Homeಮುಖಪುಟಅಯೋಧ್ಯೆ ರಾಮಮಂದಿರ ನಿರ್ಮಾಣ: ದೇಣಿಗೆ ಬಂದಿದ್ದ 22 ಕೋಟಿಯ 15 ಸಾವಿರ ಚೆಕ್‌ಗಳು ಬೌನ್ಸ್

ಅಯೋಧ್ಯೆ ರಾಮಮಂದಿರ ನಿರ್ಮಾಣ: ದೇಣಿಗೆ ಬಂದಿದ್ದ 22 ಕೋಟಿಯ 15 ಸಾವಿರ ಚೆಕ್‌ಗಳು ಬೌನ್ಸ್

- Advertisement -
- Advertisement -

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ವಿಶ್ವ ಹಿಂದೂ ಪರಿಷತ್ (VHP) ಸಂಗ್ರಹಿಸಿದ 22 ಕೋಟಿ ರೂಪಾಯಿ ಮೊತ್ತದ ಸುಮಾರು 15,000 ಬ್ಯಾಂಕ್ ಚೆಕ್‌ಗಳು ಬೌನ್ಸ್ ಆಗಿವೆ.

ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ಇತರ ಅಂಗಸಂಸ್ಥೆಗಳು ದೇಶಾದ್ಯಂತ ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸಿದ್ದವು. ಅದರಲ್ಲಿ ಸುಮಾರು 22 ಕೋಟಿ ರೂ. ಮೊತ್ತದ ವಿವಿಧ ಬ್ಯಾಂಕ್‌ಗಳ 15 ಸಾವಿರ ಚೆಕ್‌ಗಳು ಬೌನ್ಸ್ ಆಗಿರುವುದು ತಿಳಿದು ಬಂದಿದೆ.

ದೇವಾಲಯದ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರ ಸ್ಥಾಪಿಸಿರುವ ಟ್ರಸ್ಟ್ ’ಶ್ರೀ ರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರ’ದ ಲೆಕ್ಕಪರಿಶೋಧನಾ ವರದಿಯಲ್ಲಿ ಈ ವಿಷಯ ಬೆಳಕಿಗೆ ಬಂದಿದೆ. ಬ್ಯಾಂಕ್ ಖಾತೆಗಳಲ್ಲಿ ಹಣದ ಕೊರತೆ ಅಥವಾ ಕೆಲವು ತಾಂತ್ರಿಕ ದೋಷದಿಂದಾಗಿ ಚೆಕ್‌ಗಳು ಬೌನ್ಸ್ ಆಗಿವೆ ಎಂದು ಟ್ರಸ್ಟ್ ಹೇಳಿದೆ.

ಇದನ್ನೂ ಓದಿ: ಸತತ ಅಂತ್ಯಕ್ರಿಯೆ ನಡೆಸುತ್ತಿರುವ ಸೂರತ್‌ನ‌ ವಿದ್ಯುತ್‌ ಚಿತಾಗಾರದಲ್ಲಿ ಕರಗಿ ಹೋಗುತ್ತಿವೆ ಲೋಹದ ಯಂತ್ರಗಳು!

ತಾಂತ್ರಿಕ ದೋಷಗಳ ಸಮಸ್ಯೆಯನ್ನು ಪರಿಹರಿಸಲು ಬ್ಯಾಂಕುಗಳು ಕಾರ್ಯನಿರ್ವಹಿಸುತ್ತಿವೆ. ಜೊತೆಗೆ ಮತ್ತೆ ದೇಣಿಗೆ ನೀಡುವಂತೆ ಜನರನ್ನು ಕೇಳುತ್ತಿದ್ದಾರೆ ಎಂದು ಟ್ರಸ್ಟ್ ಸದಸ್ಯ ಡಾ.ಅನಿಲ್ ಮಿಶ್ರಾ ಮಾಹಿತಿ ನೀಡಿದ್ದಾರೆ.

ಬೌನ್ಸ್ ಆಗಿರುವ ಚೆಕ್‌ಗಳಲ್ಲಿ ಸುಮಾರು 2,000 ಚೆಕ್‌ಗಳನ್ನು ಅಯೋಧ್ಯೆಯಿಂದ ಸಂಗ್ರಹಿಸಲಾಗಿದೆ ಎಂದು ಟ್ರಸ್ಟ್‌ನ ಖಜಾಂಚಿ ಸ್ವಾಮಿ ಗೋವಿಂದದೇವ್ ಗಿರಿ ಹೇಳಿದ್ದಾರೆ. ಉಳಿದ 13,000 ಚೆಕ್‌ಗಳನ್ನು ದೇಶದ ವಿವಿಧ ಭಾಗಗಳಿಂದ ಸಂಗ್ರಹಿಸಲಾಗಿದೆ ಎಂದರು.

“ನಾವು ಬೌನ್ಸ್ ಆಗಿರುವ ಚೆಕ್‌ಗಳನ್ನು ಹಿಂದಕ್ಕೆ ಕಳುಹಿಸುತ್ತಿದ್ದೇವೆ ಮತ್ತು ಹೊಸ ಚೆಕ್ ನೀಡುವಂತೆ ದೇಣಿಗೆ ನೀಡಿದ್ದ ಜನರಿಗೆ ಮನವಿ ಮಾಡುತ್ತೇವೆ” ಎಂದು ಸ್ವಾಮಿ ಗೋವಿಂದದೇವ್ ಗಿರಿ ಹೇಳಿದ್ದಾರೆ.

ವಿಎಚ್‌ಪಿ ಮತ್ತು ಇತರ ಅಂಗಸಂಸ್ಥೆಗಳು ಅಯೋಧ್ಯೆಯಲ್ಲಿ ರಾಮ ದೇವಾಲಯ ನಿರ್ಮಾಣಕ್ಕೆ ದೇಣಿಗೆ ಕೋರಿ ಅಭಿಯಾನ ನಡೆಸಿತ್ತು. ಈ ವರ್ಷದ ದೇಶಾದ್ಯಂತ ಜನವರಿ 15 ಮತ್ತು ಫೆಬ್ರವರಿ 17 ರ ನಡುವೆ ದೇಣಿಗೆ ಸಂಗ್ರಹಣೆ ನಡೆಸಿತ್ತು. ಈ ಅಭಿಯಾನದಲ್ಲಿ ಅಂತಿಮ ಅಂಕಿ-ಅಂಶಗಳನ್ನು ಟ್ರಸ್ಟ್ ಇನ್ನೂ ಘೋಷಿಸದಿದ್ದರೂ ಸುಮಾರು 5,000 ಕೋಟಿ ರೂಪಾಯಿ ಸಂಗ್ರಹವಾಗಿದೆ ಎನ್ನಲಾಗಿದೆ.


ಇದನ್ನೂ ಓದಿ: ಕೊರೊನಾ ರೋಗಿಗಳ ಅಂತ್ಯಸಂಸ್ಕಾರ ಕಾಣಿಸದಂತೆ ಸ್ಮಶಾನಕ್ಕೆ ಶೀಟ್ ಗೋಡೆ ಹಾಕಿಸಿದ ಉತ್ತರ ಪ್ರದೇಶ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...