Homeಚಳವಳಿಪ್ರೊ. ಆನಂದ್ ತೇಲ್ತುಂಬ್ಡೆ ಬಂಧನ ವಿರೋಧಿಸಿ ಟ್ವಿಟ್ಟರ್‌ ಅಭಿಯಾನ: #DoNotArrestAnand ಟಾಪ್ ಟ್ರೆಂಡಿಂಗ್

ಪ್ರೊ. ಆನಂದ್ ತೇಲ್ತುಂಬ್ಡೆ ಬಂಧನ ವಿರೋಧಿಸಿ ಟ್ವಿಟ್ಟರ್‌ ಅಭಿಯಾನ: #DoNotArrestAnand ಟಾಪ್ ಟ್ರೆಂಡಿಂಗ್

- Advertisement -
- Advertisement -

ಪ್ರಾಧ್ಯಾಪಕ ಹಾಗೂ ಸಾಮಾಜಿಕ ಹೋರಾಟಗಾರ ಡಾ. ಆನಂದ್ ತೇಲ್ತುಂಬ್ಡೆ ಅವರ ಬಂಧನವನ್ನು ವಿರೋಧಿಸಿ ಸಮಾನ ಮನಸ್ಕರು ನೀಡಿದ್ದ ಕರೆಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಈಗ ಟ್ವಿಟ್ಟರಿನಲ್ಲಿ ವಿವಿದ ಸಂದೇಶದೊಂದಿಗೆ ದೇಶದ ಹಲವಾರು ಗಣ್ಯರು #DoNotArrestAnand ಹ್ಯಾಸ್‌ಟ್ಯಾಗ್‌ನೊಂದಿಗೆ ಟ್ವೀಟ್ ಮಾಡಿದ್ದು, ಅದೀಗ ಟಾಪ್ ಟ್ರೆಂಡಿಗ್ ಆಗಿದೆ.

ನಿಷೇದಿತ ಮಾವೋವಾದಿ ಸಂಘಟನೆಗಳೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿ ’ಕಾನೂನುಬಾಹಿರ ಚಟುವಟಿಕೆಗಳ ನಿಗ್ರಹ ಕಾಯಿದೆ” (ಯುಎಪಿಎ) ಯಂತಹ ಕರಾಳ ಶಾಸನವನ್ನು ಬಳಸಿಕೊಂಡು ಅವರ ವಿರುದ್ದ ಪ್ರಕರಣವನ್ನು ದಾಖಲಿಸಲಾಗಿತ್ತು. 2018 ರಲ್ಲಿ ಭೀಮಾಕೊರೆಗಾವ್‌ನಲ್ಲಿ ದಲಿತ ಸಂಘಟನೆಗಳು ಹಮ್ಮಿಕೊಂಡಿದ್ದ ಆಚರಣೆಯ ಸಂದರ್ಭದಲ್ಲಿ ನಡೆದ ಹಿಂಸಾಚಾರ ನಡೆದಿತ್ತು. ಈ ಸಂಬಂಧ ಆನಂದ್‌ ತೆಲ್ತುಂಬ್ಡೆಯವರ ಮೇಲೆಯೂ ಸಹ ಪ್ರಕರಣ ದಾಖಲಾಗಿದ್ದು, ಇದು ಪ್ರಭುತ್ವ ಪ್ರಾಯೋಜಿತ ಪಿತೂರಿ ಎಂದು ಆನಂದ್‌ ತೆಲ್ತುಂಬ್ಡೆಯವರು ಆರೋಪಿಸಿದ್ದಾರೆ.

ಟ್ವಿಟ್ಟರಿನಲ್ಲಿ ಹಲವಾರು ಗಣ್ಯರು ಈ ಬಗ್ಗೆ ಬರೆದುಕೊಂಡಿದ್ದು, ಜೆಎನ್ಯೂ ಮಾಜಿ ನಾಯಕ ಉಮರ್ ಖಾಲಿದ್ “ಅವರು ತುಳಿತಕ್ಕೊಳಗಾದ ಜನರ ಹಿತದೃಷ್ಟಿಯಿಂದ ಬರೆಯುವುದನ್ನು ಆಯ್ಕೆ ಮಾಡಿಕೊಂಡರು. ದೇಶದ ಜನರನ್ನು ರಕ್ಷಿಸಲು ಇದನ್ನು ಮಾಡುತ್ತಿದ್ದಾರೆಂದು ನಂಬಿದ್ದರು. ಇದು ಅದಕ್ಕೆ ಪಡೆಯುವ ಪ್ರತಿಫಲವೇ?” ಎಂದು ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ.

ಊನಾ ಚಳವಳಿಯ ನೇತಾರ ಹಾಗೂ ಗುಜರಾತಿನ ಶಾಸಕ ಜಿಗ್ನೇಶ್ ಮೇವಾನಿ “ಡಾ. ತೇಲ್ತುಂಬ್ಡೆ ಆರೆಸ್ಸಸ್ಸನ್ನು ಮಾತ್ರ ಟೀಕಿಸಲಿಲ್ಲ, ತಪ್ಪು ಮಾಡಿದ ಅಂಬೇಡ್ಕರ್‌ವಾದಿಗಳನ್ನು ಮತ್ತು ಮಾರ್ಕ್ಸ್ವಾದಿಗಳನ್ನು ಕೂಡಾ ಅವರು ಟೀಕಿಸಿದರು. ಇದು ಅವರ ಸೈದ್ಧಾಂತಿಕ ಪ್ರಾಮಾಣಿಕತೆಯನ್ನು ತೋರಿಸುತ್ತದೆ! ಇಂತಹ ಪ್ರಾಮಾಣಿಕ ಚಿಂತಕನನ್ನು ಹೇಗೆ ಬಂಧಿಸಬಹುದು?” ಎಂದು ಟ್ವೀಟಿಸಿದ್ದಾರೆ.

ಮಹಿಳಾ ಹೊರಾಟಗಾರ್ತಿ ಹಾಗೂ ಸಾಮಾಜಿಕ ಕಾರ್ಯರ್ಕೆ ಕವಿತಾ ಕೃಷ್ಣನ್ ಅವರು, ರೋಮಿಳಾ ಥಾಪರ್ ಬರೆದಿರುವ “ವಿಶೇಷ ಅಮಾನವೀಯ” ಲೇಖನವನ್ನು ಟ್ಯಾಗ್‌ ಮಾಡಿ ಬಂಧನವನ್ನು ಖಂಡಿಸಿದ್ದಾರೆ.

ತಮಿಳು ಚಿತ್ರನಿರ್ದೇಶಕ ಮತ್ತು ಅಂಬೇಡ್ಕರ್‌ವಾದಿ ಕಲಾವಿದ ಪ.ರಂಜಿತ್‌ ಟ್ವೀಟ್‌ ಮಾಡಿ “ಮಾನವ ಹಕ್ಕು ಹೋರಾಟಗಾರರಾದ ಆನಂದ್‌ ತೇಲ್ತುಂಬ್ಡೆ ಮತ್ತು ಗೌತಮ್‌ ನವಲಖರನ್ನು ಸುಳ್ಳು ಕೇಸುಗಳ ಅಡಿಯಲ್ಲಿ ಬಂಧಿಸಬೇಡಿ. ಪ್ರಪಂಚವೇ ಕೊರೊನಾ ಭೀತಿಯಲ್ಲಿರುವಾಗ ಬಂಧನವಿಲ್ಲದೆಯೇ ವಿಚಾರಣೆ ನಡೆಸಿ. ಅಂತರರಾಷ್ಟ್ರೀಯ ಖ್ಯಾತಿಯ ವಿದ್ವಾಂಸರನ್ನು ಬಂಧಿಸುವುದು ನಿಜಕ್ಕೂ ದೌರ್ಜನ್ಯ ಮತ್ತು ನಾಚಿಕೆಗೇಡಿನ ಸಂಗತಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬರಹಗಾರ್ತಿ ಮೀನಾ ಕಂದಸ್ವಾಮಿ, ದಲಿತರಿಂದ ಸ್ವತಂತ್ರ ಅಭಿವ್ಯಕ್ತಿಯ ಸಣ್ಣದೊಂದು ಚಿಹ್ನೆ ಕಂಡರು ಕೂಡಾ ರಾಜ್ಯವು ಅವರ ಮೇಲೆ ವಿವೇಚನಾರಹಿತವಾದ ಬಲವನ್ನು ಪ್ರಯೋಗಿಸುತ್ತದೆ. ಅವರನ್ನು ನಕ್ಸಲರಂತೆ ದೋಷಾರೋಪಣೆ ಮಾಡುತ್ತದೆ ಹಾಗೂ ಅವರನ್ನು ವರ್ಷಗಳ ಕಾಲ ಸೆರೆಹಿಡಿಯುತ್ತದೆ ಮತ್ತು ನಿರ್ಭಯದಿಂದ ಕೊಲ್ಲುತ್ತದೆ… ಎಂಬ ತೇಲ್ತುಂಬ್ಡೆ ಬರೆದ ಬರಹದ ಸಾಕ್ಷಾತ್ಕಾರ ಈಗ ಆಗುತ್ತಿದೆ ಎಂದು ಬರೆದಿದ್ದಾರೆ.

ಅಲ್ಲದೆ, “1926, ಇಟಾಲಿಯ ಫ್ಯಾಸಿಸಂ, ಆಂಟೋನಿಯೊ ಗ್ರಾಮ್ಸಿಯನ್ನು ಬೆನಿಟೊ ಮುಸೊಲಿನಿಯ ಆಡಳಿತವು ಬಂಧಿಸಿತು. 2020, ಮನುವಾದಿ ಹಿಂದುತ್ವ ಫ್ಯಾಸಿಸಂ ಆನಂದ್ ತೆಲ್ತುಂಬ್ದೆ ಅವರನ್ನು ನರೇಂದ್ರ ಮೋದಿ- ಅಮಿತ್ ಶಾ ಆಡಳಿತ ಬಂಧಿಸಲಿದೆ. ಇತಿಹಾಸವು ಮರುಕಳಿಸುತ್ತಿದೆ. ಬುದ್ಧಿಜೀವಿಗಳ ಬೇಟೆಯನ್ನು ನಿಲ್ಲಿಸಿ.” ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಟ ಸುಶಾಂತ್ ಸಿಂಗ್ ಅವರು “ಅನ್ಯಾಯದ ಹಿನ್ನೆಲೆಯಲ್ಲಿ, ಮೌನವಾಗಿರುವುದು ರಾಜಕೀಯವಾಗಿ ಮಾತನಾಡುವುದು ಅಷ್ಟೇ. ಆನಂದ್ ತೆಲ್ತುಂಬ್ದೆ ಮತ್ತು ಗೌತಮ್ ನವಲಖ ಅವರೊಂದಿಗೆ ನಿಂತುಕೊಳ್ಳಿ. ಆತ್ಮಸಾಕ್ಷಿಯಿರುವವರು ಎಲ್ಲ ಕೈದಿಗಳನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ.” ಎಂದು ಒತ್ತಾಯಿಸಿದ್ದಾರೆ.

 

ಪತ್ರಕರ್ತ ನಿಲಂಜಯ್ ತಿವಾರಿ ಡಾ. ಅಂಬೇಡ್ಕರ್‌ ಅವರ ಜನ್ಮ ದಿನಾಚರಣೆಯಂದು “ಡಾ.ಬಿ.ಆರ್ ಅಂಬೇಡ್ಕರ್ ಅವರ ಅಳಿಯನನ್ನು ಬಂಧಿಸುತ್ತಿರುವುದು,  ಸಮಾಜ ಎಲ್ಲಿಗೆ ಹೋಗುತ್ತಿದ್ದೇವೆ ಎಂಬುದರ ಬಗ್ಗೆ ಸಾಕಷ್ಟು ಹೇಳುತ್ತೇವೆ. ನಾವು ಕೊರೊನಾದಿಂದ ಮಾತ್ರವಲ್ಲ, ಜಾತಿ, ಕೋಮುವಾದ ಮತ್ತು ಸರ್ವಾಧಿಕಾರಕ್ಕೆ ಕೂಡಾ ತುತ್ತಾಗಿದ್ದೇವೆ!” ಎಂದು ಬರೆದಿದ್ದಾರೆ.

 

ಹಿರಿಯ ಪ್ರಾದ್ಯಾಪಕರಾಗಿರುವ ಆನಂದ ತೇಲ್ತುಂಬ್ಡೆ ಅವರ ನಿರೀಕ್ಷಣಾ ಜಾಮೀನನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ. ಜಾತಿ-ವರ್ಗ ಮತ್ತು ಸಾರ್ವಜನಿಕ ನೀತಿಗಳಿಗೆ ಸಂಬಂದಿಸಿದಂತೆ ಅತ್ಯಂತ ಮಹತ್ವದ ಚಿಂತಕರಾದ ಆನಂದ ತೇಲ್ತುಂಬ್ಡೆ ಅವರು ಪ್ರಜಾಪ್ರಭುತ್ವ ಮತ್ತು ಶಿಕ್ಷಣ ಹಕ್ಕುಗಳ ಪರವಾದ ಹೋರಾಟಗಾರರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...