Homeಕರ್ನಾಟಕಆಪರೇಷನ್ ಕಮಲಕ್ಕೆ ಅವಕಾಶ ಕೊಡಬೇಡಿ, ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ನೀಡಿ: ರಾಜಕೀಯ ವಿಶ್ಲೇಷಕ ಸುಧೀಂದ್ರ ಕುಲಕರ್ಣಿ...

ಆಪರೇಷನ್ ಕಮಲಕ್ಕೆ ಅವಕಾಶ ಕೊಡಬೇಡಿ, ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ನೀಡಿ: ರಾಜಕೀಯ ವಿಶ್ಲೇಷಕ ಸುಧೀಂದ್ರ ಕುಲಕರ್ಣಿ ಕರೆ

- Advertisement -
- Advertisement -

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಮತದಾರರು ‘ಆಪರೇಷನ್ ಕಮಲ’ ಮಾಡಲು ಅವಕಾಶ ಮಾಡಿಕೊಡದೇ ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ನೀಡಬೇಕು ಎಂದು ರಾಜಕೀಯ ವಿಶ್ಲೇಷಕ ಸುಧೀಂದ್ರ ಕುಲಕರ್ಣಿ ಮನವಿ ಮಾಡಿದ್ದಾರೆ. ಪ್ರಧಾನಿಯಾಗಿದ್ದ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಸುಧೀಂದ್ರ ಕುಲಕರ್ಣಿ ಅವರು ಸಲಹೆಗಾರರಾಗಿದ್ದರು.

ವಿಜಯಪುರದಲ್ಲಿ ಭಾನುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ”ರಾಜ್ಯದ ಪ್ರಬುದ್ಧ ಮತದಾರರು ‘ಆಪರೇಷನ್ ಕಮಲ’ದ ಮೂಲಕ ಜನಾದೇಶ ಕದಿಯಲು ಬಿಜೆಪಿಗೆ ಅವಕಾಶ ನೀಡದೇ, ಕಾಂಗ್ರೆಸ್‌ಗೆ ಸ್ಪಷ್ಟ, ಪೂರ್ಣ ಬಹುಮತ ನೀಡಬೇಕು” ಎಂದು ಹೇಳಿದ್ದಾರೆ.

”ಆಪರೇಷನ್ ಕಮಲ ಎನ್ನುವುದು ಪ್ರಜಾತಂತ್ರ ವ್ಯವಸ್ಥಗೆ ಮಾಡುವ ಅಪಚಾರ. ಒಂದರ್ಥದಲ್ಲಿ ಪ್ರಜಾತಂತ್ರ ಹಾಗೂ ಜನಾದೇಶವನ್ನೇ ಅಪಹರಣ ಮಾಡುವ ಅಪಾಯಕಾರಿ ಬೆಳವಣಿಗೆ. ಇಂಥ ದುಸ್ಥಿತಿಗೆ ರಾಜ್ಯ ವಿಧಾನಸಬೆ ಚುನಾವಣೆ ಮೂಲಕವೇ ರಾಷ್ಟ್ರ ಮಟ್ಟದಲ್ಲಿ 2024 ರಲ್ಲಿ ಪ್ರಜಾಪ್ರಭುತ್ವ ರಕ್ಷಣೆಗೆ ನಾಂದಿ ಹಾಡಬೇಕು” ಎಂದು ಕೋರಿದರು.

”ದೇಶದಲ್ಲಿ ಪ್ರಜಾಪ್ರಭುತ್ವ, ಸಂವಿಧಾನ ಮೌಲ್ಯ ಉಳಿಯಬೇಕು ಎಂದಾದರೆ ಬಿಜೆಪಿ ವಿರುದ್ಧ ಮತ ಚಲಾಯಿಸಿ” ಎಂದು ಅವರು ಮತದಾರರಿಗೆ ಕರೆ ನೀಡಿದರು.

”ಒಂದು ವೇಳೆ ಮೇ 13ರಂದು ತ್ರಿಶಂಕು ಸರ್ಕಾರ ಬಂದರೆ ರಾಜ್ಯಕ್ಕೆ ದೊಡ್ಡ ಅಪಾಯ ಎದುರಾಗಲಿದೆ” ಎಂದು ಆತಂಕ ವ್ಯಕ್ತಪಡಿಸಿದರು.

ಇದನ್ನೂ ಓದಿ: ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ, ಸಿದ್ದರಾಮಯ್ಯ ಸಿಎಂ ಆಗಬೇಕು ಎಂದ ಮತದಾರ: ಎಬಿಪಿ ಸಿ–ವೋಟರ್ ಸಮೀಕ್ಷೆ

”ಶೇ.40 ಲಂಚದ ಆರೋಪಕ್ಕೆ ಪ್ರಧಾನಿ ಹಾಗೂ ಗೃಹ ಸಚಿವ ಅಮಿತ್ ಶಾ ಉತ್ತರ ನೀಡುತ್ತಿಲ್ಲ. ಬದಲಾಗಿ ಗೃಹ ಸಚಿವ ಅಮಿತ್ ಶಾ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನೀಡಿದರೆ ದಂಗೆಗಳಾಗುತ್ತವೆ ಎಂದು ರಾಜ್ಯದ ಜನರಿಗೆ ಭಯ ಹಾಕುವ ಹಾಗೂ ರಾಜ್ಯದ ಮತದಾರರನ್ನು ಅವಮಾನ ಮಾಡುವ ಕೆಲಸ ಮಾಡುತ್ತಿದ್ದಾರೆ” ಎಂದು ಟೀಕಾ ಪ್ರಹಾರ ನಡೆಸಿದರು.

”ಪ್ರಧಾನಿ ಮೋದಿ, ಗೃಹಸಚಿವ ಸೇರಿದಂತೆ ಎಲ್ಲ ಬಿಜೆಪಿ ನಾಯಕರು, ರಾಜ್ಯದ ಅಭಿವೃದ್ಧಿಗೆ ಡಬಲ್ ಎಂಜಿನ್ ಸರ್ಕಾರ ಬೇಕೇ ಬೇಕು ಎಂದು ಅಬ್ಬರದ ಪ್ರಚಾರ ನಡೆಸಿದ್ದಾರೆ. ಆದರೆ ಇದೀಗ ಕೇಂದ್ರ-ರಾಜ್ಯದಲ್ಲಿ ಡಬಲ್ ಎಂಜಿನ್ ಸರ್ಕಾರವೇ ಇದ್ದರೂ ರಾಜ್ಯದಲ್ಲಿ ಬೆಲೆ ಏರಿಕೆ ಏಕೆ ನಿಯಂತ್ರಿಸಲಿಲ್ಲ, ಅಡುಗೆ ಅನಿಲ ದರ 1200 ರೂ. ಗಡಿ ದಾಡಲು ಬಿಟ್ಟಿದ್ದೇಕೆ. ನಾನು ಲಂಚ ತಿನ್ನುವುದಿಲ್ಲ, ಇತರರು ಲಂಚ ತಿನ್ನಲು ಬಿಡುವುದಿಲ್ಲವೆಂದು ದೇಶದ ಜನರಿಗೆ ಭರವಸೆ ನೀಡಿದ್ದ ಪ್ರಧಾನಿ ರಾಜ್ಯದಲ್ಲಿ ಭ್ರಷ್ಟಚಾರ ನಿಗ್ರಹಿಸಲು ಏಕೆ ಆಸಕ್ತಿ ತೋರಲಿಲ್ಲ ಎಂದು ಪ್ರಶ್ನಿಸಿದರು.

”ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನೀಡಿದರೆ ದಂಗೆಯಾಗುತ್ತವೆ ಎನ್ನುವ ಗೃಹ ಸಚಿವ ಅಮಿತ್ ಶಾ, ಮಣಿಪುರ ರಾಜ್ಯದಲ್ಲಿ ತಮ್ಮದೇ ಪಕ್ಷದ ಸರ್ಕಾರ ಇದ್ದರೂ ಹಿಂಸಾಚಾರ ತಡೆಯಲು ಏಕೆ ಸಾಧ್ಯವಾಗಿಲ್ಲ. ಅಲ್ಲಿನ ಡಬಲ್ ಎಂಜಿನ್ ಸರ್ಕಾರ ಏನು ಮಾಡುತ್ತಿದೆ” ಎಂದು ಕುಟುಕಿದರು.

”ಡಬಲ್ ಎಂಜಿನ್ ಸರ್ಕಾರ ಎಂಬುದು ಪೊಳ್ಳು ಭರವಸೆ, ಡಬಲ್ ಎಂಜಿನ್ ಎಂಬುದು ಪ್ರಜಾಪ್ರಭುತ್ವ ವಿರೋಧಿ, ಸಂವಿಧಾನ ವಿರೋಧಿಯಾಗಿದೆ. ನಮ್ಮ ದೇಶ ಹಲವು ಪಕ್ಷಗಳಿರುವ ದೇಶವಾಗಿದೆ” ಎಂದರು.

”ಬಿಜೆಪಿಗೆ ಡಬಲ್ ಎಂಜಿನ್ ಸರ್ಕಾರವಷ್ಟೇ ಬೇಕಿಲ್ಲ, ಮೋದಿ ಎಂಬ ಸಿಂಗಲ್ ಡ್ರೈವರ್ ಇರುವ ಡಬಲ್‌ ಎಂಜಿನ್‌ ಸರ್ಕಾರ ಬೇಕಾಗಿದೆ. ದೆಹಲಿಯಲ್ಲೂ ಮೋದಿಯೇ ಡ್ರೈವರ್‌, ಕರ್ನಾಟಕದಲ್ಲೂ ಮೋದಿಯವರೇ ಡ್ರೈವರ್‌ ಎಂಬುದು ಅವರ ಹುನ್ನಾರವಾಗಿದೆ” ಎಂದು ದೂರಿದರು.

”ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎಂಬುದು ಮೋದಿಯ ಪೊಳ್ಳು ಘೋಷಣೆ. ರಾಜ್ಯದ 224 ಕ್ಷೇತ್ರದಲ್ಲಿ ಒಬ್ಬ ಮುಸ್ಲಿಮರಿಗೂ ಟಿಕೆಟ್‌ ನೀಡಿಲ್ಲ. ಇದೇನಾ‌ ಸಬ್ ಕಾ ಸಾಥ್, ಸಬ್ ಕಾ ವಿಕಾಸ್?” ಎಂದು ಪ್ರಶ್ನೆ ಮಾಡಿದರು.

”ರಾಹುಲ್ ಗಾಂಧಿ ಒಳ್ಳೆಯ ಗುಣಗಳಿರುವ ನಾಯಕ, ಅವರು ದೇಶದ ನಾಯಕತ್ವ ವಹಿಸಿಕೊಳ್ಳಬೇಕಾದ ತಮ್ಮ ಸಾಮರ್ಥ್ಯವನ್ನು ಇನ್ನೂ ತೋರಿಸಬೇಕಾದ ಅಗತ್ಯವಿದೆ” ಎಂದು ಅಭಿಪ್ರಾಯಪಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...