Homeಕರ್ನಾಟಕಆಪರೇಷನ್ ಕಮಲಕ್ಕೆ ಅವಕಾಶ ಕೊಡಬೇಡಿ, ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ನೀಡಿ: ರಾಜಕೀಯ ವಿಶ್ಲೇಷಕ ಸುಧೀಂದ್ರ ಕುಲಕರ್ಣಿ...

ಆಪರೇಷನ್ ಕಮಲಕ್ಕೆ ಅವಕಾಶ ಕೊಡಬೇಡಿ, ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ನೀಡಿ: ರಾಜಕೀಯ ವಿಶ್ಲೇಷಕ ಸುಧೀಂದ್ರ ಕುಲಕರ್ಣಿ ಕರೆ

- Advertisement -
- Advertisement -

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಮತದಾರರು ‘ಆಪರೇಷನ್ ಕಮಲ’ ಮಾಡಲು ಅವಕಾಶ ಮಾಡಿಕೊಡದೇ ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ನೀಡಬೇಕು ಎಂದು ರಾಜಕೀಯ ವಿಶ್ಲೇಷಕ ಸುಧೀಂದ್ರ ಕುಲಕರ್ಣಿ ಮನವಿ ಮಾಡಿದ್ದಾರೆ. ಪ್ರಧಾನಿಯಾಗಿದ್ದ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಸುಧೀಂದ್ರ ಕುಲಕರ್ಣಿ ಅವರು ಸಲಹೆಗಾರರಾಗಿದ್ದರು.

ವಿಜಯಪುರದಲ್ಲಿ ಭಾನುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ”ರಾಜ್ಯದ ಪ್ರಬುದ್ಧ ಮತದಾರರು ‘ಆಪರೇಷನ್ ಕಮಲ’ದ ಮೂಲಕ ಜನಾದೇಶ ಕದಿಯಲು ಬಿಜೆಪಿಗೆ ಅವಕಾಶ ನೀಡದೇ, ಕಾಂಗ್ರೆಸ್‌ಗೆ ಸ್ಪಷ್ಟ, ಪೂರ್ಣ ಬಹುಮತ ನೀಡಬೇಕು” ಎಂದು ಹೇಳಿದ್ದಾರೆ.

”ಆಪರೇಷನ್ ಕಮಲ ಎನ್ನುವುದು ಪ್ರಜಾತಂತ್ರ ವ್ಯವಸ್ಥಗೆ ಮಾಡುವ ಅಪಚಾರ. ಒಂದರ್ಥದಲ್ಲಿ ಪ್ರಜಾತಂತ್ರ ಹಾಗೂ ಜನಾದೇಶವನ್ನೇ ಅಪಹರಣ ಮಾಡುವ ಅಪಾಯಕಾರಿ ಬೆಳವಣಿಗೆ. ಇಂಥ ದುಸ್ಥಿತಿಗೆ ರಾಜ್ಯ ವಿಧಾನಸಬೆ ಚುನಾವಣೆ ಮೂಲಕವೇ ರಾಷ್ಟ್ರ ಮಟ್ಟದಲ್ಲಿ 2024 ರಲ್ಲಿ ಪ್ರಜಾಪ್ರಭುತ್ವ ರಕ್ಷಣೆಗೆ ನಾಂದಿ ಹಾಡಬೇಕು” ಎಂದು ಕೋರಿದರು.

”ದೇಶದಲ್ಲಿ ಪ್ರಜಾಪ್ರಭುತ್ವ, ಸಂವಿಧಾನ ಮೌಲ್ಯ ಉಳಿಯಬೇಕು ಎಂದಾದರೆ ಬಿಜೆಪಿ ವಿರುದ್ಧ ಮತ ಚಲಾಯಿಸಿ” ಎಂದು ಅವರು ಮತದಾರರಿಗೆ ಕರೆ ನೀಡಿದರು.

”ಒಂದು ವೇಳೆ ಮೇ 13ರಂದು ತ್ರಿಶಂಕು ಸರ್ಕಾರ ಬಂದರೆ ರಾಜ್ಯಕ್ಕೆ ದೊಡ್ಡ ಅಪಾಯ ಎದುರಾಗಲಿದೆ” ಎಂದು ಆತಂಕ ವ್ಯಕ್ತಪಡಿಸಿದರು.

ಇದನ್ನೂ ಓದಿ: ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ, ಸಿದ್ದರಾಮಯ್ಯ ಸಿಎಂ ಆಗಬೇಕು ಎಂದ ಮತದಾರ: ಎಬಿಪಿ ಸಿ–ವೋಟರ್ ಸಮೀಕ್ಷೆ

”ಶೇ.40 ಲಂಚದ ಆರೋಪಕ್ಕೆ ಪ್ರಧಾನಿ ಹಾಗೂ ಗೃಹ ಸಚಿವ ಅಮಿತ್ ಶಾ ಉತ್ತರ ನೀಡುತ್ತಿಲ್ಲ. ಬದಲಾಗಿ ಗೃಹ ಸಚಿವ ಅಮಿತ್ ಶಾ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನೀಡಿದರೆ ದಂಗೆಗಳಾಗುತ್ತವೆ ಎಂದು ರಾಜ್ಯದ ಜನರಿಗೆ ಭಯ ಹಾಕುವ ಹಾಗೂ ರಾಜ್ಯದ ಮತದಾರರನ್ನು ಅವಮಾನ ಮಾಡುವ ಕೆಲಸ ಮಾಡುತ್ತಿದ್ದಾರೆ” ಎಂದು ಟೀಕಾ ಪ್ರಹಾರ ನಡೆಸಿದರು.

”ಪ್ರಧಾನಿ ಮೋದಿ, ಗೃಹಸಚಿವ ಸೇರಿದಂತೆ ಎಲ್ಲ ಬಿಜೆಪಿ ನಾಯಕರು, ರಾಜ್ಯದ ಅಭಿವೃದ್ಧಿಗೆ ಡಬಲ್ ಎಂಜಿನ್ ಸರ್ಕಾರ ಬೇಕೇ ಬೇಕು ಎಂದು ಅಬ್ಬರದ ಪ್ರಚಾರ ನಡೆಸಿದ್ದಾರೆ. ಆದರೆ ಇದೀಗ ಕೇಂದ್ರ-ರಾಜ್ಯದಲ್ಲಿ ಡಬಲ್ ಎಂಜಿನ್ ಸರ್ಕಾರವೇ ಇದ್ದರೂ ರಾಜ್ಯದಲ್ಲಿ ಬೆಲೆ ಏರಿಕೆ ಏಕೆ ನಿಯಂತ್ರಿಸಲಿಲ್ಲ, ಅಡುಗೆ ಅನಿಲ ದರ 1200 ರೂ. ಗಡಿ ದಾಡಲು ಬಿಟ್ಟಿದ್ದೇಕೆ. ನಾನು ಲಂಚ ತಿನ್ನುವುದಿಲ್ಲ, ಇತರರು ಲಂಚ ತಿನ್ನಲು ಬಿಡುವುದಿಲ್ಲವೆಂದು ದೇಶದ ಜನರಿಗೆ ಭರವಸೆ ನೀಡಿದ್ದ ಪ್ರಧಾನಿ ರಾಜ್ಯದಲ್ಲಿ ಭ್ರಷ್ಟಚಾರ ನಿಗ್ರಹಿಸಲು ಏಕೆ ಆಸಕ್ತಿ ತೋರಲಿಲ್ಲ ಎಂದು ಪ್ರಶ್ನಿಸಿದರು.

”ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನೀಡಿದರೆ ದಂಗೆಯಾಗುತ್ತವೆ ಎನ್ನುವ ಗೃಹ ಸಚಿವ ಅಮಿತ್ ಶಾ, ಮಣಿಪುರ ರಾಜ್ಯದಲ್ಲಿ ತಮ್ಮದೇ ಪಕ್ಷದ ಸರ್ಕಾರ ಇದ್ದರೂ ಹಿಂಸಾಚಾರ ತಡೆಯಲು ಏಕೆ ಸಾಧ್ಯವಾಗಿಲ್ಲ. ಅಲ್ಲಿನ ಡಬಲ್ ಎಂಜಿನ್ ಸರ್ಕಾರ ಏನು ಮಾಡುತ್ತಿದೆ” ಎಂದು ಕುಟುಕಿದರು.

”ಡಬಲ್ ಎಂಜಿನ್ ಸರ್ಕಾರ ಎಂಬುದು ಪೊಳ್ಳು ಭರವಸೆ, ಡಬಲ್ ಎಂಜಿನ್ ಎಂಬುದು ಪ್ರಜಾಪ್ರಭುತ್ವ ವಿರೋಧಿ, ಸಂವಿಧಾನ ವಿರೋಧಿಯಾಗಿದೆ. ನಮ್ಮ ದೇಶ ಹಲವು ಪಕ್ಷಗಳಿರುವ ದೇಶವಾಗಿದೆ” ಎಂದರು.

”ಬಿಜೆಪಿಗೆ ಡಬಲ್ ಎಂಜಿನ್ ಸರ್ಕಾರವಷ್ಟೇ ಬೇಕಿಲ್ಲ, ಮೋದಿ ಎಂಬ ಸಿಂಗಲ್ ಡ್ರೈವರ್ ಇರುವ ಡಬಲ್‌ ಎಂಜಿನ್‌ ಸರ್ಕಾರ ಬೇಕಾಗಿದೆ. ದೆಹಲಿಯಲ್ಲೂ ಮೋದಿಯೇ ಡ್ರೈವರ್‌, ಕರ್ನಾಟಕದಲ್ಲೂ ಮೋದಿಯವರೇ ಡ್ರೈವರ್‌ ಎಂಬುದು ಅವರ ಹುನ್ನಾರವಾಗಿದೆ” ಎಂದು ದೂರಿದರು.

”ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎಂಬುದು ಮೋದಿಯ ಪೊಳ್ಳು ಘೋಷಣೆ. ರಾಜ್ಯದ 224 ಕ್ಷೇತ್ರದಲ್ಲಿ ಒಬ್ಬ ಮುಸ್ಲಿಮರಿಗೂ ಟಿಕೆಟ್‌ ನೀಡಿಲ್ಲ. ಇದೇನಾ‌ ಸಬ್ ಕಾ ಸಾಥ್, ಸಬ್ ಕಾ ವಿಕಾಸ್?” ಎಂದು ಪ್ರಶ್ನೆ ಮಾಡಿದರು.

”ರಾಹುಲ್ ಗಾಂಧಿ ಒಳ್ಳೆಯ ಗುಣಗಳಿರುವ ನಾಯಕ, ಅವರು ದೇಶದ ನಾಯಕತ್ವ ವಹಿಸಿಕೊಳ್ಳಬೇಕಾದ ತಮ್ಮ ಸಾಮರ್ಥ್ಯವನ್ನು ಇನ್ನೂ ತೋರಿಸಬೇಕಾದ ಅಗತ್ಯವಿದೆ” ಎಂದು ಅಭಿಪ್ರಾಯಪಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...