Homeಕರ್ನಾಟಕನೆರೆ ಸಂತ್ರಸ್ತರ ಪರಿಹಾರ ವಿಷಯ ಕೆಲಸಕ್ಕೆ ಬಾರದ ಪ್ರಶ್ನೆ!?: ಮಾಧುಸ್ವಾಮಿ ಉಡಾಫೆ

ನೆರೆ ಸಂತ್ರಸ್ತರ ಪರಿಹಾರ ವಿಷಯ ಕೆಲಸಕ್ಕೆ ಬಾರದ ಪ್ರಶ್ನೆ!?: ಮಾಧುಸ್ವಾಮಿ ಉಡಾಫೆ

- Advertisement -
- Advertisement -

ರಾಜ್ಯದಲ್ಲಿ ನೆರೆಯಿಂದ ಜನತೆ ಕಂಗಾಲಾಗಿದ್ದು, ಪರಿಹಾರಕ್ಕಾಗಿ ಎದುರು ನೋಡುತ್ತಿದ್ದಾರೆ. ಮಕ್ಕಳು, ವೃದ್ಧರು, ಮಹಿಳೆಯರು ಈಗಲೂ ಕಾಳಜಿ ಕೇಂದ್ರಗಳಲ್ಲಿ ಉಳಿದುಕೊಂಡಿದ್ದಾರೆ. ಪ್ರವಾಹದಿಂದ ಮನೆ, ಮಠ, ಆಸ್ತಿ-ಪಾಸ್ತಿ ಕಳೆದುಕೊಂಡು ಕಣ್ಣೀರಿಡುತ್ತಿದ್ದಾರೆ. ಆದರೆ ಇದ್ಯಾವುದು ರಾಜ್ಯ ಬಿಜೆಪಿ ಸರ್ಕಾರದ ಕಣ್ಣಿಗೆ ಮಾತ್ರ ಕಾಣುತ್ತಿಲ್ಲ. ಯಾಕಂದ್ರೆ ನೆರೆಗೆ ಪರಿಹಾರ ತೆಗೆದುಕೊಂಡು ಬನ್ನಿ ಸ್ವಾಮಿ ಅಂತಾ ಕೇಳಿದ್ರೆ, ಬಿಜೆಪಿ ಜನಪ್ರತಿನಿಧಿಗಳು ದುರ್ವರ್ತನೆ ತೋರುತ್ತಿದ್ದಾರೆ. ಕೇಂದ್ರದಿಂದ ನೆರೆಗೆ ಪರಿಹಾರ ಯಾಕೆ ಬೇಕು ಅಂತಾ ಪ್ರಶ್ನಿಸುವ ಮಟ್ಟಿಗೆ ಕೀಳು ರಾಜಕೀಯಕ್ಕಿಳಿದಿದ್ದಾರೆ.

ನಿನ್ನೆಯಷ್ಟೇ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಬಿಜೆಪಿ ಸಚಿವ ಜೆ.ಸಿ. ಮಾಧುಸ್ವಾಮಿ, ಉಡಾಫೆಯ ಮಾತುಗಳನ್ನಾಡಿದ್ದಾರೆ. ನೆರೆ ಸಂತ್ರಸ್ತರು ಹಾಗೂ ಪ್ರವಾಹದಿಂದ ಆದ ಹಾನಿಗೆ ಪರಿಹಾರದ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ “ನೆರೆ ಪರಿಹಾರ ಹಾಗೂ ಸಂತ್ರಸ್ತರ ಬಗ್ಗೆ ಕೇಳುವ ಪ್ರಶ್ನೆಗಳು ಕೆಲಸಕ್ಕೆ ಬಾರದ್ದು” ಎಂಬ ರೀತಿ ಹೇಳಿಕೆ ನೀಡಿದ್ದಾರೆ. ಕೇಂದ್ರ ಸರ್ಕಾರದಿಂದ ನೆರೆ ಸಂತ್ರಸ್ತರಿಗೆ ಪರಿಹಾರ ಬಿಡುಗಡೆ ಮಾಡಿಲ್ಲ ಎಂದು ಕೇಳಿದ ಪ್ರಶ್ನೆಗೆ ಮನಸ್ಸಿಗೆ ಬಂದಂತೆ ಪ್ರಶ್ನೆ ಕೇಳುವುದು ಸರಿಯಲ್ಲ. ಸಿದ್ದರಾಮಯ್ಯ ಹೇಳಿಕೊಟ್ಟ ಗಿಣಿಯಂತೆ ವರ್ತಿಸಬೇಡಿ ಎಂದು ಅಸಂಬದ್ಧ ಹೇಳಿಕೆ ನೀಡಿದ್ದಾರೆ. ಹಾಗಾದ್ರೆ ಬಿಜೆಪಿ ನಾಯಕರಿಗೆ ನೆರೆ ಹಾವಳಿ, ಸಂತ್ರಸ್ತರ ಗೋಳಾಟ ಎಲ್ಲವೂ ಕೆಲಸಕ್ಕೆ ಬಾರದ ವಿಷಯವಾ? ಎಂದು ಸಾರ್ವಜನಿಕರು ಪ್ರಶ್ನಿಸಿದ್ದು, ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇರಳ, ಮಹಾರಾಷ್ಟ್ರ ಸೇರಿದಂತೆ ಇತರೆ ರಾಜ್ಯಗಳಿಗೂ ಕೇಂದ್ರದಿಂದ ಪರಿಹಾರ ಸಿಕ್ಕಿಲ್ಲ. ಜನತೆಗೆ ಪರಿಹಾರ ಸಿಗದೇ ನಲುಗುತ್ತಿದ್ದಾರೆ. ರಾಜ್ಯದಿಂದ ಪರಿಹಾರ ಕೊಟ್ಟಿದೆಯಲ್ಲಾ ಅಂತಾ ದುರ್ವರ್ತನೆ ತೋರಿದ್ದಾರೆ. ಇಷ್ಟೇ ಅಲ್ಲ ಕೆಲ ದಿನಗಳ ಹಿಂದೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಕೇಂದ್ರ ಸರ್ಕಾರವೇ ನೆರೆ ಪರಿಹಾರ ಕೊಡಬೇಕು ಎಂದೇನಿಲ್ಲ ಎಂದಿದ್ದರು. ಈಶ್ವರಪ್ಪ ರಾಜ್ಯದಿಂದ ಕೊಟ್ಟಿರುವ ಹತ್ತು ಸಾವಿರ ರೂಪಾಯಿ ಪರಿಹಾರವೇ ಹೆಚ್ಚು ಎಂಬಂತೆ ಹೇಳಿಕೆ ನೀಡಿ ರಾಜ್ಯದ ಜನತೆಯ ಕೆಂಗಣ್ಣಿಗೆ ಗುರಿಯಾಗಿದ್ದರು.

ಈಗ ಮತ್ತೊಬ್ಬ ಬಿಜೆಪಿ ಸಚಿವರು ಅಪ್ರಬುದ್ಧ ಹೇಳಿಕೆ ನೀಡಿದ್ದಾರೆ. ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರವೇ ಆಡಳಿತದಲ್ಲಿದ್ದರೂ ಸಹ ಪರಿಹಾರ ತರುವಲ್ಲಿ ಮಾತ್ರ ರಾಜ್ಯ ಬಿಜೆಪಿ ವಿಫಲವಾಗಿದೆ. ಸಂತ್ರಸ್ತರಿಗೆ ಪರಿಹಾರ ತರುವ ವಿಷಯ ಬಿಜೆಪಿಗೆ ರಾಜಕೀಯ ವಿಷಯವಸ್ತುವಾಗಿರುವುದು ಮಾತ್ರ ವಿಪರ್ಯಾಸ.

ಇನ್ನು ಸಚಿವರ ಹೇಳಿಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ಬಹುತೇಕರು ಉಗ್ರವಾಗಿ ಖಂಡಿಸಿದ್ದಾರೆ. “ಹತ್ತು ಸಾವಿರ ಕೊಟ್ಟಿದ್ದೇ ಹೆಚ್ಚಾಯ್ತು ಅನ್ನುವ ಈಶ್ವರಪ್ಪ, ಕೇಂದ್ರದ ದುಡ್ಡು ಬೇಡವೆಂದ ತೇಜಸ್ವಿ ಸೂರ್ಯ ದಡ್ಡರು, ಅಪ್ರಬುದ್ಧರು ಎನ್ನುವ ಕಾರಣಕ್ಕೆ ಹೇಗೋ ಸಹಿಸಿಕೊಳ್ಳಬಹುದು. ಆದರೆ ಈತ ಪ್ರಕಾಂಡ ಪಂಡಿತ, ಸಂವಿಧಾನ ಓದಿಕೊಂಡಾತ. ರಾಜಕೀಯ ಹೇಳಿಕೆಗಳ ಸೂಕ್ಷ್ಮತೆ-ಅಸೂಕ್ಷ್ಮತೆಗಳ ಅರಿವಿರುವಾತ. ಹೇಳಿ‌ಕೇಳಿ ಮಾಜಿ ಸಮಾಜವಾದಿ ಕೂಡ. ಈತನಿಗೆ ಕ್ಷಮೆ ಇರಲು ಸಾಧ್ಯವೇ?” ಎಂದು ಪತ್ರಕರ್ತ ದಿನೇಶ್ ಕುಮಾರ್ ದಿನೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...