Homeಮುಖಪುಟ’ಒಂದು ಟ್ವೀಟ್‌ನಿಂದ ನಿಮ್ಮ ಐಕ್ಯತೆ ಧಕ್ಕೆ ಆಗುವುದಾದರೆ...’ ಭಾರತೀಯ ಸಲೆಬ್ರಿಟಿಗಳ ಕಪಾಳಕ್ಕೆ ಬಾರಿಸಿದ ತಾಪ್ಸಿ ಪನ್ನು!

’ಒಂದು ಟ್ವೀಟ್‌ನಿಂದ ನಿಮ್ಮ ಐಕ್ಯತೆ ಧಕ್ಕೆ ಆಗುವುದಾದರೆ…’ ಭಾರತೀಯ ಸಲೆಬ್ರಿಟಿಗಳ ಕಪಾಳಕ್ಕೆ ಬಾರಿಸಿದ ತಾಪ್ಸಿ ಪನ್ನು!

- Advertisement -
- Advertisement -

ಅಂತಾರಾಷ್ಟ್ರೀಯ ಪಾಪ್ ತಾರೆ ರಿಹಾನ್ನಾ ಅವರು ಭಾರತೀಯ ರೈತರ ಹೋರಾಟದ ವರದಿಯೊಂದನ್ನು ಉಲ್ಲೇಖಿಸಿ, “ನಾವೇಕೆ ರೈತ ಪ್ರತಿಭಟನೆಯ ಬಗ್ಗೆ ಮಾತನಾಡುತ್ತಿಲ್ಲ?” ಎಂದು ಟ್ವೀಟ್ ಮಾಡಿದ್ದರು. ಇದರ ನಂತರ ಭಾರತದ ರೈತ ಹೋರಾಟಕ್ಕೆ ಏಕಾಏಕಿಯಾಗಿ ಅಂತಾರಾಷ್ಟ್ರೀಯವಾಗಿ ಬೆಂಬಲ ಹೆಚ್ಚಾಗಿದ್ದು, ಅಂತಾರಾಷ್ಟ್ರೀಯ ಸೆಲೆಬ್ರಿಟಿಗಳು, ರಾಜಕಾರಣಿಗಳು, ಸಾಮಾಜಿಕ ಕಾರ್ಯಕರ್ತರು ಭಾರತೀಯ ರೈತರ ಪರವಾಗಿ ಧ್ವನಿ ಎತ್ತಿದ್ದಾರೆ.

ಇದರಿಂದಾಗಿ ತೀವ್ರ ಮುಜುಗರಕ್ಕೊಳಗಾಗಿರುವ ಕೇಂದ್ರ ಸರ್ಕಾರ ಅದನ್ನು ಸರಿ ಪಡಿಸಲು, ರೈತ ಹೋರಾಟವು ದೇಶದ ಆಂತರಿಕ ಸಮಸ್ಯೆಯಾಗಿದ್ದು ವಿದೇಶಿಗರು ಇದರ ಬಗ್ಗೆ ಮಾತನಾಡಬಾರದು ಎಂದು ಹೇಳಿತ್ತು. ಜೊತೆಗೆ #FarmersProtest ಹ್ಯಾಶ್‌ಟ್ಯಾಗ್‌ಗೆ ವಿರುದ್ದವಾಗಿ ’ಇಂಡಿಯಾ ಟುಗೇದರ್‌’ ಮತ್ತು  ’ಇಂಡಿಯಾ ಅಗೇನ್ಸ್ಟ್‌‌ ಪ್ರೊಪಗಾಂಡ’ ಎಂಬ ಹ್ಯಾಶ್ ಟ್ಯಾಗನ್ನು ನೀಡಿತ್ತು.

ಇದನ್ನೂ ಓದಿ: ರೈತ ಹೋರಾಟಕ್ಕೆ ಗ್ರೇಥಾ ಥನ್‌‌ಬರ್ಗ್ ಮತ್ತು ಪಾಪ್‌ ಗಾಯಕಿ ರಿಹಾನ್ನಾ ಬೆಂಬಲ; ನೆಟ್ಟಿಗರ ಪ್ರತಿಕ್ರಿಯೆಯೇನು?

ಸಚಿನ್ ತೆಂಡುಲ್ಕರ್‌, ವಿರಾಟ್ ಕೋಹ್ಲಿ, ಅಜಿಂಕ ರಹಾನೆ, ಅನಿಲ್ ಕುಂಬ್ಳೆ, ಲತಾ ಮಂಗೇಶ್ಕರ್‌, ಅಕ್ಷಯ್ ಕುಮಾರ್‌, ಸೈನಾ ನೆಹ್ವಾಲ್, ಯುವರಾಜ್ ಸಿಂಗ್, ಸುರೇಶ್ ರೈನಾ, ಸುನಿಲ್ ಶೆಟ್ಟಿ, ಅಜಯ್ ದೇವಗನ್ ಸೇರಿದಂತೆ ಹಲವಾರು ಜನಪ್ರಿಯ ವ್ಯಕ್ತಿಗಳು ಈ ಹ್ಯಾಶ್‌ಟ್ಯಾಗ್‌‌ ಅನ್ನು ಬಳಸಿಕೊಂಡು, ವಿದೇಶಿಯರು ಭಾರತದ ಆಂತರಿಕ ವಿಷಯದಲ್ಲಿ ಮಾತನಾಡಬಾರದು ಎಂದು ಹೇಳಿದ್ದರು. ಜೊತೆಗೆ ಪ್ರೊಪಗಾಂಡ(ಅಪಪ್ರಚಾರ)ದ ವಿರುದ್ದ ಭಾರತ ಎಂದು ಟ್ವೀಟ್ ಮಾಡಿದ್ದರು.

ಈ ಹಿನ್ನಲೆಯಲ್ಲಿ ಸಾಮಾಜಿಕ ಸಮಸ್ಯೆಗಳ ವಿರುದ್ದ ಪ್ರತಿಬಾರಿ ಬಗ್ಗೆ ಧ್ವನಿ ಎತ್ತಿಕೊಂಡೆ ಬಂದಿರುವ ಬಾಲಿವುಡ್ ನಟಿ ತಾಪ್ಸಿ ಪನ್ನು, “ಒಂದು ಟ್ವೀಟ್ ನಿಮ್ಮ ಐಕ್ಯತೆಯನ್ನು ಅಲ್ಲಾಡಿಸುವುದಾದರೆ, ಒಂದು ಜೋಕ್ ನಿಮ್ಮ ನಂಬಿಕೆಯನ್ನು ಅಲ್ಲಾಡಿಸುವುದಾದರೆ, ಒಂದು ಕಾರ್ಯಕ್ರಮ ನಿಮ್ಮ ಧಾರ್ಮಿಕ ನಂಬಿಕೆಯನ್ನು ಅಲ್ಲಾಡಿಸುವುದಾದರೆ, ಮೊದಲು ನೀವು ನಂಬಿರುವ ಮೌಲ್ಯಗಳನ್ನು ಗಟ್ಟಿಗೊಳಿಸುವ ಕೆಲಸ ಮಾಡಿ. ಅದರ ಬದಲು ಉಳಿದವರಿಗೆ ಪ್ರೊಪಗಂಡಾ ಕಲಿಸುವ ಟೀಚರ್‌ ಆಗಬೇಡಿ” ಎಂದು ಮೇಲಿನ ಸೆಲೆಬ್ರಿಟಿಗಳಿಗೆ ತೀಕ್ಷ್ಣ ಪ್ರತ್ಯುತ್ತರ ನೀಡಿದ್ದಾರೆ.

ಇದನ್ನೂ ಓದಿ: ಕೇಂದ್ರ ಸರ್ಕಾರದ ಪರವಾಗಿ ಕಾಪಿ-ಪೇಸ್ಟ್ ಟ್ವೀಟ್: ಸಿಕ್ಕಿಬಿದ್ದ ಭಾರತೀಯ ಸೆಲೆಬ್ರಿಟಿಗಳು!

ಪ್ರಸ್ತುತ ಟ್ವೀಟ್ ವೈರಲ್ ಆಗಿದ್ದು ಹಲವರು ತಾಪ್ಸಿ ಪನ್ನುಗೆ ಅಭಿನಂದನೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟಕ್ಕೆ ಅಂತರಾಷ್ಟ್ರೀಯ ಸೆಲೆಬ್ರಿಟಿಗಳ ಬೆಂಬಲ: ಗರಂ ಆಯಿತೇ ವಿದೇಶಾಂಗ ಸಚಿವಾಲಯ?

ವಿಧಾನ ಸಭಾ ಅಧಿವೇಶನದ ಫೇಸ್‌ಹಕ್ ಲೈವ್ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ಯೂಬಾ ಎಂದರೆ ಫಿಡೆಲ್, ಅಮೆರಿಕದ ಕುತಂತ್ರದ ವಿರುದ್ಧ ಪುಟ್ಟ ರಾಷ್ಟ್ರ ಕ್ಯೂಬಾದ ಸುದೀರ್ಘ ಕ್ರಾಂತಿ

ಆಗಸ್ಟ್ 13, 2026 ರಂದು ಕ್ಯೂಬಾ ತನ್ನ ಕ್ರಾಂತಿಕಾರಿ ನಾಯಕ, ಕಮಾಂಡರ್-ಇನ್-ಚೀಫ್ ಫಿಡೆಲ್ ಕ್ಯಾಸ್ಟ್ರೋ ರೂಜ್ ಅವರ ಜನ್ಮ ಶತಮಾನೋತ್ಸವವನ್ನು ಆಚರಿಸುತ್ತಿದೆ. ಐದು ದಶಕಗಳ ಕಾಲ ದೇಶವನ್ನು ಮುನ್ನಡೆಸಿದ ನಾಯಕನ ಶಾಶ್ವತ ಸಿದ್ಧಾಂತಗಳು...

‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ: ಚಾಲ್ತಿಯಲ್ಲಿರುವ ಅಧಿವೇಶನದಲ್ಲೇ ವಿಧೇಯಕ ಮಂಡಿಸಲು ಸರ್ಕಾರಕ್ಕೆ ‘ರೋಹಿತ್ ಕಾಯ್ದೆಗಾಗಿ ಜನಾಂದೋಲನ’ ಸಂಘಟನೆ ಒತ್ತಾಯ

ಬೆಂಗಳೂರು: ದೇಶದ ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾಂಸ್ಥಿಕ ಜಾತಿ ತಾರತಮ್ಯ, ಕಿರುಕುಳ ಹಾಗೂ ವಂಚನೆಯನ್ನು ತಡೆಗಟ್ಟಲು ಅತ್ಯಂತ ನಿರ್ಣಾಯಕವಾಗಿರುವ 'ಕರ್ನಾಟಕ ರೋಹಿತ್ ವೇಮುಲಾ...

SIR: ತೆಲಂಗಾಣ ಸರ್ಕಾರ ಮತದಾರರಿಗೆ ನೀಡಿದ್ದ FRC ಯನ್ನು , ನಿರಾಕರಿಸಿದ ಕೇಂದ್ರ ಚುನಾವಣಾ ಆಯೋಗ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ತೆಲಂಗಾಣ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿದ್ದ ‘ಫ್ಯಾಮಿಲಿ ರಿಜಿಸ್ಟರ್ ಸರ್ಟಿಫಿಕೇಟ್’ (FRC) ಅನ್ನು ಮತದಾರರ ದಾಖಲೆಯನ್ನಾಗಿ ಸ್ವೀಕರಿಸಲು ಕೇಂದ್ರ ಚುನಾವಣಾ ಆಯೋಗ ನಿರಾಕರಿಸಿದೆ. FRC...

ಬಿಹಾರ| ಗ್ರಾಮ ತೊರೆಯಿರಿ ಅಥವಾ ‘ಘರ್ ವಾಪ್ಸಿ’ಯಾಗಿ; ಹಿಂದುತ್ವ ಗುಂಪಿನಿಂದ ಕ್ರೈಸ್ತ ಕಟುಂಬಗಳಿಗೆ ಬೆದರಿಕೆ

ಬಿಹಾರದ ಭಾಗಲ್ಪುರ ಜಿಲ್ಲೆಯ ಗೋಪಾಲಪುರ ಗ್ರಾಮದ 42 ಕ್ರಿಶ್ಚಿಯನ್ ಕುಟುಂಬಗಳಿಗೆ ಹಿಂದುತ್ವ ಗುಂಪಿನ ಸದಸ್ಯರು ಬೆದರಿಕೆ ಹಾಕಿದ್ದಾರೆ ಎಂದು 'ಕ್ಲಾರಿಯನ್ ಇಂಡಿಯಾ' ನ್ಯೂಸ್‌ ಪೋರ್ಟ್ಲ್ ವರದಿ ಮಾಡಿದೆ. 'ಘರ್ ವಾಪ್ಸಿ'ಯಾಗಿ ಅಥವಾ ಗ್ರಾಮ...

ಭೂಮಾನಂದ ಹತ್ಯೆ: ಕೊಲೆಗಾರರ ಪರ ನಿಂತ ‘ವಾಲ್ಮೀಕಿ ನಾಯಕ ಸಂಘ’ದ ವಿರುದ್ಧ ಆಕ್ರೋಶ: ಆಗಸ್ಟ್ 15ಕ್ಕೆ ಕಪ್ಪುಪಟ್ಟಿ ಪ್ರದರ್ಶನ, ಬೈಕ್ ರ್ಯಾಲಿಗೆ ಕರೆ

ರಾಯಚೂರು: ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ಬಹುಜನ ಮುಖಂಡ ಭೂಮಾನಂದ ಅವರ ಬರ್ಬರ ಕಗ್ಗೋಲೆಯನ್ನು ಖಂಡಿಸಿ, ಕೊಲೆಗಡುಕರ ಪರವಾಗಿ ನಿಂತಿರುವ ಸಂಘಟನೆಗಳು ಹಾಗೂ ಮೌನ ವಹಿಸಿರುವ ಜನಪ್ರತಿನಿಧಿಗಳ ವಿರುದ್ಧ 'ಬಹುಜನ ಮುಖಂಡ ಭೂಮಾನಂದನ...

SIR ಅವಾಂತರ: ನಟ ಪ್ರಕಾಶ್ ರಾಜ್ ಹೆಸರೇ ವೋಟರ್ ಲಿಸ್ಟ್‌ನಿಂದ ನಾಪತ್ತೆ, ನಾಳೆ ಬೆಂಗಳೂರಲ್ಲಿ ಮಹತ್ವದ ಪತ್ರಿಕಾಗೋಷ್ಠಿ

ರಾಜ್ಯದಲ್ಲಿ ನಡೆಯುತ್ತಿರುವ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಅವಾಂತರಗಳು ದಿನಕ್ಕೊಂದು ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಇದೀಗ ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ಹೆಸರೇ ಮತದಾರರ ಪಟ್ಟಿಯಿಂದ ನಾಪತ್ತೆಯಾಗಿದೆ. ವರ್ಷಗಳಿಂದ ಮತದಾನ...

ಹಳೆ ಮತದಾರರಲ್ಲಿ ಫಾರ್ಮ್ ನಂ.6 ಕೇಳುವುದೇ ಕಾನೂನು ಬಾಹಿರ; ಚುನಾವಣಾ ಆಯೋಗದ ನಿಯಮಗಳಿಗೆ ವಿರುದ್ಧ!

"ASDDO ಪಟ್ಟಿಯಲ್ಲಿ ಹೆಸರು ಬಂದಿದ್ದರೆ ಹೆದರಿಕೊಳ್ಳುವ ಅವಶ್ಯಕತೆ ಇಲ್ಲ, ಫಾರ್ಮ್ ನಂ.6 ಸಲ್ಲಿಸುವ ಮೂಲಕ ದಾಖಲೆಗಳನ್ನು ನೀಡಿ ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರಿಸಬಹುದು" ಎಂದು ಚುನಾವಣಾ ಆಯೋಗ ಹೇಳುತ್ತಿದೆ. ಆದರೆ, ಹಳೆ...

SIR: ಅರ್ಹ ಮತದಾರರನ್ನು ಹೊರಗಿಟ್ಟು 1,848 ಹೊಸ ಮತಗಟ್ಟೆ ಸ್ಥಾಪಿಸಲು ಮುಂದಾದ ಚುನಾವಣಾ ಆಯೋಗ

ಒಂದೆಡೆ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ (SIR) ಹೆಸರಿನಲ್ಲಿ ಲಕ್ಷಾಂತರ ಅರ್ಹ ಮತದಾರರ ಹೆಸರುಗಳು ಡಿಲೀಟ್‌ ಆಗುವ ಭೀತಿ ಎದುರಾಗಿದ್ದರೆ, ಇನ್ನೊಂದೆಡೆ ರಾಜ್ಯದಲ್ಲಿ ಹೊಸದಾಗಿ 1,848 ಹೆಚ್ಚುವರಿ ಮತಗಟ್ಟೆಗಳನ್ನು ಸ್ಥಾಪಿಸಲು ಕೇಂದ್ರ ಚುನಾವಣಾ...

ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಭಾಷಣದ ಬೆನ್ನಲ್ಲೇ ವೇದಿಕೆ ‘ಶುದ್ಧೀಕರಣ’: ಕೇಂದ್ರ ಸರ್ಕಾರ ಹಾಗೂ ಬಿಜೆಪಿಗೆ ಪ್ರತಿಪಕ್ಷಗಳ ತೀವ್ರ ತರಾಟೆ 

ಉತ್ತರಾಖಂಡದ ನೈನಿತಾಲ್ ಜಿಲ್ಲೆಯ ಹಲ್ದ್ವಾನಿಯಲ್ಲಿರುವ ರಾಮ್‌ಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಕೆಲವೇ ದಿನಗಳಲ್ಲಿ, ಬಲಪಂಥೀಯ...

ನೀಟ್ ಪೇಪರ್ ಲೀಕ್ ಪ್ರಕರಣದ ಚಾರ್ಜ್ ಶೀಟ್ ಲೀಕ್ : ಕೋರ್ಟ್ ಕಳವಳ

ನೀಟ್ ಯುಜಿ- 2026ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ವಿಚಾರಣೆಗಾಗಿ ಸ್ಥಾಪಿಸಲಾದ ವಿಶೇಷ ಫಾಸ್ಟ್ ಟ್ರ್ಯಾಕ್ (ಶೀಘ್ರ ಗತಿ) ನ್ಯಾಯಾಲಯವು, 13 ಆರೋಪಿಗಳ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಸಲ್ಲಿಸಿರುವ ದೋಷಾರೋಪ...