Homeಕರ್ನಾಟಕಹಾಸನ ಚಲೋ| ಪ್ರಜ್ವಲ್ ಅಟ್ಟಹಾಸಕ್ಕೆ ಕೊನೆಯಿದೆ, ಗೆದ್ದರೂ-ಸೋತರೂ ಆತನನ್ನು ಒಪ್ಪಿಕೊಳ್ಳಬೇಡಿ: ಕೆ. ನೀಲಾ

ಹಾಸನ ಚಲೋ| ಪ್ರಜ್ವಲ್ ಅಟ್ಟಹಾಸಕ್ಕೆ ಕೊನೆಯಿದೆ, ಗೆದ್ದರೂ-ಸೋತರೂ ಆತನನ್ನು ಒಪ್ಪಿಕೊಳ್ಳಬೇಡಿ: ಕೆ. ನೀಲಾ

- Advertisement -
- Advertisement -

ಬಿಜೆಪಿಯವರು ರಾಮಾಯಣ, ಮಹಾಭಾರತ ನಮ್ಮವು ಅಂತ ಹೇಳಿಕೊಳ್ತಾರೆ. ಇಂತಹ ಸಂದರ್ಭದಲ್ಲಿ ಮಹಾಭಾರತದ ದ್ರೌಪದಿ ಕತೆಯನ್ನ ನೆನಪು ಮಾಡುವೆ. ಆಕೆಯ ವಸ್ತ್ರವನ್ನು ಸೆಳೆದಾಗ ಆಕೆಯ ಐವರು ಗಂಡಂದಿರು ಸಹಾಯಕ್ಕೆ ಬರುವುದಿಲ್ಲ. ಆಕೆ ಪ್ರತಿಜ್ಞೆ ಮಾಡಿದಂತೆ ದುಶ್ಯಾಸನನ ತೊಡೆ ಸೀಳಿ ಆ ರಕ್ತದಿಂದ ಮುಡಿಕಟ್ಟಿದಳು. ಹಾಗಾಗಿ ಪ್ರಜ್ವಲ ನೀನು ನನ್ನ ಮೊಮ್ಮಗನ ವಯಸ್ಸಿನವನು. 4ನೇ ತಾರೀಖಿನ ನಂತರ ಗೆದ್ದಬಿಡಬಹುದು ಎಂಬ ಅಹಂಕಾರ ನಿನಗಿದ್ರೆ ಎಚ್ಚರಿಕೆ, ನಿನ್ನ ಅಟ್ಟಹಾಸಕ್ಕೆ ಕೊನೆಯಿದೆ ಎಂದು ಜನವಾದಿ ಮಹಿಳಾ ಸಂಘಟನೆಯ ಕೆ. ನೀಲಾ ಆಕ್ರೋಶ ಹೊರಹಾಕಿದರು.

ಹಾಸನದಲ್ಲಿ ನಡೆದ ‘ಹೋರಾಟದ ನಡಿಗೆ, ಹಾಸನದ ಕಡೆಗೆ..’ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, “ಹಾನಸದ ಜನತೆಯೇ ನಿಮ್ಮಲ್ಲಿ ವಿನಂತಿ, ಪ್ರಜ್ವಲ್ ಗೆದ್ದರೂ-ಸೋತರೂ ಆತನನ್ನು ಒಪ್ಪಿಕೊಳ್ಳಬೇಡಿ. ಹುಚ್ಚಾಸ್ಪತ್ರೆಯಲ್ಲಿ ಇರಬೇಕಾದವನನ್ನು ಎಂಪಿ ಮಾಡಿಬಿಟ್ಟಿರಿ, ಅದರ ಪರಿಣಾಮವೇ ಹಾಸನದ ಹೆಣ್ಣುಮಕ್ಕಳನ್ನು ಶೋಷಣೆ ಮಾಡೋದಕ್ಕೆ ಕಾರಣವಾಗಿದೆ. ಇಡೀ ಕರ್ನಾಟಕದ ಜನವೇ ಹಾಸನಕ್ಕೆ ಬರುವಂತಾಗಿದೆ” ಎಂದು ಹೇಳಿದರು.

ಈ ದೇಶದ ಪ್ರಧಾನಿ ತಾಯಿ ದ್ರೋಹಿ

ಹೆಣ್ಣುಮಕ್ಕಳನ್ನು ಅಸಹಾಯಕತೆಯ ಖೆಡ್ಡಾಗೆ ತೋಡಿ ವಿಡಿಯೋ ಮಾಡಿ ಅವರ ಘನತೆಯನ್ನು ಉಲ್ಲಂಘಿಸಲಾಗಿದೆ. ಆದರೆ, ಪ್ರಧಾನಿ ನಾನು ಜೈವಿಕವಾಗಿ ತಾಯಿ ಹೊಟ್ಟೆಯಲ್ಲಿ ಹುಟ್ಟಿಬಂದಿಲ್ಲ ಬಂದಿಲ್ಲ, ದೇವರು ಕಳಿಸಿದ್ದಾನೆ ಅಂತಾರೆ. ಆದರೆ, ಈಗ ಹೇಳ್ತಾ ಇದೀನಿ, ಈ ದೇಶದ ಪ್ರಧಾನಿ ತಾಯಿದ್ರೋಹಿ. ರಕ್ತ ಸುರಿಸಿ ನೋವು ತಿಂದು ಜನ್ಮ ಕೊಡುವವಳನ್ನು ಪೆನ್‌ಡ್ರೈವ್‌ನಲ್ಲಿ ನೋಡುದ್ವಿ ಎಂದವರನ್ನು ಶಿಕ್ಷಿಸದಿರುವ ನಿಮಗೆಲ್ಲ ನಾಚಿಕೆಯಾಗಬೇಕು.

ಡಿಸಿ-ಎಸ್‌ಪಿ ಕೂಡ ತಪ್ಪಿತಸ್ಥರು

‘ವಿಡಿಯೋ ಮಾಡಿದ ಪ್ರಜ್ವಲ್, ಪೆನ್‌ಡ್ರೈವ್‌ ಹಂಚಿದವರು ಮತ್ತು ಜಿಲ್ಲಾಡಳಿತಕ್ಕೆ ಪ್ರಶ್ನಿಸಬೇಕಿದೆ. ಪ್ರಸಾರವಾಗುವುದಕ್ಕೆ ಬಿಡಬೇಡಿ ಅಂತ ಮನವಿ ಮಾಡಿದರೂ ಕ್ರಮವಹಿಸಲಿಲ್ಲ. ಹಾಸನದ ಡಿಸಿ, ಎಸ್‌ಪಿ ನೀವು ಮಹಿಳೆಯಾಗಿದ್ದುಕೊಂಡು ತಪ್ಪು ಮಾಡಿದ್ದೀರಿ, ನೀವು ತಪ್ಪಿತಸ್ಥರೆ… ಆ ವಿಡಿಯೋಗಳು ಹೆಚ್ಚಿನ ಪ್ರಮಾಣದಲ್ಲಿ ಹರಡುವುದನ್ನು ತಡೆಯುವುದರಲ್ಲಿ ನೀವುಗಳು ವಿಫಲವಾಗಿದ್ದೀರಿ” ಎಂದು ಬೇಸರ ಹೊರಹಾಕಿದರು.

‘ಸಂತ್ರಸ್ತ ಮಹಿಳೆ ಅನ್ನಬೇಡಿ, ಆ ಪದವನ್ನು ಕಿತ್ತಾಕಿ. ತೊಂದರೆಗೆ ಒಳಗಾದ ಮಹಿಳೆಯರ ಜತೆ ನಾವಿದ್ದೇವೆ ಎಂದು ಹೇಳುವುದಕ್ಕೆ ನಾವಿಲ್ಲಿ ಬಂದಿದ್ದೀವಿ. ಈ ಸರ್ಕಾರ ಮಹಿಳೆಯರನ್ನ ರಕ್ಷಿಸಬೇಕು. ಅವರಿಗೆ ಘಟನೆ ಬದುಕನ್ನು ರಕ್ಷಿಸಲು ಮುಂದಾಗು ಅಂತ ಕೇಳುದ್ರೆ ಸಿದ್ದರಾಮಯ್ಯ ಅವರೇ ನಿಮ್ಮ ಬೇಳೆ ಬೇಯಿಸಿಕೊಂಡ್ರಿ, ಜವಾಬ್ದಾರಿಯಿಂದ ವಂಚಿತರಾದ್ರಿ. ಇನ್ನು ಬಿಜೆಪಿಯವ್ರೇ, ನೇಹಾ ಪ್ರಕರಣಕ್ಕೆ ಕೋಮು ಬಣ್ಣ ಬಳಿದಿರಿ. ಹಾನಸಕ್ಕೆ ಬಂದು ಅತ್ಯಾಚಾರಿ ಪ್ರಜ್ವಲನಿಗೆ ವೋಟಾಕಿ ಅಂತ ಕೇಳಿದ್ರಿ, ಪ್ರಧಾನಿ ಮೋದಿ, ಶೋಭಕ್ಕ, ಅಮಿತ್ ಶಾ ಎಲ್ಲರೂ ಎಲ್ಲಿದ್ದೀರಿ. ಹಾನಸಕ್ಕೆ ಕಾಂಗ್ರೆಸ್, ಬಿಜೆಪಿ- ಜೆಡಿಎಸ್ ಮೂರು ಪಕ್ಷದವರು ಯಾರು ಒಳ್ಳೆದನ್ನ ಮಾಡಿಲ್ಲ. ಹಾಸನದ ಜನತೆಯ ಬದುಕಲ್ಲಿ ಆಟ ಆಡಿದ್ದಾರೆ’ ಎಂದರು.

ಪ್ರಜ್ವಲನಿಂದ ಕಾಡುಪ್ರಾಣಿ ಭೇಟೆ

ಪ್ರಜ್ವಲ್ ದೇವಲಾಪುರ ಅರಣ್ಯದಲ್ಲಿ ಜಿಂಕೆ, ಚೀತಾ, ಮೊಲ ಸೇರಿದಂತೆ ಹಲವು ಪ್ರಾಣಿಗಳನ್ನು ಭೇಟೆಯಾಡಲು ಹೋಗುತ್ತಾನೆ. ಅಲ್ಲಿನ ಸ್ಥಳೀಯರು ಅದಕ್ಕೆ ಸಾಕ್ಷಿ ಇದ್ದಾರೆ. ಡಿಸಿ-ಎಸ್‌ಪಿ ತಾಕತ್ತಿದ್ದರೆ ಈ ಕುರಿತು ಪ್ರಕರಣ ದಾಖಲಿಸಿ ತನಿಖೆ ಮಾಡಿ ಎಂದು ಸವಾಲು ಹಾಕಿದರು.

ರೇವಣ್ಣನ ಅಸ್ಪೃಶ್ಯತೆ ಒಪ್ಪಬೇಡಿ

ರೇವಣ್ಣ ನೀವು ನಡೆಸಿರುವ ಅಸ್ಪೃಶ್ಯತೆಯ ಕರಾಳ ಮುಖವನ್ನು ಬಿಚ್ಚಿಡುತ್ತೇವೆ. ಹಾಸನದ ಜನತೆ ಆ ಕುಟುಂಬ ಇದುವರೆಗೂ ನಡೆಸಿರುವ ಅಸ್ಪೃಶ್ಯತೆ, ಜಾತಿ ದೌರ್ಜನ್ಯಗಳನ್ನು ಒಪ್ಪಬೇಡಿ, ತಿರಸ್ಕರಿಸಿ, ಪ್ರತಿಭಟಿಸಿ, ಸೆಟೆದು ನಿಲ್ಲಿ ಎಂದು ನೀಲಾ ಕರೆ ನೀಡಿದರು.

ಒಂದು ಕಲ್ಲಿನಲ್ಲಿ ಎರಡು ಹಕ್ಕಿ ಒಡೆದ ಬಿಜೆಪಿ

ಈ ಪ್ರಕರಣದ ಮೂಲಕ ಹಾಸನದ ಗಂಡಸರು ಹೆಣ್ಣನ್ನು ಒಂಟಿಯಾಗಿ ಆಚೆ ಹೋಗದಂತೆ ಕಟ್ಟಿಹಾಕಲು ಬಿಜೆಪಿ ದಾರಿಮಾಡಿಕೊಟ್ಟಿದೆ. ಮನಸ್ಮೃತಿಯ ಅಣತಿಯಂತೆ ಮಹಿಳೆಯರನ್ನು ಕಟ್ಟಿಹಾಕುವ ಕೆಲಸಕ್ಕೆ ಬಿಜೆಪಿ ಈ ಪ್ರಕರಣದ ಮೂಲಕ ಸಂಚು ರೂಪಿಸಿದೆ. ಇನ್ನು ಎರಡನೇಯದಾಗಿ, ಕುಮಾರಸ್ವಾಮಿ, ದೇವೇಗೌಡ ಹಾಗೂ ರೇವಣ್ಣ ನಿಮ್ಮ ಮನೆಯ ಮಗನನ್ನು ಬೆಂಬಲಿಸಿ ಆ ಮೂಲಕ ಒಂದು ಪ್ರಾದೇಶಿಕ ಪಕ್ಷವನ್ನು ನಾಶ ಮಾಡಿದ್ದಾರೆ ನಿಮಗೆ ಇದು ಇಂದಿಗೂ ಅರ್ಥವಾಗಿಲ್ಲ ಎಂದರು.

ಹಾಸನದ ಮಹಿಳೆಯರ ಕಣ್ಣೀರ ಹನಿಗಳನ್ನು ಬಾವುಟವಾಗಿಸಿ ರಾಜ್ಯಾದ್ಯಂತ ಹೋರಾಟ ಮಾಡೋಣ. ಸ್ವಾಭಿಮಾನದ, ಮಹಿಳಾ ಅಸ್ಮಿತೆಯ ಚಳುವಳಿಯ ಕಟ್ಟೋಣ ಅಂಜಬೇಡಿ. ನಿಮ್ಮೊಂದಿಗೆ ನಾವಿದ್ದೇವೆ ಎಂದು ನೊಂದ ಮಹಿಳೆಯರಿಗೆ ಧೈರ್ಯ ತುಂಬಿದರು.

ಇದನ್ನೂ ಓದಿ; ಸಂತ್ರಸ್ತರನ್ನೇ ಅಪರಾಧಿಗಳನ್ನಾಗಿಸುವ ಯತ್ನಗಳು ನಡೆದವು: ಮಲ್ಲಿಗೆ ಸಿರಿಮನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...