Homeಚಳವಳಿಪ್ರೊ. ಆನಂದ್ ತೇಲ್ತುಂಬ್ಡೆ ಬಂಧನ ವಿರೋಧಿಸಿ ಟ್ವಿಟ್ಟರ್‌ ಅಭಿಯಾನ: #DoNotArrestAnand ಟಾಪ್ ಟ್ರೆಂಡಿಂಗ್

ಪ್ರೊ. ಆನಂದ್ ತೇಲ್ತುಂಬ್ಡೆ ಬಂಧನ ವಿರೋಧಿಸಿ ಟ್ವಿಟ್ಟರ್‌ ಅಭಿಯಾನ: #DoNotArrestAnand ಟಾಪ್ ಟ್ರೆಂಡಿಂಗ್

- Advertisement -
- Advertisement -

ಪ್ರಾಧ್ಯಾಪಕ ಹಾಗೂ ಸಾಮಾಜಿಕ ಹೋರಾಟಗಾರ ಡಾ. ಆನಂದ್ ತೇಲ್ತುಂಬ್ಡೆ ಅವರ ಬಂಧನವನ್ನು ವಿರೋಧಿಸಿ ಸಮಾನ ಮನಸ್ಕರು ನೀಡಿದ್ದ ಕರೆಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಈಗ ಟ್ವಿಟ್ಟರಿನಲ್ಲಿ ವಿವಿದ ಸಂದೇಶದೊಂದಿಗೆ ದೇಶದ ಹಲವಾರು ಗಣ್ಯರು #DoNotArrestAnand ಹ್ಯಾಸ್‌ಟ್ಯಾಗ್‌ನೊಂದಿಗೆ ಟ್ವೀಟ್ ಮಾಡಿದ್ದು, ಅದೀಗ ಟಾಪ್ ಟ್ರೆಂಡಿಗ್ ಆಗಿದೆ.

ನಿಷೇದಿತ ಮಾವೋವಾದಿ ಸಂಘಟನೆಗಳೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿ ’ಕಾನೂನುಬಾಹಿರ ಚಟುವಟಿಕೆಗಳ ನಿಗ್ರಹ ಕಾಯಿದೆ” (ಯುಎಪಿಎ) ಯಂತಹ ಕರಾಳ ಶಾಸನವನ್ನು ಬಳಸಿಕೊಂಡು ಅವರ ವಿರುದ್ದ ಪ್ರಕರಣವನ್ನು ದಾಖಲಿಸಲಾಗಿತ್ತು. 2018 ರಲ್ಲಿ ಭೀಮಾಕೊರೆಗಾವ್‌ನಲ್ಲಿ ದಲಿತ ಸಂಘಟನೆಗಳು ಹಮ್ಮಿಕೊಂಡಿದ್ದ ಆಚರಣೆಯ ಸಂದರ್ಭದಲ್ಲಿ ನಡೆದ ಹಿಂಸಾಚಾರ ನಡೆದಿತ್ತು. ಈ ಸಂಬಂಧ ಆನಂದ್‌ ತೆಲ್ತುಂಬ್ಡೆಯವರ ಮೇಲೆಯೂ ಸಹ ಪ್ರಕರಣ ದಾಖಲಾಗಿದ್ದು, ಇದು ಪ್ರಭುತ್ವ ಪ್ರಾಯೋಜಿತ ಪಿತೂರಿ ಎಂದು ಆನಂದ್‌ ತೆಲ್ತುಂಬ್ಡೆಯವರು ಆರೋಪಿಸಿದ್ದಾರೆ.

ಟ್ವಿಟ್ಟರಿನಲ್ಲಿ ಹಲವಾರು ಗಣ್ಯರು ಈ ಬಗ್ಗೆ ಬರೆದುಕೊಂಡಿದ್ದು, ಜೆಎನ್ಯೂ ಮಾಜಿ ನಾಯಕ ಉಮರ್ ಖಾಲಿದ್ “ಅವರು ತುಳಿತಕ್ಕೊಳಗಾದ ಜನರ ಹಿತದೃಷ್ಟಿಯಿಂದ ಬರೆಯುವುದನ್ನು ಆಯ್ಕೆ ಮಾಡಿಕೊಂಡರು. ದೇಶದ ಜನರನ್ನು ರಕ್ಷಿಸಲು ಇದನ್ನು ಮಾಡುತ್ತಿದ್ದಾರೆಂದು ನಂಬಿದ್ದರು. ಇದು ಅದಕ್ಕೆ ಪಡೆಯುವ ಪ್ರತಿಫಲವೇ?” ಎಂದು ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ.

ಊನಾ ಚಳವಳಿಯ ನೇತಾರ ಹಾಗೂ ಗುಜರಾತಿನ ಶಾಸಕ ಜಿಗ್ನೇಶ್ ಮೇವಾನಿ “ಡಾ. ತೇಲ್ತುಂಬ್ಡೆ ಆರೆಸ್ಸಸ್ಸನ್ನು ಮಾತ್ರ ಟೀಕಿಸಲಿಲ್ಲ, ತಪ್ಪು ಮಾಡಿದ ಅಂಬೇಡ್ಕರ್‌ವಾದಿಗಳನ್ನು ಮತ್ತು ಮಾರ್ಕ್ಸ್ವಾದಿಗಳನ್ನು ಕೂಡಾ ಅವರು ಟೀಕಿಸಿದರು. ಇದು ಅವರ ಸೈದ್ಧಾಂತಿಕ ಪ್ರಾಮಾಣಿಕತೆಯನ್ನು ತೋರಿಸುತ್ತದೆ! ಇಂತಹ ಪ್ರಾಮಾಣಿಕ ಚಿಂತಕನನ್ನು ಹೇಗೆ ಬಂಧಿಸಬಹುದು?” ಎಂದು ಟ್ವೀಟಿಸಿದ್ದಾರೆ.

ಮಹಿಳಾ ಹೊರಾಟಗಾರ್ತಿ ಹಾಗೂ ಸಾಮಾಜಿಕ ಕಾರ್ಯರ್ಕೆ ಕವಿತಾ ಕೃಷ್ಣನ್ ಅವರು, ರೋಮಿಳಾ ಥಾಪರ್ ಬರೆದಿರುವ “ವಿಶೇಷ ಅಮಾನವೀಯ” ಲೇಖನವನ್ನು ಟ್ಯಾಗ್‌ ಮಾಡಿ ಬಂಧನವನ್ನು ಖಂಡಿಸಿದ್ದಾರೆ.

ತಮಿಳು ಚಿತ್ರನಿರ್ದೇಶಕ ಮತ್ತು ಅಂಬೇಡ್ಕರ್‌ವಾದಿ ಕಲಾವಿದ ಪ.ರಂಜಿತ್‌ ಟ್ವೀಟ್‌ ಮಾಡಿ “ಮಾನವ ಹಕ್ಕು ಹೋರಾಟಗಾರರಾದ ಆನಂದ್‌ ತೇಲ್ತುಂಬ್ಡೆ ಮತ್ತು ಗೌತಮ್‌ ನವಲಖರನ್ನು ಸುಳ್ಳು ಕೇಸುಗಳ ಅಡಿಯಲ್ಲಿ ಬಂಧಿಸಬೇಡಿ. ಪ್ರಪಂಚವೇ ಕೊರೊನಾ ಭೀತಿಯಲ್ಲಿರುವಾಗ ಬಂಧನವಿಲ್ಲದೆಯೇ ವಿಚಾರಣೆ ನಡೆಸಿ. ಅಂತರರಾಷ್ಟ್ರೀಯ ಖ್ಯಾತಿಯ ವಿದ್ವಾಂಸರನ್ನು ಬಂಧಿಸುವುದು ನಿಜಕ್ಕೂ ದೌರ್ಜನ್ಯ ಮತ್ತು ನಾಚಿಕೆಗೇಡಿನ ಸಂಗತಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬರಹಗಾರ್ತಿ ಮೀನಾ ಕಂದಸ್ವಾಮಿ, ದಲಿತರಿಂದ ಸ್ವತಂತ್ರ ಅಭಿವ್ಯಕ್ತಿಯ ಸಣ್ಣದೊಂದು ಚಿಹ್ನೆ ಕಂಡರು ಕೂಡಾ ರಾಜ್ಯವು ಅವರ ಮೇಲೆ ವಿವೇಚನಾರಹಿತವಾದ ಬಲವನ್ನು ಪ್ರಯೋಗಿಸುತ್ತದೆ. ಅವರನ್ನು ನಕ್ಸಲರಂತೆ ದೋಷಾರೋಪಣೆ ಮಾಡುತ್ತದೆ ಹಾಗೂ ಅವರನ್ನು ವರ್ಷಗಳ ಕಾಲ ಸೆರೆಹಿಡಿಯುತ್ತದೆ ಮತ್ತು ನಿರ್ಭಯದಿಂದ ಕೊಲ್ಲುತ್ತದೆ… ಎಂಬ ತೇಲ್ತುಂಬ್ಡೆ ಬರೆದ ಬರಹದ ಸಾಕ್ಷಾತ್ಕಾರ ಈಗ ಆಗುತ್ತಿದೆ ಎಂದು ಬರೆದಿದ್ದಾರೆ.

ಅಲ್ಲದೆ, “1926, ಇಟಾಲಿಯ ಫ್ಯಾಸಿಸಂ, ಆಂಟೋನಿಯೊ ಗ್ರಾಮ್ಸಿಯನ್ನು ಬೆನಿಟೊ ಮುಸೊಲಿನಿಯ ಆಡಳಿತವು ಬಂಧಿಸಿತು. 2020, ಮನುವಾದಿ ಹಿಂದುತ್ವ ಫ್ಯಾಸಿಸಂ ಆನಂದ್ ತೆಲ್ತುಂಬ್ದೆ ಅವರನ್ನು ನರೇಂದ್ರ ಮೋದಿ- ಅಮಿತ್ ಶಾ ಆಡಳಿತ ಬಂಧಿಸಲಿದೆ. ಇತಿಹಾಸವು ಮರುಕಳಿಸುತ್ತಿದೆ. ಬುದ್ಧಿಜೀವಿಗಳ ಬೇಟೆಯನ್ನು ನಿಲ್ಲಿಸಿ.” ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಟ ಸುಶಾಂತ್ ಸಿಂಗ್ ಅವರು “ಅನ್ಯಾಯದ ಹಿನ್ನೆಲೆಯಲ್ಲಿ, ಮೌನವಾಗಿರುವುದು ರಾಜಕೀಯವಾಗಿ ಮಾತನಾಡುವುದು ಅಷ್ಟೇ. ಆನಂದ್ ತೆಲ್ತುಂಬ್ದೆ ಮತ್ತು ಗೌತಮ್ ನವಲಖ ಅವರೊಂದಿಗೆ ನಿಂತುಕೊಳ್ಳಿ. ಆತ್ಮಸಾಕ್ಷಿಯಿರುವವರು ಎಲ್ಲ ಕೈದಿಗಳನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ.” ಎಂದು ಒತ್ತಾಯಿಸಿದ್ದಾರೆ.

 

ಪತ್ರಕರ್ತ ನಿಲಂಜಯ್ ತಿವಾರಿ ಡಾ. ಅಂಬೇಡ್ಕರ್‌ ಅವರ ಜನ್ಮ ದಿನಾಚರಣೆಯಂದು “ಡಾ.ಬಿ.ಆರ್ ಅಂಬೇಡ್ಕರ್ ಅವರ ಅಳಿಯನನ್ನು ಬಂಧಿಸುತ್ತಿರುವುದು,  ಸಮಾಜ ಎಲ್ಲಿಗೆ ಹೋಗುತ್ತಿದ್ದೇವೆ ಎಂಬುದರ ಬಗ್ಗೆ ಸಾಕಷ್ಟು ಹೇಳುತ್ತೇವೆ. ನಾವು ಕೊರೊನಾದಿಂದ ಮಾತ್ರವಲ್ಲ, ಜಾತಿ, ಕೋಮುವಾದ ಮತ್ತು ಸರ್ವಾಧಿಕಾರಕ್ಕೆ ಕೂಡಾ ತುತ್ತಾಗಿದ್ದೇವೆ!” ಎಂದು ಬರೆದಿದ್ದಾರೆ.

 

ಹಿರಿಯ ಪ್ರಾದ್ಯಾಪಕರಾಗಿರುವ ಆನಂದ ತೇಲ್ತುಂಬ್ಡೆ ಅವರ ನಿರೀಕ್ಷಣಾ ಜಾಮೀನನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ. ಜಾತಿ-ವರ್ಗ ಮತ್ತು ಸಾರ್ವಜನಿಕ ನೀತಿಗಳಿಗೆ ಸಂಬಂದಿಸಿದಂತೆ ಅತ್ಯಂತ ಮಹತ್ವದ ಚಿಂತಕರಾದ ಆನಂದ ತೇಲ್ತುಂಬ್ಡೆ ಅವರು ಪ್ರಜಾಪ್ರಭುತ್ವ ಮತ್ತು ಶಿಕ್ಷಣ ಹಕ್ಕುಗಳ ಪರವಾದ ಹೋರಾಟಗಾರರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...