Homeಅಂತರಾಷ್ಟ್ರೀಯವ್ಯಾಪಾರ ಒತ್ತಡ ಹಾಕಿ ಭಾರತ-ಪಾಕಿಸ್ತಾನ ಯುದ್ಧ ನಿಲ್ಲಿಸಿದೆ : ಪುನರುಚ್ಚರಿಸಿದ ಟ್ರಂಪ್

ವ್ಯಾಪಾರ ಒತ್ತಡ ಹಾಕಿ ಭಾರತ-ಪಾಕಿಸ್ತಾನ ಯುದ್ಧ ನಿಲ್ಲಿಸಿದೆ : ಪುನರುಚ್ಚರಿಸಿದ ಟ್ರಂಪ್

- Advertisement -
- Advertisement -

ಭಾರತ- ಪಾಕಿಸ್ತಾನದ ಮೇಲೆ ವ್ಯಾಪಾರ ಒತ್ತಡವನ್ನು ಹೆಚ್ಚಿಸುವ ಮೂಲಕ ಉಭಯ ರಾಷ್ಟ್ರಗಳ ನಡುವಿನ ಯುದ್ಧವನ್ನು ತಪ್ಪಿಸಿದೆ ಎಂಬ ತಮ್ಮ ಹೇಳಿಕೆಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ (ಅ.29) ಪುನರುಚ್ಚರಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರನ್ನು ‘ಅತ್ಯಂತ ಸುಂದರ’ ಮತ್ತು ‘ಕಠಿಣ ವ್ಯಕ್ತಿ’ ಎಂದು ಹೊಗಳಿದ ಟ್ರಂಪ್, ಅಮೆರಿಕ ಅಧ್ಯಕ್ಷರು ಪ್ರಧಾನಿಗೆ ಕರೆ ಮಾಡಿ ಮಾತನಾಡಿದ ಎರಡು ದಿನಗಳಲ್ಲಿ ಭಾರತ ಒತ್ತಡಕ್ಕೆ ಮಣಿದು ಯುದ್ಧವನ್ನು ನಿಲ್ಲಿಸಿತು ಎಂದು ಹೇಳಿದ್ದಾರೆ.

“ಪ್ರಧಾನಿ ಮೋದಿ ಅತ್ಯಂತ ಸುಂದರ ವ್ಯಕ್ತಿ. ಅವರೊಬ್ಬ ಕಿಲ್ಲರ್ ಮತ್ತು ಕಠಿಣ ವ್ಯಕ್ತಿ. ಅವರು ಹೋರಾಡುತ್ತೇವೆ ಎಂದರು, ಆಗ ನಾನು ವಾವ್, ಇದು ನನಗೆ ಗೊತ್ತಿರುವ ಅದೇ ವ್ಯಕ್ತಿನಾ? ಅಂದೆ” ಎಂದು ದಕ್ಷಿಣ ಕೊರಿಯಾದ ಜಿಯೊಂಗ್ಜುನಲ್ಲಿ ನಡೆದ ಎಪಿಇಸಿ (ಏಷ್ಯಾ-ಪೆಸಿಫಿಕ್ ಆರ್ಥಿಕ ಸಹಕಾರ) ಸಿಇಒ ಶೃಂಗಸಭೆಯಲ್ಲಿ ಟ್ರಂಪ್ ಹೇಳಿದ್ದಾರೆ.

ಪಾಕಿಸ್ತಾನದ ಫೀಲ್ಡ್ ಮಾರ್ಷಲ್ ಆಸಿಮ್ ಮುನೀರ್ ಅವರನ್ನೂ ಹೊಗಳಿದ ಟ್ರಂಪ್, ಅವರನ್ನು ‘ಶ್ರೇಷ್ಠ ಹೋರಾಟಗಾರ’ ಎಂದು ಕರೆದಿದ್ದಾರೆ.

“ಪಾಕಿಸ್ತಾನದ ಪ್ರಧಾನಿ ಒಬ್ಬ ಮಹಾನ್ ವ್ಯಕ್ತಿ. ಅವರ ಬಳಿ ಫೀಲ್ಡ್ ಮಾರ್ಷಲ್ ಇದ್ದಾರೆ. ಅವರು ಫೀಲ್ಡ್ ಮಾರ್ಷಲ್ ಯಾಕೆ ಅಂತ ನಿಮಗೆ ಗೊತ್ತಾ? ಅವರು ಒಬ್ಬ ಮಹಾನ್ ಹೋರಾಟಗಾರ. ಹಾಗಾಗಿ, ನನಗೆ ಅವರೆಲ್ಲರ ಪರಿಚಯವಿದೆ” ಎಂದು ಟ್ರಂಪ್ ಹೇಳಿದ್ದಾರೆ.

“ಇಬ್ಬರು ಪರಮ ಶತ್ರುಗಳ ನಡುವಿನ ಯುದ್ಧವನ್ನು ನಿಲ್ಲಿಸಿದ್ದೇನೆ ಎಂಬ ತನ್ನ ಹೇಳಿಕೆಯನ್ನು ಪುನರಾವರ್ತಿಸಿದ ಟ್ರಂಪ್, “ಇವು ಎರಡು ಪರಮಾಣು ರಾಷ್ಟ್ರಗಳು. ಅವರು ನಿಜವಾಗಿಯೂ ಅದನ್ನು ಬಳಸಲು ಹೊರಟಿದ್ದರು. ನಾನು ಪ್ರಧಾನಿ ಮೋದಿಯವರಿಗೆ ಕರೆ ಮಾಡಿ, ನಾವು ನಿಮ್ಮೊಂದಿಗೆ ವ್ಯಾಪಾರ ಒಪ್ಪಂದ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದೆ. ಅದಕ್ಕವರು, ಇಲ್ಲ, ಇಲ್ಲ, ನಾವು ವ್ಯಾಪಾರ ಒಪ್ಪಂದ ಮಾಡಿಕೊಳ್ಳಬೇಕು ಎಂದರು. ನಾನು, ಇಲ್ಲ ನಮಗೆ ಸಾಧ್ಯವಿಲ್ಲ ಎಂದು ಮತ್ತೆ ಹೇಳಿದೆ. ನೀವು ಪಾಕಿಸ್ತಾನದೊಂದಿಗೆ ಯುದ್ಧವನ್ನು ಪ್ರಾರಂಭಿಸುತ್ತಿದ್ದೀರಿ ಎಂದೆ. ತದನಂತರ ನಾನು ಪಾಕಿಸ್ತಾನಕ್ಕೆ ಕರೆ ಮಾಡಿ, ನೀವು ಭಾರತದೊಂದಿಗೆ ಹೋರಾಡುತ್ತಿರುವುದರಿಂದ ನಾವು ನಿಮ್ಮೊಂದಿಗೆ ವ್ಯಾಪಾರ ಮಾಡುವುದಿಲ್ಲ ಎಂದು ಹೇಳಿದೆ. ಅವರು, ‘ಇಲ್ಲ, ಇಲ್ಲ ನೀವು ನಮಗೆ ಹೋರಾಡಲು ಬಿಡಬೇಕು’ ಎಂದರು. ಅವರಿಬ್ಬರೂ ಹಾಗೆ ಹೇಳಿದರು, ಅವರು ಬಲಿಷ್ಠ ಜನರು” ಎಂದಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ಎರಡೂ ನಾಯಕರು ಎರಡು ದಿನಗಳ ನಂತರ ತನಗೆ ಕರೆ ಮಾಡಿ ಹೋರಾಟ ನಿಲ್ಲಿಸಿದರು ಎಂದು ಟ್ರಂಪ್ ಹೇಳಿಕೊಂಡಿದ್ದಾರೆ.

“ಎರಡು ದಿನದ ಬಳಿಕ ಅವರು ನನಗೆ ಕರೆ ಮಾಡಿ ಯುದ್ದ ನಿಲ್ಲಿಸಿದ್ದೇವೆ, ನಮಗೆ ಅರ್ಥವಾಯಿತು ಎಂದು ಹೇಳಿದರು. ಇದು ಹೇಗೆ ಸಾಧ್ಯ? ಎಷ್ಟು ಅದ್ಬುತವಲ್ಲವೇ? ಬೈಡೆನ್ ಹೀಗೆ ಮಾಡುತ್ತಿದ್ದರು ಎಂದು ನೀವು ಭಾವಿಸುತ್ತೀರಾ?” ಎಂದು ಟ್ರಂಪ್ ಪ್ರಶ್ನಿಸಿದ್ದಾರೆ.

ಇದಕ್ಕೂ ಕೆಲವು ಗಂಟೆಗಳ ಮೊದಲು ಟೋಕಿಯೊದಲ್ಲಿ ಮಾತನಾಡಿದ್ದ ಟ್ರಂಪ್, “24 ಗಂಟೆಗಳಲ್ಲಿ ಯುದ್ಧ ನಿಲ್ಲಿಸುವಲ್ಲಿ ಯಶಸ್ವಿಯಾದೆ” ಎಂದು ಹೇಳಿದ್ದರು.

ಮಂಗಳವಾರ ಟೋಕಿಯೊದಲ್ಲಿ ವ್ಯಾಪಾರ ನಾಯಕರೊಂದಿಗೆ ನಡೆದ ಭೋಜನಕೂಟದಲ್ಲಿ ಮಾತನಾಡಿದ್ದ ಟ್ರಂಪ್, “ಭಾರತ-ಪಾಕಿಸ್ತಾನ ಸಂಘರ್ಷದ ಸಮಯದಲ್ಲಿ ‘ಏಳು ಹೊಚ್ಚ ಹೊಸ’ ವಿಮಾನಗಳನ್ನು ಹೊಡೆದುರುಳಿಸಲಾಯಿತು ಎಂದಿದ್ದರು. ಅವು ಯಾವ ದೇಶಕ್ಕೆ ಸೇರಿದವು ಎಂಬುದನ್ನು ಸ್ಪಷ್ಟಪಡಿಸಿಲ್ಲ.

ಸುಡಾನ್‌ನ ಅಲ್‌-ಪಾಶೆರ್ ನಿಯಂತ್ರಣಕ್ಕೆ ಪಡೆದ ಅರೆಸೈನಿಕ ಪಡೆ ಆರ್‌ಎಸ್‌ಎಫ್‌ : ವ್ಯಾಪಕ ಹಿಂಸಾಚಾರದ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...