Homeಕರ್ನಾಟಕಆಪರೇಷನ್ ಕಮಲಕ್ಕೆ ಅವಕಾಶ ಕೊಡಬೇಡಿ, ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ನೀಡಿ: ರಾಜಕೀಯ ವಿಶ್ಲೇಷಕ ಸುಧೀಂದ್ರ ಕುಲಕರ್ಣಿ...

ಆಪರೇಷನ್ ಕಮಲಕ್ಕೆ ಅವಕಾಶ ಕೊಡಬೇಡಿ, ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ನೀಡಿ: ರಾಜಕೀಯ ವಿಶ್ಲೇಷಕ ಸುಧೀಂದ್ರ ಕುಲಕರ್ಣಿ ಕರೆ

- Advertisement -
- Advertisement -

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಮತದಾರರು ‘ಆಪರೇಷನ್ ಕಮಲ’ ಮಾಡಲು ಅವಕಾಶ ಮಾಡಿಕೊಡದೇ ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ನೀಡಬೇಕು ಎಂದು ರಾಜಕೀಯ ವಿಶ್ಲೇಷಕ ಸುಧೀಂದ್ರ ಕುಲಕರ್ಣಿ ಮನವಿ ಮಾಡಿದ್ದಾರೆ. ಪ್ರಧಾನಿಯಾಗಿದ್ದ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಸುಧೀಂದ್ರ ಕುಲಕರ್ಣಿ ಅವರು ಸಲಹೆಗಾರರಾಗಿದ್ದರು.

ವಿಜಯಪುರದಲ್ಲಿ ಭಾನುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ”ರಾಜ್ಯದ ಪ್ರಬುದ್ಧ ಮತದಾರರು ‘ಆಪರೇಷನ್ ಕಮಲ’ದ ಮೂಲಕ ಜನಾದೇಶ ಕದಿಯಲು ಬಿಜೆಪಿಗೆ ಅವಕಾಶ ನೀಡದೇ, ಕಾಂಗ್ರೆಸ್‌ಗೆ ಸ್ಪಷ್ಟ, ಪೂರ್ಣ ಬಹುಮತ ನೀಡಬೇಕು” ಎಂದು ಹೇಳಿದ್ದಾರೆ.

”ಆಪರೇಷನ್ ಕಮಲ ಎನ್ನುವುದು ಪ್ರಜಾತಂತ್ರ ವ್ಯವಸ್ಥಗೆ ಮಾಡುವ ಅಪಚಾರ. ಒಂದರ್ಥದಲ್ಲಿ ಪ್ರಜಾತಂತ್ರ ಹಾಗೂ ಜನಾದೇಶವನ್ನೇ ಅಪಹರಣ ಮಾಡುವ ಅಪಾಯಕಾರಿ ಬೆಳವಣಿಗೆ. ಇಂಥ ದುಸ್ಥಿತಿಗೆ ರಾಜ್ಯ ವಿಧಾನಸಬೆ ಚುನಾವಣೆ ಮೂಲಕವೇ ರಾಷ್ಟ್ರ ಮಟ್ಟದಲ್ಲಿ 2024 ರಲ್ಲಿ ಪ್ರಜಾಪ್ರಭುತ್ವ ರಕ್ಷಣೆಗೆ ನಾಂದಿ ಹಾಡಬೇಕು” ಎಂದು ಕೋರಿದರು.

”ದೇಶದಲ್ಲಿ ಪ್ರಜಾಪ್ರಭುತ್ವ, ಸಂವಿಧಾನ ಮೌಲ್ಯ ಉಳಿಯಬೇಕು ಎಂದಾದರೆ ಬಿಜೆಪಿ ವಿರುದ್ಧ ಮತ ಚಲಾಯಿಸಿ” ಎಂದು ಅವರು ಮತದಾರರಿಗೆ ಕರೆ ನೀಡಿದರು.

”ಒಂದು ವೇಳೆ ಮೇ 13ರಂದು ತ್ರಿಶಂಕು ಸರ್ಕಾರ ಬಂದರೆ ರಾಜ್ಯಕ್ಕೆ ದೊಡ್ಡ ಅಪಾಯ ಎದುರಾಗಲಿದೆ” ಎಂದು ಆತಂಕ ವ್ಯಕ್ತಪಡಿಸಿದರು.

ಇದನ್ನೂ ಓದಿ: ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ, ಸಿದ್ದರಾಮಯ್ಯ ಸಿಎಂ ಆಗಬೇಕು ಎಂದ ಮತದಾರ: ಎಬಿಪಿ ಸಿ–ವೋಟರ್ ಸಮೀಕ್ಷೆ

”ಶೇ.40 ಲಂಚದ ಆರೋಪಕ್ಕೆ ಪ್ರಧಾನಿ ಹಾಗೂ ಗೃಹ ಸಚಿವ ಅಮಿತ್ ಶಾ ಉತ್ತರ ನೀಡುತ್ತಿಲ್ಲ. ಬದಲಾಗಿ ಗೃಹ ಸಚಿವ ಅಮಿತ್ ಶಾ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನೀಡಿದರೆ ದಂಗೆಗಳಾಗುತ್ತವೆ ಎಂದು ರಾಜ್ಯದ ಜನರಿಗೆ ಭಯ ಹಾಕುವ ಹಾಗೂ ರಾಜ್ಯದ ಮತದಾರರನ್ನು ಅವಮಾನ ಮಾಡುವ ಕೆಲಸ ಮಾಡುತ್ತಿದ್ದಾರೆ” ಎಂದು ಟೀಕಾ ಪ್ರಹಾರ ನಡೆಸಿದರು.

”ಪ್ರಧಾನಿ ಮೋದಿ, ಗೃಹಸಚಿವ ಸೇರಿದಂತೆ ಎಲ್ಲ ಬಿಜೆಪಿ ನಾಯಕರು, ರಾಜ್ಯದ ಅಭಿವೃದ್ಧಿಗೆ ಡಬಲ್ ಎಂಜಿನ್ ಸರ್ಕಾರ ಬೇಕೇ ಬೇಕು ಎಂದು ಅಬ್ಬರದ ಪ್ರಚಾರ ನಡೆಸಿದ್ದಾರೆ. ಆದರೆ ಇದೀಗ ಕೇಂದ್ರ-ರಾಜ್ಯದಲ್ಲಿ ಡಬಲ್ ಎಂಜಿನ್ ಸರ್ಕಾರವೇ ಇದ್ದರೂ ರಾಜ್ಯದಲ್ಲಿ ಬೆಲೆ ಏರಿಕೆ ಏಕೆ ನಿಯಂತ್ರಿಸಲಿಲ್ಲ, ಅಡುಗೆ ಅನಿಲ ದರ 1200 ರೂ. ಗಡಿ ದಾಡಲು ಬಿಟ್ಟಿದ್ದೇಕೆ. ನಾನು ಲಂಚ ತಿನ್ನುವುದಿಲ್ಲ, ಇತರರು ಲಂಚ ತಿನ್ನಲು ಬಿಡುವುದಿಲ್ಲವೆಂದು ದೇಶದ ಜನರಿಗೆ ಭರವಸೆ ನೀಡಿದ್ದ ಪ್ರಧಾನಿ ರಾಜ್ಯದಲ್ಲಿ ಭ್ರಷ್ಟಚಾರ ನಿಗ್ರಹಿಸಲು ಏಕೆ ಆಸಕ್ತಿ ತೋರಲಿಲ್ಲ ಎಂದು ಪ್ರಶ್ನಿಸಿದರು.

”ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನೀಡಿದರೆ ದಂಗೆಯಾಗುತ್ತವೆ ಎನ್ನುವ ಗೃಹ ಸಚಿವ ಅಮಿತ್ ಶಾ, ಮಣಿಪುರ ರಾಜ್ಯದಲ್ಲಿ ತಮ್ಮದೇ ಪಕ್ಷದ ಸರ್ಕಾರ ಇದ್ದರೂ ಹಿಂಸಾಚಾರ ತಡೆಯಲು ಏಕೆ ಸಾಧ್ಯವಾಗಿಲ್ಲ. ಅಲ್ಲಿನ ಡಬಲ್ ಎಂಜಿನ್ ಸರ್ಕಾರ ಏನು ಮಾಡುತ್ತಿದೆ” ಎಂದು ಕುಟುಕಿದರು.

”ಡಬಲ್ ಎಂಜಿನ್ ಸರ್ಕಾರ ಎಂಬುದು ಪೊಳ್ಳು ಭರವಸೆ, ಡಬಲ್ ಎಂಜಿನ್ ಎಂಬುದು ಪ್ರಜಾಪ್ರಭುತ್ವ ವಿರೋಧಿ, ಸಂವಿಧಾನ ವಿರೋಧಿಯಾಗಿದೆ. ನಮ್ಮ ದೇಶ ಹಲವು ಪಕ್ಷಗಳಿರುವ ದೇಶವಾಗಿದೆ” ಎಂದರು.

”ಬಿಜೆಪಿಗೆ ಡಬಲ್ ಎಂಜಿನ್ ಸರ್ಕಾರವಷ್ಟೇ ಬೇಕಿಲ್ಲ, ಮೋದಿ ಎಂಬ ಸಿಂಗಲ್ ಡ್ರೈವರ್ ಇರುವ ಡಬಲ್‌ ಎಂಜಿನ್‌ ಸರ್ಕಾರ ಬೇಕಾಗಿದೆ. ದೆಹಲಿಯಲ್ಲೂ ಮೋದಿಯೇ ಡ್ರೈವರ್‌, ಕರ್ನಾಟಕದಲ್ಲೂ ಮೋದಿಯವರೇ ಡ್ರೈವರ್‌ ಎಂಬುದು ಅವರ ಹುನ್ನಾರವಾಗಿದೆ” ಎಂದು ದೂರಿದರು.

”ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎಂಬುದು ಮೋದಿಯ ಪೊಳ್ಳು ಘೋಷಣೆ. ರಾಜ್ಯದ 224 ಕ್ಷೇತ್ರದಲ್ಲಿ ಒಬ್ಬ ಮುಸ್ಲಿಮರಿಗೂ ಟಿಕೆಟ್‌ ನೀಡಿಲ್ಲ. ಇದೇನಾ‌ ಸಬ್ ಕಾ ಸಾಥ್, ಸಬ್ ಕಾ ವಿಕಾಸ್?” ಎಂದು ಪ್ರಶ್ನೆ ಮಾಡಿದರು.

”ರಾಹುಲ್ ಗಾಂಧಿ ಒಳ್ಳೆಯ ಗುಣಗಳಿರುವ ನಾಯಕ, ಅವರು ದೇಶದ ನಾಯಕತ್ವ ವಹಿಸಿಕೊಳ್ಳಬೇಕಾದ ತಮ್ಮ ಸಾಮರ್ಥ್ಯವನ್ನು ಇನ್ನೂ ತೋರಿಸಬೇಕಾದ ಅಗತ್ಯವಿದೆ” ಎಂದು ಅಭಿಪ್ರಾಯಪಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...