Homeಮುಖಪುಟಚುನಾವಣಾ ಟ್ರಸ್ಟ್‌ಗಳ ಮೂಲಕ ದೇಣಿಗೆ : ಶೇ.82ರಷ್ಟು ಪಾಲು ಪಡೆದ ಬಿಜೆಪಿ

ಚುನಾವಣಾ ಟ್ರಸ್ಟ್‌ಗಳ ಮೂಲಕ ದೇಣಿಗೆ : ಶೇ.82ರಷ್ಟು ಪಾಲು ಪಡೆದ ಬಿಜೆಪಿ

ಚುನಾವಣಾ ಬಾಂಡ್‌ ರದ್ದತಿ ಬಳಿಕ ಮೂರು ಪಟ್ಟು ಹೆಚ್ಚಾದ ಕಾರ್ಪೋರೇಟ್ ದೇಣಿಗೆ

- Advertisement -
- Advertisement -

ಸುಪ್ರೀಂ ಕೋರ್ಟ್ ವಿವಾದಾತ್ಮಕ ಚುನಾವಣಾ ಬಾಂಡ್‌ಗಳನ್ನು ರದ್ದುಗೊಳಿಸಿದ ನಂತರ 2024-25ರಲ್ಲಿ ಚುನಾವಣಾ ಟ್ರಸ್ಟ್‌ಗಳ ಮೂಲಕ ರಾಜಕೀಯ ಪಕ್ಷಗಳಿಗೆ ಕಾರ್ಪೊರೇಟ್ ದೇಣಿಗೆಗಳು ಮೂರು ಪಟ್ಟು ಹೆಚ್ಚಾಗಿದ್ದು, 3,811 ಕೋಟಿ ರೂ.ಗಳಿಗೆ ತಲುಪಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಭಾರತದ ಚುನಾವಣಾ ಆಯೋಗಕ್ಕೆ (ಇಸಿಐ) ಸಲ್ಲಿಸಿದ ದೇಣಿಗೆ ವರದಿಗಳ ಪ್ರಕಾರ, ಒಂಬತ್ತು ಚುನಾವಣಾ ಟ್ರಸ್ಟ್‌ಗಳು ರಾಜಕೀಯ ಪಕ್ಷಗಳಿಗೆ ಒಟ್ಟು 3,811.37 ಕೋಟಿ ರೂ.ಗಳನ್ನು ದೇಣಿಗೆ ನೀಡಿವೆ. ಅದರಲ್ಲಿ, ಕೇಂದ್ರ ಸರ್ಕಾರವನ್ನು ಮುನ್ನಡೆಸುವ ಭಾರತೀಯ ಜನತಾ ಪಕ್ಷ (ಬಿಜೆಪಿ) 3,112.50 ಕೋಟಿ ರೂ.ಗಳನ್ನು ಪಡೆದುಕೊಂಡಿದೆ. ಇದು ಒಟ್ಟು ನಿಧಿಯ ಸುಮಾರು ಶೇಕಡ 82 ಆಗಿದೆ.

ಕಾಂಗ್ರೆಸ್ ಪಕ್ಷವು ಸರಿಸುಮಾರು 298.77 ಕೋಟಿ ರೂ.ಗಳನ್ನು ಪಡೆದಿದ್ದು, ಇದು ಒಟ್ಟು ದೇಣಿಗೆಯ ಶೇಕಡ 8ರಷ್ಟಿದೆ. ಇತರ ಪಕ್ಷಗಳು ಒಟ್ಟಾರೆಯಾಗಿ ಸುಮಾರು 400 ಕೋಟಿ ರೂ.ಗಳನ್ನು ಪಡೆದಿವೆ.

ಸುಪ್ರೀಂ ಕೋರ್ಟ್ ಅನಾಮಧೇಯ ಚುನಾವಣಾ ಬಾಂಡ್ ಯೋಜನೆಯನ್ನು ಅಸಾಂವಿಧಾನಿಕ ಎಂದು ಘೋಷಿಸಿದ ನಂತರ, ಟ್ರಸ್ಟ್ ಆಧಾರಿತ ನಿಧಿಯಲ್ಲಿನ ಈ ಹೆಚ್ಚಳವು ಗಮನಾರ್ಹ ಬದಲಾವಣೆಯನ್ನು ಸೂಚಿಸುತ್ತದೆ. ಹಿಂದಿನ ಹಣಕಾಸು ವರ್ಷದಲ್ಲಿ (2023-24), ಟ್ರಸ್ಟ್‌ಗಳ ಒಟ್ಟು ಕೊಡುಗೆಗಳು 1,218 ಕೋಟಿ ರೂ.ಗಳಷ್ಟಿತ್ತು.

ಪ್ರಮುಖ ದಾನಿಗಳು ಯಾರು?

ಪ್ರುಡೆಂಟ್ ಎಲೆಕ್ಟೋರಲ್ ಟ್ರಸ್ಟ್ ಅತಿ ದೊಡ್ಡ ದಾನಿಯಾಗಿ ಹೊರಹೊಮ್ಮಿದ್ದು, ಒಟ್ಟು 2,668.46 ಕೋಟಿ ರೂ.ಗಳನ್ನು ರಾಜಕೀಯ ಪಕ್ಷಗಳಿಗೆ ವಿತರಿಸಿದೆ. ಅದರಲ್ಲಿ 2,180.71 ಕೋಟಿ ರೂ.ಗಳು ಬಿಜೆಪಿಗೆ ಹೋಗಿವೆ.

ಭಾರ್ತಿ ಏರ್‌ಟೆಲ್‌ನ ಮಾತೃ ಕಂಪನಿಯಾದ ಭಾರ್ತಿ ಎಂಟರ್‌ಪ್ರೈಸಸ್ ಬೆಂಬಲಿತ ಈ ಟ್ರಸ್ಟ್, ಜಿಂದಾಲ್ ಸ್ಟೀಲ್ ಮತ್ತು ಪವರ್, ಮೇಘಾ ಎಂಜಿನಿಯರಿಂಗ್ ಮತ್ತು ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್, ಭಾರ್ತಿ ಏರ್‌ಟೆಲ್, ಅರಬಿಂದೋ ಫಾರ್ಮಾ ಮತ್ತು ಟೊರೆಂಟ್ ಫಾರ್ಮಾಸ್ಯುಟಿಕಲ್ಸ್ ಸೇರಿದಂತೆ ಪ್ರಮುಖ ಕಾರ್ಪೊರೇಟ್‌ಗಳಿಂದ ಹಣವನ್ನು ಪಡೆದುಕೊಂಡಿದೆ.

ಟಾಟಾ ಸನ್ಸ್, ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್), ಮತ್ತು ಟಾಟಾ ಸ್ಟೀಲ್ ಸೇರಿದಂತೆ ಟಾಟಾ ಗ್ರೂಪ್ ಕಂಪನಿಗಳಿಂದ ನಿಧಿಯನ್ನು ಸಂಗ್ರಹಿಸಿದ ಪ್ರೋಗ್ರೆಸ್ಸಿವ್ ಎಲೆಕ್ಟೋರಲ್ ಟ್ರಸ್ಟ್, 914.97 ಕೋಟಿ ರೂ.ಗಳನ್ನು ದೇಣಿಗೆ ನೀಡುವ ಮೂಲಕ ಮತ್ತೊಂದು ಪ್ರಮುಖ ದಾನಿಯಾಗಿದೆ ಗುರುತಿಸಿಕೊಂಡಿದೆ. ಈ ಮೊತ್ತದ ಸರಿಸುಮಾರು 81 ಶೇಕಡ ಬಿಜೆಪಿಗೆ ಹೋಗಿದೆ.

ಇತರ ಗಮನಾರ್ಹ ಕೊಡುಗೆಗಳು

ಮಹೀಂದ್ರಾ ಗ್ರೂಪ್ (ಮಹೀಂದ್ರಾ & ಮಹೀಂದ್ರಾ, ಟೆಕ್ ಮಹೀಂದ್ರಾ) ನಿಂದ ನಿಧಿಯನ್ನು ಪಡೆದ ನ್ಯೂ ಡೆಮಾಕ್ರಟಿಕ್ ಎಲೆಕ್ಟೋರಲ್ ಟ್ರಸ್ಟ್, ಒಟ್ಟು 160 ಕೋಟಿ ರೂಪಾಯಿಗಳನ್ನು ರಾಜಕೀಯ ಪಕ್ಷಗಳಿಗೆ ನೀಡಿದೆ. ಇದರಲ್ಲಿ 150 ಕೋಟಿ ರೂಪಾಯಿ ಬಿಜೆಪಿಗೆ ಹೋಗಿದೆ.

ಸಿಜಿ ಪವರ್ ಮತ್ತು ಇಂಡಸ್ಟ್ರಿಯಲ್ ಸೊಲ್ಯೂಷನ್ಸ್ ಲಿಮಿಟೆಡ್ ಅನ್ನು ಅತಿದೊಡ್ಡ ಕೊಡುಗೆದಾರನನ್ನಾಗಿ ಹೊಂದಿರುವ ಟ್ರಯಂಫ್ ಎಲೆಕ್ಟೋರಲ್ ಟ್ರಸ್ಟ್, ಒಟ್ಟು 25 ಕೋಟಿ ರೂ.ಗಳನ್ನು ನೀಡಿದ್ದು, ಇದರಲ್ಲಿ 21 ಕೋಟಿ ರೂ. ಬಿಜೆಪಿಗೆ ದೊರೆತಿದೆ.

ಶಿವಸೇನೆ (ಯುಬಿಟಿ) ಗೆ ದೇಣಿಗೆ ನೀಡಿದ ಏಕೈಕ ಸಂಸ್ಥೆ ಜನಪ್ರಗತಿ ಎಲೆಕ್ಟೋರಲ್ ಟ್ರಸ್ಟ್, ಕೆಇಸಿ ಇಂಟರ್ನ್ಯಾಷನಲ್ ಲಿಮಿಟೆಡ್‌ನಿಂದ ಹೆಚ್ಚು ನಿಧಿ ಪಡೆದ ಈ ಸಂಸ್ಥೆ, 1 ಕೋಟಿ ರೂಪಾಯಿಯನ್ನು ಕೊಡುಗೆಯಾಗಿ ನೀಡಿದೆ.

ಜನಕಲ್ಯಾಣ್ ಎಲೆಕ್ಟೋರಲ್ ಟ್ರಸ್ಟ್ ತನ್ನ ಒಟ್ಟು ದೇಣಿಗೆಯಾದ 19 ಲಕ್ಷ ರೂ.ಗಳನ್ನು ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಸಮಾನವಾಗಿ ಹಂಚಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...