Homeಕರ್ನಾಟಕಆಪರೇಷನ್ ಕಮಲಕ್ಕೆ ಅವಕಾಶ ಕೊಡಬೇಡಿ, ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ನೀಡಿ: ರಾಜಕೀಯ ವಿಶ್ಲೇಷಕ ಸುಧೀಂದ್ರ ಕುಲಕರ್ಣಿ...

ಆಪರೇಷನ್ ಕಮಲಕ್ಕೆ ಅವಕಾಶ ಕೊಡಬೇಡಿ, ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ನೀಡಿ: ರಾಜಕೀಯ ವಿಶ್ಲೇಷಕ ಸುಧೀಂದ್ರ ಕುಲಕರ್ಣಿ ಕರೆ

- Advertisement -
- Advertisement -

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಮತದಾರರು ‘ಆಪರೇಷನ್ ಕಮಲ’ ಮಾಡಲು ಅವಕಾಶ ಮಾಡಿಕೊಡದೇ ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ನೀಡಬೇಕು ಎಂದು ರಾಜಕೀಯ ವಿಶ್ಲೇಷಕ ಸುಧೀಂದ್ರ ಕುಲಕರ್ಣಿ ಮನವಿ ಮಾಡಿದ್ದಾರೆ. ಪ್ರಧಾನಿಯಾಗಿದ್ದ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಸುಧೀಂದ್ರ ಕುಲಕರ್ಣಿ ಅವರು ಸಲಹೆಗಾರರಾಗಿದ್ದರು.

ವಿಜಯಪುರದಲ್ಲಿ ಭಾನುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ”ರಾಜ್ಯದ ಪ್ರಬುದ್ಧ ಮತದಾರರು ‘ಆಪರೇಷನ್ ಕಮಲ’ದ ಮೂಲಕ ಜನಾದೇಶ ಕದಿಯಲು ಬಿಜೆಪಿಗೆ ಅವಕಾಶ ನೀಡದೇ, ಕಾಂಗ್ರೆಸ್‌ಗೆ ಸ್ಪಷ್ಟ, ಪೂರ್ಣ ಬಹುಮತ ನೀಡಬೇಕು” ಎಂದು ಹೇಳಿದ್ದಾರೆ.

”ಆಪರೇಷನ್ ಕಮಲ ಎನ್ನುವುದು ಪ್ರಜಾತಂತ್ರ ವ್ಯವಸ್ಥಗೆ ಮಾಡುವ ಅಪಚಾರ. ಒಂದರ್ಥದಲ್ಲಿ ಪ್ರಜಾತಂತ್ರ ಹಾಗೂ ಜನಾದೇಶವನ್ನೇ ಅಪಹರಣ ಮಾಡುವ ಅಪಾಯಕಾರಿ ಬೆಳವಣಿಗೆ. ಇಂಥ ದುಸ್ಥಿತಿಗೆ ರಾಜ್ಯ ವಿಧಾನಸಬೆ ಚುನಾವಣೆ ಮೂಲಕವೇ ರಾಷ್ಟ್ರ ಮಟ್ಟದಲ್ಲಿ 2024 ರಲ್ಲಿ ಪ್ರಜಾಪ್ರಭುತ್ವ ರಕ್ಷಣೆಗೆ ನಾಂದಿ ಹಾಡಬೇಕು” ಎಂದು ಕೋರಿದರು.

”ದೇಶದಲ್ಲಿ ಪ್ರಜಾಪ್ರಭುತ್ವ, ಸಂವಿಧಾನ ಮೌಲ್ಯ ಉಳಿಯಬೇಕು ಎಂದಾದರೆ ಬಿಜೆಪಿ ವಿರುದ್ಧ ಮತ ಚಲಾಯಿಸಿ” ಎಂದು ಅವರು ಮತದಾರರಿಗೆ ಕರೆ ನೀಡಿದರು.

”ಒಂದು ವೇಳೆ ಮೇ 13ರಂದು ತ್ರಿಶಂಕು ಸರ್ಕಾರ ಬಂದರೆ ರಾಜ್ಯಕ್ಕೆ ದೊಡ್ಡ ಅಪಾಯ ಎದುರಾಗಲಿದೆ” ಎಂದು ಆತಂಕ ವ್ಯಕ್ತಪಡಿಸಿದರು.

ಇದನ್ನೂ ಓದಿ: ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ, ಸಿದ್ದರಾಮಯ್ಯ ಸಿಎಂ ಆಗಬೇಕು ಎಂದ ಮತದಾರ: ಎಬಿಪಿ ಸಿ–ವೋಟರ್ ಸಮೀಕ್ಷೆ

”ಶೇ.40 ಲಂಚದ ಆರೋಪಕ್ಕೆ ಪ್ರಧಾನಿ ಹಾಗೂ ಗೃಹ ಸಚಿವ ಅಮಿತ್ ಶಾ ಉತ್ತರ ನೀಡುತ್ತಿಲ್ಲ. ಬದಲಾಗಿ ಗೃಹ ಸಚಿವ ಅಮಿತ್ ಶಾ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನೀಡಿದರೆ ದಂಗೆಗಳಾಗುತ್ತವೆ ಎಂದು ರಾಜ್ಯದ ಜನರಿಗೆ ಭಯ ಹಾಕುವ ಹಾಗೂ ರಾಜ್ಯದ ಮತದಾರರನ್ನು ಅವಮಾನ ಮಾಡುವ ಕೆಲಸ ಮಾಡುತ್ತಿದ್ದಾರೆ” ಎಂದು ಟೀಕಾ ಪ್ರಹಾರ ನಡೆಸಿದರು.

”ಪ್ರಧಾನಿ ಮೋದಿ, ಗೃಹಸಚಿವ ಸೇರಿದಂತೆ ಎಲ್ಲ ಬಿಜೆಪಿ ನಾಯಕರು, ರಾಜ್ಯದ ಅಭಿವೃದ್ಧಿಗೆ ಡಬಲ್ ಎಂಜಿನ್ ಸರ್ಕಾರ ಬೇಕೇ ಬೇಕು ಎಂದು ಅಬ್ಬರದ ಪ್ರಚಾರ ನಡೆಸಿದ್ದಾರೆ. ಆದರೆ ಇದೀಗ ಕೇಂದ್ರ-ರಾಜ್ಯದಲ್ಲಿ ಡಬಲ್ ಎಂಜಿನ್ ಸರ್ಕಾರವೇ ಇದ್ದರೂ ರಾಜ್ಯದಲ್ಲಿ ಬೆಲೆ ಏರಿಕೆ ಏಕೆ ನಿಯಂತ್ರಿಸಲಿಲ್ಲ, ಅಡುಗೆ ಅನಿಲ ದರ 1200 ರೂ. ಗಡಿ ದಾಡಲು ಬಿಟ್ಟಿದ್ದೇಕೆ. ನಾನು ಲಂಚ ತಿನ್ನುವುದಿಲ್ಲ, ಇತರರು ಲಂಚ ತಿನ್ನಲು ಬಿಡುವುದಿಲ್ಲವೆಂದು ದೇಶದ ಜನರಿಗೆ ಭರವಸೆ ನೀಡಿದ್ದ ಪ್ರಧಾನಿ ರಾಜ್ಯದಲ್ಲಿ ಭ್ರಷ್ಟಚಾರ ನಿಗ್ರಹಿಸಲು ಏಕೆ ಆಸಕ್ತಿ ತೋರಲಿಲ್ಲ ಎಂದು ಪ್ರಶ್ನಿಸಿದರು.

”ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನೀಡಿದರೆ ದಂಗೆಯಾಗುತ್ತವೆ ಎನ್ನುವ ಗೃಹ ಸಚಿವ ಅಮಿತ್ ಶಾ, ಮಣಿಪುರ ರಾಜ್ಯದಲ್ಲಿ ತಮ್ಮದೇ ಪಕ್ಷದ ಸರ್ಕಾರ ಇದ್ದರೂ ಹಿಂಸಾಚಾರ ತಡೆಯಲು ಏಕೆ ಸಾಧ್ಯವಾಗಿಲ್ಲ. ಅಲ್ಲಿನ ಡಬಲ್ ಎಂಜಿನ್ ಸರ್ಕಾರ ಏನು ಮಾಡುತ್ತಿದೆ” ಎಂದು ಕುಟುಕಿದರು.

”ಡಬಲ್ ಎಂಜಿನ್ ಸರ್ಕಾರ ಎಂಬುದು ಪೊಳ್ಳು ಭರವಸೆ, ಡಬಲ್ ಎಂಜಿನ್ ಎಂಬುದು ಪ್ರಜಾಪ್ರಭುತ್ವ ವಿರೋಧಿ, ಸಂವಿಧಾನ ವಿರೋಧಿಯಾಗಿದೆ. ನಮ್ಮ ದೇಶ ಹಲವು ಪಕ್ಷಗಳಿರುವ ದೇಶವಾಗಿದೆ” ಎಂದರು.

”ಬಿಜೆಪಿಗೆ ಡಬಲ್ ಎಂಜಿನ್ ಸರ್ಕಾರವಷ್ಟೇ ಬೇಕಿಲ್ಲ, ಮೋದಿ ಎಂಬ ಸಿಂಗಲ್ ಡ್ರೈವರ್ ಇರುವ ಡಬಲ್‌ ಎಂಜಿನ್‌ ಸರ್ಕಾರ ಬೇಕಾಗಿದೆ. ದೆಹಲಿಯಲ್ಲೂ ಮೋದಿಯೇ ಡ್ರೈವರ್‌, ಕರ್ನಾಟಕದಲ್ಲೂ ಮೋದಿಯವರೇ ಡ್ರೈವರ್‌ ಎಂಬುದು ಅವರ ಹುನ್ನಾರವಾಗಿದೆ” ಎಂದು ದೂರಿದರು.

”ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎಂಬುದು ಮೋದಿಯ ಪೊಳ್ಳು ಘೋಷಣೆ. ರಾಜ್ಯದ 224 ಕ್ಷೇತ್ರದಲ್ಲಿ ಒಬ್ಬ ಮುಸ್ಲಿಮರಿಗೂ ಟಿಕೆಟ್‌ ನೀಡಿಲ್ಲ. ಇದೇನಾ‌ ಸಬ್ ಕಾ ಸಾಥ್, ಸಬ್ ಕಾ ವಿಕಾಸ್?” ಎಂದು ಪ್ರಶ್ನೆ ಮಾಡಿದರು.

”ರಾಹುಲ್ ಗಾಂಧಿ ಒಳ್ಳೆಯ ಗುಣಗಳಿರುವ ನಾಯಕ, ಅವರು ದೇಶದ ನಾಯಕತ್ವ ವಹಿಸಿಕೊಳ್ಳಬೇಕಾದ ತಮ್ಮ ಸಾಮರ್ಥ್ಯವನ್ನು ಇನ್ನೂ ತೋರಿಸಬೇಕಾದ ಅಗತ್ಯವಿದೆ” ಎಂದು ಅಭಿಪ್ರಾಯಪಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...