Homeಕರ್ನಾಟಕಆಪರೇಷನ್ ಕಮಲಕ್ಕೆ ಅವಕಾಶ ಕೊಡಬೇಡಿ, ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ನೀಡಿ: ರಾಜಕೀಯ ವಿಶ್ಲೇಷಕ ಸುಧೀಂದ್ರ ಕುಲಕರ್ಣಿ...

ಆಪರೇಷನ್ ಕಮಲಕ್ಕೆ ಅವಕಾಶ ಕೊಡಬೇಡಿ, ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ನೀಡಿ: ರಾಜಕೀಯ ವಿಶ್ಲೇಷಕ ಸುಧೀಂದ್ರ ಕುಲಕರ್ಣಿ ಕರೆ

- Advertisement -
- Advertisement -

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಮತದಾರರು ‘ಆಪರೇಷನ್ ಕಮಲ’ ಮಾಡಲು ಅವಕಾಶ ಮಾಡಿಕೊಡದೇ ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ನೀಡಬೇಕು ಎಂದು ರಾಜಕೀಯ ವಿಶ್ಲೇಷಕ ಸುಧೀಂದ್ರ ಕುಲಕರ್ಣಿ ಮನವಿ ಮಾಡಿದ್ದಾರೆ. ಪ್ರಧಾನಿಯಾಗಿದ್ದ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಸುಧೀಂದ್ರ ಕುಲಕರ್ಣಿ ಅವರು ಸಲಹೆಗಾರರಾಗಿದ್ದರು.

ವಿಜಯಪುರದಲ್ಲಿ ಭಾನುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ”ರಾಜ್ಯದ ಪ್ರಬುದ್ಧ ಮತದಾರರು ‘ಆಪರೇಷನ್ ಕಮಲ’ದ ಮೂಲಕ ಜನಾದೇಶ ಕದಿಯಲು ಬಿಜೆಪಿಗೆ ಅವಕಾಶ ನೀಡದೇ, ಕಾಂಗ್ರೆಸ್‌ಗೆ ಸ್ಪಷ್ಟ, ಪೂರ್ಣ ಬಹುಮತ ನೀಡಬೇಕು” ಎಂದು ಹೇಳಿದ್ದಾರೆ.

”ಆಪರೇಷನ್ ಕಮಲ ಎನ್ನುವುದು ಪ್ರಜಾತಂತ್ರ ವ್ಯವಸ್ಥಗೆ ಮಾಡುವ ಅಪಚಾರ. ಒಂದರ್ಥದಲ್ಲಿ ಪ್ರಜಾತಂತ್ರ ಹಾಗೂ ಜನಾದೇಶವನ್ನೇ ಅಪಹರಣ ಮಾಡುವ ಅಪಾಯಕಾರಿ ಬೆಳವಣಿಗೆ. ಇಂಥ ದುಸ್ಥಿತಿಗೆ ರಾಜ್ಯ ವಿಧಾನಸಬೆ ಚುನಾವಣೆ ಮೂಲಕವೇ ರಾಷ್ಟ್ರ ಮಟ್ಟದಲ್ಲಿ 2024 ರಲ್ಲಿ ಪ್ರಜಾಪ್ರಭುತ್ವ ರಕ್ಷಣೆಗೆ ನಾಂದಿ ಹಾಡಬೇಕು” ಎಂದು ಕೋರಿದರು.

”ದೇಶದಲ್ಲಿ ಪ್ರಜಾಪ್ರಭುತ್ವ, ಸಂವಿಧಾನ ಮೌಲ್ಯ ಉಳಿಯಬೇಕು ಎಂದಾದರೆ ಬಿಜೆಪಿ ವಿರುದ್ಧ ಮತ ಚಲಾಯಿಸಿ” ಎಂದು ಅವರು ಮತದಾರರಿಗೆ ಕರೆ ನೀಡಿದರು.

”ಒಂದು ವೇಳೆ ಮೇ 13ರಂದು ತ್ರಿಶಂಕು ಸರ್ಕಾರ ಬಂದರೆ ರಾಜ್ಯಕ್ಕೆ ದೊಡ್ಡ ಅಪಾಯ ಎದುರಾಗಲಿದೆ” ಎಂದು ಆತಂಕ ವ್ಯಕ್ತಪಡಿಸಿದರು.

ಇದನ್ನೂ ಓದಿ: ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ, ಸಿದ್ದರಾಮಯ್ಯ ಸಿಎಂ ಆಗಬೇಕು ಎಂದ ಮತದಾರ: ಎಬಿಪಿ ಸಿ–ವೋಟರ್ ಸಮೀಕ್ಷೆ

”ಶೇ.40 ಲಂಚದ ಆರೋಪಕ್ಕೆ ಪ್ರಧಾನಿ ಹಾಗೂ ಗೃಹ ಸಚಿವ ಅಮಿತ್ ಶಾ ಉತ್ತರ ನೀಡುತ್ತಿಲ್ಲ. ಬದಲಾಗಿ ಗೃಹ ಸಚಿವ ಅಮಿತ್ ಶಾ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನೀಡಿದರೆ ದಂಗೆಗಳಾಗುತ್ತವೆ ಎಂದು ರಾಜ್ಯದ ಜನರಿಗೆ ಭಯ ಹಾಕುವ ಹಾಗೂ ರಾಜ್ಯದ ಮತದಾರರನ್ನು ಅವಮಾನ ಮಾಡುವ ಕೆಲಸ ಮಾಡುತ್ತಿದ್ದಾರೆ” ಎಂದು ಟೀಕಾ ಪ್ರಹಾರ ನಡೆಸಿದರು.

”ಪ್ರಧಾನಿ ಮೋದಿ, ಗೃಹಸಚಿವ ಸೇರಿದಂತೆ ಎಲ್ಲ ಬಿಜೆಪಿ ನಾಯಕರು, ರಾಜ್ಯದ ಅಭಿವೃದ್ಧಿಗೆ ಡಬಲ್ ಎಂಜಿನ್ ಸರ್ಕಾರ ಬೇಕೇ ಬೇಕು ಎಂದು ಅಬ್ಬರದ ಪ್ರಚಾರ ನಡೆಸಿದ್ದಾರೆ. ಆದರೆ ಇದೀಗ ಕೇಂದ್ರ-ರಾಜ್ಯದಲ್ಲಿ ಡಬಲ್ ಎಂಜಿನ್ ಸರ್ಕಾರವೇ ಇದ್ದರೂ ರಾಜ್ಯದಲ್ಲಿ ಬೆಲೆ ಏರಿಕೆ ಏಕೆ ನಿಯಂತ್ರಿಸಲಿಲ್ಲ, ಅಡುಗೆ ಅನಿಲ ದರ 1200 ರೂ. ಗಡಿ ದಾಡಲು ಬಿಟ್ಟಿದ್ದೇಕೆ. ನಾನು ಲಂಚ ತಿನ್ನುವುದಿಲ್ಲ, ಇತರರು ಲಂಚ ತಿನ್ನಲು ಬಿಡುವುದಿಲ್ಲವೆಂದು ದೇಶದ ಜನರಿಗೆ ಭರವಸೆ ನೀಡಿದ್ದ ಪ್ರಧಾನಿ ರಾಜ್ಯದಲ್ಲಿ ಭ್ರಷ್ಟಚಾರ ನಿಗ್ರಹಿಸಲು ಏಕೆ ಆಸಕ್ತಿ ತೋರಲಿಲ್ಲ ಎಂದು ಪ್ರಶ್ನಿಸಿದರು.

”ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನೀಡಿದರೆ ದಂಗೆಯಾಗುತ್ತವೆ ಎನ್ನುವ ಗೃಹ ಸಚಿವ ಅಮಿತ್ ಶಾ, ಮಣಿಪುರ ರಾಜ್ಯದಲ್ಲಿ ತಮ್ಮದೇ ಪಕ್ಷದ ಸರ್ಕಾರ ಇದ್ದರೂ ಹಿಂಸಾಚಾರ ತಡೆಯಲು ಏಕೆ ಸಾಧ್ಯವಾಗಿಲ್ಲ. ಅಲ್ಲಿನ ಡಬಲ್ ಎಂಜಿನ್ ಸರ್ಕಾರ ಏನು ಮಾಡುತ್ತಿದೆ” ಎಂದು ಕುಟುಕಿದರು.

”ಡಬಲ್ ಎಂಜಿನ್ ಸರ್ಕಾರ ಎಂಬುದು ಪೊಳ್ಳು ಭರವಸೆ, ಡಬಲ್ ಎಂಜಿನ್ ಎಂಬುದು ಪ್ರಜಾಪ್ರಭುತ್ವ ವಿರೋಧಿ, ಸಂವಿಧಾನ ವಿರೋಧಿಯಾಗಿದೆ. ನಮ್ಮ ದೇಶ ಹಲವು ಪಕ್ಷಗಳಿರುವ ದೇಶವಾಗಿದೆ” ಎಂದರು.

”ಬಿಜೆಪಿಗೆ ಡಬಲ್ ಎಂಜಿನ್ ಸರ್ಕಾರವಷ್ಟೇ ಬೇಕಿಲ್ಲ, ಮೋದಿ ಎಂಬ ಸಿಂಗಲ್ ಡ್ರೈವರ್ ಇರುವ ಡಬಲ್‌ ಎಂಜಿನ್‌ ಸರ್ಕಾರ ಬೇಕಾಗಿದೆ. ದೆಹಲಿಯಲ್ಲೂ ಮೋದಿಯೇ ಡ್ರೈವರ್‌, ಕರ್ನಾಟಕದಲ್ಲೂ ಮೋದಿಯವರೇ ಡ್ರೈವರ್‌ ಎಂಬುದು ಅವರ ಹುನ್ನಾರವಾಗಿದೆ” ಎಂದು ದೂರಿದರು.

”ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎಂಬುದು ಮೋದಿಯ ಪೊಳ್ಳು ಘೋಷಣೆ. ರಾಜ್ಯದ 224 ಕ್ಷೇತ್ರದಲ್ಲಿ ಒಬ್ಬ ಮುಸ್ಲಿಮರಿಗೂ ಟಿಕೆಟ್‌ ನೀಡಿಲ್ಲ. ಇದೇನಾ‌ ಸಬ್ ಕಾ ಸಾಥ್, ಸಬ್ ಕಾ ವಿಕಾಸ್?” ಎಂದು ಪ್ರಶ್ನೆ ಮಾಡಿದರು.

”ರಾಹುಲ್ ಗಾಂಧಿ ಒಳ್ಳೆಯ ಗುಣಗಳಿರುವ ನಾಯಕ, ಅವರು ದೇಶದ ನಾಯಕತ್ವ ವಹಿಸಿಕೊಳ್ಳಬೇಕಾದ ತಮ್ಮ ಸಾಮರ್ಥ್ಯವನ್ನು ಇನ್ನೂ ತೋರಿಸಬೇಕಾದ ಅಗತ್ಯವಿದೆ” ಎಂದು ಅಭಿಪ್ರಾಯಪಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...