Homeಕರ್ನಾಟಕಹಾಸನ ಚಲೋ| ಪ್ರಜ್ವಲ್ ಅಟ್ಟಹಾಸಕ್ಕೆ ಕೊನೆಯಿದೆ, ಗೆದ್ದರೂ-ಸೋತರೂ ಆತನನ್ನು ಒಪ್ಪಿಕೊಳ್ಳಬೇಡಿ: ಕೆ. ನೀಲಾ

ಹಾಸನ ಚಲೋ| ಪ್ರಜ್ವಲ್ ಅಟ್ಟಹಾಸಕ್ಕೆ ಕೊನೆಯಿದೆ, ಗೆದ್ದರೂ-ಸೋತರೂ ಆತನನ್ನು ಒಪ್ಪಿಕೊಳ್ಳಬೇಡಿ: ಕೆ. ನೀಲಾ

- Advertisement -
- Advertisement -

ಬಿಜೆಪಿಯವರು ರಾಮಾಯಣ, ಮಹಾಭಾರತ ನಮ್ಮವು ಅಂತ ಹೇಳಿಕೊಳ್ತಾರೆ. ಇಂತಹ ಸಂದರ್ಭದಲ್ಲಿ ಮಹಾಭಾರತದ ದ್ರೌಪದಿ ಕತೆಯನ್ನ ನೆನಪು ಮಾಡುವೆ. ಆಕೆಯ ವಸ್ತ್ರವನ್ನು ಸೆಳೆದಾಗ ಆಕೆಯ ಐವರು ಗಂಡಂದಿರು ಸಹಾಯಕ್ಕೆ ಬರುವುದಿಲ್ಲ. ಆಕೆ ಪ್ರತಿಜ್ಞೆ ಮಾಡಿದಂತೆ ದುಶ್ಯಾಸನನ ತೊಡೆ ಸೀಳಿ ಆ ರಕ್ತದಿಂದ ಮುಡಿಕಟ್ಟಿದಳು. ಹಾಗಾಗಿ ಪ್ರಜ್ವಲ ನೀನು ನನ್ನ ಮೊಮ್ಮಗನ ವಯಸ್ಸಿನವನು. 4ನೇ ತಾರೀಖಿನ ನಂತರ ಗೆದ್ದಬಿಡಬಹುದು ಎಂಬ ಅಹಂಕಾರ ನಿನಗಿದ್ರೆ ಎಚ್ಚರಿಕೆ, ನಿನ್ನ ಅಟ್ಟಹಾಸಕ್ಕೆ ಕೊನೆಯಿದೆ ಎಂದು ಜನವಾದಿ ಮಹಿಳಾ ಸಂಘಟನೆಯ ಕೆ. ನೀಲಾ ಆಕ್ರೋಶ ಹೊರಹಾಕಿದರು.

ಹಾಸನದಲ್ಲಿ ನಡೆದ ‘ಹೋರಾಟದ ನಡಿಗೆ, ಹಾಸನದ ಕಡೆಗೆ..’ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, “ಹಾನಸದ ಜನತೆಯೇ ನಿಮ್ಮಲ್ಲಿ ವಿನಂತಿ, ಪ್ರಜ್ವಲ್ ಗೆದ್ದರೂ-ಸೋತರೂ ಆತನನ್ನು ಒಪ್ಪಿಕೊಳ್ಳಬೇಡಿ. ಹುಚ್ಚಾಸ್ಪತ್ರೆಯಲ್ಲಿ ಇರಬೇಕಾದವನನ್ನು ಎಂಪಿ ಮಾಡಿಬಿಟ್ಟಿರಿ, ಅದರ ಪರಿಣಾಮವೇ ಹಾಸನದ ಹೆಣ್ಣುಮಕ್ಕಳನ್ನು ಶೋಷಣೆ ಮಾಡೋದಕ್ಕೆ ಕಾರಣವಾಗಿದೆ. ಇಡೀ ಕರ್ನಾಟಕದ ಜನವೇ ಹಾಸನಕ್ಕೆ ಬರುವಂತಾಗಿದೆ” ಎಂದು ಹೇಳಿದರು.

ಈ ದೇಶದ ಪ್ರಧಾನಿ ತಾಯಿ ದ್ರೋಹಿ

ಹೆಣ್ಣುಮಕ್ಕಳನ್ನು ಅಸಹಾಯಕತೆಯ ಖೆಡ್ಡಾಗೆ ತೋಡಿ ವಿಡಿಯೋ ಮಾಡಿ ಅವರ ಘನತೆಯನ್ನು ಉಲ್ಲಂಘಿಸಲಾಗಿದೆ. ಆದರೆ, ಪ್ರಧಾನಿ ನಾನು ಜೈವಿಕವಾಗಿ ತಾಯಿ ಹೊಟ್ಟೆಯಲ್ಲಿ ಹುಟ್ಟಿಬಂದಿಲ್ಲ ಬಂದಿಲ್ಲ, ದೇವರು ಕಳಿಸಿದ್ದಾನೆ ಅಂತಾರೆ. ಆದರೆ, ಈಗ ಹೇಳ್ತಾ ಇದೀನಿ, ಈ ದೇಶದ ಪ್ರಧಾನಿ ತಾಯಿದ್ರೋಹಿ. ರಕ್ತ ಸುರಿಸಿ ನೋವು ತಿಂದು ಜನ್ಮ ಕೊಡುವವಳನ್ನು ಪೆನ್‌ಡ್ರೈವ್‌ನಲ್ಲಿ ನೋಡುದ್ವಿ ಎಂದವರನ್ನು ಶಿಕ್ಷಿಸದಿರುವ ನಿಮಗೆಲ್ಲ ನಾಚಿಕೆಯಾಗಬೇಕು.

ಡಿಸಿ-ಎಸ್‌ಪಿ ಕೂಡ ತಪ್ಪಿತಸ್ಥರು

‘ವಿಡಿಯೋ ಮಾಡಿದ ಪ್ರಜ್ವಲ್, ಪೆನ್‌ಡ್ರೈವ್‌ ಹಂಚಿದವರು ಮತ್ತು ಜಿಲ್ಲಾಡಳಿತಕ್ಕೆ ಪ್ರಶ್ನಿಸಬೇಕಿದೆ. ಪ್ರಸಾರವಾಗುವುದಕ್ಕೆ ಬಿಡಬೇಡಿ ಅಂತ ಮನವಿ ಮಾಡಿದರೂ ಕ್ರಮವಹಿಸಲಿಲ್ಲ. ಹಾಸನದ ಡಿಸಿ, ಎಸ್‌ಪಿ ನೀವು ಮಹಿಳೆಯಾಗಿದ್ದುಕೊಂಡು ತಪ್ಪು ಮಾಡಿದ್ದೀರಿ, ನೀವು ತಪ್ಪಿತಸ್ಥರೆ… ಆ ವಿಡಿಯೋಗಳು ಹೆಚ್ಚಿನ ಪ್ರಮಾಣದಲ್ಲಿ ಹರಡುವುದನ್ನು ತಡೆಯುವುದರಲ್ಲಿ ನೀವುಗಳು ವಿಫಲವಾಗಿದ್ದೀರಿ” ಎಂದು ಬೇಸರ ಹೊರಹಾಕಿದರು.

‘ಸಂತ್ರಸ್ತ ಮಹಿಳೆ ಅನ್ನಬೇಡಿ, ಆ ಪದವನ್ನು ಕಿತ್ತಾಕಿ. ತೊಂದರೆಗೆ ಒಳಗಾದ ಮಹಿಳೆಯರ ಜತೆ ನಾವಿದ್ದೇವೆ ಎಂದು ಹೇಳುವುದಕ್ಕೆ ನಾವಿಲ್ಲಿ ಬಂದಿದ್ದೀವಿ. ಈ ಸರ್ಕಾರ ಮಹಿಳೆಯರನ್ನ ರಕ್ಷಿಸಬೇಕು. ಅವರಿಗೆ ಘಟನೆ ಬದುಕನ್ನು ರಕ್ಷಿಸಲು ಮುಂದಾಗು ಅಂತ ಕೇಳುದ್ರೆ ಸಿದ್ದರಾಮಯ್ಯ ಅವರೇ ನಿಮ್ಮ ಬೇಳೆ ಬೇಯಿಸಿಕೊಂಡ್ರಿ, ಜವಾಬ್ದಾರಿಯಿಂದ ವಂಚಿತರಾದ್ರಿ. ಇನ್ನು ಬಿಜೆಪಿಯವ್ರೇ, ನೇಹಾ ಪ್ರಕರಣಕ್ಕೆ ಕೋಮು ಬಣ್ಣ ಬಳಿದಿರಿ. ಹಾನಸಕ್ಕೆ ಬಂದು ಅತ್ಯಾಚಾರಿ ಪ್ರಜ್ವಲನಿಗೆ ವೋಟಾಕಿ ಅಂತ ಕೇಳಿದ್ರಿ, ಪ್ರಧಾನಿ ಮೋದಿ, ಶೋಭಕ್ಕ, ಅಮಿತ್ ಶಾ ಎಲ್ಲರೂ ಎಲ್ಲಿದ್ದೀರಿ. ಹಾನಸಕ್ಕೆ ಕಾಂಗ್ರೆಸ್, ಬಿಜೆಪಿ- ಜೆಡಿಎಸ್ ಮೂರು ಪಕ್ಷದವರು ಯಾರು ಒಳ್ಳೆದನ್ನ ಮಾಡಿಲ್ಲ. ಹಾಸನದ ಜನತೆಯ ಬದುಕಲ್ಲಿ ಆಟ ಆಡಿದ್ದಾರೆ’ ಎಂದರು.

ಪ್ರಜ್ವಲನಿಂದ ಕಾಡುಪ್ರಾಣಿ ಭೇಟೆ

ಪ್ರಜ್ವಲ್ ದೇವಲಾಪುರ ಅರಣ್ಯದಲ್ಲಿ ಜಿಂಕೆ, ಚೀತಾ, ಮೊಲ ಸೇರಿದಂತೆ ಹಲವು ಪ್ರಾಣಿಗಳನ್ನು ಭೇಟೆಯಾಡಲು ಹೋಗುತ್ತಾನೆ. ಅಲ್ಲಿನ ಸ್ಥಳೀಯರು ಅದಕ್ಕೆ ಸಾಕ್ಷಿ ಇದ್ದಾರೆ. ಡಿಸಿ-ಎಸ್‌ಪಿ ತಾಕತ್ತಿದ್ದರೆ ಈ ಕುರಿತು ಪ್ರಕರಣ ದಾಖಲಿಸಿ ತನಿಖೆ ಮಾಡಿ ಎಂದು ಸವಾಲು ಹಾಕಿದರು.

ರೇವಣ್ಣನ ಅಸ್ಪೃಶ್ಯತೆ ಒಪ್ಪಬೇಡಿ

ರೇವಣ್ಣ ನೀವು ನಡೆಸಿರುವ ಅಸ್ಪೃಶ್ಯತೆಯ ಕರಾಳ ಮುಖವನ್ನು ಬಿಚ್ಚಿಡುತ್ತೇವೆ. ಹಾಸನದ ಜನತೆ ಆ ಕುಟುಂಬ ಇದುವರೆಗೂ ನಡೆಸಿರುವ ಅಸ್ಪೃಶ್ಯತೆ, ಜಾತಿ ದೌರ್ಜನ್ಯಗಳನ್ನು ಒಪ್ಪಬೇಡಿ, ತಿರಸ್ಕರಿಸಿ, ಪ್ರತಿಭಟಿಸಿ, ಸೆಟೆದು ನಿಲ್ಲಿ ಎಂದು ನೀಲಾ ಕರೆ ನೀಡಿದರು.

ಒಂದು ಕಲ್ಲಿನಲ್ಲಿ ಎರಡು ಹಕ್ಕಿ ಒಡೆದ ಬಿಜೆಪಿ

ಈ ಪ್ರಕರಣದ ಮೂಲಕ ಹಾಸನದ ಗಂಡಸರು ಹೆಣ್ಣನ್ನು ಒಂಟಿಯಾಗಿ ಆಚೆ ಹೋಗದಂತೆ ಕಟ್ಟಿಹಾಕಲು ಬಿಜೆಪಿ ದಾರಿಮಾಡಿಕೊಟ್ಟಿದೆ. ಮನಸ್ಮೃತಿಯ ಅಣತಿಯಂತೆ ಮಹಿಳೆಯರನ್ನು ಕಟ್ಟಿಹಾಕುವ ಕೆಲಸಕ್ಕೆ ಬಿಜೆಪಿ ಈ ಪ್ರಕರಣದ ಮೂಲಕ ಸಂಚು ರೂಪಿಸಿದೆ. ಇನ್ನು ಎರಡನೇಯದಾಗಿ, ಕುಮಾರಸ್ವಾಮಿ, ದೇವೇಗೌಡ ಹಾಗೂ ರೇವಣ್ಣ ನಿಮ್ಮ ಮನೆಯ ಮಗನನ್ನು ಬೆಂಬಲಿಸಿ ಆ ಮೂಲಕ ಒಂದು ಪ್ರಾದೇಶಿಕ ಪಕ್ಷವನ್ನು ನಾಶ ಮಾಡಿದ್ದಾರೆ ನಿಮಗೆ ಇದು ಇಂದಿಗೂ ಅರ್ಥವಾಗಿಲ್ಲ ಎಂದರು.

ಹಾಸನದ ಮಹಿಳೆಯರ ಕಣ್ಣೀರ ಹನಿಗಳನ್ನು ಬಾವುಟವಾಗಿಸಿ ರಾಜ್ಯಾದ್ಯಂತ ಹೋರಾಟ ಮಾಡೋಣ. ಸ್ವಾಭಿಮಾನದ, ಮಹಿಳಾ ಅಸ್ಮಿತೆಯ ಚಳುವಳಿಯ ಕಟ್ಟೋಣ ಅಂಜಬೇಡಿ. ನಿಮ್ಮೊಂದಿಗೆ ನಾವಿದ್ದೇವೆ ಎಂದು ನೊಂದ ಮಹಿಳೆಯರಿಗೆ ಧೈರ್ಯ ತುಂಬಿದರು.

ಇದನ್ನೂ ಓದಿ; ಸಂತ್ರಸ್ತರನ್ನೇ ಅಪರಾಧಿಗಳನ್ನಾಗಿಸುವ ಯತ್ನಗಳು ನಡೆದವು: ಮಲ್ಲಿಗೆ ಸಿರಿಮನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...