Homeಕರ್ನಾಟಕನೆರೆ ಸಂತ್ರಸ್ತರ ಪರಿಹಾರ ವಿಷಯ ಕೆಲಸಕ್ಕೆ ಬಾರದ ಪ್ರಶ್ನೆ!?: ಮಾಧುಸ್ವಾಮಿ ಉಡಾಫೆ

ನೆರೆ ಸಂತ್ರಸ್ತರ ಪರಿಹಾರ ವಿಷಯ ಕೆಲಸಕ್ಕೆ ಬಾರದ ಪ್ರಶ್ನೆ!?: ಮಾಧುಸ್ವಾಮಿ ಉಡಾಫೆ

- Advertisement -
- Advertisement -

ರಾಜ್ಯದಲ್ಲಿ ನೆರೆಯಿಂದ ಜನತೆ ಕಂಗಾಲಾಗಿದ್ದು, ಪರಿಹಾರಕ್ಕಾಗಿ ಎದುರು ನೋಡುತ್ತಿದ್ದಾರೆ. ಮಕ್ಕಳು, ವೃದ್ಧರು, ಮಹಿಳೆಯರು ಈಗಲೂ ಕಾಳಜಿ ಕೇಂದ್ರಗಳಲ್ಲಿ ಉಳಿದುಕೊಂಡಿದ್ದಾರೆ. ಪ್ರವಾಹದಿಂದ ಮನೆ, ಮಠ, ಆಸ್ತಿ-ಪಾಸ್ತಿ ಕಳೆದುಕೊಂಡು ಕಣ್ಣೀರಿಡುತ್ತಿದ್ದಾರೆ. ಆದರೆ ಇದ್ಯಾವುದು ರಾಜ್ಯ ಬಿಜೆಪಿ ಸರ್ಕಾರದ ಕಣ್ಣಿಗೆ ಮಾತ್ರ ಕಾಣುತ್ತಿಲ್ಲ. ಯಾಕಂದ್ರೆ ನೆರೆಗೆ ಪರಿಹಾರ ತೆಗೆದುಕೊಂಡು ಬನ್ನಿ ಸ್ವಾಮಿ ಅಂತಾ ಕೇಳಿದ್ರೆ, ಬಿಜೆಪಿ ಜನಪ್ರತಿನಿಧಿಗಳು ದುರ್ವರ್ತನೆ ತೋರುತ್ತಿದ್ದಾರೆ. ಕೇಂದ್ರದಿಂದ ನೆರೆಗೆ ಪರಿಹಾರ ಯಾಕೆ ಬೇಕು ಅಂತಾ ಪ್ರಶ್ನಿಸುವ ಮಟ್ಟಿಗೆ ಕೀಳು ರಾಜಕೀಯಕ್ಕಿಳಿದಿದ್ದಾರೆ.

ನಿನ್ನೆಯಷ್ಟೇ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಬಿಜೆಪಿ ಸಚಿವ ಜೆ.ಸಿ. ಮಾಧುಸ್ವಾಮಿ, ಉಡಾಫೆಯ ಮಾತುಗಳನ್ನಾಡಿದ್ದಾರೆ. ನೆರೆ ಸಂತ್ರಸ್ತರು ಹಾಗೂ ಪ್ರವಾಹದಿಂದ ಆದ ಹಾನಿಗೆ ಪರಿಹಾರದ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ “ನೆರೆ ಪರಿಹಾರ ಹಾಗೂ ಸಂತ್ರಸ್ತರ ಬಗ್ಗೆ ಕೇಳುವ ಪ್ರಶ್ನೆಗಳು ಕೆಲಸಕ್ಕೆ ಬಾರದ್ದು” ಎಂಬ ರೀತಿ ಹೇಳಿಕೆ ನೀಡಿದ್ದಾರೆ. ಕೇಂದ್ರ ಸರ್ಕಾರದಿಂದ ನೆರೆ ಸಂತ್ರಸ್ತರಿಗೆ ಪರಿಹಾರ ಬಿಡುಗಡೆ ಮಾಡಿಲ್ಲ ಎಂದು ಕೇಳಿದ ಪ್ರಶ್ನೆಗೆ ಮನಸ್ಸಿಗೆ ಬಂದಂತೆ ಪ್ರಶ್ನೆ ಕೇಳುವುದು ಸರಿಯಲ್ಲ. ಸಿದ್ದರಾಮಯ್ಯ ಹೇಳಿಕೊಟ್ಟ ಗಿಣಿಯಂತೆ ವರ್ತಿಸಬೇಡಿ ಎಂದು ಅಸಂಬದ್ಧ ಹೇಳಿಕೆ ನೀಡಿದ್ದಾರೆ. ಹಾಗಾದ್ರೆ ಬಿಜೆಪಿ ನಾಯಕರಿಗೆ ನೆರೆ ಹಾವಳಿ, ಸಂತ್ರಸ್ತರ ಗೋಳಾಟ ಎಲ್ಲವೂ ಕೆಲಸಕ್ಕೆ ಬಾರದ ವಿಷಯವಾ? ಎಂದು ಸಾರ್ವಜನಿಕರು ಪ್ರಶ್ನಿಸಿದ್ದು, ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇರಳ, ಮಹಾರಾಷ್ಟ್ರ ಸೇರಿದಂತೆ ಇತರೆ ರಾಜ್ಯಗಳಿಗೂ ಕೇಂದ್ರದಿಂದ ಪರಿಹಾರ ಸಿಕ್ಕಿಲ್ಲ. ಜನತೆಗೆ ಪರಿಹಾರ ಸಿಗದೇ ನಲುಗುತ್ತಿದ್ದಾರೆ. ರಾಜ್ಯದಿಂದ ಪರಿಹಾರ ಕೊಟ್ಟಿದೆಯಲ್ಲಾ ಅಂತಾ ದುರ್ವರ್ತನೆ ತೋರಿದ್ದಾರೆ. ಇಷ್ಟೇ ಅಲ್ಲ ಕೆಲ ದಿನಗಳ ಹಿಂದೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಕೇಂದ್ರ ಸರ್ಕಾರವೇ ನೆರೆ ಪರಿಹಾರ ಕೊಡಬೇಕು ಎಂದೇನಿಲ್ಲ ಎಂದಿದ್ದರು. ಈಶ್ವರಪ್ಪ ರಾಜ್ಯದಿಂದ ಕೊಟ್ಟಿರುವ ಹತ್ತು ಸಾವಿರ ರೂಪಾಯಿ ಪರಿಹಾರವೇ ಹೆಚ್ಚು ಎಂಬಂತೆ ಹೇಳಿಕೆ ನೀಡಿ ರಾಜ್ಯದ ಜನತೆಯ ಕೆಂಗಣ್ಣಿಗೆ ಗುರಿಯಾಗಿದ್ದರು.

ಈಗ ಮತ್ತೊಬ್ಬ ಬಿಜೆಪಿ ಸಚಿವರು ಅಪ್ರಬುದ್ಧ ಹೇಳಿಕೆ ನೀಡಿದ್ದಾರೆ. ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರವೇ ಆಡಳಿತದಲ್ಲಿದ್ದರೂ ಸಹ ಪರಿಹಾರ ತರುವಲ್ಲಿ ಮಾತ್ರ ರಾಜ್ಯ ಬಿಜೆಪಿ ವಿಫಲವಾಗಿದೆ. ಸಂತ್ರಸ್ತರಿಗೆ ಪರಿಹಾರ ತರುವ ವಿಷಯ ಬಿಜೆಪಿಗೆ ರಾಜಕೀಯ ವಿಷಯವಸ್ತುವಾಗಿರುವುದು ಮಾತ್ರ ವಿಪರ್ಯಾಸ.

ಇನ್ನು ಸಚಿವರ ಹೇಳಿಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ಬಹುತೇಕರು ಉಗ್ರವಾಗಿ ಖಂಡಿಸಿದ್ದಾರೆ. “ಹತ್ತು ಸಾವಿರ ಕೊಟ್ಟಿದ್ದೇ ಹೆಚ್ಚಾಯ್ತು ಅನ್ನುವ ಈಶ್ವರಪ್ಪ, ಕೇಂದ್ರದ ದುಡ್ಡು ಬೇಡವೆಂದ ತೇಜಸ್ವಿ ಸೂರ್ಯ ದಡ್ಡರು, ಅಪ್ರಬುದ್ಧರು ಎನ್ನುವ ಕಾರಣಕ್ಕೆ ಹೇಗೋ ಸಹಿಸಿಕೊಳ್ಳಬಹುದು. ಆದರೆ ಈತ ಪ್ರಕಾಂಡ ಪಂಡಿತ, ಸಂವಿಧಾನ ಓದಿಕೊಂಡಾತ. ರಾಜಕೀಯ ಹೇಳಿಕೆಗಳ ಸೂಕ್ಷ್ಮತೆ-ಅಸೂಕ್ಷ್ಮತೆಗಳ ಅರಿವಿರುವಾತ. ಹೇಳಿ‌ಕೇಳಿ ಮಾಜಿ ಸಮಾಜವಾದಿ ಕೂಡ. ಈತನಿಗೆ ಕ್ಷಮೆ ಇರಲು ಸಾಧ್ಯವೇ?” ಎಂದು ಪತ್ರಕರ್ತ ದಿನೇಶ್ ಕುಮಾರ್ ದಿನೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...