Homeಮುಖಪುಟಒಂದೇ ಒಂದು ಇಂಚು ಹಿಂದೆ ಸರಿಯದಿರಿ, ನಿಮ್ಮ ಜೊತೆ ನಾವಿದ್ದೇವೆ: ರೈತರಿಗೆ ರಾಹುಲ್ ಗಾಂಧಿ

ಒಂದೇ ಒಂದು ಇಂಚು ಹಿಂದೆ ಸರಿಯದಿರಿ, ನಿಮ್ಮ ಜೊತೆ ನಾವಿದ್ದೇವೆ: ರೈತರಿಗೆ ರಾಹುಲ್ ಗಾಂಧಿ

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕರಾಳ ಕೃಷಿ ಕಾನೂನಿನ ವಿರುದ್ದ ರೈತರು ನಡೆಸುತ್ತಿರುವ ಹೋರಾಟಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೆಂಬಲಿಸುವುದಾಗಿ ಮತ್ತೇ ಘೋಷಿಸಿದ್ದಾರೆ. ಹೋರಾಟದಿಂದ ಒಂದೇ ಒಂದು ಇಂಚು ಹಿಂದೆ ಸರಿಯಬೇಡಿ. ನಾವು ನಿಮ್ಮ ಜೊತೆಗೆ ಇದ್ದೇವೆ ಎಂದು ಅವರು ರೈತರಿಗೆ ಭರವಸೆ ನೀಡಿದ್ದಾರೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕರಾಳ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೇಶದ ರೈತರು ಕಳೆದ ಎರಡು ತಿಂಗಳಿನಿಂದ ಶಾಂತಿಯುತ ಹೋರಾಟ ನಡೆಸುತ್ತಿದ್ದಾರೆ. ಜನವರಿ 26 ರಂದು ಆಯೋಜಿಸಿದ್ದ ಟ್ರಾಕ್ಟರ್​ ರ್‍ಯಾಯ ವೇಳೆ ಕೆಂಪುಕೋಟೆಯ ಬಳಿ ಅಹಿತಕರ ಘಟನೆ ನಡೆದಿತ್ತಾದರೂ, ಇದೇ ವೇಳೆ ಲಕ್ಷಾಂತರ ರೈತರು ತಮಗೆ ಪೊಲೀಸರು ಗೊತ್ತುಪಡಿಸಿದ ರಸ್ತೆಯಲ್ಲಿ ಶಾಂತಿಯುತವಾಗಿ ಮೆರವಣಿಗೆ ನಡೆಸಿದ್ದರು. ಆದರೆ, ಕೇಂದ್ರ ಸರ್ಕಾರ ಮತ್ತು ಸರ್ಕಾರದ ಪರವಾಗಿರುವ ಮಾಧ್ಯಮಗಳು ಈ ವಿಚಾರವನ್ನು ಇಟ್ಟುಕೊಂಡು ರೈತ ಹೊರಾಟವನ್ನು ಹಣಿಯಲು ಮುಂದಾಗಿದೆ.

ಇದನ್ನೂ ಓದಿ: ರೈತರನ್ನು ಗೌರವಿಸದ ದೇಶ ದೇಶವೇ ಅಲ್ಲ: ಮಾಜಿ ಸ್ಪೀಕರ್‌ ರಮೇಶ್ ಕುಮಾರ್

ಗುರುವಾರದಿಂದ ಗಾಜಿಪುರ ಮತ್ತು ಟಿಕ್ರಿಯಲ್ಲಿ ಗೊಂದಲಗಳು ಸೃಷಿಯಾಗಿದೆ. ಗಾಜಿಪುರದಲ್ಲಿ ಉತ್ತರ ಪ್ರದೇಶದ ಪೊಲೀಸರು ಪ್ರತಿಭಟನೆಯನ್ನು ಖಾಲಿ ಮಾಡಿ ಎಂದು ಪ್ರತಿಭಟನಾ ನಿರತ ರೈತರನ್ನು ಬೆದರಿಸಿತ್ತು. ಅಲ್ಲದೆ ಉತ್ತರ ಪ್ರದೇಶ ಸರ್ಕಾರ ನೀರು ಮತ್ತು ವಿದ್ಯುತ್ತನ್ನು ಕಡಿತ ಮಾಡಿತ್ತು. ಟಿಕ್ರಿ ಗಡಿಯಲ್ಲಿ ಸಂಘಪರಿವಾರದ ಜನರು ಕಲ್ಲು ತೂರಾಟ ಸೇರಿದಂತೆ ಪ್ರತಿಭಟನಾ ನಿರತ ರೈತರ ವಸ್ತುಗಳಿಗೆ ಹಾನಿ ಮಾಡಿದ್ದರು.

ಹೋರಾಟದ ಬಗ್ಗೆ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿರುವ ರಾಹುಲ್ ಗಾಂಧಿ, “ಕೇಂದ್ರ ಸರ್ಕಾರ ರೈತರು ಪ್ರತಿಭಟನೆಯನ್ನು ಕೈಬಿಡುತ್ತಾರೆ ಎಂದುಕೊಂಡಿದೆ, ಆದರೆ ರೈತರು ಪ್ರತಿಭಟನಾ ಸ್ಥಳದಿಂದ ತೆರಳುವುದಿಲ್ಲ. ಸರ್ಕಾರ ರೈತರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದು, ಕೃಷಿ ಕಾನೂನುಗಳನ್ನು ವಾಪಸ್ ಪಡೆಯುವುದೇ ಸಮಸ್ಯೆಗೆ ಪರಿಹಾರ” ಎಂದು ಹೇಳಿದ್ದಾರೆ.

“ಕೆಂಪು ಕೋಟೆಗೆ ಗೂಂಡಾಗಳನ್ನು ಬಿಟ್ಟಿದ್ದು ಯಾರು ಮತ್ತು ಯಾಕೆ? ಎಂಬ ಪ್ರಶ್ನೆಗಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಉತ್ತರಿಸಬೇಕು. ರೈತರು ತಮ್ಮ ಹೋರಾಟದಿಂದ ಒಂದೇ ಒಂದು ಇಂಚು ಹಿಂದೆ ಸರಿಯಬೇಡಿ. ನಾವು ನಿಮ್ಮ ಜೊತೆಗೆ ಇದ್ದೇವೆ” ಎಂದು ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ ಮುಗಿಸಲು ಕೇಂದ್ರದ ಸಂಚು: ಕ್ರೊನೊಲಜಿ ಹೀಗಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. The congress spoiled the entire farming community by treating them as vote bank.The lian waiver of 2008 concieved by corrupt cynical Chidambaram paved way for loss of repayment ethics by farmers.Even in thus agitation it is clear as crystal that Rahul aka Pappu is thinking of exploiting the situation tomake a comeback.

  2. ಗೋಲಿಬಾರ್ ನಡೆದು ಒಂದೇ ಒಂದು ರೈತನ ಹೆಣ ಬಿಳೋದನ್ನ ರಣಹದ್ದುಗಳಂತೆ ಕಾಯ್ದು ಕುಳಿತಿದ್ದರು. ಇವರ ನಿರೀಕ್ಷೆ ಹುಸಿಯಾಯಿತು. ಅದಕ್ಕೆ ಪ್ರತಿಭಟನೆಗೆ ಮತ್ತೆ ಎಕ್ಸಲೇಟರ್ ಕೊಡ್ತಿದ್ದಾರೆ.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...