನಾವು ವ್ಯಾಪಾರ ಒಪ್ಪಂದ ಮಾಡಿಕೊಳ್ಳಬೇಕು ಎಂದರು. ನಾನು, ಇಲ್ಲ ನಮಗೆ ಸಾಧ್ಯವಿಲ್ಲ ಎಂದು ಮತ್ತೆ ಹೇಳಿದೆ. ನೀವು ಪಾಕಿಸ್ತಾನದೊಂದಿಗೆ ಯುದ್ಧವನ್ನು ಪ್ರಾರಂಭಿಸುತ್ತಿದ್ದೀರಿ ಎಂದೆ. ತದನಂತರ ನಾನು ಪಾಕಿಸ್ತಾನಕ್ಕೆ ಕರೆ ಮಾಡಿ, ನೀವು ಭಾರತದೊಂದಿಗೆ ಹೋರಾಡುತ್ತಿರುವುದರಿಂದ ನಾವು ನಿಮ್ಮೊಂದಿಗೆ ವ್ಯಾಪಾರ ಮಾಡುವುದಿಲ್ಲ ಎಂದು ಹೇಳಿದೆ. ಅವರು, ‘ಇಲ್ಲ, ಇಲ್ಲ ನೀವು ನಮಗೆ ಹೋರಾಡಲು ಬಿಡಬೇಕು’ ಎಂದರು. ಅವರಿಬ್ಬರೂ ಹಾಗೆ ಹೇಳಿದರು, ಅವರು ಬಲಿಷ್ಠ ಜನರು” ಎಂದಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ಎರಡೂ ನಾಯಕರು ಎರಡು ದಿನಗಳ ನಂತರ ತನಗೆ ಕರೆ ಮಾಡಿ ಹೋರಾಟ ನಿಲ್ಲಿಸಿದರು ಎಂದು ಟ್ರಂಪ್ ಹೇಳಿಕೊಂಡಿದ್ದಾರೆ.

“ಎರಡು ದಿನದ ಬಳಿಕ ಅವರು ನನಗೆ ಕರೆ ಮಾಡಿ ಯುದ್ದ ನಿಲ್ಲಿಸಿದ್ದೇವೆ, ನಮಗೆ ಅರ್ಥವಾಯಿತು ಎಂದು ಹೇಳಿದರು. ಇದು ಹೇಗೆ ಸಾಧ್ಯ? ಎಷ್ಟು ಅದ್ಬುತವಲ್ಲವೇ? ಬೈಡೆನ್ ಹೀಗೆ ಮಾಡುತ್ತಿದ್ದರು ಎಂದು ನೀವು ಭಾವಿಸುತ್ತೀರಾ?” ಎಂದು ಟ್ರಂಪ್ ಪ್ರಶ್ನಿಸಿದ್ದಾರೆ.

ಇದಕ್ಕೂ ಕೆಲವು ಗಂಟೆಗಳ ಮೊದಲು ಟೋಕಿಯೊದಲ್ಲಿ ಮಾತನಾಡಿದ್ದ ಟ್ರಂಪ್, “24 ಗಂಟೆಗಳಲ್ಲಿ ಯುದ್ಧ ನಿಲ್ಲಿಸುವಲ್ಲಿ ಯಶಸ್ವಿಯಾದೆ” ಎಂದು ಹೇಳಿದ್ದರು.

ಮಂಗಳವಾರ ಟೋಕಿಯೊದಲ್ಲಿ ವ್ಯಾಪಾರ ನಾಯಕರೊಂದಿಗೆ ನಡೆದ ಭೋಜನಕೂಟದಲ್ಲಿ ಮಾತನಾಡಿದ್ದ ಟ್ರಂಪ್, “ಭಾರತ-ಪಾಕಿಸ್ತಾನ ಸಂಘರ್ಷದ ಸಮಯದಲ್ಲಿ ‘ಏಳು ಹೊಚ್ಚ ಹೊಸ’ ವಿಮಾನಗಳನ್ನು ಹೊಡೆದುರುಳಿಸಲಾಯಿತು ಎಂದಿದ್ದರು. ಅವು ಯಾವ ದೇಶಕ್ಕೆ ಸೇರಿದವು ಎಂಬುದನ್ನು ಸ್ಪಷ್ಟಪಡಿಸಿಲ್ಲ.

ಸುಡಾನ್‌ನ ಅಲ್‌-ಪಾಶೆರ್ ನಿಯಂತ್ರಣಕ್ಕೆ ಪಡೆದ ಅರೆಸೈನಿಕ ಪಡೆ ಆರ್‌ಎಸ್‌ಎಫ್‌ : ವ್ಯಾಪಕ ಹಿಂಸಾಚಾರದ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...