Homeಕರ್ನಾಟಕನೆರೆ ಸಂತ್ರಸ್ತರ ಪರಿಹಾರ ವಿಷಯ ಕೆಲಸಕ್ಕೆ ಬಾರದ ಪ್ರಶ್ನೆ!?: ಮಾಧುಸ್ವಾಮಿ ಉಡಾಫೆ

ನೆರೆ ಸಂತ್ರಸ್ತರ ಪರಿಹಾರ ವಿಷಯ ಕೆಲಸಕ್ಕೆ ಬಾರದ ಪ್ರಶ್ನೆ!?: ಮಾಧುಸ್ವಾಮಿ ಉಡಾಫೆ

- Advertisement -
- Advertisement -

ರಾಜ್ಯದಲ್ಲಿ ನೆರೆಯಿಂದ ಜನತೆ ಕಂಗಾಲಾಗಿದ್ದು, ಪರಿಹಾರಕ್ಕಾಗಿ ಎದುರು ನೋಡುತ್ತಿದ್ದಾರೆ. ಮಕ್ಕಳು, ವೃದ್ಧರು, ಮಹಿಳೆಯರು ಈಗಲೂ ಕಾಳಜಿ ಕೇಂದ್ರಗಳಲ್ಲಿ ಉಳಿದುಕೊಂಡಿದ್ದಾರೆ. ಪ್ರವಾಹದಿಂದ ಮನೆ, ಮಠ, ಆಸ್ತಿ-ಪಾಸ್ತಿ ಕಳೆದುಕೊಂಡು ಕಣ್ಣೀರಿಡುತ್ತಿದ್ದಾರೆ. ಆದರೆ ಇದ್ಯಾವುದು ರಾಜ್ಯ ಬಿಜೆಪಿ ಸರ್ಕಾರದ ಕಣ್ಣಿಗೆ ಮಾತ್ರ ಕಾಣುತ್ತಿಲ್ಲ. ಯಾಕಂದ್ರೆ ನೆರೆಗೆ ಪರಿಹಾರ ತೆಗೆದುಕೊಂಡು ಬನ್ನಿ ಸ್ವಾಮಿ ಅಂತಾ ಕೇಳಿದ್ರೆ, ಬಿಜೆಪಿ ಜನಪ್ರತಿನಿಧಿಗಳು ದುರ್ವರ್ತನೆ ತೋರುತ್ತಿದ್ದಾರೆ. ಕೇಂದ್ರದಿಂದ ನೆರೆಗೆ ಪರಿಹಾರ ಯಾಕೆ ಬೇಕು ಅಂತಾ ಪ್ರಶ್ನಿಸುವ ಮಟ್ಟಿಗೆ ಕೀಳು ರಾಜಕೀಯಕ್ಕಿಳಿದಿದ್ದಾರೆ.

ನಿನ್ನೆಯಷ್ಟೇ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಬಿಜೆಪಿ ಸಚಿವ ಜೆ.ಸಿ. ಮಾಧುಸ್ವಾಮಿ, ಉಡಾಫೆಯ ಮಾತುಗಳನ್ನಾಡಿದ್ದಾರೆ. ನೆರೆ ಸಂತ್ರಸ್ತರು ಹಾಗೂ ಪ್ರವಾಹದಿಂದ ಆದ ಹಾನಿಗೆ ಪರಿಹಾರದ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ “ನೆರೆ ಪರಿಹಾರ ಹಾಗೂ ಸಂತ್ರಸ್ತರ ಬಗ್ಗೆ ಕೇಳುವ ಪ್ರಶ್ನೆಗಳು ಕೆಲಸಕ್ಕೆ ಬಾರದ್ದು” ಎಂಬ ರೀತಿ ಹೇಳಿಕೆ ನೀಡಿದ್ದಾರೆ. ಕೇಂದ್ರ ಸರ್ಕಾರದಿಂದ ನೆರೆ ಸಂತ್ರಸ್ತರಿಗೆ ಪರಿಹಾರ ಬಿಡುಗಡೆ ಮಾಡಿಲ್ಲ ಎಂದು ಕೇಳಿದ ಪ್ರಶ್ನೆಗೆ ಮನಸ್ಸಿಗೆ ಬಂದಂತೆ ಪ್ರಶ್ನೆ ಕೇಳುವುದು ಸರಿಯಲ್ಲ. ಸಿದ್ದರಾಮಯ್ಯ ಹೇಳಿಕೊಟ್ಟ ಗಿಣಿಯಂತೆ ವರ್ತಿಸಬೇಡಿ ಎಂದು ಅಸಂಬದ್ಧ ಹೇಳಿಕೆ ನೀಡಿದ್ದಾರೆ. ಹಾಗಾದ್ರೆ ಬಿಜೆಪಿ ನಾಯಕರಿಗೆ ನೆರೆ ಹಾವಳಿ, ಸಂತ್ರಸ್ತರ ಗೋಳಾಟ ಎಲ್ಲವೂ ಕೆಲಸಕ್ಕೆ ಬಾರದ ವಿಷಯವಾ? ಎಂದು ಸಾರ್ವಜನಿಕರು ಪ್ರಶ್ನಿಸಿದ್ದು, ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇರಳ, ಮಹಾರಾಷ್ಟ್ರ ಸೇರಿದಂತೆ ಇತರೆ ರಾಜ್ಯಗಳಿಗೂ ಕೇಂದ್ರದಿಂದ ಪರಿಹಾರ ಸಿಕ್ಕಿಲ್ಲ. ಜನತೆಗೆ ಪರಿಹಾರ ಸಿಗದೇ ನಲುಗುತ್ತಿದ್ದಾರೆ. ರಾಜ್ಯದಿಂದ ಪರಿಹಾರ ಕೊಟ್ಟಿದೆಯಲ್ಲಾ ಅಂತಾ ದುರ್ವರ್ತನೆ ತೋರಿದ್ದಾರೆ. ಇಷ್ಟೇ ಅಲ್ಲ ಕೆಲ ದಿನಗಳ ಹಿಂದೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಕೇಂದ್ರ ಸರ್ಕಾರವೇ ನೆರೆ ಪರಿಹಾರ ಕೊಡಬೇಕು ಎಂದೇನಿಲ್ಲ ಎಂದಿದ್ದರು. ಈಶ್ವರಪ್ಪ ರಾಜ್ಯದಿಂದ ಕೊಟ್ಟಿರುವ ಹತ್ತು ಸಾವಿರ ರೂಪಾಯಿ ಪರಿಹಾರವೇ ಹೆಚ್ಚು ಎಂಬಂತೆ ಹೇಳಿಕೆ ನೀಡಿ ರಾಜ್ಯದ ಜನತೆಯ ಕೆಂಗಣ್ಣಿಗೆ ಗುರಿಯಾಗಿದ್ದರು.

ಈಗ ಮತ್ತೊಬ್ಬ ಬಿಜೆಪಿ ಸಚಿವರು ಅಪ್ರಬುದ್ಧ ಹೇಳಿಕೆ ನೀಡಿದ್ದಾರೆ. ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರವೇ ಆಡಳಿತದಲ್ಲಿದ್ದರೂ ಸಹ ಪರಿಹಾರ ತರುವಲ್ಲಿ ಮಾತ್ರ ರಾಜ್ಯ ಬಿಜೆಪಿ ವಿಫಲವಾಗಿದೆ. ಸಂತ್ರಸ್ತರಿಗೆ ಪರಿಹಾರ ತರುವ ವಿಷಯ ಬಿಜೆಪಿಗೆ ರಾಜಕೀಯ ವಿಷಯವಸ್ತುವಾಗಿರುವುದು ಮಾತ್ರ ವಿಪರ್ಯಾಸ.

ಇನ್ನು ಸಚಿವರ ಹೇಳಿಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ಬಹುತೇಕರು ಉಗ್ರವಾಗಿ ಖಂಡಿಸಿದ್ದಾರೆ. “ಹತ್ತು ಸಾವಿರ ಕೊಟ್ಟಿದ್ದೇ ಹೆಚ್ಚಾಯ್ತು ಅನ್ನುವ ಈಶ್ವರಪ್ಪ, ಕೇಂದ್ರದ ದುಡ್ಡು ಬೇಡವೆಂದ ತೇಜಸ್ವಿ ಸೂರ್ಯ ದಡ್ಡರು, ಅಪ್ರಬುದ್ಧರು ಎನ್ನುವ ಕಾರಣಕ್ಕೆ ಹೇಗೋ ಸಹಿಸಿಕೊಳ್ಳಬಹುದು. ಆದರೆ ಈತ ಪ್ರಕಾಂಡ ಪಂಡಿತ, ಸಂವಿಧಾನ ಓದಿಕೊಂಡಾತ. ರಾಜಕೀಯ ಹೇಳಿಕೆಗಳ ಸೂಕ್ಷ್ಮತೆ-ಅಸೂಕ್ಷ್ಮತೆಗಳ ಅರಿವಿರುವಾತ. ಹೇಳಿ‌ಕೇಳಿ ಮಾಜಿ ಸಮಾಜವಾದಿ ಕೂಡ. ಈತನಿಗೆ ಕ್ಷಮೆ ಇರಲು ಸಾಧ್ಯವೇ?” ಎಂದು ಪತ್ರಕರ್ತ ದಿನೇಶ್ ಕುಮಾರ್ ದಿನೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...