Homeಕರ್ನಾಟಕಹಾಸನ ಚಲೋ| ಪ್ರಜ್ವಲ್ ಅಟ್ಟಹಾಸಕ್ಕೆ ಕೊನೆಯಿದೆ, ಗೆದ್ದರೂ-ಸೋತರೂ ಆತನನ್ನು ಒಪ್ಪಿಕೊಳ್ಳಬೇಡಿ: ಕೆ. ನೀಲಾ

ಹಾಸನ ಚಲೋ| ಪ್ರಜ್ವಲ್ ಅಟ್ಟಹಾಸಕ್ಕೆ ಕೊನೆಯಿದೆ, ಗೆದ್ದರೂ-ಸೋತರೂ ಆತನನ್ನು ಒಪ್ಪಿಕೊಳ್ಳಬೇಡಿ: ಕೆ. ನೀಲಾ

- Advertisement -
- Advertisement -

ಬಿಜೆಪಿಯವರು ರಾಮಾಯಣ, ಮಹಾಭಾರತ ನಮ್ಮವು ಅಂತ ಹೇಳಿಕೊಳ್ತಾರೆ. ಇಂತಹ ಸಂದರ್ಭದಲ್ಲಿ ಮಹಾಭಾರತದ ದ್ರೌಪದಿ ಕತೆಯನ್ನ ನೆನಪು ಮಾಡುವೆ. ಆಕೆಯ ವಸ್ತ್ರವನ್ನು ಸೆಳೆದಾಗ ಆಕೆಯ ಐವರು ಗಂಡಂದಿರು ಸಹಾಯಕ್ಕೆ ಬರುವುದಿಲ್ಲ. ಆಕೆ ಪ್ರತಿಜ್ಞೆ ಮಾಡಿದಂತೆ ದುಶ್ಯಾಸನನ ತೊಡೆ ಸೀಳಿ ಆ ರಕ್ತದಿಂದ ಮುಡಿಕಟ್ಟಿದಳು. ಹಾಗಾಗಿ ಪ್ರಜ್ವಲ ನೀನು ನನ್ನ ಮೊಮ್ಮಗನ ವಯಸ್ಸಿನವನು. 4ನೇ ತಾರೀಖಿನ ನಂತರ ಗೆದ್ದಬಿಡಬಹುದು ಎಂಬ ಅಹಂಕಾರ ನಿನಗಿದ್ರೆ ಎಚ್ಚರಿಕೆ, ನಿನ್ನ ಅಟ್ಟಹಾಸಕ್ಕೆ ಕೊನೆಯಿದೆ ಎಂದು ಜನವಾದಿ ಮಹಿಳಾ ಸಂಘಟನೆಯ ಕೆ. ನೀಲಾ ಆಕ್ರೋಶ ಹೊರಹಾಕಿದರು.

ಹಾಸನದಲ್ಲಿ ನಡೆದ ‘ಹೋರಾಟದ ನಡಿಗೆ, ಹಾಸನದ ಕಡೆಗೆ..’ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, “ಹಾನಸದ ಜನತೆಯೇ ನಿಮ್ಮಲ್ಲಿ ವಿನಂತಿ, ಪ್ರಜ್ವಲ್ ಗೆದ್ದರೂ-ಸೋತರೂ ಆತನನ್ನು ಒಪ್ಪಿಕೊಳ್ಳಬೇಡಿ. ಹುಚ್ಚಾಸ್ಪತ್ರೆಯಲ್ಲಿ ಇರಬೇಕಾದವನನ್ನು ಎಂಪಿ ಮಾಡಿಬಿಟ್ಟಿರಿ, ಅದರ ಪರಿಣಾಮವೇ ಹಾಸನದ ಹೆಣ್ಣುಮಕ್ಕಳನ್ನು ಶೋಷಣೆ ಮಾಡೋದಕ್ಕೆ ಕಾರಣವಾಗಿದೆ. ಇಡೀ ಕರ್ನಾಟಕದ ಜನವೇ ಹಾಸನಕ್ಕೆ ಬರುವಂತಾಗಿದೆ” ಎಂದು ಹೇಳಿದರು.

ಈ ದೇಶದ ಪ್ರಧಾನಿ ತಾಯಿ ದ್ರೋಹಿ

ಹೆಣ್ಣುಮಕ್ಕಳನ್ನು ಅಸಹಾಯಕತೆಯ ಖೆಡ್ಡಾಗೆ ತೋಡಿ ವಿಡಿಯೋ ಮಾಡಿ ಅವರ ಘನತೆಯನ್ನು ಉಲ್ಲಂಘಿಸಲಾಗಿದೆ. ಆದರೆ, ಪ್ರಧಾನಿ ನಾನು ಜೈವಿಕವಾಗಿ ತಾಯಿ ಹೊಟ್ಟೆಯಲ್ಲಿ ಹುಟ್ಟಿಬಂದಿಲ್ಲ ಬಂದಿಲ್ಲ, ದೇವರು ಕಳಿಸಿದ್ದಾನೆ ಅಂತಾರೆ. ಆದರೆ, ಈಗ ಹೇಳ್ತಾ ಇದೀನಿ, ಈ ದೇಶದ ಪ್ರಧಾನಿ ತಾಯಿದ್ರೋಹಿ. ರಕ್ತ ಸುರಿಸಿ ನೋವು ತಿಂದು ಜನ್ಮ ಕೊಡುವವಳನ್ನು ಪೆನ್‌ಡ್ರೈವ್‌ನಲ್ಲಿ ನೋಡುದ್ವಿ ಎಂದವರನ್ನು ಶಿಕ್ಷಿಸದಿರುವ ನಿಮಗೆಲ್ಲ ನಾಚಿಕೆಯಾಗಬೇಕು.

ಡಿಸಿ-ಎಸ್‌ಪಿ ಕೂಡ ತಪ್ಪಿತಸ್ಥರು

‘ವಿಡಿಯೋ ಮಾಡಿದ ಪ್ರಜ್ವಲ್, ಪೆನ್‌ಡ್ರೈವ್‌ ಹಂಚಿದವರು ಮತ್ತು ಜಿಲ್ಲಾಡಳಿತಕ್ಕೆ ಪ್ರಶ್ನಿಸಬೇಕಿದೆ. ಪ್ರಸಾರವಾಗುವುದಕ್ಕೆ ಬಿಡಬೇಡಿ ಅಂತ ಮನವಿ ಮಾಡಿದರೂ ಕ್ರಮವಹಿಸಲಿಲ್ಲ. ಹಾಸನದ ಡಿಸಿ, ಎಸ್‌ಪಿ ನೀವು ಮಹಿಳೆಯಾಗಿದ್ದುಕೊಂಡು ತಪ್ಪು ಮಾಡಿದ್ದೀರಿ, ನೀವು ತಪ್ಪಿತಸ್ಥರೆ… ಆ ವಿಡಿಯೋಗಳು ಹೆಚ್ಚಿನ ಪ್ರಮಾಣದಲ್ಲಿ ಹರಡುವುದನ್ನು ತಡೆಯುವುದರಲ್ಲಿ ನೀವುಗಳು ವಿಫಲವಾಗಿದ್ದೀರಿ” ಎಂದು ಬೇಸರ ಹೊರಹಾಕಿದರು.

‘ಸಂತ್ರಸ್ತ ಮಹಿಳೆ ಅನ್ನಬೇಡಿ, ಆ ಪದವನ್ನು ಕಿತ್ತಾಕಿ. ತೊಂದರೆಗೆ ಒಳಗಾದ ಮಹಿಳೆಯರ ಜತೆ ನಾವಿದ್ದೇವೆ ಎಂದು ಹೇಳುವುದಕ್ಕೆ ನಾವಿಲ್ಲಿ ಬಂದಿದ್ದೀವಿ. ಈ ಸರ್ಕಾರ ಮಹಿಳೆಯರನ್ನ ರಕ್ಷಿಸಬೇಕು. ಅವರಿಗೆ ಘಟನೆ ಬದುಕನ್ನು ರಕ್ಷಿಸಲು ಮುಂದಾಗು ಅಂತ ಕೇಳುದ್ರೆ ಸಿದ್ದರಾಮಯ್ಯ ಅವರೇ ನಿಮ್ಮ ಬೇಳೆ ಬೇಯಿಸಿಕೊಂಡ್ರಿ, ಜವಾಬ್ದಾರಿಯಿಂದ ವಂಚಿತರಾದ್ರಿ. ಇನ್ನು ಬಿಜೆಪಿಯವ್ರೇ, ನೇಹಾ ಪ್ರಕರಣಕ್ಕೆ ಕೋಮು ಬಣ್ಣ ಬಳಿದಿರಿ. ಹಾನಸಕ್ಕೆ ಬಂದು ಅತ್ಯಾಚಾರಿ ಪ್ರಜ್ವಲನಿಗೆ ವೋಟಾಕಿ ಅಂತ ಕೇಳಿದ್ರಿ, ಪ್ರಧಾನಿ ಮೋದಿ, ಶೋಭಕ್ಕ, ಅಮಿತ್ ಶಾ ಎಲ್ಲರೂ ಎಲ್ಲಿದ್ದೀರಿ. ಹಾನಸಕ್ಕೆ ಕಾಂಗ್ರೆಸ್, ಬಿಜೆಪಿ- ಜೆಡಿಎಸ್ ಮೂರು ಪಕ್ಷದವರು ಯಾರು ಒಳ್ಳೆದನ್ನ ಮಾಡಿಲ್ಲ. ಹಾಸನದ ಜನತೆಯ ಬದುಕಲ್ಲಿ ಆಟ ಆಡಿದ್ದಾರೆ’ ಎಂದರು.

ಪ್ರಜ್ವಲನಿಂದ ಕಾಡುಪ್ರಾಣಿ ಭೇಟೆ

ಪ್ರಜ್ವಲ್ ದೇವಲಾಪುರ ಅರಣ್ಯದಲ್ಲಿ ಜಿಂಕೆ, ಚೀತಾ, ಮೊಲ ಸೇರಿದಂತೆ ಹಲವು ಪ್ರಾಣಿಗಳನ್ನು ಭೇಟೆಯಾಡಲು ಹೋಗುತ್ತಾನೆ. ಅಲ್ಲಿನ ಸ್ಥಳೀಯರು ಅದಕ್ಕೆ ಸಾಕ್ಷಿ ಇದ್ದಾರೆ. ಡಿಸಿ-ಎಸ್‌ಪಿ ತಾಕತ್ತಿದ್ದರೆ ಈ ಕುರಿತು ಪ್ರಕರಣ ದಾಖಲಿಸಿ ತನಿಖೆ ಮಾಡಿ ಎಂದು ಸವಾಲು ಹಾಕಿದರು.

ರೇವಣ್ಣನ ಅಸ್ಪೃಶ್ಯತೆ ಒಪ್ಪಬೇಡಿ

ರೇವಣ್ಣ ನೀವು ನಡೆಸಿರುವ ಅಸ್ಪೃಶ್ಯತೆಯ ಕರಾಳ ಮುಖವನ್ನು ಬಿಚ್ಚಿಡುತ್ತೇವೆ. ಹಾಸನದ ಜನತೆ ಆ ಕುಟುಂಬ ಇದುವರೆಗೂ ನಡೆಸಿರುವ ಅಸ್ಪೃಶ್ಯತೆ, ಜಾತಿ ದೌರ್ಜನ್ಯಗಳನ್ನು ಒಪ್ಪಬೇಡಿ, ತಿರಸ್ಕರಿಸಿ, ಪ್ರತಿಭಟಿಸಿ, ಸೆಟೆದು ನಿಲ್ಲಿ ಎಂದು ನೀಲಾ ಕರೆ ನೀಡಿದರು.

ಒಂದು ಕಲ್ಲಿನಲ್ಲಿ ಎರಡು ಹಕ್ಕಿ ಒಡೆದ ಬಿಜೆಪಿ

ಈ ಪ್ರಕರಣದ ಮೂಲಕ ಹಾಸನದ ಗಂಡಸರು ಹೆಣ್ಣನ್ನು ಒಂಟಿಯಾಗಿ ಆಚೆ ಹೋಗದಂತೆ ಕಟ್ಟಿಹಾಕಲು ಬಿಜೆಪಿ ದಾರಿಮಾಡಿಕೊಟ್ಟಿದೆ. ಮನಸ್ಮೃತಿಯ ಅಣತಿಯಂತೆ ಮಹಿಳೆಯರನ್ನು ಕಟ್ಟಿಹಾಕುವ ಕೆಲಸಕ್ಕೆ ಬಿಜೆಪಿ ಈ ಪ್ರಕರಣದ ಮೂಲಕ ಸಂಚು ರೂಪಿಸಿದೆ. ಇನ್ನು ಎರಡನೇಯದಾಗಿ, ಕುಮಾರಸ್ವಾಮಿ, ದೇವೇಗೌಡ ಹಾಗೂ ರೇವಣ್ಣ ನಿಮ್ಮ ಮನೆಯ ಮಗನನ್ನು ಬೆಂಬಲಿಸಿ ಆ ಮೂಲಕ ಒಂದು ಪ್ರಾದೇಶಿಕ ಪಕ್ಷವನ್ನು ನಾಶ ಮಾಡಿದ್ದಾರೆ ನಿಮಗೆ ಇದು ಇಂದಿಗೂ ಅರ್ಥವಾಗಿಲ್ಲ ಎಂದರು.

ಹಾಸನದ ಮಹಿಳೆಯರ ಕಣ್ಣೀರ ಹನಿಗಳನ್ನು ಬಾವುಟವಾಗಿಸಿ ರಾಜ್ಯಾದ್ಯಂತ ಹೋರಾಟ ಮಾಡೋಣ. ಸ್ವಾಭಿಮಾನದ, ಮಹಿಳಾ ಅಸ್ಮಿತೆಯ ಚಳುವಳಿಯ ಕಟ್ಟೋಣ ಅಂಜಬೇಡಿ. ನಿಮ್ಮೊಂದಿಗೆ ನಾವಿದ್ದೇವೆ ಎಂದು ನೊಂದ ಮಹಿಳೆಯರಿಗೆ ಧೈರ್ಯ ತುಂಬಿದರು.

ಇದನ್ನೂ ಓದಿ; ಸಂತ್ರಸ್ತರನ್ನೇ ಅಪರಾಧಿಗಳನ್ನಾಗಿಸುವ ಯತ್ನಗಳು ನಡೆದವು: ಮಲ್ಲಿಗೆ ಸಿರಿಮನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...