Homeಮುಖಪುಟಇಡಿ-ಐಟಿ ದಾಳಿ ನಂತರ ಬಿಜೆಪಿಗೆ ದೇಣಿಗೆ; ಸಮಗ್ರ ತನಿಖೆಗೆ ಕಾಂಗ್ರೆಸ್ ಆಗ್ರಹ

ಇಡಿ-ಐಟಿ ದಾಳಿ ನಂತರ ಬಿಜೆಪಿಗೆ ದೇಣಿಗೆ; ಸಮಗ್ರ ತನಿಖೆಗೆ ಕಾಂಗ್ರೆಸ್ ಆಗ್ರಹ

- Advertisement -
- Advertisement -

ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ವಿವಿಧ ಕೇಂದ್ರ ತನಿಖಾ ಸಂಸ್ಥೆಗಳ ದಾಳಿಗೆ ಒಳಗಾದ ಹಲವಾರು ಕಾರ್ಪೊರೇಟ್ ದಾನಿಗಳ ನಡುವಿನ ಕ್ವಿಡ್-ಪ್ರೊ-ಕೋ (ಯಾವುದನ್ನಾದರೂ ನೀಡಲಾಗಿದೆ ಅಥವಾ ಸ್ವೀಕರಿಸಲಾಗಿದೆ) ಆರೋಪಗಳ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಒತ್ತಾಯಿಸಿರುವ ಕಾಂಗ್ರೆಸ್, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಪತ್ರ ಬರೆದಿದ್ದಾರೆ.

ಜಾರಿ ನಿರ್ದೇಶನಾಲಯ (ಇಡಿ), ಆದಾಯ ತೆರಿಗೆ ಇಲಾಖೆ (ಐಟಿ) ನಂತಹ ಏಜೆನ್ಸಿಗಳಿಂದ ದಾಳಿಗೆ ಗುರಿಯಾದ ಕೆಲವೇ ದಿನಗಳಲ್ಲಿ, ಆ ಸಂಸ್ಥೆಗಳು ಬಿಜೆಪಿಗೆ ದೇಣಿಗೆ ನೀಡಿರುವ ಬಗ್ಗೆ ಸುದ್ದಿ ಸಂಸ್ಥೆಗಳಾದ ‘ನ್ಯೂಸ್‌ಲಾಂಡ್ರಿ’ ಮತ್ತು ‘ದಿ ನ್ಯೂಸ್ ಮಿನಿಟ್’ ಪ್ರಕಟಿಸಿದ ತನಿಖಾ ವರದಿಗಳ ಹಿನ್ನೆಲೆಯಲ್ಲಿ ಕಾಂಗ್ರೆಸ್ ಈ ಪತ್ರ ಬರೆದಿದೆ.

ವರದಿಯ ಪ್ರಕಾರ, 2018-19 ಮತ್ತು 2022-23 ರ ಹಣಕಾಸು ವರ್ಷಗಳ ನಡುವೆ ಕನಿಷ್ಠ 30 ಕಂಪನಿಗಳು ಬಿಜೆಪಿಗೆ ಸುಮಾರು ₹335 ಕೋಟಿ ದೇಣಿಗೆ ನೀಡಿವೆ. ಈ ಪೈಕಿ 23 ಸಂಸ್ಥೆಗಳು ತನಿಖಾ ಸಂಸ್ಥೆಗಳು ನಡೆಸಿದ ದಾಳಿಗೂ ಮುನ್ನ ಬಿಜೆಪಿಗೆ ದೇಣಿಗೆ ನೀಡಿರಲಿಲ್ಲ. ಏಜೆನ್ಸಿ ಕ್ರಮಗಳ ನಂತರ ಹಲವಾರು ಕಂಪನಿಗಳು ಬಿಜೆಪಿಗೆ ತಮ್ಮ ದೇಣಿಗೆಯನ್ನು ಹೆಚ್ಚಿಸಿವೆ ಎಂದು ವರದಿಯಾಗಿದೆ.

‘ಮೇಲಿನ ಉದಾಹರಣೆಗಳು ತನಿಖಾ ಸಂಸ್ಥೆಗಳ ಮೇಲೆ ಒತ್ತಡ ಹೇರುವ ಮೂಲಕ ಆಡಳಿತ ಪಕ್ಷಕ್ಕೆ ದೇಣಿಗೆ ರೂಪದಲ್ಲಿ ಕಾನೂನು ಸುಲಿಗೆಯ ಸ್ಪಷ್ಟ ದುರುಪಯೋಗ ಪ್ರಕರಣದಂತೆ ತೋರುತ್ತಿದೆ. ನಿಸ್ಸಂಶಯವಾಗಿ, ಸುಲಿಗೆ ಮಾಡುವಿಕೆಯ ಇಂತಹ ವಿಧಾನಗಳು ನಡೆದಿರುವ ಪ್ರಕರಣಗಳು ಮಾತ್ರವಲ್ಲ; ಇದು ಮಂಜುಗಡ್ಡೆಯ ತುದಿಯಂತೆ ಕಾಣುತ್ತದೆ’ ಎಂದು ವೇಣುಗೋಪಾಲ್ ಪತ್ರದಲ್ಲಿ ತಿಳಿಸಿದ್ದಾರೆ.

ಅವರು ಕೇಂದ್ರೀಯ ತನಿಖಾ ಸಂಸ್ಥೆಗಳ ಸ್ವಾಯತ್ತತೆ ಮತ್ತು ವೃತ್ತಿಪರತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದ್ದು, ವಿಶೇಷವಾಗಿ ಹಣಕಾಸು ಸಚಿವಾಲಯದ ವ್ಯಾಪ್ತಿಯಲ್ಲಿರುವವರು ಮತ್ತು ತನಿಖಾ ಸಂಸ್ಥೆಗಳ ದುರುಪಯೋಗದ ಮೂಲಕ ಕಾರ್ಪೊರೇಟ್ ದೇಣಿಗೆಗಳನ್ನು ಹೇಗೆ ಒತ್ತಾಯಿಸಲಾಯಿತು ಎಂಬ ವಿವರಗಳನ್ನು ಒಳಗೊಂಡಂತೆ ಬಿಜೆಪಿಯ ಹಣಕಾಸು ಕುರಿತು ‘ಶ್ವೇತಪತ್ರ’ಕ್ಕೆ ಒತ್ತಾಯಿಸಿದ್ದಾರೆ.

‘ದಾಖಲಾದ ಪ್ರಕರಣಗಳು ಅಥವಾ ತನಿಖಾ ಸಂಸ್ಥೆಗಳು ತೆಗೆದುಕೊಂಡ ಕ್ರಮಗಳು ಕಾನೂನುಬಾಹಿರವೆಂದು ನಾವು ಎಲ್ಲಿಯೂ ಆರೋಪಿಸುವುದಿಲ್ಲ. ಆದರೆ, ಇದು ತನಿಖೆಯನ್ನು ಸಮರ್ಥಿಸುತ್ತದೆ, ತಮ್ಮ ವಿರುದ್ಧ ಇಡಿ ಪ್ರಕರಣಗಳನ್ನು ಹೊಂದಿರುವ ಈ “ಸಂಶಯಾಸ್ಪದ” ಸಂಸ್ಥೆಗಳು ಆಡಳಿತ ಪಕ್ಷಕ್ಕೆ ಏಕೆ ದೇಣಿಗೆ ನೀಡುತ್ತಿವೆ?  ಅವರ ವಿರುದ್ಧ ಇಡಿ ತನಿಖೆಯ ಹೊರತಾಗಿಯೂ, ಇಡಿ ಕ್ರಮದ ನಂತರ ಅವರು ಬಿಜೆಪಿಗೆ ದೇಣಿಗೆ ನೀಡುತ್ತಿರುವುದು ಕೇವಲ ಕಾಕತಾಳೀಯವೇ’ ಎಂದು ವೇಣುಗೋಪಾಲ್ ಪ್ರಶ್ನಿಸಿದ್ದಾರೆ.

ವಿರೋಧ ಪಕ್ಷಗಳಿಗೆ ಕ್ಷುಲ್ಲಕ ಆದಾಯ ತೆರಿಗೆ ನೋಟಿಸ್‌ಗಳನ್ನು ನೀಡುವುದು ಮತ್ತು ಹಣವನ್ನು ಸುಲಿಗೆ ಮಾಡಲು ರಾಷ್ಟ್ರೀಕೃತ ಬ್ಯಾಂಕ್‌ಗಳ ಮೇಲೆ ಒತ್ತಡ ಹೇರುವುದು ಮುಂತಾದ ತಂತ್ರಗಳ ಮೂಲಕ ಸರ್ಕಾರವು ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತಿದೆ ಎಂದು ಕಾಂಗ್ರೆಸ್ ನಾಯಕ ಆರೋಪಿಸಿದರು.

‘ನಿಮ್ಮಲ್ಲಿ ಮುಚ್ಚಿಡಲು ಏನೂ ಇಲ್ಲದಿದ್ದರೆ, ಬಿಜೆಪಿಯ ಖಜಾನೆ ತುಂಬಲು ಕಾರಣವಾದ ಘಟನೆಗಳ ‘ಕಾಲಗಣನೆ’ಯ ಬಗ್ಗೆ ಪಾಯಿಂಟ್-ಬೈ-ಪಾಯಿಂಟ್ ಖಂಡನೆಯನ್ನು ಪ್ರಸ್ತುತಪಡಿಸಲು ನೀವು ಸಿದ್ಧರಿದ್ದೀರಾ?’ ಎಂದು ಅವರು ಸವಾಲು ಹಾಕಿದ್ದಾರೆ.

‘ನೀವು ವಾಸ್ತವಿಕ ವಿವರಣೆಯನ್ನು ನೀಡಲು ಸಿದ್ಧರಿಲ್ಲದಿದ್ದರೆ, ಬಿಜೆಪಿಗೆ ದೇಣಿಗೆ ಲೂಟಿ ಮಾಡುವ ಈ ಸಂಶಯಾಸ್ಪದ ವ್ಯವಹಾರಗಳ ಬಗ್ಗೆ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯ ತನಿಖೆಗೆ ನಿಮ್ಮನ್ನು ಹಾಜರುಪಡಿಸಲು ನೀವು ಸಿದ್ಧರಿದ್ದೀರಾ’ ಎಂದೂ ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ; Fact Check: ಪಾಕಿಸ್ತಾನಕ್ಕೆ 5 ಸಾವಿರ ಕೋಟಿ ಸಾಲ ನೀಡುವುದಾಗಿ ರಾಹುಲ್ ಗಾಂಧಿ ಹೇಳಿದ್ರಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...