Homeಕರ್ನಾಟಕಹಾಸನ ಚಲೋ| ಪ್ರಜ್ವಲ್ ಅಟ್ಟಹಾಸಕ್ಕೆ ಕೊನೆಯಿದೆ, ಗೆದ್ದರೂ-ಸೋತರೂ ಆತನನ್ನು ಒಪ್ಪಿಕೊಳ್ಳಬೇಡಿ: ಕೆ. ನೀಲಾ

ಹಾಸನ ಚಲೋ| ಪ್ರಜ್ವಲ್ ಅಟ್ಟಹಾಸಕ್ಕೆ ಕೊನೆಯಿದೆ, ಗೆದ್ದರೂ-ಸೋತರೂ ಆತನನ್ನು ಒಪ್ಪಿಕೊಳ್ಳಬೇಡಿ: ಕೆ. ನೀಲಾ

- Advertisement -
- Advertisement -

ಬಿಜೆಪಿಯವರು ರಾಮಾಯಣ, ಮಹಾಭಾರತ ನಮ್ಮವು ಅಂತ ಹೇಳಿಕೊಳ್ತಾರೆ. ಇಂತಹ ಸಂದರ್ಭದಲ್ಲಿ ಮಹಾಭಾರತದ ದ್ರೌಪದಿ ಕತೆಯನ್ನ ನೆನಪು ಮಾಡುವೆ. ಆಕೆಯ ವಸ್ತ್ರವನ್ನು ಸೆಳೆದಾಗ ಆಕೆಯ ಐವರು ಗಂಡಂದಿರು ಸಹಾಯಕ್ಕೆ ಬರುವುದಿಲ್ಲ. ಆಕೆ ಪ್ರತಿಜ್ಞೆ ಮಾಡಿದಂತೆ ದುಶ್ಯಾಸನನ ತೊಡೆ ಸೀಳಿ ಆ ರಕ್ತದಿಂದ ಮುಡಿಕಟ್ಟಿದಳು. ಹಾಗಾಗಿ ಪ್ರಜ್ವಲ ನೀನು ನನ್ನ ಮೊಮ್ಮಗನ ವಯಸ್ಸಿನವನು. 4ನೇ ತಾರೀಖಿನ ನಂತರ ಗೆದ್ದಬಿಡಬಹುದು ಎಂಬ ಅಹಂಕಾರ ನಿನಗಿದ್ರೆ ಎಚ್ಚರಿಕೆ, ನಿನ್ನ ಅಟ್ಟಹಾಸಕ್ಕೆ ಕೊನೆಯಿದೆ ಎಂದು ಜನವಾದಿ ಮಹಿಳಾ ಸಂಘಟನೆಯ ಕೆ. ನೀಲಾ ಆಕ್ರೋಶ ಹೊರಹಾಕಿದರು.

ಹಾಸನದಲ್ಲಿ ನಡೆದ ‘ಹೋರಾಟದ ನಡಿಗೆ, ಹಾಸನದ ಕಡೆಗೆ..’ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, “ಹಾನಸದ ಜನತೆಯೇ ನಿಮ್ಮಲ್ಲಿ ವಿನಂತಿ, ಪ್ರಜ್ವಲ್ ಗೆದ್ದರೂ-ಸೋತರೂ ಆತನನ್ನು ಒಪ್ಪಿಕೊಳ್ಳಬೇಡಿ. ಹುಚ್ಚಾಸ್ಪತ್ರೆಯಲ್ಲಿ ಇರಬೇಕಾದವನನ್ನು ಎಂಪಿ ಮಾಡಿಬಿಟ್ಟಿರಿ, ಅದರ ಪರಿಣಾಮವೇ ಹಾಸನದ ಹೆಣ್ಣುಮಕ್ಕಳನ್ನು ಶೋಷಣೆ ಮಾಡೋದಕ್ಕೆ ಕಾರಣವಾಗಿದೆ. ಇಡೀ ಕರ್ನಾಟಕದ ಜನವೇ ಹಾಸನಕ್ಕೆ ಬರುವಂತಾಗಿದೆ” ಎಂದು ಹೇಳಿದರು.

ಈ ದೇಶದ ಪ್ರಧಾನಿ ತಾಯಿ ದ್ರೋಹಿ

ಹೆಣ್ಣುಮಕ್ಕಳನ್ನು ಅಸಹಾಯಕತೆಯ ಖೆಡ್ಡಾಗೆ ತೋಡಿ ವಿಡಿಯೋ ಮಾಡಿ ಅವರ ಘನತೆಯನ್ನು ಉಲ್ಲಂಘಿಸಲಾಗಿದೆ. ಆದರೆ, ಪ್ರಧಾನಿ ನಾನು ಜೈವಿಕವಾಗಿ ತಾಯಿ ಹೊಟ್ಟೆಯಲ್ಲಿ ಹುಟ್ಟಿಬಂದಿಲ್ಲ ಬಂದಿಲ್ಲ, ದೇವರು ಕಳಿಸಿದ್ದಾನೆ ಅಂತಾರೆ. ಆದರೆ, ಈಗ ಹೇಳ್ತಾ ಇದೀನಿ, ಈ ದೇಶದ ಪ್ರಧಾನಿ ತಾಯಿದ್ರೋಹಿ. ರಕ್ತ ಸುರಿಸಿ ನೋವು ತಿಂದು ಜನ್ಮ ಕೊಡುವವಳನ್ನು ಪೆನ್‌ಡ್ರೈವ್‌ನಲ್ಲಿ ನೋಡುದ್ವಿ ಎಂದವರನ್ನು ಶಿಕ್ಷಿಸದಿರುವ ನಿಮಗೆಲ್ಲ ನಾಚಿಕೆಯಾಗಬೇಕು.

ಡಿಸಿ-ಎಸ್‌ಪಿ ಕೂಡ ತಪ್ಪಿತಸ್ಥರು

‘ವಿಡಿಯೋ ಮಾಡಿದ ಪ್ರಜ್ವಲ್, ಪೆನ್‌ಡ್ರೈವ್‌ ಹಂಚಿದವರು ಮತ್ತು ಜಿಲ್ಲಾಡಳಿತಕ್ಕೆ ಪ್ರಶ್ನಿಸಬೇಕಿದೆ. ಪ್ರಸಾರವಾಗುವುದಕ್ಕೆ ಬಿಡಬೇಡಿ ಅಂತ ಮನವಿ ಮಾಡಿದರೂ ಕ್ರಮವಹಿಸಲಿಲ್ಲ. ಹಾಸನದ ಡಿಸಿ, ಎಸ್‌ಪಿ ನೀವು ಮಹಿಳೆಯಾಗಿದ್ದುಕೊಂಡು ತಪ್ಪು ಮಾಡಿದ್ದೀರಿ, ನೀವು ತಪ್ಪಿತಸ್ಥರೆ… ಆ ವಿಡಿಯೋಗಳು ಹೆಚ್ಚಿನ ಪ್ರಮಾಣದಲ್ಲಿ ಹರಡುವುದನ್ನು ತಡೆಯುವುದರಲ್ಲಿ ನೀವುಗಳು ವಿಫಲವಾಗಿದ್ದೀರಿ” ಎಂದು ಬೇಸರ ಹೊರಹಾಕಿದರು.

‘ಸಂತ್ರಸ್ತ ಮಹಿಳೆ ಅನ್ನಬೇಡಿ, ಆ ಪದವನ್ನು ಕಿತ್ತಾಕಿ. ತೊಂದರೆಗೆ ಒಳಗಾದ ಮಹಿಳೆಯರ ಜತೆ ನಾವಿದ್ದೇವೆ ಎಂದು ಹೇಳುವುದಕ್ಕೆ ನಾವಿಲ್ಲಿ ಬಂದಿದ್ದೀವಿ. ಈ ಸರ್ಕಾರ ಮಹಿಳೆಯರನ್ನ ರಕ್ಷಿಸಬೇಕು. ಅವರಿಗೆ ಘಟನೆ ಬದುಕನ್ನು ರಕ್ಷಿಸಲು ಮುಂದಾಗು ಅಂತ ಕೇಳುದ್ರೆ ಸಿದ್ದರಾಮಯ್ಯ ಅವರೇ ನಿಮ್ಮ ಬೇಳೆ ಬೇಯಿಸಿಕೊಂಡ್ರಿ, ಜವಾಬ್ದಾರಿಯಿಂದ ವಂಚಿತರಾದ್ರಿ. ಇನ್ನು ಬಿಜೆಪಿಯವ್ರೇ, ನೇಹಾ ಪ್ರಕರಣಕ್ಕೆ ಕೋಮು ಬಣ್ಣ ಬಳಿದಿರಿ. ಹಾನಸಕ್ಕೆ ಬಂದು ಅತ್ಯಾಚಾರಿ ಪ್ರಜ್ವಲನಿಗೆ ವೋಟಾಕಿ ಅಂತ ಕೇಳಿದ್ರಿ, ಪ್ರಧಾನಿ ಮೋದಿ, ಶೋಭಕ್ಕ, ಅಮಿತ್ ಶಾ ಎಲ್ಲರೂ ಎಲ್ಲಿದ್ದೀರಿ. ಹಾನಸಕ್ಕೆ ಕಾಂಗ್ರೆಸ್, ಬಿಜೆಪಿ- ಜೆಡಿಎಸ್ ಮೂರು ಪಕ್ಷದವರು ಯಾರು ಒಳ್ಳೆದನ್ನ ಮಾಡಿಲ್ಲ. ಹಾಸನದ ಜನತೆಯ ಬದುಕಲ್ಲಿ ಆಟ ಆಡಿದ್ದಾರೆ’ ಎಂದರು.

ಪ್ರಜ್ವಲನಿಂದ ಕಾಡುಪ್ರಾಣಿ ಭೇಟೆ

ಪ್ರಜ್ವಲ್ ದೇವಲಾಪುರ ಅರಣ್ಯದಲ್ಲಿ ಜಿಂಕೆ, ಚೀತಾ, ಮೊಲ ಸೇರಿದಂತೆ ಹಲವು ಪ್ರಾಣಿಗಳನ್ನು ಭೇಟೆಯಾಡಲು ಹೋಗುತ್ತಾನೆ. ಅಲ್ಲಿನ ಸ್ಥಳೀಯರು ಅದಕ್ಕೆ ಸಾಕ್ಷಿ ಇದ್ದಾರೆ. ಡಿಸಿ-ಎಸ್‌ಪಿ ತಾಕತ್ತಿದ್ದರೆ ಈ ಕುರಿತು ಪ್ರಕರಣ ದಾಖಲಿಸಿ ತನಿಖೆ ಮಾಡಿ ಎಂದು ಸವಾಲು ಹಾಕಿದರು.

ರೇವಣ್ಣನ ಅಸ್ಪೃಶ್ಯತೆ ಒಪ್ಪಬೇಡಿ

ರೇವಣ್ಣ ನೀವು ನಡೆಸಿರುವ ಅಸ್ಪೃಶ್ಯತೆಯ ಕರಾಳ ಮುಖವನ್ನು ಬಿಚ್ಚಿಡುತ್ತೇವೆ. ಹಾಸನದ ಜನತೆ ಆ ಕುಟುಂಬ ಇದುವರೆಗೂ ನಡೆಸಿರುವ ಅಸ್ಪೃಶ್ಯತೆ, ಜಾತಿ ದೌರ್ಜನ್ಯಗಳನ್ನು ಒಪ್ಪಬೇಡಿ, ತಿರಸ್ಕರಿಸಿ, ಪ್ರತಿಭಟಿಸಿ, ಸೆಟೆದು ನಿಲ್ಲಿ ಎಂದು ನೀಲಾ ಕರೆ ನೀಡಿದರು.

ಒಂದು ಕಲ್ಲಿನಲ್ಲಿ ಎರಡು ಹಕ್ಕಿ ಒಡೆದ ಬಿಜೆಪಿ

ಈ ಪ್ರಕರಣದ ಮೂಲಕ ಹಾಸನದ ಗಂಡಸರು ಹೆಣ್ಣನ್ನು ಒಂಟಿಯಾಗಿ ಆಚೆ ಹೋಗದಂತೆ ಕಟ್ಟಿಹಾಕಲು ಬಿಜೆಪಿ ದಾರಿಮಾಡಿಕೊಟ್ಟಿದೆ. ಮನಸ್ಮೃತಿಯ ಅಣತಿಯಂತೆ ಮಹಿಳೆಯರನ್ನು ಕಟ್ಟಿಹಾಕುವ ಕೆಲಸಕ್ಕೆ ಬಿಜೆಪಿ ಈ ಪ್ರಕರಣದ ಮೂಲಕ ಸಂಚು ರೂಪಿಸಿದೆ. ಇನ್ನು ಎರಡನೇಯದಾಗಿ, ಕುಮಾರಸ್ವಾಮಿ, ದೇವೇಗೌಡ ಹಾಗೂ ರೇವಣ್ಣ ನಿಮ್ಮ ಮನೆಯ ಮಗನನ್ನು ಬೆಂಬಲಿಸಿ ಆ ಮೂಲಕ ಒಂದು ಪ್ರಾದೇಶಿಕ ಪಕ್ಷವನ್ನು ನಾಶ ಮಾಡಿದ್ದಾರೆ ನಿಮಗೆ ಇದು ಇಂದಿಗೂ ಅರ್ಥವಾಗಿಲ್ಲ ಎಂದರು.

ಹಾಸನದ ಮಹಿಳೆಯರ ಕಣ್ಣೀರ ಹನಿಗಳನ್ನು ಬಾವುಟವಾಗಿಸಿ ರಾಜ್ಯಾದ್ಯಂತ ಹೋರಾಟ ಮಾಡೋಣ. ಸ್ವಾಭಿಮಾನದ, ಮಹಿಳಾ ಅಸ್ಮಿತೆಯ ಚಳುವಳಿಯ ಕಟ್ಟೋಣ ಅಂಜಬೇಡಿ. ನಿಮ್ಮೊಂದಿಗೆ ನಾವಿದ್ದೇವೆ ಎಂದು ನೊಂದ ಮಹಿಳೆಯರಿಗೆ ಧೈರ್ಯ ತುಂಬಿದರು.

ಇದನ್ನೂ ಓದಿ; ಸಂತ್ರಸ್ತರನ್ನೇ ಅಪರಾಧಿಗಳನ್ನಾಗಿಸುವ ಯತ್ನಗಳು ನಡೆದವು: ಮಲ್ಲಿಗೆ ಸಿರಿಮನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಿಯಾಂಕ ಗಾಂಧಿ

ಗಾಜಾದಲ್ಲಿ ಇಸ್ರೇಲ್‌ನ ‘ಜನಾಂಗೀಯ ಕೃತ್ಯಗಳು’ ನಿಲ್ಲಬೇಕು: ಪ್ರಿಯಾಂಕಾ ಗಾಂಧಿ

0
ಗಾಜಾದಲ್ಲಿ ಇಸ್ರೇಲ್ ನಡೆಸುತ್ತಿರುವ ಮಿಲಿಟರಿ ದಾಳಿಯನ್ನು ಸ್ವೀಕಾರಾರ್ಹವಲ್ಲ ಮತ್ತು ಹತ್ಯಾಕಾಂಡ ಎಂದು ಹೇಳಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಇದನ್ನು ಜಗತ್ತಿನ ಪ್ರತಿಯೊಂದು ಸರ್ಕಾರ ಖಂಡಿಸಬೇಕು ಎಂದು ಶುಕ್ರವಾರ ಕರೆ...