Homeಮುಖಪುಟಚುನಾವಣಾ ಟ್ರಸ್ಟ್‌ಗಳ ಮೂಲಕ ದೇಣಿಗೆ : ಶೇ.82ರಷ್ಟು ಪಾಲು ಪಡೆದ ಬಿಜೆಪಿ

ಚುನಾವಣಾ ಟ್ರಸ್ಟ್‌ಗಳ ಮೂಲಕ ದೇಣಿಗೆ : ಶೇ.82ರಷ್ಟು ಪಾಲು ಪಡೆದ ಬಿಜೆಪಿ

ಚುನಾವಣಾ ಬಾಂಡ್‌ ರದ್ದತಿ ಬಳಿಕ ಮೂರು ಪಟ್ಟು ಹೆಚ್ಚಾದ ಕಾರ್ಪೋರೇಟ್ ದೇಣಿಗೆ

- Advertisement -
- Advertisement -

ಸುಪ್ರೀಂ ಕೋರ್ಟ್ ವಿವಾದಾತ್ಮಕ ಚುನಾವಣಾ ಬಾಂಡ್‌ಗಳನ್ನು ರದ್ದುಗೊಳಿಸಿದ ನಂತರ 2024-25ರಲ್ಲಿ ಚುನಾವಣಾ ಟ್ರಸ್ಟ್‌ಗಳ ಮೂಲಕ ರಾಜಕೀಯ ಪಕ್ಷಗಳಿಗೆ ಕಾರ್ಪೊರೇಟ್ ದೇಣಿಗೆಗಳು ಮೂರು ಪಟ್ಟು ಹೆಚ್ಚಾಗಿದ್ದು, 3,811 ಕೋಟಿ ರೂ.ಗಳಿಗೆ ತಲುಪಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಭಾರತದ ಚುನಾವಣಾ ಆಯೋಗಕ್ಕೆ (ಇಸಿಐ) ಸಲ್ಲಿಸಿದ ದೇಣಿಗೆ ವರದಿಗಳ ಪ್ರಕಾರ, ಒಂಬತ್ತು ಚುನಾವಣಾ ಟ್ರಸ್ಟ್‌ಗಳು ರಾಜಕೀಯ ಪಕ್ಷಗಳಿಗೆ ಒಟ್ಟು 3,811.37 ಕೋಟಿ ರೂ.ಗಳನ್ನು ದೇಣಿಗೆ ನೀಡಿವೆ. ಅದರಲ್ಲಿ, ಕೇಂದ್ರ ಸರ್ಕಾರವನ್ನು ಮುನ್ನಡೆಸುವ ಭಾರತೀಯ ಜನತಾ ಪಕ್ಷ (ಬಿಜೆಪಿ) 3,112.50 ಕೋಟಿ ರೂ.ಗಳನ್ನು ಪಡೆದುಕೊಂಡಿದೆ. ಇದು ಒಟ್ಟು ನಿಧಿಯ ಸುಮಾರು ಶೇಕಡ 82 ಆಗಿದೆ.

ಕಾಂಗ್ರೆಸ್ ಪಕ್ಷವು ಸರಿಸುಮಾರು 298.77 ಕೋಟಿ ರೂ.ಗಳನ್ನು ಪಡೆದಿದ್ದು, ಇದು ಒಟ್ಟು ದೇಣಿಗೆಯ ಶೇಕಡ 8ರಷ್ಟಿದೆ. ಇತರ ಪಕ್ಷಗಳು ಒಟ್ಟಾರೆಯಾಗಿ ಸುಮಾರು 400 ಕೋಟಿ ರೂ.ಗಳನ್ನು ಪಡೆದಿವೆ.

ಸುಪ್ರೀಂ ಕೋರ್ಟ್ ಅನಾಮಧೇಯ ಚುನಾವಣಾ ಬಾಂಡ್ ಯೋಜನೆಯನ್ನು ಅಸಾಂವಿಧಾನಿಕ ಎಂದು ಘೋಷಿಸಿದ ನಂತರ, ಟ್ರಸ್ಟ್ ಆಧಾರಿತ ನಿಧಿಯಲ್ಲಿನ ಈ ಹೆಚ್ಚಳವು ಗಮನಾರ್ಹ ಬದಲಾವಣೆಯನ್ನು ಸೂಚಿಸುತ್ತದೆ. ಹಿಂದಿನ ಹಣಕಾಸು ವರ್ಷದಲ್ಲಿ (2023-24), ಟ್ರಸ್ಟ್‌ಗಳ ಒಟ್ಟು ಕೊಡುಗೆಗಳು 1,218 ಕೋಟಿ ರೂ.ಗಳಷ್ಟಿತ್ತು.

ಪ್ರಮುಖ ದಾನಿಗಳು ಯಾರು?

ಪ್ರುಡೆಂಟ್ ಎಲೆಕ್ಟೋರಲ್ ಟ್ರಸ್ಟ್ ಅತಿ ದೊಡ್ಡ ದಾನಿಯಾಗಿ ಹೊರಹೊಮ್ಮಿದ್ದು, ಒಟ್ಟು 2,668.46 ಕೋಟಿ ರೂ.ಗಳನ್ನು ರಾಜಕೀಯ ಪಕ್ಷಗಳಿಗೆ ವಿತರಿಸಿದೆ. ಅದರಲ್ಲಿ 2,180.71 ಕೋಟಿ ರೂ.ಗಳು ಬಿಜೆಪಿಗೆ ಹೋಗಿವೆ.

ಭಾರ್ತಿ ಏರ್‌ಟೆಲ್‌ನ ಮಾತೃ ಕಂಪನಿಯಾದ ಭಾರ್ತಿ ಎಂಟರ್‌ಪ್ರೈಸಸ್ ಬೆಂಬಲಿತ ಈ ಟ್ರಸ್ಟ್, ಜಿಂದಾಲ್ ಸ್ಟೀಲ್ ಮತ್ತು ಪವರ್, ಮೇಘಾ ಎಂಜಿನಿಯರಿಂಗ್ ಮತ್ತು ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್, ಭಾರ್ತಿ ಏರ್‌ಟೆಲ್, ಅರಬಿಂದೋ ಫಾರ್ಮಾ ಮತ್ತು ಟೊರೆಂಟ್ ಫಾರ್ಮಾಸ್ಯುಟಿಕಲ್ಸ್ ಸೇರಿದಂತೆ ಪ್ರಮುಖ ಕಾರ್ಪೊರೇಟ್‌ಗಳಿಂದ ಹಣವನ್ನು ಪಡೆದುಕೊಂಡಿದೆ.

ಟಾಟಾ ಸನ್ಸ್, ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್), ಮತ್ತು ಟಾಟಾ ಸ್ಟೀಲ್ ಸೇರಿದಂತೆ ಟಾಟಾ ಗ್ರೂಪ್ ಕಂಪನಿಗಳಿಂದ ನಿಧಿಯನ್ನು ಸಂಗ್ರಹಿಸಿದ ಪ್ರೋಗ್ರೆಸ್ಸಿವ್ ಎಲೆಕ್ಟೋರಲ್ ಟ್ರಸ್ಟ್, 914.97 ಕೋಟಿ ರೂ.ಗಳನ್ನು ದೇಣಿಗೆ ನೀಡುವ ಮೂಲಕ ಮತ್ತೊಂದು ಪ್ರಮುಖ ದಾನಿಯಾಗಿದೆ ಗುರುತಿಸಿಕೊಂಡಿದೆ. ಈ ಮೊತ್ತದ ಸರಿಸುಮಾರು 81 ಶೇಕಡ ಬಿಜೆಪಿಗೆ ಹೋಗಿದೆ.

ಇತರ ಗಮನಾರ್ಹ ಕೊಡುಗೆಗಳು

ಮಹೀಂದ್ರಾ ಗ್ರೂಪ್ (ಮಹೀಂದ್ರಾ & ಮಹೀಂದ್ರಾ, ಟೆಕ್ ಮಹೀಂದ್ರಾ) ನಿಂದ ನಿಧಿಯನ್ನು ಪಡೆದ ನ್ಯೂ ಡೆಮಾಕ್ರಟಿಕ್ ಎಲೆಕ್ಟೋರಲ್ ಟ್ರಸ್ಟ್, ಒಟ್ಟು 160 ಕೋಟಿ ರೂಪಾಯಿಗಳನ್ನು ರಾಜಕೀಯ ಪಕ್ಷಗಳಿಗೆ ನೀಡಿದೆ. ಇದರಲ್ಲಿ 150 ಕೋಟಿ ರೂಪಾಯಿ ಬಿಜೆಪಿಗೆ ಹೋಗಿದೆ.

ಸಿಜಿ ಪವರ್ ಮತ್ತು ಇಂಡಸ್ಟ್ರಿಯಲ್ ಸೊಲ್ಯೂಷನ್ಸ್ ಲಿಮಿಟೆಡ್ ಅನ್ನು ಅತಿದೊಡ್ಡ ಕೊಡುಗೆದಾರನನ್ನಾಗಿ ಹೊಂದಿರುವ ಟ್ರಯಂಫ್ ಎಲೆಕ್ಟೋರಲ್ ಟ್ರಸ್ಟ್, ಒಟ್ಟು 25 ಕೋಟಿ ರೂ.ಗಳನ್ನು ನೀಡಿದ್ದು, ಇದರಲ್ಲಿ 21 ಕೋಟಿ ರೂ. ಬಿಜೆಪಿಗೆ ದೊರೆತಿದೆ.

ಶಿವಸೇನೆ (ಯುಬಿಟಿ) ಗೆ ದೇಣಿಗೆ ನೀಡಿದ ಏಕೈಕ ಸಂಸ್ಥೆ ಜನಪ್ರಗತಿ ಎಲೆಕ್ಟೋರಲ್ ಟ್ರಸ್ಟ್, ಕೆಇಸಿ ಇಂಟರ್ನ್ಯಾಷನಲ್ ಲಿಮಿಟೆಡ್‌ನಿಂದ ಹೆಚ್ಚು ನಿಧಿ ಪಡೆದ ಈ ಸಂಸ್ಥೆ, 1 ಕೋಟಿ ರೂಪಾಯಿಯನ್ನು ಕೊಡುಗೆಯಾಗಿ ನೀಡಿದೆ.

ಜನಕಲ್ಯಾಣ್ ಎಲೆಕ್ಟೋರಲ್ ಟ್ರಸ್ಟ್ ತನ್ನ ಒಟ್ಟು ದೇಣಿಗೆಯಾದ 19 ಲಕ್ಷ ರೂ.ಗಳನ್ನು ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಸಮಾನವಾಗಿ ಹಂಚಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...