Homeಕರ್ನಾಟಕನೆರೆ ಸಂತ್ರಸ್ತರ ಪರಿಹಾರ ವಿಷಯ ಕೆಲಸಕ್ಕೆ ಬಾರದ ಪ್ರಶ್ನೆ!?: ಮಾಧುಸ್ವಾಮಿ ಉಡಾಫೆ

ನೆರೆ ಸಂತ್ರಸ್ತರ ಪರಿಹಾರ ವಿಷಯ ಕೆಲಸಕ್ಕೆ ಬಾರದ ಪ್ರಶ್ನೆ!?: ಮಾಧುಸ್ವಾಮಿ ಉಡಾಫೆ

- Advertisement -
- Advertisement -

ರಾಜ್ಯದಲ್ಲಿ ನೆರೆಯಿಂದ ಜನತೆ ಕಂಗಾಲಾಗಿದ್ದು, ಪರಿಹಾರಕ್ಕಾಗಿ ಎದುರು ನೋಡುತ್ತಿದ್ದಾರೆ. ಮಕ್ಕಳು, ವೃದ್ಧರು, ಮಹಿಳೆಯರು ಈಗಲೂ ಕಾಳಜಿ ಕೇಂದ್ರಗಳಲ್ಲಿ ಉಳಿದುಕೊಂಡಿದ್ದಾರೆ. ಪ್ರವಾಹದಿಂದ ಮನೆ, ಮಠ, ಆಸ್ತಿ-ಪಾಸ್ತಿ ಕಳೆದುಕೊಂಡು ಕಣ್ಣೀರಿಡುತ್ತಿದ್ದಾರೆ. ಆದರೆ ಇದ್ಯಾವುದು ರಾಜ್ಯ ಬಿಜೆಪಿ ಸರ್ಕಾರದ ಕಣ್ಣಿಗೆ ಮಾತ್ರ ಕಾಣುತ್ತಿಲ್ಲ. ಯಾಕಂದ್ರೆ ನೆರೆಗೆ ಪರಿಹಾರ ತೆಗೆದುಕೊಂಡು ಬನ್ನಿ ಸ್ವಾಮಿ ಅಂತಾ ಕೇಳಿದ್ರೆ, ಬಿಜೆಪಿ ಜನಪ್ರತಿನಿಧಿಗಳು ದುರ್ವರ್ತನೆ ತೋರುತ್ತಿದ್ದಾರೆ. ಕೇಂದ್ರದಿಂದ ನೆರೆಗೆ ಪರಿಹಾರ ಯಾಕೆ ಬೇಕು ಅಂತಾ ಪ್ರಶ್ನಿಸುವ ಮಟ್ಟಿಗೆ ಕೀಳು ರಾಜಕೀಯಕ್ಕಿಳಿದಿದ್ದಾರೆ.

ನಿನ್ನೆಯಷ್ಟೇ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಬಿಜೆಪಿ ಸಚಿವ ಜೆ.ಸಿ. ಮಾಧುಸ್ವಾಮಿ, ಉಡಾಫೆಯ ಮಾತುಗಳನ್ನಾಡಿದ್ದಾರೆ. ನೆರೆ ಸಂತ್ರಸ್ತರು ಹಾಗೂ ಪ್ರವಾಹದಿಂದ ಆದ ಹಾನಿಗೆ ಪರಿಹಾರದ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ “ನೆರೆ ಪರಿಹಾರ ಹಾಗೂ ಸಂತ್ರಸ್ತರ ಬಗ್ಗೆ ಕೇಳುವ ಪ್ರಶ್ನೆಗಳು ಕೆಲಸಕ್ಕೆ ಬಾರದ್ದು” ಎಂಬ ರೀತಿ ಹೇಳಿಕೆ ನೀಡಿದ್ದಾರೆ. ಕೇಂದ್ರ ಸರ್ಕಾರದಿಂದ ನೆರೆ ಸಂತ್ರಸ್ತರಿಗೆ ಪರಿಹಾರ ಬಿಡುಗಡೆ ಮಾಡಿಲ್ಲ ಎಂದು ಕೇಳಿದ ಪ್ರಶ್ನೆಗೆ ಮನಸ್ಸಿಗೆ ಬಂದಂತೆ ಪ್ರಶ್ನೆ ಕೇಳುವುದು ಸರಿಯಲ್ಲ. ಸಿದ್ದರಾಮಯ್ಯ ಹೇಳಿಕೊಟ್ಟ ಗಿಣಿಯಂತೆ ವರ್ತಿಸಬೇಡಿ ಎಂದು ಅಸಂಬದ್ಧ ಹೇಳಿಕೆ ನೀಡಿದ್ದಾರೆ. ಹಾಗಾದ್ರೆ ಬಿಜೆಪಿ ನಾಯಕರಿಗೆ ನೆರೆ ಹಾವಳಿ, ಸಂತ್ರಸ್ತರ ಗೋಳಾಟ ಎಲ್ಲವೂ ಕೆಲಸಕ್ಕೆ ಬಾರದ ವಿಷಯವಾ? ಎಂದು ಸಾರ್ವಜನಿಕರು ಪ್ರಶ್ನಿಸಿದ್ದು, ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇರಳ, ಮಹಾರಾಷ್ಟ್ರ ಸೇರಿದಂತೆ ಇತರೆ ರಾಜ್ಯಗಳಿಗೂ ಕೇಂದ್ರದಿಂದ ಪರಿಹಾರ ಸಿಕ್ಕಿಲ್ಲ. ಜನತೆಗೆ ಪರಿಹಾರ ಸಿಗದೇ ನಲುಗುತ್ತಿದ್ದಾರೆ. ರಾಜ್ಯದಿಂದ ಪರಿಹಾರ ಕೊಟ್ಟಿದೆಯಲ್ಲಾ ಅಂತಾ ದುರ್ವರ್ತನೆ ತೋರಿದ್ದಾರೆ. ಇಷ್ಟೇ ಅಲ್ಲ ಕೆಲ ದಿನಗಳ ಹಿಂದೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಕೇಂದ್ರ ಸರ್ಕಾರವೇ ನೆರೆ ಪರಿಹಾರ ಕೊಡಬೇಕು ಎಂದೇನಿಲ್ಲ ಎಂದಿದ್ದರು. ಈಶ್ವರಪ್ಪ ರಾಜ್ಯದಿಂದ ಕೊಟ್ಟಿರುವ ಹತ್ತು ಸಾವಿರ ರೂಪಾಯಿ ಪರಿಹಾರವೇ ಹೆಚ್ಚು ಎಂಬಂತೆ ಹೇಳಿಕೆ ನೀಡಿ ರಾಜ್ಯದ ಜನತೆಯ ಕೆಂಗಣ್ಣಿಗೆ ಗುರಿಯಾಗಿದ್ದರು.

ಈಗ ಮತ್ತೊಬ್ಬ ಬಿಜೆಪಿ ಸಚಿವರು ಅಪ್ರಬುದ್ಧ ಹೇಳಿಕೆ ನೀಡಿದ್ದಾರೆ. ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರವೇ ಆಡಳಿತದಲ್ಲಿದ್ದರೂ ಸಹ ಪರಿಹಾರ ತರುವಲ್ಲಿ ಮಾತ್ರ ರಾಜ್ಯ ಬಿಜೆಪಿ ವಿಫಲವಾಗಿದೆ. ಸಂತ್ರಸ್ತರಿಗೆ ಪರಿಹಾರ ತರುವ ವಿಷಯ ಬಿಜೆಪಿಗೆ ರಾಜಕೀಯ ವಿಷಯವಸ್ತುವಾಗಿರುವುದು ಮಾತ್ರ ವಿಪರ್ಯಾಸ.

ಇನ್ನು ಸಚಿವರ ಹೇಳಿಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ಬಹುತೇಕರು ಉಗ್ರವಾಗಿ ಖಂಡಿಸಿದ್ದಾರೆ. “ಹತ್ತು ಸಾವಿರ ಕೊಟ್ಟಿದ್ದೇ ಹೆಚ್ಚಾಯ್ತು ಅನ್ನುವ ಈಶ್ವರಪ್ಪ, ಕೇಂದ್ರದ ದುಡ್ಡು ಬೇಡವೆಂದ ತೇಜಸ್ವಿ ಸೂರ್ಯ ದಡ್ಡರು, ಅಪ್ರಬುದ್ಧರು ಎನ್ನುವ ಕಾರಣಕ್ಕೆ ಹೇಗೋ ಸಹಿಸಿಕೊಳ್ಳಬಹುದು. ಆದರೆ ಈತ ಪ್ರಕಾಂಡ ಪಂಡಿತ, ಸಂವಿಧಾನ ಓದಿಕೊಂಡಾತ. ರಾಜಕೀಯ ಹೇಳಿಕೆಗಳ ಸೂಕ್ಷ್ಮತೆ-ಅಸೂಕ್ಷ್ಮತೆಗಳ ಅರಿವಿರುವಾತ. ಹೇಳಿ‌ಕೇಳಿ ಮಾಜಿ ಸಮಾಜವಾದಿ ಕೂಡ. ಈತನಿಗೆ ಕ್ಷಮೆ ಇರಲು ಸಾಧ್ಯವೇ?” ಎಂದು ಪತ್ರಕರ್ತ ದಿನೇಶ್ ಕುಮಾರ್ ದಿನೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...