Homeಕರ್ನಾಟಕಹಾಸನ ಚಲೋ| ಪ್ರಜ್ವಲ್ ಅಟ್ಟಹಾಸಕ್ಕೆ ಕೊನೆಯಿದೆ, ಗೆದ್ದರೂ-ಸೋತರೂ ಆತನನ್ನು ಒಪ್ಪಿಕೊಳ್ಳಬೇಡಿ: ಕೆ. ನೀಲಾ

ಹಾಸನ ಚಲೋ| ಪ್ರಜ್ವಲ್ ಅಟ್ಟಹಾಸಕ್ಕೆ ಕೊನೆಯಿದೆ, ಗೆದ್ದರೂ-ಸೋತರೂ ಆತನನ್ನು ಒಪ್ಪಿಕೊಳ್ಳಬೇಡಿ: ಕೆ. ನೀಲಾ

- Advertisement -
- Advertisement -

ಬಿಜೆಪಿಯವರು ರಾಮಾಯಣ, ಮಹಾಭಾರತ ನಮ್ಮವು ಅಂತ ಹೇಳಿಕೊಳ್ತಾರೆ. ಇಂತಹ ಸಂದರ್ಭದಲ್ಲಿ ಮಹಾಭಾರತದ ದ್ರೌಪದಿ ಕತೆಯನ್ನ ನೆನಪು ಮಾಡುವೆ. ಆಕೆಯ ವಸ್ತ್ರವನ್ನು ಸೆಳೆದಾಗ ಆಕೆಯ ಐವರು ಗಂಡಂದಿರು ಸಹಾಯಕ್ಕೆ ಬರುವುದಿಲ್ಲ. ಆಕೆ ಪ್ರತಿಜ್ಞೆ ಮಾಡಿದಂತೆ ದುಶ್ಯಾಸನನ ತೊಡೆ ಸೀಳಿ ಆ ರಕ್ತದಿಂದ ಮುಡಿಕಟ್ಟಿದಳು. ಹಾಗಾಗಿ ಪ್ರಜ್ವಲ ನೀನು ನನ್ನ ಮೊಮ್ಮಗನ ವಯಸ್ಸಿನವನು. 4ನೇ ತಾರೀಖಿನ ನಂತರ ಗೆದ್ದಬಿಡಬಹುದು ಎಂಬ ಅಹಂಕಾರ ನಿನಗಿದ್ರೆ ಎಚ್ಚರಿಕೆ, ನಿನ್ನ ಅಟ್ಟಹಾಸಕ್ಕೆ ಕೊನೆಯಿದೆ ಎಂದು ಜನವಾದಿ ಮಹಿಳಾ ಸಂಘಟನೆಯ ಕೆ. ನೀಲಾ ಆಕ್ರೋಶ ಹೊರಹಾಕಿದರು.

ಹಾಸನದಲ್ಲಿ ನಡೆದ ‘ಹೋರಾಟದ ನಡಿಗೆ, ಹಾಸನದ ಕಡೆಗೆ..’ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, “ಹಾನಸದ ಜನತೆಯೇ ನಿಮ್ಮಲ್ಲಿ ವಿನಂತಿ, ಪ್ರಜ್ವಲ್ ಗೆದ್ದರೂ-ಸೋತರೂ ಆತನನ್ನು ಒಪ್ಪಿಕೊಳ್ಳಬೇಡಿ. ಹುಚ್ಚಾಸ್ಪತ್ರೆಯಲ್ಲಿ ಇರಬೇಕಾದವನನ್ನು ಎಂಪಿ ಮಾಡಿಬಿಟ್ಟಿರಿ, ಅದರ ಪರಿಣಾಮವೇ ಹಾಸನದ ಹೆಣ್ಣುಮಕ್ಕಳನ್ನು ಶೋಷಣೆ ಮಾಡೋದಕ್ಕೆ ಕಾರಣವಾಗಿದೆ. ಇಡೀ ಕರ್ನಾಟಕದ ಜನವೇ ಹಾಸನಕ್ಕೆ ಬರುವಂತಾಗಿದೆ” ಎಂದು ಹೇಳಿದರು.

ಈ ದೇಶದ ಪ್ರಧಾನಿ ತಾಯಿ ದ್ರೋಹಿ

ಹೆಣ್ಣುಮಕ್ಕಳನ್ನು ಅಸಹಾಯಕತೆಯ ಖೆಡ್ಡಾಗೆ ತೋಡಿ ವಿಡಿಯೋ ಮಾಡಿ ಅವರ ಘನತೆಯನ್ನು ಉಲ್ಲಂಘಿಸಲಾಗಿದೆ. ಆದರೆ, ಪ್ರಧಾನಿ ನಾನು ಜೈವಿಕವಾಗಿ ತಾಯಿ ಹೊಟ್ಟೆಯಲ್ಲಿ ಹುಟ್ಟಿಬಂದಿಲ್ಲ ಬಂದಿಲ್ಲ, ದೇವರು ಕಳಿಸಿದ್ದಾನೆ ಅಂತಾರೆ. ಆದರೆ, ಈಗ ಹೇಳ್ತಾ ಇದೀನಿ, ಈ ದೇಶದ ಪ್ರಧಾನಿ ತಾಯಿದ್ರೋಹಿ. ರಕ್ತ ಸುರಿಸಿ ನೋವು ತಿಂದು ಜನ್ಮ ಕೊಡುವವಳನ್ನು ಪೆನ್‌ಡ್ರೈವ್‌ನಲ್ಲಿ ನೋಡುದ್ವಿ ಎಂದವರನ್ನು ಶಿಕ್ಷಿಸದಿರುವ ನಿಮಗೆಲ್ಲ ನಾಚಿಕೆಯಾಗಬೇಕು.

ಡಿಸಿ-ಎಸ್‌ಪಿ ಕೂಡ ತಪ್ಪಿತಸ್ಥರು

‘ವಿಡಿಯೋ ಮಾಡಿದ ಪ್ರಜ್ವಲ್, ಪೆನ್‌ಡ್ರೈವ್‌ ಹಂಚಿದವರು ಮತ್ತು ಜಿಲ್ಲಾಡಳಿತಕ್ಕೆ ಪ್ರಶ್ನಿಸಬೇಕಿದೆ. ಪ್ರಸಾರವಾಗುವುದಕ್ಕೆ ಬಿಡಬೇಡಿ ಅಂತ ಮನವಿ ಮಾಡಿದರೂ ಕ್ರಮವಹಿಸಲಿಲ್ಲ. ಹಾಸನದ ಡಿಸಿ, ಎಸ್‌ಪಿ ನೀವು ಮಹಿಳೆಯಾಗಿದ್ದುಕೊಂಡು ತಪ್ಪು ಮಾಡಿದ್ದೀರಿ, ನೀವು ತಪ್ಪಿತಸ್ಥರೆ… ಆ ವಿಡಿಯೋಗಳು ಹೆಚ್ಚಿನ ಪ್ರಮಾಣದಲ್ಲಿ ಹರಡುವುದನ್ನು ತಡೆಯುವುದರಲ್ಲಿ ನೀವುಗಳು ವಿಫಲವಾಗಿದ್ದೀರಿ” ಎಂದು ಬೇಸರ ಹೊರಹಾಕಿದರು.

‘ಸಂತ್ರಸ್ತ ಮಹಿಳೆ ಅನ್ನಬೇಡಿ, ಆ ಪದವನ್ನು ಕಿತ್ತಾಕಿ. ತೊಂದರೆಗೆ ಒಳಗಾದ ಮಹಿಳೆಯರ ಜತೆ ನಾವಿದ್ದೇವೆ ಎಂದು ಹೇಳುವುದಕ್ಕೆ ನಾವಿಲ್ಲಿ ಬಂದಿದ್ದೀವಿ. ಈ ಸರ್ಕಾರ ಮಹಿಳೆಯರನ್ನ ರಕ್ಷಿಸಬೇಕು. ಅವರಿಗೆ ಘಟನೆ ಬದುಕನ್ನು ರಕ್ಷಿಸಲು ಮುಂದಾಗು ಅಂತ ಕೇಳುದ್ರೆ ಸಿದ್ದರಾಮಯ್ಯ ಅವರೇ ನಿಮ್ಮ ಬೇಳೆ ಬೇಯಿಸಿಕೊಂಡ್ರಿ, ಜವಾಬ್ದಾರಿಯಿಂದ ವಂಚಿತರಾದ್ರಿ. ಇನ್ನು ಬಿಜೆಪಿಯವ್ರೇ, ನೇಹಾ ಪ್ರಕರಣಕ್ಕೆ ಕೋಮು ಬಣ್ಣ ಬಳಿದಿರಿ. ಹಾನಸಕ್ಕೆ ಬಂದು ಅತ್ಯಾಚಾರಿ ಪ್ರಜ್ವಲನಿಗೆ ವೋಟಾಕಿ ಅಂತ ಕೇಳಿದ್ರಿ, ಪ್ರಧಾನಿ ಮೋದಿ, ಶೋಭಕ್ಕ, ಅಮಿತ್ ಶಾ ಎಲ್ಲರೂ ಎಲ್ಲಿದ್ದೀರಿ. ಹಾನಸಕ್ಕೆ ಕಾಂಗ್ರೆಸ್, ಬಿಜೆಪಿ- ಜೆಡಿಎಸ್ ಮೂರು ಪಕ್ಷದವರು ಯಾರು ಒಳ್ಳೆದನ್ನ ಮಾಡಿಲ್ಲ. ಹಾಸನದ ಜನತೆಯ ಬದುಕಲ್ಲಿ ಆಟ ಆಡಿದ್ದಾರೆ’ ಎಂದರು.

ಪ್ರಜ್ವಲನಿಂದ ಕಾಡುಪ್ರಾಣಿ ಭೇಟೆ

ಪ್ರಜ್ವಲ್ ದೇವಲಾಪುರ ಅರಣ್ಯದಲ್ಲಿ ಜಿಂಕೆ, ಚೀತಾ, ಮೊಲ ಸೇರಿದಂತೆ ಹಲವು ಪ್ರಾಣಿಗಳನ್ನು ಭೇಟೆಯಾಡಲು ಹೋಗುತ್ತಾನೆ. ಅಲ್ಲಿನ ಸ್ಥಳೀಯರು ಅದಕ್ಕೆ ಸಾಕ್ಷಿ ಇದ್ದಾರೆ. ಡಿಸಿ-ಎಸ್‌ಪಿ ತಾಕತ್ತಿದ್ದರೆ ಈ ಕುರಿತು ಪ್ರಕರಣ ದಾಖಲಿಸಿ ತನಿಖೆ ಮಾಡಿ ಎಂದು ಸವಾಲು ಹಾಕಿದರು.

ರೇವಣ್ಣನ ಅಸ್ಪೃಶ್ಯತೆ ಒಪ್ಪಬೇಡಿ

ರೇವಣ್ಣ ನೀವು ನಡೆಸಿರುವ ಅಸ್ಪೃಶ್ಯತೆಯ ಕರಾಳ ಮುಖವನ್ನು ಬಿಚ್ಚಿಡುತ್ತೇವೆ. ಹಾಸನದ ಜನತೆ ಆ ಕುಟುಂಬ ಇದುವರೆಗೂ ನಡೆಸಿರುವ ಅಸ್ಪೃಶ್ಯತೆ, ಜಾತಿ ದೌರ್ಜನ್ಯಗಳನ್ನು ಒಪ್ಪಬೇಡಿ, ತಿರಸ್ಕರಿಸಿ, ಪ್ರತಿಭಟಿಸಿ, ಸೆಟೆದು ನಿಲ್ಲಿ ಎಂದು ನೀಲಾ ಕರೆ ನೀಡಿದರು.

ಒಂದು ಕಲ್ಲಿನಲ್ಲಿ ಎರಡು ಹಕ್ಕಿ ಒಡೆದ ಬಿಜೆಪಿ

ಈ ಪ್ರಕರಣದ ಮೂಲಕ ಹಾಸನದ ಗಂಡಸರು ಹೆಣ್ಣನ್ನು ಒಂಟಿಯಾಗಿ ಆಚೆ ಹೋಗದಂತೆ ಕಟ್ಟಿಹಾಕಲು ಬಿಜೆಪಿ ದಾರಿಮಾಡಿಕೊಟ್ಟಿದೆ. ಮನಸ್ಮೃತಿಯ ಅಣತಿಯಂತೆ ಮಹಿಳೆಯರನ್ನು ಕಟ್ಟಿಹಾಕುವ ಕೆಲಸಕ್ಕೆ ಬಿಜೆಪಿ ಈ ಪ್ರಕರಣದ ಮೂಲಕ ಸಂಚು ರೂಪಿಸಿದೆ. ಇನ್ನು ಎರಡನೇಯದಾಗಿ, ಕುಮಾರಸ್ವಾಮಿ, ದೇವೇಗೌಡ ಹಾಗೂ ರೇವಣ್ಣ ನಿಮ್ಮ ಮನೆಯ ಮಗನನ್ನು ಬೆಂಬಲಿಸಿ ಆ ಮೂಲಕ ಒಂದು ಪ್ರಾದೇಶಿಕ ಪಕ್ಷವನ್ನು ನಾಶ ಮಾಡಿದ್ದಾರೆ ನಿಮಗೆ ಇದು ಇಂದಿಗೂ ಅರ್ಥವಾಗಿಲ್ಲ ಎಂದರು.

ಹಾಸನದ ಮಹಿಳೆಯರ ಕಣ್ಣೀರ ಹನಿಗಳನ್ನು ಬಾವುಟವಾಗಿಸಿ ರಾಜ್ಯಾದ್ಯಂತ ಹೋರಾಟ ಮಾಡೋಣ. ಸ್ವಾಭಿಮಾನದ, ಮಹಿಳಾ ಅಸ್ಮಿತೆಯ ಚಳುವಳಿಯ ಕಟ್ಟೋಣ ಅಂಜಬೇಡಿ. ನಿಮ್ಮೊಂದಿಗೆ ನಾವಿದ್ದೇವೆ ಎಂದು ನೊಂದ ಮಹಿಳೆಯರಿಗೆ ಧೈರ್ಯ ತುಂಬಿದರು.

ಇದನ್ನೂ ಓದಿ; ಸಂತ್ರಸ್ತರನ್ನೇ ಅಪರಾಧಿಗಳನ್ನಾಗಿಸುವ ಯತ್ನಗಳು ನಡೆದವು: ಮಲ್ಲಿಗೆ ಸಿರಿಮನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...