Homeಮುಖಪುಟಸರ್ಕಾರಿ ಶಾಲಾ ಪೋಷಕರಿಂದ ದೇಣಿಗೆ: ನಮ್ಮ ಪಾತ್ರವಿಲ್ಲವೆಂದ ಶಿಕ್ಷಣ ಸಚಿವ ಬಿ.ಸಿ ನಾಗೇಶ್

ಸರ್ಕಾರಿ ಶಾಲಾ ಪೋಷಕರಿಂದ ದೇಣಿಗೆ: ನಮ್ಮ ಪಾತ್ರವಿಲ್ಲವೆಂದ ಶಿಕ್ಷಣ ಸಚಿವ ಬಿ.ಸಿ ನಾಗೇಶ್

- Advertisement -
- Advertisement -

ಸರ್ಕಾರಿ ಶಾಲೆಗಳ ಮೂಲಭೂತ ಸೌಲಭ್ಯಗಳನ್ನು ನಿರ್ವಹಿಸುವುದಕ್ಕಾಗಿ ಮಕ್ಕಳ ಪೋಷಕರಿಂದ ಮಾಸಿಕ 100 ರೂ ದೇಣಿಗೆ ಸಂಗ್ರಹಿಸಬೇಕೆಂದು ಶಿಕ್ಷಣ ಇಲಾಖೆ ಸುತ್ತೋಲೆ ಕಳಿಸುವುದರಲ್ಲಿ ನಮ್ಮ ಪಾತ್ರವಿಲ್ಲವೆಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆಂದು ಪ್ರಜಾವಾಣಿ ವರದಿ ಮಾಡಿದೆ.

ಶಾಲೆಗಳಲ್ಲಿ ಅಗತ್ಯವಿರುವ ಖರ್ಚು ವೆಚ್ಚಗಳಿಗಾಗಿ ಪೋಷಕರಿಂದ 100 ರೂ ದೇಣಿಗೆ ಸಂಗ್ರಹಿಸಲು ಎಸ್‌ಡಿಎಂಸಿಗಳಿಗೆ ಅನುಮತಿ ನೀಡಿ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. ಇದರಲ್ಲಿ ಮುಖ್ಯಮಂತ್ರಿಗಳ ಅಥವಾ ನನ್ನ ಪಾತ್ರವಿಲ್ಲ ಎಂದು ಅವರು ಹೇಳಿರುವುದಾಗಿ ವರದಿಯಾಗಿದೆ.

ಮುಂದುವರಿದು ಈ ರೀತಿ ದೇಣಿಗೆ ಸಂಗ್ರಹಿಸಿಲು ಆರ್‌ಟಿಇ ಕಾಯ್ದೆಯಲ್ಲಿ ಅವಕಾಶವಿದೆ. ಎಸ್‌ಡಿಎಂಸಿಯವರು ಮನವಿ ಮಾಡಿದ್ದರು. ಈ ರೀತಿ ಸುತ್ತೋಲೆ ಹೊರಡಿಸುವುದಕ್ಕೆ ಅಧಿಕಾರಿಗಳಿಗೆ ಕಾನೂನಿನಲ್ಲಿ ಅವಕಾಶವಿದೆ. ಎಲ್ಲವನ್ನು ಸರ್ಕಾರದ ಗಮನಕ್ಕೆ ತರಬೇಕಾಗಿಲ್ಲ ಎಂದು ಸಹ ಸಚಿವರು ಸಮರ್ಥಿಸಿಕೊಂಡಿದ್ದಾರೆ.

ಆ ನಂತರ ಇದು ಕಾಂಗ್ರೆಸ್ ಸರ್ಕಾರ ಆರಂಭ ಮಾಡಿತ್ತು. ಅವರು ಎಲ್‌ಕೆಜಿ, ಯುಕೆಜಿ ಶಾಲೆಗಳನ್ನು ಆರಂಭಿಸಿದರು. ಆದರೆ ಅಲ್ಲಿ ಪಾಠ ಮಾಡುವವರಿಗೆ ಸಂಬಳ ನೀಡುತ್ತಿಲ್ಲ. ಹಾಗಾಗಿ ಸುತ್ತೋಲೆ ಹೊರಡಿಸಲಾಗಿದೆ. ಸಿದ್ದರಾಮಯ್ಯನವರು ಈಗ ವಿರೋಧಿಸುವುದು ಸರಿಯಿಲ್ಲ. ಎಸ್‌ಡಿಎಂಸಿಯವರು ಹಣ ದುರುಪಯೋಗ ಮಾಡಿಕೊಳ್ಳುವುದು ಕಂಡುಬಂದರೆ ಸುತ್ತೋಲೆ ವಾಪಸ್ ಪಡೆಯಲಾಗುವುದು ಎಂದು ಬಿ.ಸಿ ನಾಗೇಶ್ ಹೇಳಿದ್ದಾರೆ.

ಸಚಿವರ ಈ ದ್ವಂದ್ವ ಹೇಳಿಕೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿದೆ. “ಸಚಿವರಾಗಿ ಆಡಳಿತದ ಮೇಲೆ ಹಿಡಿತವಿಲ್ಲವೆಂದರೆ ಹೇಗೆ? ನಿಮಗಿಲ್ಲದಿದ್ದರೆ ಮುಖ್ಯಮಂತ್ರಿಗಳಿಗೂ ಇಲ್ಲವೇ? ಸರ್ಕಾರಿ ಶಾಲೆಗಳನ್ನು ನಡೆಸಲು ಸಾಧ್ಯವಿಲ್ಲದಿದ್ದರೆ ರಾಜೀನಾಮೆ ಕೊಟ್ಟು ಹೋಗಿ” ಎಂಬು ಅಭಿಪ್ರಾಯಗಳು ಕೇಳಿಬಂದಿವೆ.

ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯ್ತುಕ್ತರು ಅಕ್ಟೋಬರ್ 19 ರಂದು ಸುತ್ತೋಲೆಯೊಂದನ್ನು ಹೊರಡಿಸಿದ್ದು, ‘ನಮ್ಮ ಶಾಲೆ – ನನ್ನ ಕೊಡುಗೆ’ ಯೋಜನೆ ಹೆಸರಿನಲ್ಲಿ ಪೋಷಕರು ನೀಡುವ ದೇಣಿಗೆಯನ್ನು ವಿದ್ಯುತ್ ಬಿಲ್, ಶೌಚಾಲಯ ನಿರ್ವಹಣೆಯಂತಹ ಮೂಲಭೂತ ಸೌಲಭ್ಯಗಳಿಗೆ ಬಳಸಬೇಕು. ರಸೀದಿ ನೀಡುವ, ಪ್ರತ್ಯೇಕ ಲೆಕ್ಕಪತ್ರ ಇಡುವ ಹೊಣೆಗಾರಿಕೆ ಎಸ್‌ಡಿಎಂಸಿಯದ್ದಾಗಿರುತ್ತದೆ ಎಂದು ತಿಳಿಸಿದ್ದಾರೆ.

ಈ ಯೋಜನೆ ಘೋಷಣೆಯಾಗುತ್ತಿದ್ದಂತೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಸರ್ಕಾರಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ಕಳಿಸುತ್ತಿರುವವರು ಬಡವರು, ದಲಿತರು ಮತ್ತು ಹಿಂದುಳಿದ ಸಮುದಾಯಗಳೆ ಹೆಚ್ಚಿದ್ದಾರೆ. ಈಗಾಗಲೇ ಬೆಲೆ ಏರಿಕೆ, ನಿರುದ್ಯೋಗದಿಂದ ಬಸವಳಿದಿರುವ ಅಂತವರ ಹೊಟ್ಟೆ ಮೇಲೆ ಹೊಡೆಯಲು ಸರ್ಕಾರ ಮುಂದಾಗಿರುವುದು ಸರಿಯಲ್ಲ ಎಂಬ ಮಾತುಗಳು ಕೇಳಿಬಂದಿವೆ.

ಎಸ್‌ಎಫ್‌ಐ ರಾಜ್ಯ ಕಾರ್ಯದರ್ಶಿ ಕೆ.ವಾಸುದೇವರೆಡ್ಡಿಯವರು ನಾನುಗೌರಿ.ಕಾಂ ಜೊತೆ ಮಾತನಾಡಿ, “ಹೊಸ ಶಿಕ್ಷಣ ನೀತಿಯು ಸ್ಥಳೀಯವಾಗಿಯೇ ಸಂಪನ್ಮೂಲಗಳನ್ನು ಹೊಂದಿಸಿಕೊಳ್ಳಬೇಕು ಎಂದು ಹೇಳುತ್ತದೆಯೆ ಹೊರತು ಸರ್ಕಾರ ನೀಡುವ ಅನುದಾನದ ಬಗ್ಗೆ ಪ್ರಸ್ತಾಪ ಮಾಡಿಲ್ಲ. ಆ ನೀತಿಯ ಅನುಷ್ಟಾನದ ಭಾಗವಾಗಿ ಸರ್ಕಾರ ಇಂತಹ ಯೋಜನೆಗಳನ್ನು ಜಾರಿಗೆ ತಂದು ಬಡಮಕ್ಕಳನ್ನು ಶಾಲೆಯಿಂದ ಹೊರದೂಡುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೋವಿಡ್ ನಂತರ ಸಾವಿರಾರು ಮಕ್ಕಳು ಶಾಲೆಗಳಿಂದ ಡ್ರಾಪ್‌ಔಟ್ ಆಗಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಅಂತಹ ಮಕ್ಕಳ ಪೋಷಕರಿಂದ ವಸೂಲಿಗೆ ಮುಂದಾಗಿರುವುದು ಸರಿಯಲ್ಲ. ಹಿಂದಿನ ಸರ್ಕಾರ ಶಾಲೆಗೆ ಬರುವ ಮಕ್ಕಳಿಗೆ ದಿನಕ್ಕೆ ಎರಡು ರೂನಂತೆ ಪ್ರೋತ್ಸಾಹ ಧನ ನೀಡುತ್ತಿತ್ತು. ಆಂಧ್ರದ ಸರ್ಕಾರ ಸರ್ಕಾರಿ ಶಾಲೆಗೆ ಬರುವ ಹೆಣ್ಣು ಮಕ್ಕಳ ತಾಯಿಯ ಖಾತೆಗೆ ವಾರ್ಷಿಕ 15 ಸಾವಿರ ಪ್ರೋತ್ಸಾಹ ಧನ ನೀಡುತ್ತಿದೆ. ಆದರೆ ಕರ್ನಾಟಕದ ಬಿಜೆಪಿ ಸರ್ಕಾರ ಮಾತ್ರ ಬಡಮಕ್ಕಳಿಂದಲೇ ದೇಣಿಗೆ ವಸೂಲಿ ಮಾಡುವ ಕೀಳು ಮಟ್ಟಕ್ಕೆ ಇಳಿದಿದೆ ಎಂದು ಕಿಡಿಕಾರಿದರು.

ಶಿಕ್ಷಣ ತಜ್ಞ ಡಾ.ವಿ.ಪಿ ನಿರಂಜನಾರಾಧ್ಯರವರು ಮಾತನಾಡಿ, “ವಿಶ್ವಸಂಸ್ಥೆಯ ಮಕ್ಕಳ ಹಕ್ಕುಗಳ ಒಡಂಬಡಿಕೆಯು ರಾಜ್ಯಸರ್ಕಾರಗಳು ಎಲ್ಲಾ ಮಕ್ಕಳಿಗೆ ಕನಿಷ್ಟ ಪ್ರಾಥಮಿಕ ಶಿಕ್ಷಣವನ್ನು ಉಚಿತವಾಗಿ ಕೊಡಬೇಕೆಂದು ಹೇಳುತ್ತದೆ. ಸಂವಿಧಾನದ 21ಎ ಪ್ರಕಾರ ಶಿಕ್ಷಣ ಮಕ್ಕಳ ಮೂಲಭೂತ ಹಕ್ಕಾಗಿದೆ. ಶಿಕ್ಷಣ ಹಕ್ಕು ಕಾಯ್ದೆಯ ಪ್ರಕಾರ ಉಚಿತ ಮತ್ತು ಕಡ್ಡಾಯ ಶಿಕ್ಷಣ ಎಂದರೆ ಉಚಿತ ಅಷ್ಟೆ. ಯಾವುದೇ ಸ್ವರೂಪದಲ್ಲಿ ಅದಕ್ಕೆ ನಿರ್ಬಂಧಗಳನ್ನು ಹೇರಬಾರದು. ರಾಜ್ಯ ಸರ್ಕಾರ ಅನುದಾನ ಕೊಡಬೇಕು, ಮೂಲಭೂತ ಸೌಲಭ್ಯಗಳನ್ನು ಸ್ಥಳೀಯ ಸರ್ಕಾರಗಳು ಒದಗಿಸಬೇಕು. ಆದರೆ ನಾಗೇಶ್‌ರವರು ಶಿಕ್ಷಣ ಸಚಿವರಾದ ನಂತರ ಕಾನೂನು ಉಲ್ಲಂಘನೆಗಳು ಮಿತಿ ಮೀರಿವೆ. ಅವರನ್ನು ವಜಾಗೊಳಿಸಬೇಕು” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸರ್ಕಾರ ಜಗ್ಗಿ ವಾಸುದೇವ್‌ಗೆ 100 ಕೋಟಿ ಹಣ ನೀಡಿದೆ. ಸಂಸ್ಕೃತ ವಿವಿಗೆ 250 ಕೋಟಿ ನೀಡಲು ಮುಂದಾಗಿದೆ. ಚಾಣಕ್ಯ ವಿವಿಗೆ ಭೂಮಿ ಮತ್ತು ಹಣ ಕೊಡುತ್ತಿದೆ. ಉಪಯೋಗಕ್ಕೆ ಬಾರದ ವೇದಗಣಿತ ಕಲಿಕೆಗೆ ಹಣ ನೀಡಲು ಮುಂದಾಗಿತ್ತು. ಈ ಎಲ್ಲದಕ್ಕೂ ಕೊಡಲು ದುಡ್ಡಿರುವಾಗ ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಲಭ್ಯ ನೀಡಲು ದುಡ್ಡಿಲ್ಲವೇ? ಸರ್ಕಾರ ಭಿಕ್ಷೆ ಬೇಡುತ್ತಿದೆಯೇ? ಬಡವರ ಕೂಲಿಯಲ್ಲಿ ಮಾಸಿಕ 100 ರೂ ಕೊಡಬೇಕು ಎನ್ನುವ ನಿಮಗೆ ಮಾನವೀಯತೆ ಇದೆಯೇ? ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೆಲ ಪೋಷಕರು ದೇಣಿಗೆ ಕೊಟ್ಟು, ಕೆಲವರು ಕೊಡದಿದ್ದರೆ ಅದು ಮಕ್ಕಳ ನಡುವಿನ ತಾರತಮ್ಯಕ್ಕೆ ಕಾರಣವಾಗಲಿದೆ. ಇನ್ನು ಪೋಷಕರು, ಎಸ್‌ಡಿಎಂಸಿ ಸದಸ್ಯರು ಮಾಸಿಕ ಸಭೆಗಳಿಗೆ ಹೋಗದಿರಲು ಹಣಕಾಸಿನ ಮುಗ್ಗಟ್ಟು ಸಹ ಪ್ರಧಾನ ಕಾರಣ. ಏಕೆಂದರೆ ಶಾಲಾ ಅಗತ್ಯಗಳಿಗೆ ಶಿಕ್ಷಕರು ಅವರನ್ನು ಒತ್ತಾಯಿಸುವುದು ಸಹಜ. ಇಂತಹ ಸಂದರ್ಭದಲ್ಲಿ ಈ ಸುತ್ತೋಲೆ ಮತ್ತುಷ್ಟು ವಸೂಲಿಗೆ ಅವಕಾಶ ಮಾಡಿಕೊಡುತ್ತಿದ್ದು ಇದರಿಂದ ಪೋಷಕರು ಶಾಲೆಗಳತ್ತ ಸುಳಿಯದಂತೆ ಮಾಡುತ್ತದೆ. ದಲಿತ ಮಕ್ಕಳನ್ನು ಶಾಲೆಯಿಂದ ಹೊರದುಬ್ಬವ ಹುನ್ನಾರವಿದು. ಆನಂತರ ತಿಂಗಳಿಗೆ ನೂರು ರೂ ಕೊಡುವುದಾದರೆ ನಮ್ಮಲ್ಲಿಗೆ ಬನ್ನಿ ಖಾಸಗಿ ಶಿಕ್ಷಣ ಸಂಸ್ಥೆಗಳು ಆಮಿಷವೊಡ್ಡಿ ಎಲ್ಲಾ ಸರ್ಕಾರಿ ಶಾಲೆಗಳನ್ನು ಮುಚ್ಚಿಸಿಬಿಡುತ್ತವೆ. ಈ ಸರ್ಕಾರಕ್ಕೂ ಅದೇ ಬೇಕಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಇಷ್ಟು ವರ್ಷ ಸರ್ಕಾರಿ ಶಾಲೆಗಳಿಂದ ಸಂಬಳ ಪಡೆಯುತ್ತಿರುವ ಶಿಕ್ಷಕರು ಬೇಕಾದರೆ ದೇಣಿಗೆ ನೀಡಲಿ. ಗೋವುಗಳನ್ನು ದತ್ತು ಪಡೆಯುವ ಪುಣ್ಯಕೋಟಿ ಯೋಜನೆಗೆ ಸರ್ಕಾರಿ ನೌಕರರು 100 ಕೋಟಿ ರೂಗಳವರೆಗೆ ದೇಣಿಗೆ ಕೊಡುವ ಬದಲು ಅದೇ ಹಣವನ್ನು ಸರ್ಕಾರಿ ಶಾಲೆಗಳಿಗೆ ಕೊಡಬಹುದಲ್ಲವೇ ಎಂದು ಪ್ರಶ್ನಿಸಿದರು.

ಇದನ್ನೂ ಓದಿ; ಸರ್ಕಾರಿ ಶಾಲಾ ಮಕ್ಕಳ ಪೋಷಕರಿಂದ ಮಾಸಿಕ 100 ದೇಣಿಗೆ: ಸುತ್ತೋಲೆಯ ಹಿಂದಿದೆ ಶಿಕ್ಷಣ ವಂಚಿಸುವ ಉದ್ದೇಶ- ಸಿಪಿಐ(ಎಂ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...