Homeಕರ್ನಾಟಕಹಾಸನ ಚಲೋ| ಪ್ರಜ್ವಲ್ ಅಟ್ಟಹಾಸಕ್ಕೆ ಕೊನೆಯಿದೆ, ಗೆದ್ದರೂ-ಸೋತರೂ ಆತನನ್ನು ಒಪ್ಪಿಕೊಳ್ಳಬೇಡಿ: ಕೆ. ನೀಲಾ

ಹಾಸನ ಚಲೋ| ಪ್ರಜ್ವಲ್ ಅಟ್ಟಹಾಸಕ್ಕೆ ಕೊನೆಯಿದೆ, ಗೆದ್ದರೂ-ಸೋತರೂ ಆತನನ್ನು ಒಪ್ಪಿಕೊಳ್ಳಬೇಡಿ: ಕೆ. ನೀಲಾ

- Advertisement -
- Advertisement -

ಬಿಜೆಪಿಯವರು ರಾಮಾಯಣ, ಮಹಾಭಾರತ ನಮ್ಮವು ಅಂತ ಹೇಳಿಕೊಳ್ತಾರೆ. ಇಂತಹ ಸಂದರ್ಭದಲ್ಲಿ ಮಹಾಭಾರತದ ದ್ರೌಪದಿ ಕತೆಯನ್ನ ನೆನಪು ಮಾಡುವೆ. ಆಕೆಯ ವಸ್ತ್ರವನ್ನು ಸೆಳೆದಾಗ ಆಕೆಯ ಐವರು ಗಂಡಂದಿರು ಸಹಾಯಕ್ಕೆ ಬರುವುದಿಲ್ಲ. ಆಕೆ ಪ್ರತಿಜ್ಞೆ ಮಾಡಿದಂತೆ ದುಶ್ಯಾಸನನ ತೊಡೆ ಸೀಳಿ ಆ ರಕ್ತದಿಂದ ಮುಡಿಕಟ್ಟಿದಳು. ಹಾಗಾಗಿ ಪ್ರಜ್ವಲ ನೀನು ನನ್ನ ಮೊಮ್ಮಗನ ವಯಸ್ಸಿನವನು. 4ನೇ ತಾರೀಖಿನ ನಂತರ ಗೆದ್ದಬಿಡಬಹುದು ಎಂಬ ಅಹಂಕಾರ ನಿನಗಿದ್ರೆ ಎಚ್ಚರಿಕೆ, ನಿನ್ನ ಅಟ್ಟಹಾಸಕ್ಕೆ ಕೊನೆಯಿದೆ ಎಂದು ಜನವಾದಿ ಮಹಿಳಾ ಸಂಘಟನೆಯ ಕೆ. ನೀಲಾ ಆಕ್ರೋಶ ಹೊರಹಾಕಿದರು.

ಹಾಸನದಲ್ಲಿ ನಡೆದ ‘ಹೋರಾಟದ ನಡಿಗೆ, ಹಾಸನದ ಕಡೆಗೆ..’ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, “ಹಾನಸದ ಜನತೆಯೇ ನಿಮ್ಮಲ್ಲಿ ವಿನಂತಿ, ಪ್ರಜ್ವಲ್ ಗೆದ್ದರೂ-ಸೋತರೂ ಆತನನ್ನು ಒಪ್ಪಿಕೊಳ್ಳಬೇಡಿ. ಹುಚ್ಚಾಸ್ಪತ್ರೆಯಲ್ಲಿ ಇರಬೇಕಾದವನನ್ನು ಎಂಪಿ ಮಾಡಿಬಿಟ್ಟಿರಿ, ಅದರ ಪರಿಣಾಮವೇ ಹಾಸನದ ಹೆಣ್ಣುಮಕ್ಕಳನ್ನು ಶೋಷಣೆ ಮಾಡೋದಕ್ಕೆ ಕಾರಣವಾಗಿದೆ. ಇಡೀ ಕರ್ನಾಟಕದ ಜನವೇ ಹಾಸನಕ್ಕೆ ಬರುವಂತಾಗಿದೆ” ಎಂದು ಹೇಳಿದರು.

ಈ ದೇಶದ ಪ್ರಧಾನಿ ತಾಯಿ ದ್ರೋಹಿ

ಹೆಣ್ಣುಮಕ್ಕಳನ್ನು ಅಸಹಾಯಕತೆಯ ಖೆಡ್ಡಾಗೆ ತೋಡಿ ವಿಡಿಯೋ ಮಾಡಿ ಅವರ ಘನತೆಯನ್ನು ಉಲ್ಲಂಘಿಸಲಾಗಿದೆ. ಆದರೆ, ಪ್ರಧಾನಿ ನಾನು ಜೈವಿಕವಾಗಿ ತಾಯಿ ಹೊಟ್ಟೆಯಲ್ಲಿ ಹುಟ್ಟಿಬಂದಿಲ್ಲ ಬಂದಿಲ್ಲ, ದೇವರು ಕಳಿಸಿದ್ದಾನೆ ಅಂತಾರೆ. ಆದರೆ, ಈಗ ಹೇಳ್ತಾ ಇದೀನಿ, ಈ ದೇಶದ ಪ್ರಧಾನಿ ತಾಯಿದ್ರೋಹಿ. ರಕ್ತ ಸುರಿಸಿ ನೋವು ತಿಂದು ಜನ್ಮ ಕೊಡುವವಳನ್ನು ಪೆನ್‌ಡ್ರೈವ್‌ನಲ್ಲಿ ನೋಡುದ್ವಿ ಎಂದವರನ್ನು ಶಿಕ್ಷಿಸದಿರುವ ನಿಮಗೆಲ್ಲ ನಾಚಿಕೆಯಾಗಬೇಕು.

ಡಿಸಿ-ಎಸ್‌ಪಿ ಕೂಡ ತಪ್ಪಿತಸ್ಥರು

‘ವಿಡಿಯೋ ಮಾಡಿದ ಪ್ರಜ್ವಲ್, ಪೆನ್‌ಡ್ರೈವ್‌ ಹಂಚಿದವರು ಮತ್ತು ಜಿಲ್ಲಾಡಳಿತಕ್ಕೆ ಪ್ರಶ್ನಿಸಬೇಕಿದೆ. ಪ್ರಸಾರವಾಗುವುದಕ್ಕೆ ಬಿಡಬೇಡಿ ಅಂತ ಮನವಿ ಮಾಡಿದರೂ ಕ್ರಮವಹಿಸಲಿಲ್ಲ. ಹಾಸನದ ಡಿಸಿ, ಎಸ್‌ಪಿ ನೀವು ಮಹಿಳೆಯಾಗಿದ್ದುಕೊಂಡು ತಪ್ಪು ಮಾಡಿದ್ದೀರಿ, ನೀವು ತಪ್ಪಿತಸ್ಥರೆ… ಆ ವಿಡಿಯೋಗಳು ಹೆಚ್ಚಿನ ಪ್ರಮಾಣದಲ್ಲಿ ಹರಡುವುದನ್ನು ತಡೆಯುವುದರಲ್ಲಿ ನೀವುಗಳು ವಿಫಲವಾಗಿದ್ದೀರಿ” ಎಂದು ಬೇಸರ ಹೊರಹಾಕಿದರು.

‘ಸಂತ್ರಸ್ತ ಮಹಿಳೆ ಅನ್ನಬೇಡಿ, ಆ ಪದವನ್ನು ಕಿತ್ತಾಕಿ. ತೊಂದರೆಗೆ ಒಳಗಾದ ಮಹಿಳೆಯರ ಜತೆ ನಾವಿದ್ದೇವೆ ಎಂದು ಹೇಳುವುದಕ್ಕೆ ನಾವಿಲ್ಲಿ ಬಂದಿದ್ದೀವಿ. ಈ ಸರ್ಕಾರ ಮಹಿಳೆಯರನ್ನ ರಕ್ಷಿಸಬೇಕು. ಅವರಿಗೆ ಘಟನೆ ಬದುಕನ್ನು ರಕ್ಷಿಸಲು ಮುಂದಾಗು ಅಂತ ಕೇಳುದ್ರೆ ಸಿದ್ದರಾಮಯ್ಯ ಅವರೇ ನಿಮ್ಮ ಬೇಳೆ ಬೇಯಿಸಿಕೊಂಡ್ರಿ, ಜವಾಬ್ದಾರಿಯಿಂದ ವಂಚಿತರಾದ್ರಿ. ಇನ್ನು ಬಿಜೆಪಿಯವ್ರೇ, ನೇಹಾ ಪ್ರಕರಣಕ್ಕೆ ಕೋಮು ಬಣ್ಣ ಬಳಿದಿರಿ. ಹಾನಸಕ್ಕೆ ಬಂದು ಅತ್ಯಾಚಾರಿ ಪ್ರಜ್ವಲನಿಗೆ ವೋಟಾಕಿ ಅಂತ ಕೇಳಿದ್ರಿ, ಪ್ರಧಾನಿ ಮೋದಿ, ಶೋಭಕ್ಕ, ಅಮಿತ್ ಶಾ ಎಲ್ಲರೂ ಎಲ್ಲಿದ್ದೀರಿ. ಹಾನಸಕ್ಕೆ ಕಾಂಗ್ರೆಸ್, ಬಿಜೆಪಿ- ಜೆಡಿಎಸ್ ಮೂರು ಪಕ್ಷದವರು ಯಾರು ಒಳ್ಳೆದನ್ನ ಮಾಡಿಲ್ಲ. ಹಾಸನದ ಜನತೆಯ ಬದುಕಲ್ಲಿ ಆಟ ಆಡಿದ್ದಾರೆ’ ಎಂದರು.

ಪ್ರಜ್ವಲನಿಂದ ಕಾಡುಪ್ರಾಣಿ ಭೇಟೆ

ಪ್ರಜ್ವಲ್ ದೇವಲಾಪುರ ಅರಣ್ಯದಲ್ಲಿ ಜಿಂಕೆ, ಚೀತಾ, ಮೊಲ ಸೇರಿದಂತೆ ಹಲವು ಪ್ರಾಣಿಗಳನ್ನು ಭೇಟೆಯಾಡಲು ಹೋಗುತ್ತಾನೆ. ಅಲ್ಲಿನ ಸ್ಥಳೀಯರು ಅದಕ್ಕೆ ಸಾಕ್ಷಿ ಇದ್ದಾರೆ. ಡಿಸಿ-ಎಸ್‌ಪಿ ತಾಕತ್ತಿದ್ದರೆ ಈ ಕುರಿತು ಪ್ರಕರಣ ದಾಖಲಿಸಿ ತನಿಖೆ ಮಾಡಿ ಎಂದು ಸವಾಲು ಹಾಕಿದರು.

ರೇವಣ್ಣನ ಅಸ್ಪೃಶ್ಯತೆ ಒಪ್ಪಬೇಡಿ

ರೇವಣ್ಣ ನೀವು ನಡೆಸಿರುವ ಅಸ್ಪೃಶ್ಯತೆಯ ಕರಾಳ ಮುಖವನ್ನು ಬಿಚ್ಚಿಡುತ್ತೇವೆ. ಹಾಸನದ ಜನತೆ ಆ ಕುಟುಂಬ ಇದುವರೆಗೂ ನಡೆಸಿರುವ ಅಸ್ಪೃಶ್ಯತೆ, ಜಾತಿ ದೌರ್ಜನ್ಯಗಳನ್ನು ಒಪ್ಪಬೇಡಿ, ತಿರಸ್ಕರಿಸಿ, ಪ್ರತಿಭಟಿಸಿ, ಸೆಟೆದು ನಿಲ್ಲಿ ಎಂದು ನೀಲಾ ಕರೆ ನೀಡಿದರು.

ಒಂದು ಕಲ್ಲಿನಲ್ಲಿ ಎರಡು ಹಕ್ಕಿ ಒಡೆದ ಬಿಜೆಪಿ

ಈ ಪ್ರಕರಣದ ಮೂಲಕ ಹಾಸನದ ಗಂಡಸರು ಹೆಣ್ಣನ್ನು ಒಂಟಿಯಾಗಿ ಆಚೆ ಹೋಗದಂತೆ ಕಟ್ಟಿಹಾಕಲು ಬಿಜೆಪಿ ದಾರಿಮಾಡಿಕೊಟ್ಟಿದೆ. ಮನಸ್ಮೃತಿಯ ಅಣತಿಯಂತೆ ಮಹಿಳೆಯರನ್ನು ಕಟ್ಟಿಹಾಕುವ ಕೆಲಸಕ್ಕೆ ಬಿಜೆಪಿ ಈ ಪ್ರಕರಣದ ಮೂಲಕ ಸಂಚು ರೂಪಿಸಿದೆ. ಇನ್ನು ಎರಡನೇಯದಾಗಿ, ಕುಮಾರಸ್ವಾಮಿ, ದೇವೇಗೌಡ ಹಾಗೂ ರೇವಣ್ಣ ನಿಮ್ಮ ಮನೆಯ ಮಗನನ್ನು ಬೆಂಬಲಿಸಿ ಆ ಮೂಲಕ ಒಂದು ಪ್ರಾದೇಶಿಕ ಪಕ್ಷವನ್ನು ನಾಶ ಮಾಡಿದ್ದಾರೆ ನಿಮಗೆ ಇದು ಇಂದಿಗೂ ಅರ್ಥವಾಗಿಲ್ಲ ಎಂದರು.

ಹಾಸನದ ಮಹಿಳೆಯರ ಕಣ್ಣೀರ ಹನಿಗಳನ್ನು ಬಾವುಟವಾಗಿಸಿ ರಾಜ್ಯಾದ್ಯಂತ ಹೋರಾಟ ಮಾಡೋಣ. ಸ್ವಾಭಿಮಾನದ, ಮಹಿಳಾ ಅಸ್ಮಿತೆಯ ಚಳುವಳಿಯ ಕಟ್ಟೋಣ ಅಂಜಬೇಡಿ. ನಿಮ್ಮೊಂದಿಗೆ ನಾವಿದ್ದೇವೆ ಎಂದು ನೊಂದ ಮಹಿಳೆಯರಿಗೆ ಧೈರ್ಯ ತುಂಬಿದರು.

ಇದನ್ನೂ ಓದಿ; ಸಂತ್ರಸ್ತರನ್ನೇ ಅಪರಾಧಿಗಳನ್ನಾಗಿಸುವ ಯತ್ನಗಳು ನಡೆದವು: ಮಲ್ಲಿಗೆ ಸಿರಿಮನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...