Homeಚಳವಳಿಪ್ರೊ. ಆನಂದ್ ತೇಲ್ತುಂಬ್ಡೆ ಬಂಧನ ವಿರೋಧಿಸಿ ಟ್ವಿಟ್ಟರ್‌ ಅಭಿಯಾನ: #DoNotArrestAnand ಟಾಪ್ ಟ್ರೆಂಡಿಂಗ್

ಪ್ರೊ. ಆನಂದ್ ತೇಲ್ತುಂಬ್ಡೆ ಬಂಧನ ವಿರೋಧಿಸಿ ಟ್ವಿಟ್ಟರ್‌ ಅಭಿಯಾನ: #DoNotArrestAnand ಟಾಪ್ ಟ್ರೆಂಡಿಂಗ್

- Advertisement -
- Advertisement -

ಪ್ರಾಧ್ಯಾಪಕ ಹಾಗೂ ಸಾಮಾಜಿಕ ಹೋರಾಟಗಾರ ಡಾ. ಆನಂದ್ ತೇಲ್ತುಂಬ್ಡೆ ಅವರ ಬಂಧನವನ್ನು ವಿರೋಧಿಸಿ ಸಮಾನ ಮನಸ್ಕರು ನೀಡಿದ್ದ ಕರೆಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಈಗ ಟ್ವಿಟ್ಟರಿನಲ್ಲಿ ವಿವಿದ ಸಂದೇಶದೊಂದಿಗೆ ದೇಶದ ಹಲವಾರು ಗಣ್ಯರು #DoNotArrestAnand ಹ್ಯಾಸ್‌ಟ್ಯಾಗ್‌ನೊಂದಿಗೆ ಟ್ವೀಟ್ ಮಾಡಿದ್ದು, ಅದೀಗ ಟಾಪ್ ಟ್ರೆಂಡಿಗ್ ಆಗಿದೆ.

ನಿಷೇದಿತ ಮಾವೋವಾದಿ ಸಂಘಟನೆಗಳೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿ ’ಕಾನೂನುಬಾಹಿರ ಚಟುವಟಿಕೆಗಳ ನಿಗ್ರಹ ಕಾಯಿದೆ” (ಯುಎಪಿಎ) ಯಂತಹ ಕರಾಳ ಶಾಸನವನ್ನು ಬಳಸಿಕೊಂಡು ಅವರ ವಿರುದ್ದ ಪ್ರಕರಣವನ್ನು ದಾಖಲಿಸಲಾಗಿತ್ತು. 2018 ರಲ್ಲಿ ಭೀಮಾಕೊರೆಗಾವ್‌ನಲ್ಲಿ ದಲಿತ ಸಂಘಟನೆಗಳು ಹಮ್ಮಿಕೊಂಡಿದ್ದ ಆಚರಣೆಯ ಸಂದರ್ಭದಲ್ಲಿ ನಡೆದ ಹಿಂಸಾಚಾರ ನಡೆದಿತ್ತು. ಈ ಸಂಬಂಧ ಆನಂದ್‌ ತೆಲ್ತುಂಬ್ಡೆಯವರ ಮೇಲೆಯೂ ಸಹ ಪ್ರಕರಣ ದಾಖಲಾಗಿದ್ದು, ಇದು ಪ್ರಭುತ್ವ ಪ್ರಾಯೋಜಿತ ಪಿತೂರಿ ಎಂದು ಆನಂದ್‌ ತೆಲ್ತುಂಬ್ಡೆಯವರು ಆರೋಪಿಸಿದ್ದಾರೆ.

ಟ್ವಿಟ್ಟರಿನಲ್ಲಿ ಹಲವಾರು ಗಣ್ಯರು ಈ ಬಗ್ಗೆ ಬರೆದುಕೊಂಡಿದ್ದು, ಜೆಎನ್ಯೂ ಮಾಜಿ ನಾಯಕ ಉಮರ್ ಖಾಲಿದ್ “ಅವರು ತುಳಿತಕ್ಕೊಳಗಾದ ಜನರ ಹಿತದೃಷ್ಟಿಯಿಂದ ಬರೆಯುವುದನ್ನು ಆಯ್ಕೆ ಮಾಡಿಕೊಂಡರು. ದೇಶದ ಜನರನ್ನು ರಕ್ಷಿಸಲು ಇದನ್ನು ಮಾಡುತ್ತಿದ್ದಾರೆಂದು ನಂಬಿದ್ದರು. ಇದು ಅದಕ್ಕೆ ಪಡೆಯುವ ಪ್ರತಿಫಲವೇ?” ಎಂದು ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ.

ಊನಾ ಚಳವಳಿಯ ನೇತಾರ ಹಾಗೂ ಗುಜರಾತಿನ ಶಾಸಕ ಜಿಗ್ನೇಶ್ ಮೇವಾನಿ “ಡಾ. ತೇಲ್ತುಂಬ್ಡೆ ಆರೆಸ್ಸಸ್ಸನ್ನು ಮಾತ್ರ ಟೀಕಿಸಲಿಲ್ಲ, ತಪ್ಪು ಮಾಡಿದ ಅಂಬೇಡ್ಕರ್‌ವಾದಿಗಳನ್ನು ಮತ್ತು ಮಾರ್ಕ್ಸ್ವಾದಿಗಳನ್ನು ಕೂಡಾ ಅವರು ಟೀಕಿಸಿದರು. ಇದು ಅವರ ಸೈದ್ಧಾಂತಿಕ ಪ್ರಾಮಾಣಿಕತೆಯನ್ನು ತೋರಿಸುತ್ತದೆ! ಇಂತಹ ಪ್ರಾಮಾಣಿಕ ಚಿಂತಕನನ್ನು ಹೇಗೆ ಬಂಧಿಸಬಹುದು?” ಎಂದು ಟ್ವೀಟಿಸಿದ್ದಾರೆ.

ಮಹಿಳಾ ಹೊರಾಟಗಾರ್ತಿ ಹಾಗೂ ಸಾಮಾಜಿಕ ಕಾರ್ಯರ್ಕೆ ಕವಿತಾ ಕೃಷ್ಣನ್ ಅವರು, ರೋಮಿಳಾ ಥಾಪರ್ ಬರೆದಿರುವ “ವಿಶೇಷ ಅಮಾನವೀಯ” ಲೇಖನವನ್ನು ಟ್ಯಾಗ್‌ ಮಾಡಿ ಬಂಧನವನ್ನು ಖಂಡಿಸಿದ್ದಾರೆ.

ತಮಿಳು ಚಿತ್ರನಿರ್ದೇಶಕ ಮತ್ತು ಅಂಬೇಡ್ಕರ್‌ವಾದಿ ಕಲಾವಿದ ಪ.ರಂಜಿತ್‌ ಟ್ವೀಟ್‌ ಮಾಡಿ “ಮಾನವ ಹಕ್ಕು ಹೋರಾಟಗಾರರಾದ ಆನಂದ್‌ ತೇಲ್ತುಂಬ್ಡೆ ಮತ್ತು ಗೌತಮ್‌ ನವಲಖರನ್ನು ಸುಳ್ಳು ಕೇಸುಗಳ ಅಡಿಯಲ್ಲಿ ಬಂಧಿಸಬೇಡಿ. ಪ್ರಪಂಚವೇ ಕೊರೊನಾ ಭೀತಿಯಲ್ಲಿರುವಾಗ ಬಂಧನವಿಲ್ಲದೆಯೇ ವಿಚಾರಣೆ ನಡೆಸಿ. ಅಂತರರಾಷ್ಟ್ರೀಯ ಖ್ಯಾತಿಯ ವಿದ್ವಾಂಸರನ್ನು ಬಂಧಿಸುವುದು ನಿಜಕ್ಕೂ ದೌರ್ಜನ್ಯ ಮತ್ತು ನಾಚಿಕೆಗೇಡಿನ ಸಂಗತಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬರಹಗಾರ್ತಿ ಮೀನಾ ಕಂದಸ್ವಾಮಿ, ದಲಿತರಿಂದ ಸ್ವತಂತ್ರ ಅಭಿವ್ಯಕ್ತಿಯ ಸಣ್ಣದೊಂದು ಚಿಹ್ನೆ ಕಂಡರು ಕೂಡಾ ರಾಜ್ಯವು ಅವರ ಮೇಲೆ ವಿವೇಚನಾರಹಿತವಾದ ಬಲವನ್ನು ಪ್ರಯೋಗಿಸುತ್ತದೆ. ಅವರನ್ನು ನಕ್ಸಲರಂತೆ ದೋಷಾರೋಪಣೆ ಮಾಡುತ್ತದೆ ಹಾಗೂ ಅವರನ್ನು ವರ್ಷಗಳ ಕಾಲ ಸೆರೆಹಿಡಿಯುತ್ತದೆ ಮತ್ತು ನಿರ್ಭಯದಿಂದ ಕೊಲ್ಲುತ್ತದೆ… ಎಂಬ ತೇಲ್ತುಂಬ್ಡೆ ಬರೆದ ಬರಹದ ಸಾಕ್ಷಾತ್ಕಾರ ಈಗ ಆಗುತ್ತಿದೆ ಎಂದು ಬರೆದಿದ್ದಾರೆ.

ಅಲ್ಲದೆ, “1926, ಇಟಾಲಿಯ ಫ್ಯಾಸಿಸಂ, ಆಂಟೋನಿಯೊ ಗ್ರಾಮ್ಸಿಯನ್ನು ಬೆನಿಟೊ ಮುಸೊಲಿನಿಯ ಆಡಳಿತವು ಬಂಧಿಸಿತು. 2020, ಮನುವಾದಿ ಹಿಂದುತ್ವ ಫ್ಯಾಸಿಸಂ ಆನಂದ್ ತೆಲ್ತುಂಬ್ದೆ ಅವರನ್ನು ನರೇಂದ್ರ ಮೋದಿ- ಅಮಿತ್ ಶಾ ಆಡಳಿತ ಬಂಧಿಸಲಿದೆ. ಇತಿಹಾಸವು ಮರುಕಳಿಸುತ್ತಿದೆ. ಬುದ್ಧಿಜೀವಿಗಳ ಬೇಟೆಯನ್ನು ನಿಲ್ಲಿಸಿ.” ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಟ ಸುಶಾಂತ್ ಸಿಂಗ್ ಅವರು “ಅನ್ಯಾಯದ ಹಿನ್ನೆಲೆಯಲ್ಲಿ, ಮೌನವಾಗಿರುವುದು ರಾಜಕೀಯವಾಗಿ ಮಾತನಾಡುವುದು ಅಷ್ಟೇ. ಆನಂದ್ ತೆಲ್ತುಂಬ್ದೆ ಮತ್ತು ಗೌತಮ್ ನವಲಖ ಅವರೊಂದಿಗೆ ನಿಂತುಕೊಳ್ಳಿ. ಆತ್ಮಸಾಕ್ಷಿಯಿರುವವರು ಎಲ್ಲ ಕೈದಿಗಳನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ.” ಎಂದು ಒತ್ತಾಯಿಸಿದ್ದಾರೆ.

 

ಪತ್ರಕರ್ತ ನಿಲಂಜಯ್ ತಿವಾರಿ ಡಾ. ಅಂಬೇಡ್ಕರ್‌ ಅವರ ಜನ್ಮ ದಿನಾಚರಣೆಯಂದು “ಡಾ.ಬಿ.ಆರ್ ಅಂಬೇಡ್ಕರ್ ಅವರ ಅಳಿಯನನ್ನು ಬಂಧಿಸುತ್ತಿರುವುದು,  ಸಮಾಜ ಎಲ್ಲಿಗೆ ಹೋಗುತ್ತಿದ್ದೇವೆ ಎಂಬುದರ ಬಗ್ಗೆ ಸಾಕಷ್ಟು ಹೇಳುತ್ತೇವೆ. ನಾವು ಕೊರೊನಾದಿಂದ ಮಾತ್ರವಲ್ಲ, ಜಾತಿ, ಕೋಮುವಾದ ಮತ್ತು ಸರ್ವಾಧಿಕಾರಕ್ಕೆ ಕೂಡಾ ತುತ್ತಾಗಿದ್ದೇವೆ!” ಎಂದು ಬರೆದಿದ್ದಾರೆ.

 

ಹಿರಿಯ ಪ್ರಾದ್ಯಾಪಕರಾಗಿರುವ ಆನಂದ ತೇಲ್ತುಂಬ್ಡೆ ಅವರ ನಿರೀಕ್ಷಣಾ ಜಾಮೀನನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ. ಜಾತಿ-ವರ್ಗ ಮತ್ತು ಸಾರ್ವಜನಿಕ ನೀತಿಗಳಿಗೆ ಸಂಬಂದಿಸಿದಂತೆ ಅತ್ಯಂತ ಮಹತ್ವದ ಚಿಂತಕರಾದ ಆನಂದ ತೇಲ್ತುಂಬ್ಡೆ ಅವರು ಪ್ರಜಾಪ್ರಭುತ್ವ ಮತ್ತು ಶಿಕ್ಷಣ ಹಕ್ಕುಗಳ ಪರವಾದ ಹೋರಾಟಗಾರರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...