Homeಚಳವಳಿಪ್ರೊ. ಆನಂದ್ ತೇಲ್ತುಂಬ್ಡೆ ಬಂಧನ ವಿರೋಧಿಸಿ ಟ್ವಿಟ್ಟರ್‌ ಅಭಿಯಾನ: #DoNotArrestAnand ಟಾಪ್ ಟ್ರೆಂಡಿಂಗ್

ಪ್ರೊ. ಆನಂದ್ ತೇಲ್ತುಂಬ್ಡೆ ಬಂಧನ ವಿರೋಧಿಸಿ ಟ್ವಿಟ್ಟರ್‌ ಅಭಿಯಾನ: #DoNotArrestAnand ಟಾಪ್ ಟ್ರೆಂಡಿಂಗ್

- Advertisement -
- Advertisement -

ಪ್ರಾಧ್ಯಾಪಕ ಹಾಗೂ ಸಾಮಾಜಿಕ ಹೋರಾಟಗಾರ ಡಾ. ಆನಂದ್ ತೇಲ್ತುಂಬ್ಡೆ ಅವರ ಬಂಧನವನ್ನು ವಿರೋಧಿಸಿ ಸಮಾನ ಮನಸ್ಕರು ನೀಡಿದ್ದ ಕರೆಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಈಗ ಟ್ವಿಟ್ಟರಿನಲ್ಲಿ ವಿವಿದ ಸಂದೇಶದೊಂದಿಗೆ ದೇಶದ ಹಲವಾರು ಗಣ್ಯರು #DoNotArrestAnand ಹ್ಯಾಸ್‌ಟ್ಯಾಗ್‌ನೊಂದಿಗೆ ಟ್ವೀಟ್ ಮಾಡಿದ್ದು, ಅದೀಗ ಟಾಪ್ ಟ್ರೆಂಡಿಗ್ ಆಗಿದೆ.

ನಿಷೇದಿತ ಮಾವೋವಾದಿ ಸಂಘಟನೆಗಳೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿ ’ಕಾನೂನುಬಾಹಿರ ಚಟುವಟಿಕೆಗಳ ನಿಗ್ರಹ ಕಾಯಿದೆ” (ಯುಎಪಿಎ) ಯಂತಹ ಕರಾಳ ಶಾಸನವನ್ನು ಬಳಸಿಕೊಂಡು ಅವರ ವಿರುದ್ದ ಪ್ರಕರಣವನ್ನು ದಾಖಲಿಸಲಾಗಿತ್ತು. 2018 ರಲ್ಲಿ ಭೀಮಾಕೊರೆಗಾವ್‌ನಲ್ಲಿ ದಲಿತ ಸಂಘಟನೆಗಳು ಹಮ್ಮಿಕೊಂಡಿದ್ದ ಆಚರಣೆಯ ಸಂದರ್ಭದಲ್ಲಿ ನಡೆದ ಹಿಂಸಾಚಾರ ನಡೆದಿತ್ತು. ಈ ಸಂಬಂಧ ಆನಂದ್‌ ತೆಲ್ತುಂಬ್ಡೆಯವರ ಮೇಲೆಯೂ ಸಹ ಪ್ರಕರಣ ದಾಖಲಾಗಿದ್ದು, ಇದು ಪ್ರಭುತ್ವ ಪ್ರಾಯೋಜಿತ ಪಿತೂರಿ ಎಂದು ಆನಂದ್‌ ತೆಲ್ತುಂಬ್ಡೆಯವರು ಆರೋಪಿಸಿದ್ದಾರೆ.

ಟ್ವಿಟ್ಟರಿನಲ್ಲಿ ಹಲವಾರು ಗಣ್ಯರು ಈ ಬಗ್ಗೆ ಬರೆದುಕೊಂಡಿದ್ದು, ಜೆಎನ್ಯೂ ಮಾಜಿ ನಾಯಕ ಉಮರ್ ಖಾಲಿದ್ “ಅವರು ತುಳಿತಕ್ಕೊಳಗಾದ ಜನರ ಹಿತದೃಷ್ಟಿಯಿಂದ ಬರೆಯುವುದನ್ನು ಆಯ್ಕೆ ಮಾಡಿಕೊಂಡರು. ದೇಶದ ಜನರನ್ನು ರಕ್ಷಿಸಲು ಇದನ್ನು ಮಾಡುತ್ತಿದ್ದಾರೆಂದು ನಂಬಿದ್ದರು. ಇದು ಅದಕ್ಕೆ ಪಡೆಯುವ ಪ್ರತಿಫಲವೇ?” ಎಂದು ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ.

ಊನಾ ಚಳವಳಿಯ ನೇತಾರ ಹಾಗೂ ಗುಜರಾತಿನ ಶಾಸಕ ಜಿಗ್ನೇಶ್ ಮೇವಾನಿ “ಡಾ. ತೇಲ್ತುಂಬ್ಡೆ ಆರೆಸ್ಸಸ್ಸನ್ನು ಮಾತ್ರ ಟೀಕಿಸಲಿಲ್ಲ, ತಪ್ಪು ಮಾಡಿದ ಅಂಬೇಡ್ಕರ್‌ವಾದಿಗಳನ್ನು ಮತ್ತು ಮಾರ್ಕ್ಸ್ವಾದಿಗಳನ್ನು ಕೂಡಾ ಅವರು ಟೀಕಿಸಿದರು. ಇದು ಅವರ ಸೈದ್ಧಾಂತಿಕ ಪ್ರಾಮಾಣಿಕತೆಯನ್ನು ತೋರಿಸುತ್ತದೆ! ಇಂತಹ ಪ್ರಾಮಾಣಿಕ ಚಿಂತಕನನ್ನು ಹೇಗೆ ಬಂಧಿಸಬಹುದು?” ಎಂದು ಟ್ವೀಟಿಸಿದ್ದಾರೆ.

ಮಹಿಳಾ ಹೊರಾಟಗಾರ್ತಿ ಹಾಗೂ ಸಾಮಾಜಿಕ ಕಾರ್ಯರ್ಕೆ ಕವಿತಾ ಕೃಷ್ಣನ್ ಅವರು, ರೋಮಿಳಾ ಥಾಪರ್ ಬರೆದಿರುವ “ವಿಶೇಷ ಅಮಾನವೀಯ” ಲೇಖನವನ್ನು ಟ್ಯಾಗ್‌ ಮಾಡಿ ಬಂಧನವನ್ನು ಖಂಡಿಸಿದ್ದಾರೆ.

ತಮಿಳು ಚಿತ್ರನಿರ್ದೇಶಕ ಮತ್ತು ಅಂಬೇಡ್ಕರ್‌ವಾದಿ ಕಲಾವಿದ ಪ.ರಂಜಿತ್‌ ಟ್ವೀಟ್‌ ಮಾಡಿ “ಮಾನವ ಹಕ್ಕು ಹೋರಾಟಗಾರರಾದ ಆನಂದ್‌ ತೇಲ್ತುಂಬ್ಡೆ ಮತ್ತು ಗೌತಮ್‌ ನವಲಖರನ್ನು ಸುಳ್ಳು ಕೇಸುಗಳ ಅಡಿಯಲ್ಲಿ ಬಂಧಿಸಬೇಡಿ. ಪ್ರಪಂಚವೇ ಕೊರೊನಾ ಭೀತಿಯಲ್ಲಿರುವಾಗ ಬಂಧನವಿಲ್ಲದೆಯೇ ವಿಚಾರಣೆ ನಡೆಸಿ. ಅಂತರರಾಷ್ಟ್ರೀಯ ಖ್ಯಾತಿಯ ವಿದ್ವಾಂಸರನ್ನು ಬಂಧಿಸುವುದು ನಿಜಕ್ಕೂ ದೌರ್ಜನ್ಯ ಮತ್ತು ನಾಚಿಕೆಗೇಡಿನ ಸಂಗತಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬರಹಗಾರ್ತಿ ಮೀನಾ ಕಂದಸ್ವಾಮಿ, ದಲಿತರಿಂದ ಸ್ವತಂತ್ರ ಅಭಿವ್ಯಕ್ತಿಯ ಸಣ್ಣದೊಂದು ಚಿಹ್ನೆ ಕಂಡರು ಕೂಡಾ ರಾಜ್ಯವು ಅವರ ಮೇಲೆ ವಿವೇಚನಾರಹಿತವಾದ ಬಲವನ್ನು ಪ್ರಯೋಗಿಸುತ್ತದೆ. ಅವರನ್ನು ನಕ್ಸಲರಂತೆ ದೋಷಾರೋಪಣೆ ಮಾಡುತ್ತದೆ ಹಾಗೂ ಅವರನ್ನು ವರ್ಷಗಳ ಕಾಲ ಸೆರೆಹಿಡಿಯುತ್ತದೆ ಮತ್ತು ನಿರ್ಭಯದಿಂದ ಕೊಲ್ಲುತ್ತದೆ… ಎಂಬ ತೇಲ್ತುಂಬ್ಡೆ ಬರೆದ ಬರಹದ ಸಾಕ್ಷಾತ್ಕಾರ ಈಗ ಆಗುತ್ತಿದೆ ಎಂದು ಬರೆದಿದ್ದಾರೆ.

ಅಲ್ಲದೆ, “1926, ಇಟಾಲಿಯ ಫ್ಯಾಸಿಸಂ, ಆಂಟೋನಿಯೊ ಗ್ರಾಮ್ಸಿಯನ್ನು ಬೆನಿಟೊ ಮುಸೊಲಿನಿಯ ಆಡಳಿತವು ಬಂಧಿಸಿತು. 2020, ಮನುವಾದಿ ಹಿಂದುತ್ವ ಫ್ಯಾಸಿಸಂ ಆನಂದ್ ತೆಲ್ತುಂಬ್ದೆ ಅವರನ್ನು ನರೇಂದ್ರ ಮೋದಿ- ಅಮಿತ್ ಶಾ ಆಡಳಿತ ಬಂಧಿಸಲಿದೆ. ಇತಿಹಾಸವು ಮರುಕಳಿಸುತ್ತಿದೆ. ಬುದ್ಧಿಜೀವಿಗಳ ಬೇಟೆಯನ್ನು ನಿಲ್ಲಿಸಿ.” ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಟ ಸುಶಾಂತ್ ಸಿಂಗ್ ಅವರು “ಅನ್ಯಾಯದ ಹಿನ್ನೆಲೆಯಲ್ಲಿ, ಮೌನವಾಗಿರುವುದು ರಾಜಕೀಯವಾಗಿ ಮಾತನಾಡುವುದು ಅಷ್ಟೇ. ಆನಂದ್ ತೆಲ್ತುಂಬ್ದೆ ಮತ್ತು ಗೌತಮ್ ನವಲಖ ಅವರೊಂದಿಗೆ ನಿಂತುಕೊಳ್ಳಿ. ಆತ್ಮಸಾಕ್ಷಿಯಿರುವವರು ಎಲ್ಲ ಕೈದಿಗಳನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ.” ಎಂದು ಒತ್ತಾಯಿಸಿದ್ದಾರೆ.

 

ಪತ್ರಕರ್ತ ನಿಲಂಜಯ್ ತಿವಾರಿ ಡಾ. ಅಂಬೇಡ್ಕರ್‌ ಅವರ ಜನ್ಮ ದಿನಾಚರಣೆಯಂದು “ಡಾ.ಬಿ.ಆರ್ ಅಂಬೇಡ್ಕರ್ ಅವರ ಅಳಿಯನನ್ನು ಬಂಧಿಸುತ್ತಿರುವುದು,  ಸಮಾಜ ಎಲ್ಲಿಗೆ ಹೋಗುತ್ತಿದ್ದೇವೆ ಎಂಬುದರ ಬಗ್ಗೆ ಸಾಕಷ್ಟು ಹೇಳುತ್ತೇವೆ. ನಾವು ಕೊರೊನಾದಿಂದ ಮಾತ್ರವಲ್ಲ, ಜಾತಿ, ಕೋಮುವಾದ ಮತ್ತು ಸರ್ವಾಧಿಕಾರಕ್ಕೆ ಕೂಡಾ ತುತ್ತಾಗಿದ್ದೇವೆ!” ಎಂದು ಬರೆದಿದ್ದಾರೆ.

 

ಹಿರಿಯ ಪ್ರಾದ್ಯಾಪಕರಾಗಿರುವ ಆನಂದ ತೇಲ್ತುಂಬ್ಡೆ ಅವರ ನಿರೀಕ್ಷಣಾ ಜಾಮೀನನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ. ಜಾತಿ-ವರ್ಗ ಮತ್ತು ಸಾರ್ವಜನಿಕ ನೀತಿಗಳಿಗೆ ಸಂಬಂದಿಸಿದಂತೆ ಅತ್ಯಂತ ಮಹತ್ವದ ಚಿಂತಕರಾದ ಆನಂದ ತೇಲ್ತುಂಬ್ಡೆ ಅವರು ಪ್ರಜಾಪ್ರಭುತ್ವ ಮತ್ತು ಶಿಕ್ಷಣ ಹಕ್ಕುಗಳ ಪರವಾದ ಹೋರಾಟಗಾರರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...