Homeಮುಖಪುಟಪ್ಲಾಸ್ಮಾ ದಾನ ಮಾಡಿ: ಮಹಿಳೆಯರಿಗೆ ಕರೆ ನೀಡಿದ ದೆಹಲಿಯ ಮೊದಲ ಮಹಿಳಾ ಪ್ಲಾಸ್ಮ ದಾನಿ

ಪ್ಲಾಸ್ಮಾ ದಾನ ಮಾಡಿ: ಮಹಿಳೆಯರಿಗೆ ಕರೆ ನೀಡಿದ ದೆಹಲಿಯ ಮೊದಲ ಮಹಿಳಾ ಪ್ಲಾಸ್ಮ ದಾನಿ

ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಮಹಿಳೆಯರು ಮುಂದೆ ಬರಬೇಕು. ಈ ಹೋರಾಟದಲ್ಲಿ ಅವರಿಗೂ ಪ್ರಮುಖ ಪಾತ್ರವಿದೆ ಎಂದು ಅವರು ಹೇಳಿದ್ದಾರೆ.

- Advertisement -
- Advertisement -

ರಾಷ್ಟ್ರ ರಾಜಧಾನಿಯ ಮೊದಲ ಮಹಿಳಾ ಪ್ಲಾಸ್ಮಾ ದಾನಿ ಭಾನುವಾರ ಹೆಚ್ಚಿನ ಮಹಿಳೆಯರಿಗೆ ತಮ್ಮ ‘ಆಂಟಿಬಾಡಿ ರಿಚ್’ ಪ್ಲಾಸ್ಮಾವನ್ನು ದಾನ ಮಾಡಲು ಹಾಗೂ ಕೊರೊನಾ ವೈರಸ್ ಸಾಂಕ್ರಾಮಿಕ ವಿರುದ್ಧದ ಹೋರಾಟಕ್ಕೆ ಕೊಡುಗೆ ನೀಡುವಂತೆ ಕೇಳಿಕೊಂಡಿದ್ದಾರೆ.

20 ವರ್ಷದ ಪತ್ರಿಕೋದ್ಯಮ ವಿದ್ಯಾರ್ಥಿನಿ ಹಾಗೂ ವಾಯುವ್ಯ ದೆಹಲಿಯ ರೋಹಿಣಿ ನಿವಾಸಿಯಾದ ಇವರು ಮೇ 30 ರಂದು ಕೊರೊನಾ ವೈರಸ್ ಪಾಸಿಟಿವ್ ಪರೀಕ್ಷೆ ನಡೆಸಿದ್ದರು. ಅವರ ಸಹೋದರನಿಗೆ ಮೇ 25 ರಂದು ರೋಗವಿದೆಯೆಂದು ತಿಳಿದು ಬಂದಿತ್ತು. ತದನಂತರ ಅವರಿಬ್ಬರೂ ಗುಣಮುಖರಾಗಿದ್ದರು.

ಸಹೋದರ-ಸಹೋದರಿಯ ಜೋಡಿ ಶನಿವಾರ ದೆಹಲಿಯ ಇನ್ಸ್ಟಿಟ್ಯೂಟ್ ಆಫ್ ಲಿವರ್ ಆಂಡ್ ಬಿಲಿಯರಿ ಸೈನ್ಸಸ್‌ನಲ್ಲಿ ದೇಶದ ಮೊದಲ ಪ್ಲಾಸ್ಮಾ ಬ್ಯಾಂಕಿನಲ್ಲಿ ತಮ್ಮ ಪ್ಲಾಸ್ಮಾವನ್ನು ದಾನ ಮಾಡಿದರು. ಈ ಪ್ಲಾಸ್ಮಾ ಬ್ಯಾಂಕ್ ರೋಗದಿಂದ ಚೇತರಿಸಿಕೊಂಡ ರೋಗಿಗಳು ಪ್ಲಾಸ್ಮ ದಾನ ಮಾಡಲು ಅರ್ಹವಾಗಿದ್ದರೆ ಅವರೊಂದಿಗೆ ಸಮನ್ವಯ ಸಾಧಿಸಿಸುತ್ತದೆ.

“ನಮಗೆ ಪಿಕ್ ಅಪ್ ಮತ್ತು ಡ್ರಾಪ್ ಆಯ್ಕೆಯನ್ನು ನೀಡಲಾಯಿತು. ನಾವು ಪ್ಲಾಸ್ಮಾವನ್ನು ದಾನ ಮಾಡಲು ಯೋಗ್ಯರಾಗಿದ್ದೇವೆಯೇ ಎಂದು ಕಂಡುಹಿಡಿಯಲು ಕೆಲವು ಪರೀಕ್ಷೆಗಳನ್ನು ನಡೆಸಲಾಯಿತು. ಇಡೀ ಪ್ರಕ್ರಿಯೆಯು ಕೇವಲ 45 ನಿಮಿಷಗಳನ್ನು ತೆಗೆದುಕೊಂಡಿತು” ಮಹಿಳೆಯ ಎಂದು ಸಹೋದರ ಹೇಳಿದರು.

ಅಲ್ಲಿರುವ ವೈದ್ಯರು ಬಹಳ ಸಹಾಯಕರಾಗಿದ್ದಾರೆ ಹಾಗೂ ತಾಳ್ಮೆಯಿಂದ ನಿಮ್ಮ ಮಾತುಗಳನ್ನು ಕೇಳುತ್ತಾರೆ ಎಂದು ಅವರು ಹೇಳಿದರು. ರಾಷ್ಟ್ರ ರಾಜಧಾನಿಯಲ್ಲಿ ಮೊದಲ ಮಹಿಳಾ ಪ್ಲಾಸ್ಮಾ ದಾನಿ ಎಂದು ತಿಳಿದಾಗ ಅವರು ಮಹಿಳೆಯೂ ಆಶ್ಚರ್ಯಚಕಿತರಾದರು.

“ವೈದ್ಯರು ನನಗೆ ಮೆಚ್ಚುಗೆಯ ಪ್ರಮಾಣಪತ್ರವನ್ನು ನೀಡಿದರು ಮತ್ತು ಇತರರನ್ನು ಪ್ರೇರೇಪಿಸಲು ವೀಡಿಯೊ ಸಂದೇಶವನ್ನು ರೆಕಾರ್ಡ್ ಮಾಡಲು ನನ್ನನ್ನು ಕೇಳಿದರು” ಎಂದು ಅವರು ಹೇಳಿದರು.

“ಅನೇಕ ಮಹಿಳೆಯರು ಪ್ಲಾಸ್ಮಾ ದಾನ ಮಾಡಲು ಹಿಂಜರಿಯುತ್ತಾರೆ. ಚಿಂತೆ ಮಾಡಲು ಏನೂ ಇಲ್ಲ ಹಾಗೂ ಯಾವುದೇ ತೊಂದರೆ ಇಲ್ಲ. ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಮಹಿಳೆಯರು ಮುಂದೆ ಬರಬೇಕು. ಈ ಹೋರಾಟದಲ್ಲಿ ಅವರಿಗೂ ಪ್ರಮುಖ ಪಾತ್ರವಿದೆ” ಎಂದು ಅವರು ಹೇಳಿದ್ದಾರೆ.

ಕೊರೊನಾ ಸೋಂಕಿನಿಂದ ಗುಣಮುಖರಾದ ತನ್ನ ಸ್ನೇಹಿತೆಯೊಬ್ಬರನ್ನು ಪ್ಲಾಸ್ಮಾ ದಾನ ಮಾಡಲು ಅವರು ಮನವರಿಕೆ ಮಾಡಿಕೊಟ್ಟಿದ್ದಾರೆ.


ಓದಿ: ದೆಹಲಿಯಲ್ಲಿ ಅಮಿತ್ ಶಾ ಹಾಗೂ ಕೇಜ್ರಿವಾಲ್ ಎಂಬ ಎರಡು ಮಾದರಿಯಿದೆ; ಸಿಸೋಡಿಯಾ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...