Homeಮುಖಪುಟಒಂದೇ ಒಂದು ಇಂಚು ಹಿಂದೆ ಸರಿಯದಿರಿ, ನಿಮ್ಮ ಜೊತೆ ನಾವಿದ್ದೇವೆ: ರೈತರಿಗೆ ರಾಹುಲ್ ಗಾಂಧಿ

ಒಂದೇ ಒಂದು ಇಂಚು ಹಿಂದೆ ಸರಿಯದಿರಿ, ನಿಮ್ಮ ಜೊತೆ ನಾವಿದ್ದೇವೆ: ರೈತರಿಗೆ ರಾಹುಲ್ ಗಾಂಧಿ

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕರಾಳ ಕೃಷಿ ಕಾನೂನಿನ ವಿರುದ್ದ ರೈತರು ನಡೆಸುತ್ತಿರುವ ಹೋರಾಟಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೆಂಬಲಿಸುವುದಾಗಿ ಮತ್ತೇ ಘೋಷಿಸಿದ್ದಾರೆ. ಹೋರಾಟದಿಂದ ಒಂದೇ ಒಂದು ಇಂಚು ಹಿಂದೆ ಸರಿಯಬೇಡಿ. ನಾವು ನಿಮ್ಮ ಜೊತೆಗೆ ಇದ್ದೇವೆ ಎಂದು ಅವರು ರೈತರಿಗೆ ಭರವಸೆ ನೀಡಿದ್ದಾರೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕರಾಳ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೇಶದ ರೈತರು ಕಳೆದ ಎರಡು ತಿಂಗಳಿನಿಂದ ಶಾಂತಿಯುತ ಹೋರಾಟ ನಡೆಸುತ್ತಿದ್ದಾರೆ. ಜನವರಿ 26 ರಂದು ಆಯೋಜಿಸಿದ್ದ ಟ್ರಾಕ್ಟರ್​ ರ್‍ಯಾಯ ವೇಳೆ ಕೆಂಪುಕೋಟೆಯ ಬಳಿ ಅಹಿತಕರ ಘಟನೆ ನಡೆದಿತ್ತಾದರೂ, ಇದೇ ವೇಳೆ ಲಕ್ಷಾಂತರ ರೈತರು ತಮಗೆ ಪೊಲೀಸರು ಗೊತ್ತುಪಡಿಸಿದ ರಸ್ತೆಯಲ್ಲಿ ಶಾಂತಿಯುತವಾಗಿ ಮೆರವಣಿಗೆ ನಡೆಸಿದ್ದರು. ಆದರೆ, ಕೇಂದ್ರ ಸರ್ಕಾರ ಮತ್ತು ಸರ್ಕಾರದ ಪರವಾಗಿರುವ ಮಾಧ್ಯಮಗಳು ಈ ವಿಚಾರವನ್ನು ಇಟ್ಟುಕೊಂಡು ರೈತ ಹೊರಾಟವನ್ನು ಹಣಿಯಲು ಮುಂದಾಗಿದೆ.

ಇದನ್ನೂ ಓದಿ: ರೈತರನ್ನು ಗೌರವಿಸದ ದೇಶ ದೇಶವೇ ಅಲ್ಲ: ಮಾಜಿ ಸ್ಪೀಕರ್‌ ರಮೇಶ್ ಕುಮಾರ್

ಗುರುವಾರದಿಂದ ಗಾಜಿಪುರ ಮತ್ತು ಟಿಕ್ರಿಯಲ್ಲಿ ಗೊಂದಲಗಳು ಸೃಷಿಯಾಗಿದೆ. ಗಾಜಿಪುರದಲ್ಲಿ ಉತ್ತರ ಪ್ರದೇಶದ ಪೊಲೀಸರು ಪ್ರತಿಭಟನೆಯನ್ನು ಖಾಲಿ ಮಾಡಿ ಎಂದು ಪ್ರತಿಭಟನಾ ನಿರತ ರೈತರನ್ನು ಬೆದರಿಸಿತ್ತು. ಅಲ್ಲದೆ ಉತ್ತರ ಪ್ರದೇಶ ಸರ್ಕಾರ ನೀರು ಮತ್ತು ವಿದ್ಯುತ್ತನ್ನು ಕಡಿತ ಮಾಡಿತ್ತು. ಟಿಕ್ರಿ ಗಡಿಯಲ್ಲಿ ಸಂಘಪರಿವಾರದ ಜನರು ಕಲ್ಲು ತೂರಾಟ ಸೇರಿದಂತೆ ಪ್ರತಿಭಟನಾ ನಿರತ ರೈತರ ವಸ್ತುಗಳಿಗೆ ಹಾನಿ ಮಾಡಿದ್ದರು.

ಹೋರಾಟದ ಬಗ್ಗೆ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿರುವ ರಾಹುಲ್ ಗಾಂಧಿ, “ಕೇಂದ್ರ ಸರ್ಕಾರ ರೈತರು ಪ್ರತಿಭಟನೆಯನ್ನು ಕೈಬಿಡುತ್ತಾರೆ ಎಂದುಕೊಂಡಿದೆ, ಆದರೆ ರೈತರು ಪ್ರತಿಭಟನಾ ಸ್ಥಳದಿಂದ ತೆರಳುವುದಿಲ್ಲ. ಸರ್ಕಾರ ರೈತರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದು, ಕೃಷಿ ಕಾನೂನುಗಳನ್ನು ವಾಪಸ್ ಪಡೆಯುವುದೇ ಸಮಸ್ಯೆಗೆ ಪರಿಹಾರ” ಎಂದು ಹೇಳಿದ್ದಾರೆ.

“ಕೆಂಪು ಕೋಟೆಗೆ ಗೂಂಡಾಗಳನ್ನು ಬಿಟ್ಟಿದ್ದು ಯಾರು ಮತ್ತು ಯಾಕೆ? ಎಂಬ ಪ್ರಶ್ನೆಗಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಉತ್ತರಿಸಬೇಕು. ರೈತರು ತಮ್ಮ ಹೋರಾಟದಿಂದ ಒಂದೇ ಒಂದು ಇಂಚು ಹಿಂದೆ ಸರಿಯಬೇಡಿ. ನಾವು ನಿಮ್ಮ ಜೊತೆಗೆ ಇದ್ದೇವೆ” ಎಂದು ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ ಮುಗಿಸಲು ಕೇಂದ್ರದ ಸಂಚು: ಕ್ರೊನೊಲಜಿ ಹೀಗಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. The congress spoiled the entire farming community by treating them as vote bank.The lian waiver of 2008 concieved by corrupt cynical Chidambaram paved way for loss of repayment ethics by farmers.Even in thus agitation it is clear as crystal that Rahul aka Pappu is thinking of exploiting the situation tomake a comeback.

  2. ಗೋಲಿಬಾರ್ ನಡೆದು ಒಂದೇ ಒಂದು ರೈತನ ಹೆಣ ಬಿಳೋದನ್ನ ರಣಹದ್ದುಗಳಂತೆ ಕಾಯ್ದು ಕುಳಿತಿದ್ದರು. ಇವರ ನಿರೀಕ್ಷೆ ಹುಸಿಯಾಯಿತು. ಅದಕ್ಕೆ ಪ್ರತಿಭಟನೆಗೆ ಮತ್ತೆ ಎಕ್ಸಲೇಟರ್ ಕೊಡ್ತಿದ್ದಾರೆ.

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...