Homeಮುಖಪುಟರಾಮಮಂದಿರ ಉದ್ಘಾಟನೆಗೆ ದಲಿತರು ಕೊಟ್ಟ ದೇಣಿಗೆ 'ಅಶುದ್ಧ'ವೆಂದು ವಾಪಸ್‌!

ರಾಮಮಂದಿರ ಉದ್ಘಾಟನೆಗೆ ದಲಿತರು ಕೊಟ್ಟ ದೇಣಿಗೆ ‘ಅಶುದ್ಧ’ವೆಂದು ವಾಪಸ್‌!

- Advertisement -
- Advertisement -

ಅಯೋಧ್ಯೆಯ ರಾಮ ಮಂದಿರದ ಉದ್ಘಾಟನಾ ಸಮಾರಂಭದ ಪ್ರಯಕ್ತ ದೇಣಿಗೆ ಸಂಗ್ರಹಿಸುವ ವಿಚಾರ ರಾಜಸ್ಥಾನದ ಜಲಾವರ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಇಲ್ಲಿ ದಲಿತ ಸಮುದಾಯದ ಜನರು ನೀಡಿರುವ ದೇಣಿಗೆಯನ್ನು ‘ಅಶುದ್ಧ’ ಎಂದು ಹಿಂದಿರುಗಿಸಿರುವ ಆರೋಪ ಕೇಳಿ ಬಂದಿದೆ.

‘ದಿ ಮೂಕನಾಯಕ’ ಸುದ್ದಿ ವೆಬ್‌ಸೈಟ್‌ನ ವರದಿ ಪ್ರಕಾರ, ಜಲಾವರ್‌ನ ಖಾನ್ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಮುಂಡ್ಲಾ ಗ್ರಾಮದಲ್ಲಿ ದಲಿತ ಸಮುದಾಯದ ಜನರು ಹೆಚ್ಚಾಗಿ ವಾಸಿಸುತ್ತಿದ್ದಾರೆ. ಆರಂಭದಲ್ಲಿ ಗ್ರಾಮದ ಜನರೊಂದಿಗೆ ರಾಮ ಮಂದಿರ ಉದ್ಘಾಟನಾ ಸಮಾರಂಭದ ಪ್ರಯುಕ್ತ ಉತ್ಸವ, ಯಾತ್ರೆ, ಪ್ರಸಾದ ವಿತರಣೆಯಂತಹ ಕಾರ್ಯಕ್ಕಾಗಿ ಹಣವನ್ನು ದೇಣಿಗೆ ನೀಡುವಂತೆ ಕೋರಲಾಗಿತ್ತು. ಆದರೆ, ಬಳಿಕ ದಲಿತರು ನೀಡಿರುವ ದೇಣಿಗೆಯನ್ನು ‘ಅಶುದ್ದ’ ಎಂದು ಪ್ರಬಲ ಜಾತಿಯ ಕೆಲವರು ಹಿಂದಿರುಗಿಸಿದ್ದಾರೆ ಎಂದು ಆರೋಪಿಸಲಾಗಿದೆ.

“ದಲಿತರಿಂದ ಬಂದ ಹಣವನ್ನು ದೇವಾಲಯದ ಆಚರಣೆಗಳಿಗೆ ಸ್ವೀಕರಿಸುವುದಿಲ್ಲ. ಅವರ ದೇಣಿಗೆಯಿಂದ ಮಾಡಿದ ಪ್ರಸಾದವನ್ನು ‘ಅಶುದ್ಧ’ವೆಂದು ಪರಿಗಣಿಸಲಾಗುವುದು” ಎಂದು ಬಲಿಷ್ಠ ಜಾತಿಯವರು ಹೇಳಿದ್ದಾರೆ ಎನ್ನಲಾಗಿದ್ದು, ಇದು ಪಕ್ಷಪಾತ ಮತ್ತು ತಾರತಮ್ಯ ಎಂದು ಆರೋಪಿಸಿ ದಲಿತರು ಜನವರಿ 11ರಂದು ಜಲಾವರ್ ಜಿಲ್ಲಾಡಳಿತಕ್ಕೆ ದೂರು ನೀಡಿದ್ದಾರೆ.

ದಲಿತರಿಂದ ದೇಣಿಗೆಯಾಗಿ ಹಣ ಮತ್ತು ವಸ್ತುಗಳನ್ನು ಪಡೆದಿದ್ದರು. ಆದರೆ, ಬಳಿಕ ಅದನ್ನು ಹಿಂದಿರುಗಿಸಿದ್ದಾರೆ ಎಂದು ಮುಂಡ್ಲಾ ಗ್ರಾಮದ ನಿವಾಸಿ ಮುಖೇಶ್ ಮೇಘವಾಲ್ ಹೇಳಿದ್ದಾಗಿ ಮೂಕನಾಯಕ ವರದಿ ತಿಳಿಸಿದೆ.

“ಪೊಲೀಸರು ದೂರು ಹಿಂಪಡೆಯಲು ಒತ್ತಡ ಹೇರುತ್ತಿದ್ದಾರೆ. ಅದಕ್ಕಾಗಿ, ಕೆಲವು ಅಧಿಕಾರಿಗಳು ಗ್ರಾಮಕ್ಕೆ ಪದೇ-ಪದೇ ಬರುತ್ತಿದ್ದಾರೆ. ನಮ್ಮ ದೂರು ಆಧರಿಸಿ ಪ್ರಕರಣ ದಾಖಲಿಸುತ್ತಿಲ್ಲ” ಎಂದು ಮುಖೇಶ್ ಮೇಘವಾಲ್ ಆರೋಪಿಸಿದ್ದಾರೆ.

ದೂರು ಹಿಂಪಡೆಯುವಂತೆ ಒತ್ತಾಯಿಸುತ್ತಿರುವ ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ಖಾನ್ಪುರ ಪೊಲೀಸ್‌ ಠಾಣೆಯ ಮುಖ್ಯಸ್ಥ ರಾಮ್ಕಿಶನ್ ಗೋಡಾರಾ, “ದೂರು ಹಿಂಪಡೆಯಲು ಒತ್ತಾಯಿಸುವ ಆರೋಪಗಳು ಆಧಾರ ರಹಿತವಾಗಿವೆ. ನಿಷ್ಪಕ್ಷಪಾತವಾಗಿ ಸಾಕ್ಷಿಗಳೊಂದಿಗೆ ಮಾತನಾಡಲು ಸ್ವತಃ ಡಿವೈಎಸ್‌ಪಿ ಅವರೇ ಗ್ರಾಮಕ್ಕೆ ಭೇಟಿ ನೀಡಿದ್ದರು. ಆಡಳಿತವು ಸಾರ್ವಜನಿಕ ನಂಬಿಕೆಯನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಮುಂದುವರಿಯುತ್ತಿದೆ. ಪ್ರಕರಣದ ಬಗ್ಗೆ ಪೊಲೀಸರು ನ್ಯಾಯಯುತ ತನಿಖೆ ನಡೆಸುತ್ತಾರೆ” ಎಂದು ಹೇಳಿದ್ದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ : ಬಾಬ್ರಿ ಮಸೀದಿಯನ್ನು ವ್ಯವಸ್ಥಿತವಾಗಿ ಮುಸ್ಲಿಮರಿಂದ ಕಿತ್ತುಕೊಳ್ಳಲಾಗಿದೆ: ಓವೈಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...