Homeಮುಖಪುಟಒಂದೇ ಒಂದು ಇಂಚು ಹಿಂದೆ ಸರಿಯದಿರಿ, ನಿಮ್ಮ ಜೊತೆ ನಾವಿದ್ದೇವೆ: ರೈತರಿಗೆ ರಾಹುಲ್ ಗಾಂಧಿ

ಒಂದೇ ಒಂದು ಇಂಚು ಹಿಂದೆ ಸರಿಯದಿರಿ, ನಿಮ್ಮ ಜೊತೆ ನಾವಿದ್ದೇವೆ: ರೈತರಿಗೆ ರಾಹುಲ್ ಗಾಂಧಿ

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕರಾಳ ಕೃಷಿ ಕಾನೂನಿನ ವಿರುದ್ದ ರೈತರು ನಡೆಸುತ್ತಿರುವ ಹೋರಾಟಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೆಂಬಲಿಸುವುದಾಗಿ ಮತ್ತೇ ಘೋಷಿಸಿದ್ದಾರೆ. ಹೋರಾಟದಿಂದ ಒಂದೇ ಒಂದು ಇಂಚು ಹಿಂದೆ ಸರಿಯಬೇಡಿ. ನಾವು ನಿಮ್ಮ ಜೊತೆಗೆ ಇದ್ದೇವೆ ಎಂದು ಅವರು ರೈತರಿಗೆ ಭರವಸೆ ನೀಡಿದ್ದಾರೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕರಾಳ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೇಶದ ರೈತರು ಕಳೆದ ಎರಡು ತಿಂಗಳಿನಿಂದ ಶಾಂತಿಯುತ ಹೋರಾಟ ನಡೆಸುತ್ತಿದ್ದಾರೆ. ಜನವರಿ 26 ರಂದು ಆಯೋಜಿಸಿದ್ದ ಟ್ರಾಕ್ಟರ್​ ರ್‍ಯಾಯ ವೇಳೆ ಕೆಂಪುಕೋಟೆಯ ಬಳಿ ಅಹಿತಕರ ಘಟನೆ ನಡೆದಿತ್ತಾದರೂ, ಇದೇ ವೇಳೆ ಲಕ್ಷಾಂತರ ರೈತರು ತಮಗೆ ಪೊಲೀಸರು ಗೊತ್ತುಪಡಿಸಿದ ರಸ್ತೆಯಲ್ಲಿ ಶಾಂತಿಯುತವಾಗಿ ಮೆರವಣಿಗೆ ನಡೆಸಿದ್ದರು. ಆದರೆ, ಕೇಂದ್ರ ಸರ್ಕಾರ ಮತ್ತು ಸರ್ಕಾರದ ಪರವಾಗಿರುವ ಮಾಧ್ಯಮಗಳು ಈ ವಿಚಾರವನ್ನು ಇಟ್ಟುಕೊಂಡು ರೈತ ಹೊರಾಟವನ್ನು ಹಣಿಯಲು ಮುಂದಾಗಿದೆ.

ಇದನ್ನೂ ಓದಿ: ರೈತರನ್ನು ಗೌರವಿಸದ ದೇಶ ದೇಶವೇ ಅಲ್ಲ: ಮಾಜಿ ಸ್ಪೀಕರ್‌ ರಮೇಶ್ ಕುಮಾರ್

ಗುರುವಾರದಿಂದ ಗಾಜಿಪುರ ಮತ್ತು ಟಿಕ್ರಿಯಲ್ಲಿ ಗೊಂದಲಗಳು ಸೃಷಿಯಾಗಿದೆ. ಗಾಜಿಪುರದಲ್ಲಿ ಉತ್ತರ ಪ್ರದೇಶದ ಪೊಲೀಸರು ಪ್ರತಿಭಟನೆಯನ್ನು ಖಾಲಿ ಮಾಡಿ ಎಂದು ಪ್ರತಿಭಟನಾ ನಿರತ ರೈತರನ್ನು ಬೆದರಿಸಿತ್ತು. ಅಲ್ಲದೆ ಉತ್ತರ ಪ್ರದೇಶ ಸರ್ಕಾರ ನೀರು ಮತ್ತು ವಿದ್ಯುತ್ತನ್ನು ಕಡಿತ ಮಾಡಿತ್ತು. ಟಿಕ್ರಿ ಗಡಿಯಲ್ಲಿ ಸಂಘಪರಿವಾರದ ಜನರು ಕಲ್ಲು ತೂರಾಟ ಸೇರಿದಂತೆ ಪ್ರತಿಭಟನಾ ನಿರತ ರೈತರ ವಸ್ತುಗಳಿಗೆ ಹಾನಿ ಮಾಡಿದ್ದರು.

ಹೋರಾಟದ ಬಗ್ಗೆ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿರುವ ರಾಹುಲ್ ಗಾಂಧಿ, “ಕೇಂದ್ರ ಸರ್ಕಾರ ರೈತರು ಪ್ರತಿಭಟನೆಯನ್ನು ಕೈಬಿಡುತ್ತಾರೆ ಎಂದುಕೊಂಡಿದೆ, ಆದರೆ ರೈತರು ಪ್ರತಿಭಟನಾ ಸ್ಥಳದಿಂದ ತೆರಳುವುದಿಲ್ಲ. ಸರ್ಕಾರ ರೈತರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದು, ಕೃಷಿ ಕಾನೂನುಗಳನ್ನು ವಾಪಸ್ ಪಡೆಯುವುದೇ ಸಮಸ್ಯೆಗೆ ಪರಿಹಾರ” ಎಂದು ಹೇಳಿದ್ದಾರೆ.

“ಕೆಂಪು ಕೋಟೆಗೆ ಗೂಂಡಾಗಳನ್ನು ಬಿಟ್ಟಿದ್ದು ಯಾರು ಮತ್ತು ಯಾಕೆ? ಎಂಬ ಪ್ರಶ್ನೆಗಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಉತ್ತರಿಸಬೇಕು. ರೈತರು ತಮ್ಮ ಹೋರಾಟದಿಂದ ಒಂದೇ ಒಂದು ಇಂಚು ಹಿಂದೆ ಸರಿಯಬೇಡಿ. ನಾವು ನಿಮ್ಮ ಜೊತೆಗೆ ಇದ್ದೇವೆ” ಎಂದು ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ ಮುಗಿಸಲು ಕೇಂದ್ರದ ಸಂಚು: ಕ್ರೊನೊಲಜಿ ಹೀಗಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. The congress spoiled the entire farming community by treating them as vote bank.The lian waiver of 2008 concieved by corrupt cynical Chidambaram paved way for loss of repayment ethics by farmers.Even in thus agitation it is clear as crystal that Rahul aka Pappu is thinking of exploiting the situation tomake a comeback.

  2. ಗೋಲಿಬಾರ್ ನಡೆದು ಒಂದೇ ಒಂದು ರೈತನ ಹೆಣ ಬಿಳೋದನ್ನ ರಣಹದ್ದುಗಳಂತೆ ಕಾಯ್ದು ಕುಳಿತಿದ್ದರು. ಇವರ ನಿರೀಕ್ಷೆ ಹುಸಿಯಾಯಿತು. ಅದಕ್ಕೆ ಪ್ರತಿಭಟನೆಗೆ ಮತ್ತೆ ಎಕ್ಸಲೇಟರ್ ಕೊಡ್ತಿದ್ದಾರೆ.

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...