Homeಮುಖಪುಟಚುನಾವಣಾ ಟ್ರಸ್ಟ್‌ಗಳ ಮೂಲಕ ದೇಣಿಗೆ : ಶೇ.82ರಷ್ಟು ಪಾಲು ಪಡೆದ ಬಿಜೆಪಿ

ಚುನಾವಣಾ ಟ್ರಸ್ಟ್‌ಗಳ ಮೂಲಕ ದೇಣಿಗೆ : ಶೇ.82ರಷ್ಟು ಪಾಲು ಪಡೆದ ಬಿಜೆಪಿ

ಚುನಾವಣಾ ಬಾಂಡ್‌ ರದ್ದತಿ ಬಳಿಕ ಮೂರು ಪಟ್ಟು ಹೆಚ್ಚಾದ ಕಾರ್ಪೋರೇಟ್ ದೇಣಿಗೆ

- Advertisement -
- Advertisement -

ಸುಪ್ರೀಂ ಕೋರ್ಟ್ ವಿವಾದಾತ್ಮಕ ಚುನಾವಣಾ ಬಾಂಡ್‌ಗಳನ್ನು ರದ್ದುಗೊಳಿಸಿದ ನಂತರ 2024-25ರಲ್ಲಿ ಚುನಾವಣಾ ಟ್ರಸ್ಟ್‌ಗಳ ಮೂಲಕ ರಾಜಕೀಯ ಪಕ್ಷಗಳಿಗೆ ಕಾರ್ಪೊರೇಟ್ ದೇಣಿಗೆಗಳು ಮೂರು ಪಟ್ಟು ಹೆಚ್ಚಾಗಿದ್ದು, 3,811 ಕೋಟಿ ರೂ.ಗಳಿಗೆ ತಲುಪಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಭಾರತದ ಚುನಾವಣಾ ಆಯೋಗಕ್ಕೆ (ಇಸಿಐ) ಸಲ್ಲಿಸಿದ ದೇಣಿಗೆ ವರದಿಗಳ ಪ್ರಕಾರ, ಒಂಬತ್ತು ಚುನಾವಣಾ ಟ್ರಸ್ಟ್‌ಗಳು ರಾಜಕೀಯ ಪಕ್ಷಗಳಿಗೆ ಒಟ್ಟು 3,811.37 ಕೋಟಿ ರೂ.ಗಳನ್ನು ದೇಣಿಗೆ ನೀಡಿವೆ. ಅದರಲ್ಲಿ, ಕೇಂದ್ರ ಸರ್ಕಾರವನ್ನು ಮುನ್ನಡೆಸುವ ಭಾರತೀಯ ಜನತಾ ಪಕ್ಷ (ಬಿಜೆಪಿ) 3,112.50 ಕೋಟಿ ರೂ.ಗಳನ್ನು ಪಡೆದುಕೊಂಡಿದೆ. ಇದು ಒಟ್ಟು ನಿಧಿಯ ಸುಮಾರು ಶೇಕಡ 82 ಆಗಿದೆ.

ಕಾಂಗ್ರೆಸ್ ಪಕ್ಷವು ಸರಿಸುಮಾರು 298.77 ಕೋಟಿ ರೂ.ಗಳನ್ನು ಪಡೆದಿದ್ದು, ಇದು ಒಟ್ಟು ದೇಣಿಗೆಯ ಶೇಕಡ 8ರಷ್ಟಿದೆ. ಇತರ ಪಕ್ಷಗಳು ಒಟ್ಟಾರೆಯಾಗಿ ಸುಮಾರು 400 ಕೋಟಿ ರೂ.ಗಳನ್ನು ಪಡೆದಿವೆ.

ಸುಪ್ರೀಂ ಕೋರ್ಟ್ ಅನಾಮಧೇಯ ಚುನಾವಣಾ ಬಾಂಡ್ ಯೋಜನೆಯನ್ನು ಅಸಾಂವಿಧಾನಿಕ ಎಂದು ಘೋಷಿಸಿದ ನಂತರ, ಟ್ರಸ್ಟ್ ಆಧಾರಿತ ನಿಧಿಯಲ್ಲಿನ ಈ ಹೆಚ್ಚಳವು ಗಮನಾರ್ಹ ಬದಲಾವಣೆಯನ್ನು ಸೂಚಿಸುತ್ತದೆ. ಹಿಂದಿನ ಹಣಕಾಸು ವರ್ಷದಲ್ಲಿ (2023-24), ಟ್ರಸ್ಟ್‌ಗಳ ಒಟ್ಟು ಕೊಡುಗೆಗಳು 1,218 ಕೋಟಿ ರೂ.ಗಳಷ್ಟಿತ್ತು.

ಪ್ರಮುಖ ದಾನಿಗಳು ಯಾರು?

ಪ್ರುಡೆಂಟ್ ಎಲೆಕ್ಟೋರಲ್ ಟ್ರಸ್ಟ್ ಅತಿ ದೊಡ್ಡ ದಾನಿಯಾಗಿ ಹೊರಹೊಮ್ಮಿದ್ದು, ಒಟ್ಟು 2,668.46 ಕೋಟಿ ರೂ.ಗಳನ್ನು ರಾಜಕೀಯ ಪಕ್ಷಗಳಿಗೆ ವಿತರಿಸಿದೆ. ಅದರಲ್ಲಿ 2,180.71 ಕೋಟಿ ರೂ.ಗಳು ಬಿಜೆಪಿಗೆ ಹೋಗಿವೆ.

ಭಾರ್ತಿ ಏರ್‌ಟೆಲ್‌ನ ಮಾತೃ ಕಂಪನಿಯಾದ ಭಾರ್ತಿ ಎಂಟರ್‌ಪ್ರೈಸಸ್ ಬೆಂಬಲಿತ ಈ ಟ್ರಸ್ಟ್, ಜಿಂದಾಲ್ ಸ್ಟೀಲ್ ಮತ್ತು ಪವರ್, ಮೇಘಾ ಎಂಜಿನಿಯರಿಂಗ್ ಮತ್ತು ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್, ಭಾರ್ತಿ ಏರ್‌ಟೆಲ್, ಅರಬಿಂದೋ ಫಾರ್ಮಾ ಮತ್ತು ಟೊರೆಂಟ್ ಫಾರ್ಮಾಸ್ಯುಟಿಕಲ್ಸ್ ಸೇರಿದಂತೆ ಪ್ರಮುಖ ಕಾರ್ಪೊರೇಟ್‌ಗಳಿಂದ ಹಣವನ್ನು ಪಡೆದುಕೊಂಡಿದೆ.

ಟಾಟಾ ಸನ್ಸ್, ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್), ಮತ್ತು ಟಾಟಾ ಸ್ಟೀಲ್ ಸೇರಿದಂತೆ ಟಾಟಾ ಗ್ರೂಪ್ ಕಂಪನಿಗಳಿಂದ ನಿಧಿಯನ್ನು ಸಂಗ್ರಹಿಸಿದ ಪ್ರೋಗ್ರೆಸ್ಸಿವ್ ಎಲೆಕ್ಟೋರಲ್ ಟ್ರಸ್ಟ್, 914.97 ಕೋಟಿ ರೂ.ಗಳನ್ನು ದೇಣಿಗೆ ನೀಡುವ ಮೂಲಕ ಮತ್ತೊಂದು ಪ್ರಮುಖ ದಾನಿಯಾಗಿದೆ ಗುರುತಿಸಿಕೊಂಡಿದೆ. ಈ ಮೊತ್ತದ ಸರಿಸುಮಾರು 81 ಶೇಕಡ ಬಿಜೆಪಿಗೆ ಹೋಗಿದೆ.

ಇತರ ಗಮನಾರ್ಹ ಕೊಡುಗೆಗಳು

ಮಹೀಂದ್ರಾ ಗ್ರೂಪ್ (ಮಹೀಂದ್ರಾ & ಮಹೀಂದ್ರಾ, ಟೆಕ್ ಮಹೀಂದ್ರಾ) ನಿಂದ ನಿಧಿಯನ್ನು ಪಡೆದ ನ್ಯೂ ಡೆಮಾಕ್ರಟಿಕ್ ಎಲೆಕ್ಟೋರಲ್ ಟ್ರಸ್ಟ್, ಒಟ್ಟು 160 ಕೋಟಿ ರೂಪಾಯಿಗಳನ್ನು ರಾಜಕೀಯ ಪಕ್ಷಗಳಿಗೆ ನೀಡಿದೆ. ಇದರಲ್ಲಿ 150 ಕೋಟಿ ರೂಪಾಯಿ ಬಿಜೆಪಿಗೆ ಹೋಗಿದೆ.

ಸಿಜಿ ಪವರ್ ಮತ್ತು ಇಂಡಸ್ಟ್ರಿಯಲ್ ಸೊಲ್ಯೂಷನ್ಸ್ ಲಿಮಿಟೆಡ್ ಅನ್ನು ಅತಿದೊಡ್ಡ ಕೊಡುಗೆದಾರನನ್ನಾಗಿ ಹೊಂದಿರುವ ಟ್ರಯಂಫ್ ಎಲೆಕ್ಟೋರಲ್ ಟ್ರಸ್ಟ್, ಒಟ್ಟು 25 ಕೋಟಿ ರೂ.ಗಳನ್ನು ನೀಡಿದ್ದು, ಇದರಲ್ಲಿ 21 ಕೋಟಿ ರೂ. ಬಿಜೆಪಿಗೆ ದೊರೆತಿದೆ.

ಶಿವಸೇನೆ (ಯುಬಿಟಿ) ಗೆ ದೇಣಿಗೆ ನೀಡಿದ ಏಕೈಕ ಸಂಸ್ಥೆ ಜನಪ್ರಗತಿ ಎಲೆಕ್ಟೋರಲ್ ಟ್ರಸ್ಟ್, ಕೆಇಸಿ ಇಂಟರ್ನ್ಯಾಷನಲ್ ಲಿಮಿಟೆಡ್‌ನಿಂದ ಹೆಚ್ಚು ನಿಧಿ ಪಡೆದ ಈ ಸಂಸ್ಥೆ, 1 ಕೋಟಿ ರೂಪಾಯಿಯನ್ನು ಕೊಡುಗೆಯಾಗಿ ನೀಡಿದೆ.

ಜನಕಲ್ಯಾಣ್ ಎಲೆಕ್ಟೋರಲ್ ಟ್ರಸ್ಟ್ ತನ್ನ ಒಟ್ಟು ದೇಣಿಗೆಯಾದ 19 ಲಕ್ಷ ರೂ.ಗಳನ್ನು ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಸಮಾನವಾಗಿ ಹಂಚಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...