Homeಮುಖಪುಟಚುನಾವಣಾ ಟ್ರಸ್ಟ್‌ಗಳ ಮೂಲಕ ದೇಣಿಗೆ : ಶೇ.82ರಷ್ಟು ಪಾಲು ಪಡೆದ ಬಿಜೆಪಿ

ಚುನಾವಣಾ ಟ್ರಸ್ಟ್‌ಗಳ ಮೂಲಕ ದೇಣಿಗೆ : ಶೇ.82ರಷ್ಟು ಪಾಲು ಪಡೆದ ಬಿಜೆಪಿ

ಚುನಾವಣಾ ಬಾಂಡ್‌ ರದ್ದತಿ ಬಳಿಕ ಮೂರು ಪಟ್ಟು ಹೆಚ್ಚಾದ ಕಾರ್ಪೋರೇಟ್ ದೇಣಿಗೆ

- Advertisement -
- Advertisement -

ಸುಪ್ರೀಂ ಕೋರ್ಟ್ ವಿವಾದಾತ್ಮಕ ಚುನಾವಣಾ ಬಾಂಡ್‌ಗಳನ್ನು ರದ್ದುಗೊಳಿಸಿದ ನಂತರ 2024-25ರಲ್ಲಿ ಚುನಾವಣಾ ಟ್ರಸ್ಟ್‌ಗಳ ಮೂಲಕ ರಾಜಕೀಯ ಪಕ್ಷಗಳಿಗೆ ಕಾರ್ಪೊರೇಟ್ ದೇಣಿಗೆಗಳು ಮೂರು ಪಟ್ಟು ಹೆಚ್ಚಾಗಿದ್ದು, 3,811 ಕೋಟಿ ರೂ.ಗಳಿಗೆ ತಲುಪಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಭಾರತದ ಚುನಾವಣಾ ಆಯೋಗಕ್ಕೆ (ಇಸಿಐ) ಸಲ್ಲಿಸಿದ ದೇಣಿಗೆ ವರದಿಗಳ ಪ್ರಕಾರ, ಒಂಬತ್ತು ಚುನಾವಣಾ ಟ್ರಸ್ಟ್‌ಗಳು ರಾಜಕೀಯ ಪಕ್ಷಗಳಿಗೆ ಒಟ್ಟು 3,811.37 ಕೋಟಿ ರೂ.ಗಳನ್ನು ದೇಣಿಗೆ ನೀಡಿವೆ. ಅದರಲ್ಲಿ, ಕೇಂದ್ರ ಸರ್ಕಾರವನ್ನು ಮುನ್ನಡೆಸುವ ಭಾರತೀಯ ಜನತಾ ಪಕ್ಷ (ಬಿಜೆಪಿ) 3,112.50 ಕೋಟಿ ರೂ.ಗಳನ್ನು ಪಡೆದುಕೊಂಡಿದೆ. ಇದು ಒಟ್ಟು ನಿಧಿಯ ಸುಮಾರು ಶೇಕಡ 82 ಆಗಿದೆ.

ಕಾಂಗ್ರೆಸ್ ಪಕ್ಷವು ಸರಿಸುಮಾರು 298.77 ಕೋಟಿ ರೂ.ಗಳನ್ನು ಪಡೆದಿದ್ದು, ಇದು ಒಟ್ಟು ದೇಣಿಗೆಯ ಶೇಕಡ 8ರಷ್ಟಿದೆ. ಇತರ ಪಕ್ಷಗಳು ಒಟ್ಟಾರೆಯಾಗಿ ಸುಮಾರು 400 ಕೋಟಿ ರೂ.ಗಳನ್ನು ಪಡೆದಿವೆ.

ಸುಪ್ರೀಂ ಕೋರ್ಟ್ ಅನಾಮಧೇಯ ಚುನಾವಣಾ ಬಾಂಡ್ ಯೋಜನೆಯನ್ನು ಅಸಾಂವಿಧಾನಿಕ ಎಂದು ಘೋಷಿಸಿದ ನಂತರ, ಟ್ರಸ್ಟ್ ಆಧಾರಿತ ನಿಧಿಯಲ್ಲಿನ ಈ ಹೆಚ್ಚಳವು ಗಮನಾರ್ಹ ಬದಲಾವಣೆಯನ್ನು ಸೂಚಿಸುತ್ತದೆ. ಹಿಂದಿನ ಹಣಕಾಸು ವರ್ಷದಲ್ಲಿ (2023-24), ಟ್ರಸ್ಟ್‌ಗಳ ಒಟ್ಟು ಕೊಡುಗೆಗಳು 1,218 ಕೋಟಿ ರೂ.ಗಳಷ್ಟಿತ್ತು.

ಪ್ರಮುಖ ದಾನಿಗಳು ಯಾರು?

ಪ್ರುಡೆಂಟ್ ಎಲೆಕ್ಟೋರಲ್ ಟ್ರಸ್ಟ್ ಅತಿ ದೊಡ್ಡ ದಾನಿಯಾಗಿ ಹೊರಹೊಮ್ಮಿದ್ದು, ಒಟ್ಟು 2,668.46 ಕೋಟಿ ರೂ.ಗಳನ್ನು ರಾಜಕೀಯ ಪಕ್ಷಗಳಿಗೆ ವಿತರಿಸಿದೆ. ಅದರಲ್ಲಿ 2,180.71 ಕೋಟಿ ರೂ.ಗಳು ಬಿಜೆಪಿಗೆ ಹೋಗಿವೆ.

ಭಾರ್ತಿ ಏರ್‌ಟೆಲ್‌ನ ಮಾತೃ ಕಂಪನಿಯಾದ ಭಾರ್ತಿ ಎಂಟರ್‌ಪ್ರೈಸಸ್ ಬೆಂಬಲಿತ ಈ ಟ್ರಸ್ಟ್, ಜಿಂದಾಲ್ ಸ್ಟೀಲ್ ಮತ್ತು ಪವರ್, ಮೇಘಾ ಎಂಜಿನಿಯರಿಂಗ್ ಮತ್ತು ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್, ಭಾರ್ತಿ ಏರ್‌ಟೆಲ್, ಅರಬಿಂದೋ ಫಾರ್ಮಾ ಮತ್ತು ಟೊರೆಂಟ್ ಫಾರ್ಮಾಸ್ಯುಟಿಕಲ್ಸ್ ಸೇರಿದಂತೆ ಪ್ರಮುಖ ಕಾರ್ಪೊರೇಟ್‌ಗಳಿಂದ ಹಣವನ್ನು ಪಡೆದುಕೊಂಡಿದೆ.

ಟಾಟಾ ಸನ್ಸ್, ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್), ಮತ್ತು ಟಾಟಾ ಸ್ಟೀಲ್ ಸೇರಿದಂತೆ ಟಾಟಾ ಗ್ರೂಪ್ ಕಂಪನಿಗಳಿಂದ ನಿಧಿಯನ್ನು ಸಂಗ್ರಹಿಸಿದ ಪ್ರೋಗ್ರೆಸ್ಸಿವ್ ಎಲೆಕ್ಟೋರಲ್ ಟ್ರಸ್ಟ್, 914.97 ಕೋಟಿ ರೂ.ಗಳನ್ನು ದೇಣಿಗೆ ನೀಡುವ ಮೂಲಕ ಮತ್ತೊಂದು ಪ್ರಮುಖ ದಾನಿಯಾಗಿದೆ ಗುರುತಿಸಿಕೊಂಡಿದೆ. ಈ ಮೊತ್ತದ ಸರಿಸುಮಾರು 81 ಶೇಕಡ ಬಿಜೆಪಿಗೆ ಹೋಗಿದೆ.

ಇತರ ಗಮನಾರ್ಹ ಕೊಡುಗೆಗಳು

ಮಹೀಂದ್ರಾ ಗ್ರೂಪ್ (ಮಹೀಂದ್ರಾ & ಮಹೀಂದ್ರಾ, ಟೆಕ್ ಮಹೀಂದ್ರಾ) ನಿಂದ ನಿಧಿಯನ್ನು ಪಡೆದ ನ್ಯೂ ಡೆಮಾಕ್ರಟಿಕ್ ಎಲೆಕ್ಟೋರಲ್ ಟ್ರಸ್ಟ್, ಒಟ್ಟು 160 ಕೋಟಿ ರೂಪಾಯಿಗಳನ್ನು ರಾಜಕೀಯ ಪಕ್ಷಗಳಿಗೆ ನೀಡಿದೆ. ಇದರಲ್ಲಿ 150 ಕೋಟಿ ರೂಪಾಯಿ ಬಿಜೆಪಿಗೆ ಹೋಗಿದೆ.

ಸಿಜಿ ಪವರ್ ಮತ್ತು ಇಂಡಸ್ಟ್ರಿಯಲ್ ಸೊಲ್ಯೂಷನ್ಸ್ ಲಿಮಿಟೆಡ್ ಅನ್ನು ಅತಿದೊಡ್ಡ ಕೊಡುಗೆದಾರನನ್ನಾಗಿ ಹೊಂದಿರುವ ಟ್ರಯಂಫ್ ಎಲೆಕ್ಟೋರಲ್ ಟ್ರಸ್ಟ್, ಒಟ್ಟು 25 ಕೋಟಿ ರೂ.ಗಳನ್ನು ನೀಡಿದ್ದು, ಇದರಲ್ಲಿ 21 ಕೋಟಿ ರೂ. ಬಿಜೆಪಿಗೆ ದೊರೆತಿದೆ.

ಶಿವಸೇನೆ (ಯುಬಿಟಿ) ಗೆ ದೇಣಿಗೆ ನೀಡಿದ ಏಕೈಕ ಸಂಸ್ಥೆ ಜನಪ್ರಗತಿ ಎಲೆಕ್ಟೋರಲ್ ಟ್ರಸ್ಟ್, ಕೆಇಸಿ ಇಂಟರ್ನ್ಯಾಷನಲ್ ಲಿಮಿಟೆಡ್‌ನಿಂದ ಹೆಚ್ಚು ನಿಧಿ ಪಡೆದ ಈ ಸಂಸ್ಥೆ, 1 ಕೋಟಿ ರೂಪಾಯಿಯನ್ನು ಕೊಡುಗೆಯಾಗಿ ನೀಡಿದೆ.

ಜನಕಲ್ಯಾಣ್ ಎಲೆಕ್ಟೋರಲ್ ಟ್ರಸ್ಟ್ ತನ್ನ ಒಟ್ಟು ದೇಣಿಗೆಯಾದ 19 ಲಕ್ಷ ರೂ.ಗಳನ್ನು ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಸಮಾನವಾಗಿ ಹಂಚಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...